ಮಕ್ಕಳ ಮೇಲೆ ಒತ್ತಡ ಹೇರಬೇಡಿ


Team Udayavani, Jan 12, 2020, 3:00 AM IST

makkala

ಕೆ.ಆರ್‌.ನಗರ: ಪೋಷಕರು ಮಕ್ಕಳ ಮೇಲೆ ಒತ್ತಡ ಹೇರದೆ ಅವರ ಅಭಿರುಚಿಗೆ ತಕ್ಕಂತೆ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಿಕೊಟ್ಟಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಶಾಸಕ ಸಾ.ರಾ.ಮಹೇಶ್‌ ಹೇಳಿದರು. ಪಟ್ಟಣದ ಎಚ್‌.ಡಿ.ದೇವೇಗೌಡ ಭವನದಲ್ಲಿ ತಾಲೂಕು ಒಕ್ಕಲಿಗ ನೌಕರರ ಸ್ನೇಹ ಬಳಗದಿಂದ ಶನಿವಾರ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಶಾಲಾ-ಕಾಲೇಜು, ಶಿಕ್ಷಕರು ಹಾಗೂ ಪೋಷಕರಿಗೆ ಗೌರವ ತಂದು ಕೊಡಬೇಕು. ಅದೃಷ್ಟದ ಮೇಲೆ ನಂಬಿಕೆ ಇಡುವುದನ್ನು ಬಿಟ್ಟು ಸತತ ಪರಿಶ್ರಮದಿಂದ ಅಧ್ಯಯನ ಮಾಡಿದಾಗ ಉನ್ನತ ಮಟ್ಟಕ್ಕೇರಲು ಸಾಧ್ಯ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು. ಶಿಕ್ಷಿತರಾಗುವುದರ ಜತೆಗೆ ಒಳ್ಳೆಯ ಸಂಸ್ಕಾರ ಕಲಿಯಬೇಕು. ಇದರಿಂದ ದೇಶದ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಸಹಕಾರಿಯಾಗಲಿದೆ ಎಂದರು.

ಸೇವೆ ಸಲ್ಲಿಸಿ: ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನ ಪಡೆದ ನಂತರ ಸಮಾಜದಲ್ಲಿ ನೊಂದವರ ಸೇವೆಯನ್ನು ಪ್ರಾಮಾಣಿಕವಾಗಿ ಮಾಡಬೇಕು. ಆಗ ನಿಮ್ಮ ಕುಟುಂಬ ಮತ್ತು ನಿಮಗೆ ಯಶಸ್ಸು ದೊರೆಯಲಿದೆ ಎಂದು ಸಲಹೆ ನೀಡಿದರು.

ಉಚಿತ ತರಬೇತಿ: ನೌಕರರ ಸ್ನೇಹ ಬಳಗದ ಗೌರವಾಧ್ಯಕ್ಷ ಡಾ.ಟಿ.ಶಿವಪ್ರಸಾದ್‌ ಮಾತನಾಡಿ, ಕೆಎಎಸ್‌ ಮತ್ತು ಐಎಎಸ್‌ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಸಮಾಜದ ವಿದ್ಯಾರ್ಥಿಗಳಿಗೆ ಬಳಗದ ವತಿಯಿಂದ ಉಚಿತವಾಗಿ ತರಬೇತಿ ನೀಡಲು ನಿರ್ಧರಿಸಲಾಗಿದ್ದು, ಶೀಘ್ರ ಆ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಹಾಸ್ಟೆಲ್‌ ಆರಂಭಿಸಿ: ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಟಿ.ಅಣ್ಣೇಗೌಡ ಮಾತನಾಡಿ, ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿನಿಯರು ಉತ್ತಮ ಶಿಕ್ಷಣ ಪಡೆಯಲು ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಪಟ್ಟಣದಲ್ಲಿ ಬಾಲಕಿಯರ ವಿದ್ಯಾರ್ಥಿ ನಿಲಯ ಆರಂಭಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಶಾಸಕರು ಸಹಕಾರ ನೀಡಬೇಕು ಎಂದು ಕೋರಿದರು.

ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕ ಮಿರ್ಲೆ ಶ್ರೀನಿವಾಸಗೌಡ, ನವನಗರ ಅರ್ಬನ್‌ ಕೋ-ಆಪರೇಟಿವ್‌ ಬ್ಯಾಂಕ್‌ ಅಧ್ಯಕ್ಷ ಕೆ.ಎನ್‌.ಬಸಂತ್‌, ತಾಪಂ ಅಧ್ಯಕ್ಷ ಎಂ.ನಾಗರಾಜು, ಕಾಂಗ್ರೆಸ್‌ ಮುಖಂಡ ಬಾಬುಹನುಮಾನ್‌ ಮಾತನಾಡಿದರು. ಸ್ನೇಹ ಬಳಗದ ಅಧ್ಯಕ್ಷ ಸಿ.ಜೆ.ಅರುಣ್‌ಕುಮಾರ್‌ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ತಾಲೂಕು ಒಕ್ಕಲಿಗರ ಪತ್ತಿನ ಸಹಕಾರ ಸಂಘಕ್ಕೆ ಚಾಲನೆ ನೀಡಲಾಯಿತು.

ಪತ್ರಕರ್ತರಾದ ಡಿ.ಜೆ.ವಿನಯ್‌, ಶಿವರಾಮು, ವೈದ್ಯರಾದ ಡಾ.ಚಂದ್ರಕಲಾ, ಡಾ.ಭವಾನಿ, ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಟಿ.ಡಿ.ಪ್ರಸಾದ್‌, ತಹಶೀಲ್ದಾರ್‌ ಹುದ್ದೆಗೆ ಆಯ್ಕೆಯಾಗಿರುವ ಹರ್ಷವರ್ಧನ್‌ ಮತ್ತಿತರರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಈ ವೇಳೆ ಎಪಿಎಂಸಿ ಅಧ್ಯಕ್ಷ ಕುಪ್ಪಳ್ಳಿ ಸೋಮಶೇಖರ್‌, ಪುರಸಭೆ ಸದಸ್ಯೆ ಮಂಜುಳಾ ಚಿಕ್ಕವೀರು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎಸ್‌.ಯದುಗಿರೀಶ್‌, ಬಳಗದ ಉಪಾಧ್ಯಕ್ಷ ಕೆ.ಆರ್‌.ಹರೀಶ್‌, ಪ್ರಧಾನ ಕಾರ್ಯದರ್ಶಿ ಹೆಚ್‌.ಟಿ.ಮಂಜು, ಖಜಾಂಚಿ ಎ.ಮಂಜೇಗೌಡ, ಸಹ ಕಾರ್ಯದರ್ಶಿ ಎಸ್‌.ಕೆ.ಸುರೇಶ್‌, ನಿರ್ದೇಶಕರಾದ ಟಿ.ಎನ್‌.ಕುಮಾರೇಗೌಡ, ಉಮಾಶಂಕರ್‌, ಹೆಚ್‌.ಜೆ.ರವಿಕುಮಾರ್‌, ಸಿ.ವಿ.ರಾಜಣ್ಣ, ಕೆ.ಇ.ರಾಜೇಶ್‌, ಎ.ಮಂಜಣ್ಣ, ಡಿ.ರುಕ್ಮಿಣಿ, ಸುಕನ್ಯ, ಎಚ್‌.ಟಿ.ಮಂಜುಳಾ, ಬಿ.ಆರ್‌.ಕುಮಾರ್‌, ಟಿ.ಜಿ.ಸತೀಶ್‌, ವೈ.ಕೆ.ಮಹದೇವ್‌ ಇತರರಿದ್ದರು.

ನಾಲ್ಕು ಚುನಾವಣೆಯಲ್ಲೂ ಒಂದು ವರ್ಗ ನನಗೆ ಬೆಂಬಲಿಸಿಲ್ಲ: ಕೆ.ಆರ್‌.ನಗರ ತಾಲೂಕಿನಲ್ಲಿ ಕಳೆದ 17 ವರ್ಷಗಳ ನನ್ನ ಅಧಿಕಾರದ ಅವಧಿಯಲ್ಲಿ ಎಲ್ಲಾ ಸಮಾಜದವರಿಗೂ ಅಗತ್ಯ ಸವಲತ್ತುಗಳನ್ನು ಸಮಾನವಾಗಿ ವಿತರಿಸಿದ್ದೇನೆ. ಎಂದಿಗೂ ನಾನು ಜಾತಿ ರಾಜಕಾರಣ ಮಾಡಿಲ್ಲ. ಆದರೂ ತಾಲೂಕಿನಲ್ಲಿ ಒಂದು ವರ್ಗದವರು ಕಳೆದ ನಾಲ್ಕು ಚುನಾವಣೆಗಳಲ್ಲಿಯೂ ಜಾತಿ ಕಾರಣದಿಂದ ನನಗೆ ಬೆಂಬಲ ನೀಡಿಲ್ಲ ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.