ಬಡವರ ಕೆಲಸದ ಬಗ್ಗೆ ನಿರ್ಲಕ್ಷ್ಯ ತರವಲ್ಲ: ಶಾಸಕ ಹರೀಶ್‌ ಗೌಡ ಎಚ್ಚರಿಕೆ


Team Udayavani, May 29, 2023, 10:22 PM IST

1-sadss

ಹುಣಸೂರು: ನನ್ನ ಅವಧಿಯಲ್ಲಿ ತಮ್ಮ ತಂದೆ ಜಿ.ಟಿ.ದೇವೇಗೌಡರಂತೆ ಜನಪರ, ಅಭಿವೃದ್ಧಿಪರ ಆಡಳಿತ ನೀಡುತ್ತೇನೆ. ತಾಲೂಕು ಮಟ್ಟದ ಅಧಿಕಾರಿಗಳು ಬಡವರ ಪರವಾಗಿ ಪ್ರಮಾಣಿಕವಾಗಿ ಕೆಲಸ ನಿರ್ವಹಿಸಬೇಕು. ಇಲ್ಲದಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ದ ಕ್ರವಹಿಸಬೇಕಾದೀತೆಂದು ಶಾಸಕ ಜಿ.ಡಿ.ಹರೀಶ್‌ಗೌಡ ಎಚ್ಚರಿಸಿದರು.

ಚುನಾಯಿತರಾದ ನಂತರ ಪ್ರಥಮವಾಗಿ ತಾಲೂಕಿನ ಹನಗೋಡು ಹೋಬಳಿಯ ದೊಡ್ಡಹೆಜ್ಜೂರು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಮತದಾರರಿಗೆ ಹಾಗೂ ತಮ್ಮ ಗೆಲುವಿಗಾಗಿ ದುಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ ಮಾತನಾಡಿ ಚುನಾವಣೆಯಲ್ಲಿ ಜನಬಲವೇ ಪ್ರಮುಖ ಪಾತ್ರವಹಿಸುತ್ತದೆ. ನನ್ನ ಅವಧಿಯಲ್ಲಿ ತಮ್ಮ ತಂದೆ ಜಿ.ಟಿ.ದೇವೇಗೌಡರಂತೆ ಜನಪರ, ಅಭಿವೃದ್ಧಿಪರ ಆಡಳಿತ ನೀಡುತ್ತೇನೆ. ತಾಲೂಕು ಮಟ್ಟದ ಅಧಿಕಾರಿಗಳು ಬಡವರ ಪರವಾಗಿ ಪ್ರಮಾಣಿಕವಾಗಿ ಕೆಲಸ ನಿರ್ವಹಿಸಬೇಕು. ಇಲ್ಲದಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ದ ನಿರ್ದಾಕ್ಷö್ಯಣ್ಯ ಕ್ರಮ ಯಾರಂಟಿ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.

ನನ್ನನ್ನು ಜನರು ಪ್ರೀತಿಯಿಂದ ಗೆಲ್ಲಿಸಿದ್ದಾರೆ. ಅವರ ಋಣ ನನ್ನ ಮೇಲಿದೆ. ಗ್ರಾಮಗಳ ಸಮಸ್ಯೆಯನ್ನು ಆದ್ಯತೆ ಮೇರೆಗೆ ಬಗೆಹರಿಸುವೆ. ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ಭೇಟಿ ಮಾಡಿ, ಸ್ಪಂದಿಸುವೆ ಎಂದು ಭರವಸೆ ಇತ್ತರು.

ರಸ್ತೆ, ಏತ ನೀರಾವರಿಗೆ ಬೇಡಿಕೆ
ಕೊಳುವಿಗೆಯಲ್ಲಿ ಗ್ರಾಮಸ್ಥರು ಪಟ್ಲದಮ್ಮ ದೇವಸ್ಥಾನ ರಸ್ತೆ, ಕೊಳವಿಗೆ-ಹನಗೋಡು ಮುಖ್ಯ ರಸ್ತೆ ಹಾಗೂ ಕಾಲುವೆ ಏರಿ ರಸ್ತೆ ಅಭಿವೃದ್ದಿಪಡಿಸಬೇಕು. ಗ್ರಾಮದೊಳಗಿರುವ ಜಮೀನು ರಸ್ತೆ ಒತ್ತುವರಿ ತೆರವುಗೊಳಿಸಬೇಕು, ಕೋಣನಹೊಸಳ್ಳಿಗೆ ಬಸ್ ಕಲ್ಪಿಸಿಕೊಡಬೇಕೆಂಬ ಗ್ರಾಮಸ್ಥರ ಮನವಿಗೆ ತಮ್ಮ ಮೊದಲ ಅನುದಾನದಲ್ಲಿಯೇ ಕೊಳವಿಗೆ ಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು, ಇದಲ್ಲದೆ ಜಮೀನು ರಸ್ತೆಗಳು, ರೈತರ ಜಮೀನಿಗೆ ತೆರಳುವ ರಸ್ತೆಯನ್ನು ಅಭಿವೃದ್ದಿ ಪಡಿಸಲಾಗುವುದೆಂದರು.

ಮುದಗನೂರಿನ ಕೆರೆಗೆ ಏತ ನೀರಾವರಿ ಯೋಜನೆ ಕಲ್ಪಿಸಬೇಕೆಂದು ಮಾಡಿದ ಮನವಿಗೆ ಸರಕಾರದ ಗಮನಕ್ಕೆ ತಂದು ಕ್ರಮವಹಿಸುವೆನೆಂದರು.
ಶಾಸಕರು ಚಿಕ್ಕಹೆಜ್ಜೂರು, ಕೋಣನಹೊಸಹಳ್ಳಿ, ಕೊಳವಿಗೆ ಹಾಡಿ, ಚಿಕ್ಕಹೆಜ್ಜೂರು ಹಾಡಿ, ಕಪ್ಪನಕಟ್ಟೆಹಾಡಿ,ವೀರನಹೊಸಹಳ್ಳಿ, ಭಾರತವಾಡಿ, ಭಾರತವಾಡಿ ಹಾಡಿ,ವೀರನಹೊಸಹಳ್ಳಿ ಹಾಡಿ ಗ್ರಾಮಗಳಿಗೆ ಭೇಟಿ ಇತ್ತು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಎಲ್ಲೆಡೆ ನೂತನ ಶಾಸಕ ಹರೀಶ್ ಗೌಡರನ್ನು ಗ್ರಾಮಸ್ಥರು ಆತ್ಮೀಯವಾಗಿ ಸನ್ಮಾನಿಸಿದರು.

ಈ ವೇಳೆ ದೊಡ್ಡಹೆಜ್ಜೂರು ಗ್ರಾಂ.ಪಂ.ಅಧ್ಯಕ್ಷ ಸುಭಾಷ್, ಮಾಜಿ ಅಧ್ಯಕ್ಷ ದಾ.ರಾ.ಮಹೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಕಿರಂಗೂರುಬಸವರಾಜ್, ಸೊಸೈಟಿ ಅಧ್ಯಕ್ಷ ರವಿಕುಮಾರ್, ಕಾರ್ಯದರ್ಶಿ ಬೀರಪ್ಪ, ಜಿ.ಪಂ.ಮಾಜಿ ಸದಸ್ಯ ಕಟ್ಟನಾಯ್ಕ, ಮುಖಂಡರಾದ ಕೆಂಪೇಗೌಡ, ರಾಜೇಗೌಡ, ವೆಂಕಟೇಶ್, ನಟರಾಜ್, ನಾಗೇಶ್, ರವಿ, ಹರೀಶ್, ಪಾರೆಕುಮಾರ್ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.