ಭಯ ಬೇಡ ಮೈಸೂರು ದಸರೆಗೆ ಬನ್ನಿ


Team Udayavani, Sep 18, 2019, 3:00 AM IST

bhaya-beda

ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವ ವೀಕ್ಷಣೆಗಾಗಿ ಮೈಸೂರಿಗೆ ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಸಣ್ಣ ತೊಂದರೆಯೂ ಉಂಟಾಗದಂತೆ ಭದ್ರತೆ ದೃಷ್ಟಿಯಿಂದ ಏನೇನು ಕ್ರಮ ಕೈಗೊಳ್ಳಬೇಕೋ ಎಲ್ಲವನ್ನೂ ಸರ್ಕಾರ ಕೈಗೊಳ್ಳಲಿದ್ದು, ಪಕ್ಷಾತೀತವಾಗಿ ಎಲ್ಲರ ಸಹಕಾರದೊಂದಿಗೆ ದಸರಾ ಯಶಸ್ಸಿಗೆ ಶ್ರಮಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಜಿಲ್ಲಾ ಪತ್ರಕರ್ತರ ಸಂಘ ಮಂಗಳವಾರ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಸೂಚನೆಯ ಮೇರೆಗೆ ಕಳೆದ 20 ದಿನಗಳಿಂದ ಮೈಸೂರಿನಲ್ಲಿ ದಸರಾ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಪಾರಂಪರಿಕ ಮೈಸೂರು ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ಆಚರಿಸುವ ಮೂಲಕ ಮೈಸೂರಿಗೆ ಬರುವ ಪ್ರವಾಸಿಗರ ಮನಗೆಲ್ಲುವ ಮೂಲಕ ಮೈಸೂರಿನ ಪರಂಪರೆಯನ್ನು ವಿಶ್ವಕ್ಕೆ ಪರಿಚಯಿಸಲು ಪ್ರಯತ್ನ ನಡೆಸಿರುವುದಾಗಿ ಹೇಳಿದರು. ಮೈಸೂರಿನ ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಕೆಲಸ ಮಾಡಲಾಗುತ್ತಿಲ್ಲ. ರಸ್ತೆ ಗುಂಡಿ ಮುಚ್ಚಲು ಟೆಂಡರ್‌ ಆಗಿದ್ದು, ಮಳೆ ನಿಂತ ಕೂಡಲೇ ಗುಂಡಿಗಳನ್ನು ಮುಚ್ಚಲಾಗುವುದು ಎಂದರು.

ವ್ಯಾಪಕ ಪ್ರಚಾರ: ದಸರಾ ಮಹೋತ್ಸವಕ್ಕೆ ದೇಶ-ವಿದೇಶಗಳಿಂದ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ವ್ಯಾಪಕ ಪ್ರಚಾರವನ್ನು ಕೈಗೊಳ್ಳಲಾಗಿದೆ. ಮೈಸೂರಿಗೆ ಬಂದು ಹೋಗುವ 15 ರಿಂದ 18 ರೈಲುಗಳಿಗೆ, ಕೆಎಸ್ಸಾರ್ಟಿಸಿಯ 2ಸಾವಿರಕ್ಕೂ ಹೆಚ್ಚು ಬಸ್‌ಗಳಿಗೆ ದಸರಾ ಪ್ರಚಾರ ಫ‌ಲಕಗಳನ್ನು ಅಳವಡಿಸಲಾಗುತ್ತಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹತ್ತು ಹೋರ್ಡಿಂಗ್ಸ್‌ ಗಳನ್ನು ಅಳವಡಿಸಲಾಗುವುದು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನಾಡಹಬ್ಬ ದಸರೆಗೆ ಜನರನ್ನು ಆಹ್ವಾನಿಸುವ ಸಂದೇಶವನ್ನು ಬಸ್‌, ರೈಲು ನಿಲ್ದಾಣಗಳಲ್ಲಿ ಭಿತ್ತರಿಸುವ ಮೂಲಕ ವ್ಯವಸ್ಥಿತವಾಗಿ ಪ್ರಚಾರ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಬಿಗಿ ಭದ್ರತೆ: ದಸರಾ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಉಗ್ರರು ಸಂಚು ರೂಪಿಸಿರುವ ಮಾಹಿತಿ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು ಭದ್ರತೆ ಬಿಗಿಗೊಳಿಸಿ, ತಪಾಸಣೆಯನ್ನು ಹೆಚ್ಚಿಸಿದ್ದಾರೆ. ಆದರೆ, ಮೈಸೂರಿಗೆ ಯಾವುದೇ ಭೀತಿ ಇಲ್ಲ. ಈ ಬಗ್ಗೆ ಜನತೆಗೆ ಗೊಂದಲಬೇಡ. ಈ ಸಂಬಂಧ ಈಗಾಗಲೇ ರಾಜ್ಯದ ಗೃಹ ಸಚಿವರೊಂದಿಗೆ ಮಾತುಕತೆ ನಡೆಸಿದ್ದು, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರೊಂದಿಗೂ ಮಾತನಾಡಿ ದಸರೆಗೆ ಬರುವ ಜನತೆಗೆ ಭಯ-ಭೀತಿ ಮೂಡದಂತೆ ಏನೇನು ಕ್ರಮಬೇಕೋ ಎಲ್ಲವನ್ನೂ ಮಾಡುತ್ತೇವೆ ಎಂದು ಅಭಯ ನೀಡಿದರು.

ಜವಾಬ್ದಾರಿ ಹಂಚಿಕೆ: ಹಿರಿಯ ಶಾಸಕರಾದ ಜಿ.ಟಿ.ದೇವೇಗೌಡ ಅವರು ಸೇರಿದಂತೆ ಪಕ್ಷಾತೀತವಾಗಿ ಜಿಲ್ಲೆಯ ಎಲ್ಲಾ ಪಕ್ಷದ ಶಾಸಕರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅವರುಗಳಿಗೇ ದಸರಾ ಜವಾಬ್ದಾರಿಯನ್ನು ಹಂಚಿಕೆ ಮಾಡಿದ್ದೇವೆ. ಹೀಗಾಗಿ ಎಲ್ಲರೂ ತಂಡವಾಗಿ ಕೆಲಸ ಮಾಡುತ್ತಿದ್ದೇವೆ.

ಗೊಂದಲ ನಿವಾರಣೆ: ಪ್ರತಿ ವರ್ಷ ಪಾಸ್‌ಗಳಿಗಾಗಿ ಗೊಂದಲ ಏರ್ಪಡುವ ಮಾಹಿತಿ ಇದೆ. ಒಂದೇ ಪಾಸನ್ನು ನಾಲ್ಕು ನಾಲ್ಕು ಜನರಿಗೆ ಕೊಟ್ಟು ಗೊಂದಲ ಸೃಷ್ಟಿಮಾಡುತ್ತ ಇದ್ದಿದ್ದೂ ಇದೆ. ಇದೇ ಕಾರಣಕ್ಕೆ ದಸರಾ ಗೋಲ್ಡ್‌ಕಾರ್ಡ್‌ ಅನ್ನು 2500ದೊಳಗೆ ಮಿತಿಗೊಳಿಸಲು ನಿರ್ಧರಿಸಲಾಗಿದೆ. ಜತೆಗೆ ರಾತ್ರಿ ಬನ್ನಿಮಂಟಪದಲ್ಲಿ ನಡೆಯುವ ಪಂಜಿನ ಕವಾಯತು ಸಂದರ್ಭದಲ್ಲಿ ಅಧಿಕಾರಿಗಳೇ ತುಂಬಿರುತ್ತಾರೆ ಎಂಬ ಅಪವಾದ ಹೋಗಲಾಡಿಸಲು ಹಿಂದಿನ ದಿನ ನಡೆಯುವ ಪಂಜಿನ ಕವಾಯತು ತಾಲೀಮಿಗೆ ಅಧಿಕಾರಿಗಳು ಮತ್ತು ಅವರ ಕುಟುಂಬ ವರ್ಗದವರು ವೀಕ್ಷಿಸಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದರು.

ವಾಹನಗಳಿಗೆ ಪ್ರವೇಶ ತೆರಿಗೆ ಕಡಿತ: ದಸರಾ ಸಂದರ್ಭದಲ್ಲಿ ಒಂದು ತಿಂಗಳ ಕಾಲ ಹೊರ ರಾಜ್ಯಗಳಿಂದ ಮೈಸೂರಿಗೆ ಬರುವ ಪ್ರವಾಸಿ ವಾಹನಗಳಿಗೆ ಪ್ರವೇಶ ತೆರಿಗೆ ವಿನಾಯಿತಿ ನೀಡಲಾಗುತ್ತದೆ. ಈ ಬಾರಿ ಮೈಸೂರಿನ ಜೊತೆಗೆ ಸುತ್ತಮುತ್ತಲಿನ ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಗಳಿಗೂ ಪ್ರವಾಸಿಗರು ಹೋಗಿ ಬರಲಿ ಎಂಬ ಕಾರಣಕ್ಕೆ ಆ ಜಿಲ್ಲೆಗಳಿಗೂ ಪ್ರವೇಶ ತೆರಿಗೆ ವಿನಾಯಿತಿ ನೀಡಲು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುವುದಾಗಿ ಸಚಿವ ವಿ.ಸೋಮಣ್ಣ ತಿಳಿಸಿದರು.

ತೆಪ್ಪೋತ್ಸವದವರೆಗೆ ದೀಪಾಲಂಕಾರ: ನಾಡಹಬ್ಬ ದಸರೆಗೆ ವಿದ್ಯುತ್‌ ದೀಪಾಲಂಕಾರದಿಂದ ಮೈಸೂರು ಝಗಮಗಿಸುತ್ತದೆ. ಆದರೆ, ಪ್ರತಿ ವರ್ಷ ಜಂಬೂಸವಾರಿ ಮುಗಿದ ಮರು ದಿನವೇ ದೀಪಾಲಂಕಾರ ಸ್ಥಗಿತಗೊಳಿಸುವುದರಿಂದ ಆ ನಂತರ ಮೈಸೂರಿಗೆ ಬರುವ ಪ್ರವಾಸಿಗರಿಗೆ ನಿರಾಸೆಯಾಗುತ್ತದೆ. ಇದಕ್ಕಾಗಿ ಜಂಬೂಸವಾರಿ ಮುಗಿದ ನಂತರ ಚಾಮುಂಡೇಶ್ವರಿ ತೆಪ್ಪೋತ್ಸವ ನಡೆಯುವ ಅ.17ರವರೆಗೂ ದೀಪಾಲಂಕಾರ ಉಳಿಸಿಕೊಳ್ಳಲು ತೀರ್ಮಾನಿಸಲಾಗಿದೆ.

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.