ಹೆದರದೆ ಕಾಂಗ್ರೆಸ್‌ ದರ್ಪದ ಆಡಳಿತಕ್ಕೆ ಕೊನೆ ಹಾಡಿ


Team Udayavani, Mar 10, 2018, 5:40 PM IST

mys.jpg

ನಂಜನಗೂಡು: ಟಿ.ನರಸೀಪುರ, ವರುಣಾ ಸೇರಿದಂತೆ ರಾಜ್ಯದ ಯಾವುದೇ ಕ್ಷೇತ್ರದಲ್ಲೂ ಆಂತರಿಕ ಅಥವಾ ಬಹಿರಂಗ ಹೊಂದಾಣಿಕೆ ಇಲ್ಲ.ವರುಣಾ ಕ್ಷೇತ್ರದ ಜನತೆ ಯಾವುದೇ ಭಯ ಅಂಜಿಕೆಯಿಲ್ಲದೇ ಸಿದ್ದರಾಮಯ್ಯ ವಿರುದ್ಧ ಮತ ಚಲಾಯಿಸಿ ಕಾಂಗ್ರೆಸ್‌ ದರ್ಪದ ಆಡಳಿತಕ್ಕೆ ಕೊನೆ ಹಾಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ಶುಕ್ರವಾರ ಕ್ಷೇತ್ರದ ಎಸ್‌. ಹೊಸಕೋಟೆ ಗ್ರಾಮದಲ್ಲಿ ಪಕ್ಷದ ಕುಮಾರ ಪರ್ವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಾರ್ಯಕರ್ತರ ದುಡಿಮೆಯ ಫ‌ಲವಾಗಿ ಅಧಿಕಾರ ಅನುಭವಿಸಿದ ಸಿದ್ದರಾಮಯ್ಯ ಹಾಗೂ ಮಹದೇವಪ್ಪ ಈಗ ತಮ್ಮ ಮಕ್ಕಳಿಗಾಗಿ ಕ್ಷೇತ್ರ ತ್ಯಾಗ ಮಾಡುತ್ತಾ ಕಾರ್ಯಕರ್ತರಿಗೆ ದ್ರೋಹ ಬಗೆದಿದ್ದಾರೆಂದು ಛೇಡಿಸಿದರು.

ಟಿ.ನರಸೀಪುರ, ವರುಣಾ ಸೇರಿದಂತೆ ರಾಜ್ಯದ ಯಾವುದೇ ಕ್ಷೇತ್ರದಲ್ಲೂ ಆಂತರಿಕ ಅಥವಾ ಬಹಿರಂಗ ಹೊಂದಾಣಿಕೆ ಇಲ್ಲ. ವರುಣಾ ಕ್ಷೇತ್ರದ ಜನತೆ ಯಾವುದೇ ಭಯ ಅಂಜಿಕೆಯಿಲ್ಲದೇ ಸಿದ್ದರಾಮಯ್ಯ ವಿರುದ್ಧ ಮತ ಚಲಾಯಿಸಿ ಎಂದು ಮನವಿ ಮಾಡಿದರು. ಮುಖ್ಯಮಂತ್ರಿಯ ಸಲಹೆಗಾರ ಕೆಂಪಯ್ಯ ಮುಂಬರುವ ದಿನಗಳಲ್ಲಿ ಪೊಲೀಸ್‌ ವ್ಯಾನ್‌ನಲ್ಲೇ ಇಲ್ಲಿಗೆ ಹಣ ತಂದುಕೊಡಲಿದ್ದಾರೆ. ಆ ಹಣದಲ್ಲಿ ಇಲ್ಲಿನ ಮರಳಿನ ಹಣದ ಪಾಲೂ ಇದೆ . ಆದರೆ, ಪಾಪದ ಆ ಹಣಕ್ಕೆ ತಲೆ ಭಾಗದೆ ಕೈ ವಿರುದ್ಧ ನಿವು ಮತ ಚಲಾಯಿಸಿ ಪ್ರಜಾಪ್ರಭುತ್ವ ಉಳಿಸಿ ಎಂದರು.

ರಾಜ್ಯದ ನೆಮ್ಮದಿಗೆ ಎಚ್ಡಕೆ ಸಿಎಂ ಮಾಡಿ: ಬಿಎಸ್‌ಪಿ ರಾಜ್ಯಾಧ್ಯಕ್ಷರಾದ ಎನ್‌.ಮಹೇಶ್‌ ಮಾತನಾಡಿ, ಕಾಂಗ್ರೆಸ್‌ ಮತ್ತು ಬಿಜೆಪಿ ಜಾತಿ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಇದರಿಂದ ಪ್ರಜಾ ಪ್ರಭುತ್ವ ಹಾಳಾಗುತ್ತಿದೆ. ಜಾತಿ ಧರ್ಮವನ್ನು ಹೊರಗಿಟ್ಟು ರಾಜ್ಯದ ಆರೂವರೆ ಕೋಟಿ ಜನರನ್ನು ನೆಮ್ಮದಿ ಯಾಗಿರಿಸಲು ಹೆಚ್‌.ಡಿ, ಕುಮಾರಸ್ವಾಮಿಯರ ವರನ್ನು ಮುಖ್ಯಮಂತ್ರಿಯಾಗಿ ಮಾಡಬೇಕು. ಜನತೆ ಯಿಂದಲೇ ಬಿಂಬಿತವಾದ ಎಚ್‌.ವಿಶ್ವನಾಥ ಹಾಗೂ ಶ್ರೀನಿವಾಸ ಪ್ರಸಾದ ಅವರನ್ನು ಪಕ್ಷದಿಂದಲೇ ಹೊರಹೋಗುವಂತೆ ಮಾಡಿದ್ದೂ ಸಹ ನಿಮ್ಮ ಸಾಧನೆಯಲ್ಲವೆ ಎಂದು ಅವರು ಸಿದ್ದರಾಮಯ್ಯ ಅವರನ್ನ ಛೇಡಿಸಿದರು. 

ಕಾಂಗ್ರೆಸ್‌ ಸರ್ಕಾರದಲ್ಲಿ ರೈತರು ಮೂರು ವರ್ಷಗಳ ಕಾಲ ಬರಗಾಲದಿಂದ ತತ್ತರಿಸಿದ್ದಾರೆ. ಬೆಳೆಸಾಲ ಮನ್ನಾವಾಗಿಲ್ಲಾ, ಕುಮಾರಸ್ವಾಮಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ 24 ಗಂಟೆಯಲ್ಲಿ ರೈತರ ಸಾಲವನ್ನು ಮನ್ನಾ ಮಾಡಲಿದ್ದಾರೆ. ಸಾವಿರಾರು ಕೋಟಿ ಸಾಲವನ್ನು ಬ್ಯಾಂಕ್‌ಗಳಿಗೆ ಕಟ್ಟಬೇಕಾದ ವಿಜಯ್‌ಮಲ್ಯ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲಾ ಈ ದೇಶದ ರೈತರು ಲಕ್ಷ ರೂ.ಗಳ ಸಾಲಕ್ಕಾಗಿ ಮಾನ ಮರ್ಯಾದೆಗೊಸ್ಕರ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ವಿಷಾದನೀಯ. ಕೇಂದ್ರ ಸರ್ಕಾರ ಉದ್ಯಮಿಗಳಿಗೆ . ಶ್ರೀಮಂತರಿಗೆ, ಬಂಡವಾಳ ಶಾಹಿಗಳಿಗೆ 2 ಲಕ್ಷ 60 ಸಾವಿರ ಕೋಟಿ ಸಬ್ಸಿಡಿ ಕೋಡುತಿದೆ ಎಂದು ದೂರಿದರು.

ಆಶಿರ್ವದಿಸಿ: ಪ್ರಸ್ತಾವಿಕ ನುಡಿಗಳನ್ನಾಡಿದ ವರುಣಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಭಿಷೇಕ್‌ ಮಾತನಾಡಿ, ಸಾರ್ವಜನಿಕ ಸೇವೆಗಾಗಿಯೇ ಲಕ್ಷಾಂತರ ರೂ.ಗಳ ಆದಾಯ ಬಿಟ್ಟು ಸ್ವಕ್ಷೇತ್ರಕ್ಕೆ ಬಂದ ನನ್ನನ್ನು ಆಶಿರ್ವದಿಸಿ ಕುಮಾರಸ್ವಾಮಿ ಮುಖ್ಯ ಮಂತ್ರಿಯಾಗಲು ಸಹಕರಿಸಿ ದಬ್ಟಾಳಿಕೆ ಬೆದರಿಕೆ ಮಣೆಯಾಕಬೇಡಿ ಎಂದರು.

ವೇದಿಕೆಯಲ್ಲಿ ಶಾಸಕರಾದ ಜಿ.ಟಿ,ದೇವೇಗೌಡ, ಸಾ.ರಾ.ಮಹೇಶ್‌, ಮಾಜಿ ಸಚಿವ ಹಾಗೂ ಜೆಡಿಎಸ್‌ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್‌.ವಿಶ್ವನಾಥ್‌, ವಿಧಾನ ಪರಿಷತ್‌ ಸದಸ್ಯ ಕೆ.ಟಿ,ಶ್ರೀಕಂಠೇಗೌಡ, ಜೆಡಿಎಸ್‌ ಜಿಲ್ಲಾಧ್ಯಕ್ಷ ಎನ್‌.ನರಸಿಂಹಸ್ವಾಮಿ, ಮಾಜಿ ಮೇಯರ್‌ ರವಿಕುಮಾರ್‌, ಜಿಪಂ ಸದಸ್ಯ ಬೀರಿಹುಂಡಿ ಬಸವಣ್ಣ, ನಂಜನಗೂಡು ವಿಧಾನಸಭಾ ಜೆಡಿಎಸ್‌ ಅಧ್ಯಕ್ಷ ಆರ್‌ .ವಿ.ಮಹದೇವಸ್ವಾಮಿ, ವರುಣಾ ಕ್ಷೇತ್ರದ ಅಧ್ಯಕ್ಷ ಪ್ರಕಾಶ್‌, ವರುಣಾ ಮಹೇಶ್‌, ಟಿ.ನರಸೀಪುರ ಜೆಡಿಎಸ್‌ ಅಭ್ಯರ್ಥಿ ಅಶ್ವಿ‌ನ್‌ಕುಮಾರ್‌, ಹೀರೆಗೌಡನ ಹುಂಡಿ ಸತೀಶ್‌, ರಾಜ್ಯ ಜೆಡಿಎಸ್‌ ಮುಖಂಡ
ಸಂತೋಷ್‌, ಮಾಜಿ ಮೇಯರ್‌ ನಿಂಗಪ್ಪ, ಸಾವಿರಾರು ಕಾರ್ಯಕರ್ತರಿದ್ದರು. 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.