ಸಾಂಕ್ರಮಿಕ ರೋಗ ಹರಡುವಿಕೆ ಭೀತಿ ಬೇಡ: ಡಿಎಚ್‌ಒ


Team Udayavani, Jun 10, 2017, 1:59 PM IST

mys5.jpg

ಮೈಸೂರು: ಡೆಂಘೀ, ಚಿಕುನ್‌ ಗುನ್ಯಾ ಸೇರಿದಂತೆ ಜಿಲ್ಲೆಯಲ್ಲಿ ಯಾವುದೇ ರೀತಿಯ ಸಾಂಕ್ರಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜು ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಡೆಂಘೀ ಹಾಗೂ ಚಿಕುನ್‌ ಗುನ್ಯಾ ರೋಗಿಗಳಿಗೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇರುವುದಿಲ್ಲ. ರೋಗ ಲಕ್ಷಣಗಳಿಗನುಸಾರವಾಗಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬಹುದು. ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಚಿಕಿತ್ಸೆ ದೊರೆಯಲಿದೆ ಎಂದರು.

ವಾತಾವರಣದಲ್ಲಿ ಬದಲಾವಣೆಯಿಂದಾಗಿ ವೈರಾಣು ಜ್ವರ ಕಾಣಿಸಿಕೊಳ್ಳುವುದು ಸಾಮಾನ್ಯ. ಮೂರ್‍ನಾಲ್ಕು ದಿನಗಳಲ್ಲಿ ಸರಿ ಹೋಗುತ್ತದೆ. ಇದಕ್ಕಾಗಿ ಗಾಬರಿ ಆಗಬೇಕಿಲ್ಲ. ಜನರು ಸಮೂಹ ಸನ್ನಿಗೆ ಒಳಗಾಗಬೇಕಿಲ್ಲ ಎಂದು ತಿಳಿಸಿದರು. ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಚಿದಂಬರಂ ಮಾತನಾಡಿ, 2017ರ ಜನವರಿಯಿಂದ ಏಪ್ರಿಲ್‌ ವರೆಗೆ ಯಾವುದೇ ಡೆಂಘೀ ಪ್ರಕರಣ ವರದಿಯಾಗಿಲ್ಲ. ಮೇ ತಿಂಗಳಲ್ಲಿ 45 ಪ್ರಕರಣಗಳು ಧೃಡಪಟ್ಟಿವೆ ಎಂದರು.

2013ರಲ್ಲಿ ಡೆಂಘೀ ಪೀಡಿತ ಮೂವರು ಸಾವನ್ನಪ್ಪಿರುವುದನ್ನು ಹೊರತುಪಡಿಸಿದರೆ ಈವರೆಗೆ ಡೆಂಘೀಯಿಂದ ಜಿಲ್ಲೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. 2013ರಲ್ಲಿ 334 ಪ್ರಕರಣ, 2014ರಲ್ಲಿ 66, 2015ರಲ್ಲಿ 382, 2016ರಲ್ಲಿ 582 ಪ್ರಕರಣ ಹಾಗೂ 2017ರಲ್ಲಿ ಈವರೆಗೆ 112 ಡೆಂಘೀ ಪ್ರಕರಣಗಳು ಧೃಡಪಟ್ಟಿವೆ ಎಂದು ತಿಳಿಸಿದರು.

ಡೆಂಘೀ ಮತ್ತು ಚಿಕುನ್‌ ಗುನ್ಯಾ ರೋಗಗಳ ತಡೆಗಟ್ಟುವಿಕೆ ಹಾಗೂ ನಿಯಂತ್ರಣಕ್ಕಾಗಿ ಇಲಾಖೆವತಿಯಿಂದ ಮನೆ ಮನೆಗೆ ಭೇಟಿ ನೀಡಿ ಈಡಿಸ್‌ ಲಾರ್ವ ಸಮೀಕ್ಷೆ ಕಾರ್ಯವನ್ನು ನಿರಂತರವಾಗಿ ಮಾಡಲಾಗುತ್ತಿದೆ. ಶಂಕಿತ ಡೆಂಘೀ, ಚಿಕುನ್‌ ಗುನ್ಯಾ ಜ್ವರ ಪ್ರಕರಣಗಳಿಂದ ರಕ್ತ ಮಾದರಿ ಪರೀಕ್ಷೆಯನ್ನು ಆರೋಗ್ಯ ಇಲಾಖೆಯ ಸೆಂಟಿನಲ್‌ ಸರ್ವೇಲೆನ್ಸ್‌ ಪ್ರಯೋಗಾಲಯದಲ್ಲಿ ಉಚಿತವಾಗಿ ಮಾಡಲಾಗುತ್ತಿದೆ.

ಡೆಂಘೀ ರೋಗ ಹರಡುವ ಈಡಿಸ್‌ ಈಜಿಫೆ ಹೆಣ್ಣು ಸೊಳ್ಳೆಗಳ ನಿಯಂತ್ರಣಕ್ಕೆ ಗ್ರಾಪಂ ಹಾಗೂ ಮೈಸೂರು ಮಹಾ ನಗರಪಾಲಿಕೆಯ ಸಹಕಾರದೊದಿಗೆ ಧೂಮೀಕರಣ ಮಾಡಲಾಗುತ್ತಿದೆ. ಸಾರ್ವಜನಿಕರಿಗೆ ಕರಪತ್ರ ವಿತರಣೆ, ಬಿತ್ತಿಪತ್ರ, ಗುಂಪುಸಭೆ ಮತ್ತು ಸಂವಾದಗಳ ಮೂಲಕ ಆರೋಗ್ಯ ಅರಿವು ಶಿಕ್ಷಣ, ಸ್ವಯಂ ರಕ್ಷಣಾ ವಿಧಾನಗಳ ಬಗ್ಗೆ ತಿಳಿವಳಿಕೆ ನೀಡಲಾಗುತ್ತಿದೆ ಎಂದರು.

2020ಕ್ಕೆ ಮೈಸೂರು ಜಿಲ್ಲೆಯನ್ನು ಮಲೇರಿಯಾ ಮುಕ್ತ ಜಿಲ್ಲೆಯಾಗಿಸುವ ಕಾರ್ಯಕ್ಕೆ ಜಿಲ್ಲೆಯ ಎಲ್ಲಾ ಸಾರ್ವಜನಿಕರು, ನಾಗರಿಕರು, ಸಮಾಜ ಸೇವಕರು, ಸ್ಥಳೀಯ ಜನಪ್ರತಿನಿಧಿಗಳ ಸಹಕಾರಕೋರಲಾಗಿದೆ ಎಂದು ತಿಳಿಸಿದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಶುಪತಿ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.