ನಗರಸಭೆ ಅಧಿಕಾರಿಗಳ ತಾರತಮ್ಯ: ಪ್ರತಿಭಟನೆ
Team Udayavani, May 10, 2017, 12:20 PM IST
ಹುಣಸೂರು: ವಸತಿ ನಿರ್ಮಿಸಿಕೊಂಡಿರುವ ಫಲಾನುಭವಿಗಳಿಗೆ ಅನುದಾನ ಮಂಜೂರು ಮಾಡುವಲ್ಲಿ ನಗರಸಭೆ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರಲ್ಲದೆ, ಬಡವರನ್ನು ಲಂಚಕ್ಕಾಗಿ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ತಾಲೂಕು ದಲಿತ ಹಕ್ಕುಗಳ ಹೋರಾಟ ಸಮಿತಿ ಸದಸ್ಯರು ನಗರಸಭಾ ಕಚೇರಿ ಎದುರು ತಮಟೆ ಚಳವಳಿ ನಡೆಸಿದರು.
ನಗರಸಭೆ ಕಚೇರಿ ಆವರಣದ ಮುಂದೆ ಪ್ರತಿಭಟನೆ ನಡೆಸಿದ ಸಮಿತಿ ಸದಸ್ಯರು ಬಡವರ ತಲೆಗೊಂದು ಸೂರು ನೀಡಿದ ನಗರಸಭೆ ಅಧಿಕಾರಿಗಳಿಗೆ ಧಿಕ್ಕಾರ, ತಾರತಮ್ಯ ನಿಲ್ಲಿಸಿ ಬಡವರಿಗೆ ಅನುಕೂಲ ಮಾಡಿಕೊಡಿ ಎಂದು ಘೋಷಣೆಗಳನ್ನು ಕೂಗಿದರು. ಸಮಿತಿ ಅಧ್ಯಕ್ಷ ಬೆಳೂ¤ರು ವೆಂಕಟೇಶ್ ಮಾತನಾಡಿ, 2015-16ನೇ ಸಾಲಿನಲ್ಲಿ ನಗರಸಭೆಯಿಂದ ಪ.ಜಾತಿ/ಪಂಗಡದ 56 ಫಲಾನುಭವಿಗಳನ್ನು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಜ್ ಯೋಜನೆಯಡಿ ಆಯ್ಕೆ ಮಾಡಲಾಗಿತ್ತು.
ಪ್ರತಿ ಫಲಾನುಭವಿಗೆ ಮನೆ ನಿರ್ಮಾಣಕ್ಕಾಗಿ 3.30 ಲಕ್ಷ ರೂ. ಅನುದಾನ ದೊರೆಯಲಿದ್ದು, ಈ ಪೈಕಿ ರಾಜ್ಯ ಸರ್ಕಾರ 1.80 ಲಕ್ಷ ರೂ ಹಾಗೂ ಕೇಂದ್ರ ಸರ್ಕಾರ 1.50 ಲಕ್ಷ ರೂ. ನೀಡಲಿದೆ. ರಾಜ್ಯ ಸರ್ಕಾರದ ಮೊದಲ ಹಂತದ 45 ಸಾವಿರ ರೂ.ಗಳನ್ನು ನಗರಸಭೆ ವತಿಯಿಂದ ಈಗಾಗಲೆ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ.
ಆದರೆ ಕೇಂದ್ರ ಸರ್ಕಾರ ನೀಡಬೇಕಿದ್ದ ಹಣಕ್ಕೆ ಬೇಕಾದ ಯೋಜನೆಯ ವಿಸ್ತ್ರƒತ ವರದಿ(ಡಿಪಿಆರ್)ನ್ನು ಕಳುಹಿಸದೇ ಕೇಂದ್ರದಿಂದ ಅನುದಾನ ಸಿಗದಂತಾಗಿದೆ. ಆಘಾತಕಾರಿ ಸಂಗತಿಯೆಂದರೆ ನಂತರದಲ್ಲಿ ಇದೇ ಯೋಜನೆಯಡಿ ಆಯ್ಕೆಯಾದ 33 ಫಲಾನುಭವಿಗಳಿಗೆ ನಗರಸಭೆ ಅಧಿಕಾರಿಗಳು ಲಂಚ ಪಡೆದು ಕೇಂದ್ರ ಸರ್ಕಾರದ ಅನುದಾನ ನೀಡುತ್ತಿದ್ದಾರೆ.
ಅಧಿಕಾರಿಗಳು ಈ ರೀತಿಯಾಗಿ ಬಡವರಿಗೆ ಅನ್ಯಾಯವೆಸಗುವ ಮೂಲಕ ತಾರತಮ್ಯ ನೀತಿ ಅನುಸರಿಸಿದ್ದಾರೆ. ಇದು ಖಂಡನೀಯ ಅಧಿಕಾರಿಗಳು ಕೂಡಲೇ ಆಗಿರುವ ಲೋಪವನ್ನು ಸರಿಪಡಿಸಿ ಬಡವರನ್ನು ಸುಲಿಯದೇ ಸರ್ಕಾರ ನೀಡುವ ಅನುದಾನ ನೀಡುವ ಮೂಲಕ ಮನೆ ಕಟ್ಟಿಕೊಳ್ಳಲು ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಜಗದೀಶ್ಸೂರ್ಯ, ಕಲ್ಕುಣಿಕೆ ವಿ.ಬಸವರಾಜು, ರಮೇಶ್, ಸತೀಶ್, ಬೋರಯ್ಯ, ಮರ್ಕೇಲಮ್ಮ, ಜಯಮ್ಮ, ಬೆಳೂ¤ರು ರಾಮಯ್ಯ ಇತರರು ಭಾಗವಹಿಸಿದ್ದರು. ಪೌರಾಯುಕ್ತ ಶಿವಪ್ಪ ನಾಯಕ ಮನವಿ ಸ್ವೀಕರಿಸಿ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ
Hunsur: ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತ ಆತ್ಮಹತ್ಯೆಗೆ ಶರಣು
Renukaswamy Case: ದರ್ಶನ್ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!
Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ
Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆಬರ ಪತ್ತೆ
MUST WATCH
ಹೊಸ ಸೇರ್ಪಡೆ
Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ
Gautam ಅದಾನಿ, ಭೂತಾನ್ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್ ಒಪ್ಪಂದಕ್ಕೆ ಸಹಿ
ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ
Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
Train Mishap: ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.