ರೈತರಿಗೆ 160 ಕೋಟಿ ರೂ. ಕೃಷಿ ಸಾಲ ವಿತರಣೆ


Team Udayavani, Nov 19, 2022, 4:38 PM IST

ರೈತರಿಗೆ 160 ಕೋಟಿ ರೂ. ಕೃಷಿ ಸಾಲ ವಿತರಣೆ

ಸಾಲಿಗ್ರಾಮ: ಮೈಸೂರು ಚಾಮರಾಜನಗರ ಎರಡೂ ಜಿಲ್ಲೆಗಳಿಂದ 1,300 ಕೋಟಿ ರೂ. ಬೆಳೆ ಸಾಲ ನೀಡಿದ್ದು, ಕೆ.ಆರ್‌.ನಗರ, ಸಾಲಿಗ್ರಾಮ ತಾಲೂಕಿನಿಂದ 160 ಕೋಟಿ ರೂ. ವಿತರಿಸಲಾಗಿದೆ ಎಂದು ಅಪೆಕ್ಸ್‌ ಬ್ಯಾಂಕ್‌ ಉಪಾಧ್ಯಕ್ಷ ಜಿ.ಡಿ.ಹರೀಶ್‌ಗೌಡ ಹೇಳಿದರು.

ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಹೋಬಳಿಯ ಚಿಬುಕಹಳ್ಳಿ ಗ್ರಾಮದಲ್ಲಿ 20 ಲಕ್ಷ ರೂ.ನ ಕೃಷಿ ಪತ್ತಿನ ಸಹಕಾರ ನೂತನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಡಿಸಿಸಿ ಬ್ಯಾಂಕ್‌ ರೈತರದ್ದು, ಜಿಲ್ಲೆಯಲ್ಲಿ 1 ಲಕ್ಷ ರೈತ ಕುಟುಂಬಗಳಿಗೆ ಸಾಲ ವಿತರಣೆ ಮಾಡಲಾಗಿದೆ. ಎರಡು ತಾಲೂಕಿನಿಂದಲೂ ಇದುವರೆಗೆ 81 ಕೋಟಿ ರೂ. ಬೆಳೆ ಸಾಲ ನೀಡಲಾಗುತ್ತಿತ್ತು. ಆದರೆ, ನಮ್ಮ ಅವಧಿಯಲ್ಲಿ 160 ಕೋಟಿ ರೂ. ದಾಟಿದ್ದು, ಇದೀಗ ಜಿಲ್ಲೆಯಲ್ಲಿ 2.5 ಕೋಟಿ ರೂ. ಅನ್ನು ಜಿಲ್ಲೆಯ ವಿವಿಧ ಸಹಕಾರ ಸಂಘಗಳ ಕಟ್ಟಡಗಳಿಗೆ ಅನುದಾನ ನೀಡಲಾಗಿದೆ ಎಂದು ಹೇಳಿದರು.

ಮಹಿಳಾ ಸ್ವಸಹಾಯ ಸಂಘಗಳು ಖಾಸಗಿಯವರ ಬಳಿ ಶೇ.26 ಬಡ್ಡಿ ದರಕ್ಕೆ ಸಾಲ ಪಡೆಯುತ್ತಿದ್ದು, ನಮ್ಮ ಸಹಕಾರ ಸಂಘಗಳಲ್ಲಿ ಶೇ.12 ಬಡ್ಡಿ ದರದಲ್ಲಿ ಸಾಲ ಪಡೆದರೆ ಉತ್ತಮ. ಮುಂದಿನ ದಿನಗಳಲ್ಲಿ ಈ ಪ್ರಮಾಣವನ್ನು ಇನ್ನು ತಗ್ಗಿಸಲಾಗುವುದು. ಅಲ್ಲದೆ, ಸರ್ಕಾರ ಕೃಷಿ ಸಾಲಕ್ಕೆ ನಿಗದಿ ಮಾಡುವ ಹಣಕಾಸಿನ ಪ್ರಮಾಣ ತೀರಾ ಕಡಿಮೆ ಇದ್ದು, ಈ ಬಗ್ಗೆ ಸಹಕಾರ ಸಚಿವರಿಗೆ ಮನವಿ ಮಾಡಲಾಗಿದೆ ಎಂದರು.

ಭೂಮಿಪೂಜೆ ನೆರವೇರಿಸಿ ಶಾಸಕ ಸಾ.ರಾ. ಮಹೇಶ್‌ ಮಾತನಾಡಿ, ರೈತರು ಸಹಕಾರ ಸಂಘಗಳನ್ನು ತಮ್ಮದು ಎಂಬ ಭಾವನೆಯಿಂದ ಸಾಲ ಪಡೆಯಲು ಬಂದರೆ ಕಾರ್ಯದರ್ಶಿಗಳು ಅವರಿಗೂ ಮೋಸ ಮಾಡುತ್ತಿದ್ದು, ಮಿಲೇì, ಹರದನಹಳ್ಳಿ ಸಂಘಗಳಲ್ಲಿ ಇಂತಹ ಅಕ್ರಮಗಳು ನಡೆದಿರುವುದು ಬೇಸರದ ವಿಚಾರವಾಗಿದ್ದು, ಸಂಘಗಳ ಕಾರ್ಯದರ್ಶಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದಾಗ ಸಂಘಗಳು ಬೆಳವಣಿಗೆ ಹೊಂದಲು ಸಹಕಾರಿಯಾಗಲಿದೆ ಎಂದು ಕಿವಿಮಾತು ಹೇಳಿದರು.

ರಾಜಕಾರಣವನ್ನು ಬಿಟ್ಟು ಸಹಕಾರ ಸಂಘಗಳು ರೈತರ ಏಳಿಗೆಗೆ ದುಡಿಯಬೇಕಿದೆ. ಚಿಬುಕಹಳ್ಳಿ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ 5 ಲಕ್ಷ ರೂ. ನೀಡುತ್ತೇನೆ. ಜೊತೆಗೆ ಸಹಕಾರ ಬಂಧುಗಳು ನಿಮ್ಮ ಆಶೋತ್ತರಗಳನ್ನು ಕಾಪಾಡುವ ಪ್ರಾದೇಶಿಕ ಪಕ್ಷ ಹಾಗೂ ರೈತರ ಬಗ್ಗೆ ಕಾಳಜಿ ಇರುವ ನಾಯಕರನ್ನು ಚುನಾವಣೆಗಳಲ್ಲಿ ಗೆಲ್ಲಿಸಿದರೆ ನಿಮಗೆ ಅದೇ ಸಹಕಾರಿಯಾಗಲಿದ್ದು, ಹರೀಶ್‌ಗೌಡ ಅವರು ಸಾಕಷ್ಟು ಸಹಕಾರಿ ಆಡಳಿತದಲ್ಲಿ ನುರಿತು ಜಿಲ್ಲೆಯ ಹೆಸರನ್ನು ಇಂದು ಅಪೆಕ್ಸ್‌ ಬ್ಯಾಂಕ್‌ ಉಪಾಧ್ಯಕ್ಷರಾಗುವ ಮೂಲಕ ರಾಜ್ಯದೆತ್ತರಕ್ಕೆ ಕೊಂಡೊಯ್ದಿದ್ದಾರೆ ಎಂದು ಹೇಳಿದರು.

ಸಂಘದ ನೂತನ ಕಟ್ಟಡಕ್ಕೆ ಉಚಿತವಾಗಿ ಜಾಗ ನೀಡಿದ ಜಿಪಂ ಮಾಜಿ ಸದಸ್ಯ ಹಾಗೂ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸುಬ್ಬಯ್ಯ ಅವರನ್ನು ಸನ್ಮಾನಿಸಲಾಯಿತು. ಜಿಪಂ ಮಾಜಿ ಅಧ್ಯಕ್ಷ ದ್ವಾರಕೀಶ್‌, ಸಂಘದ ಅಧ್ಯಕ್ಷ ಗಣೇಶ್‌, ಜಿಲ್ಲಾ ಪರಿಷತ್‌ ಮಾಜಿ ಉಪಾಧ್ಯಕ್ಷ ಚನ್ನಬಸಪ್ಪ, ಗ್ರಾಪಂ ಅಧ್ಯಕ್ಷೆ ಶೋಭಾರಾಣಿ, ಜೆಡಿಎಸ್‌ ಮುಖಂಡರಾದ ಮಧುಚಂದ್ರ, ಶ್ರೀರಾಂಪುರ ಸಂತೋಷ್‌, ಬೆಣಗನಹಳ್ಳಿ ಪ್ರಸನ್ನ, ರಮೇಶ್‌, ತಿಮ್ಮಗೌಡ, ಸಿ.ಬಿ.ಲೋಕೇಶ್‌, ಧರ್ಮ, ಸಹಕಾರ ಅಭಿವೃದ್ಧಿ ಅಧಿಕಾರಿ ರವಿ, ಡಿಸಿಸಿ ಬ್ಯಾಂಕ್‌ ವ್ಯವಸ್ಥಾಪಕ ಪ್ರತಾಪ್‌, ಸಂಘದ ಉಪಾಧ್ಯಕ್ಷ ಕೃಷ್ಣೇಗೌಡ, ನಿರ್ದೇಶಕರಾದ ಜಯಣ್ಣ, ವೆಂಕಟೇಶ, ಮಹೇಶ್‌, ಅಶೋಕ, ಗೋವಿಂದರಾಜು, ಶ್ವೇತಾ, ತಮ್ಮೇಗೌಡ, ನಿಂಗರಾಜು, ಸಣ್ಣರಾಮಯ್ಯ, ಮೇಲ್ವಿಚಾರಕರಾದ ಸತೀಶ್‌, ಸುಧೀರ್‌, ಸಂಘದ ಸಿಇಒ ಕೃಷ್ಣೇಗೌಡ ಹಾಜರಿದ್ದರು.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.