ಅತಿ ಲಾಭದ ಆಸೆಗೆ ಮರುಳಾಗಬೇಡಿ


Team Udayavani, Jul 24, 2019, 3:00 AM IST

ati-labha

ಮೈಸೂರು: ಗ್ರಾಹಕರು ಹಕ್ಕುಗಳ ಜೊತೆಗೆ ತಮ್ಮ ಜವಾಬ್ದಾರಿಯ ಬಗ್ಗೆಯೂ ತಿಳಿವಳಿಕೆ ಹೊಂದಿರಬೇಕು ಎಂದು ಆಹಾರ ನಾಗರಿಕ ಸರಬರಾಜು ಹಾಗೂ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಪಿ. ಶಿವಣ್ಣ ಹೇಳಿದರು. ನಗರದ ದಿ ಇನ್‌ಸ್ಟಿಟ್ಯೂಟ್‌ ಆಫ್ ಎಂಜಿನಿಯರ್ ಸಭಾಂಗಣದಲ್ಲಿ ನಡೆದ ಮೈಸೂರು ಜಿಲ್ಲಾ ಮಟ್ಟದ ಶಾಲಾ ಗ್ರಾಹಕರ ಕ್ಲಬ್‌ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ವಂಚನೆ: ಗ್ರಾಹಕರ ಹಕ್ಕುಗಳ ಸಂರಕ್ಷಣೆ ಸಂವಿಧಾನದಲ್ಲೇ ಅಡಕವಾಗಿದೆ. ಇತ್ತೀಚೆಗೆ ಐಎಂಎ ಗ್ರಾಹಕರಿಂದ ದುಡ್ಡು ಪಡೆದು ವಂಚನೆ ಮಾಡಿತ್ತು. ಅತಿ ಲಾಭದ ಆಸೆ ತೋರಿಸಿ ಸಾರ್ವಜನಿಕರನ್ನು ಶೋಷಣೆ ಮಾಡಲಾಗುತ್ತಿದೆ. ಇದೆಲ್ಲದ್ದಕ್ಕೂ ಸಂವಿಧಾನದಲ್ಲಿ ಕಾಯಿದೆ ರೂಪಿಸಲಾಗಿದೆ. ಅಲ್ಲದೆ, ಸರಕಾರ ಶಾಲಾ ಹಂತದಲ್ಲೇ ಗ್ರಾಹಕರ ಕ್ಲಬ್‌ ರಚಿಸಿ, ಅರಿವು ಮೂಡಿಸಲು ಮುಂದಾಗಿದೆ. ಮುಂದಿನ ದಿನಗಳಲ್ಲಿ ಪಠ್ಯಪುಸ್ತಕದಲ್ಲಿ ಗ್ರಾಹಕರ ಜಾಗೃತಿ ವಿಷಯವನ್ನು ಸೇರಿಸುವ ಚಿಂತನೆ ಸರಕಾರದ ಮುಂದಿದೆ ಎಂದು ಹೇಳಿದರು.

ಕಾಯಿದೆ: ದಿನನಿತ್ಯ ಸಾಕಷ್ಟು ಅಗತ್ಯ ವಸ್ತುಗಳನ್ನು ಗ್ರಾಹಕರು ಖರೀದಿ ಮಾಡಬೇಕಿರುತ್ತದೆ. ಅಲ್ಲದೆ, ಭವಿಷ್ಯದ ಹಿತದೃಷ್ಟಿಯಿಂದ ಇತರ ಸಂಘ ಸಂಸ್ಥೆಗಳಲ್ಲಿ ಒಂದಷ್ಟು ಹಣವನ್ನು ವಿನಿಯೋಗಿಸುತ್ತಾರೆ. ಆದರೆ, ಅಲ್ಲಿ ಮೋಸ, ವಂಚನೆಗೆ ಒಳಗಾಗುತ್ತಾರೆ. ಈ ನಿಟ್ಟಿನಲ್ಲಿ 1986ರಲ್ಲಿ ಗ್ರಾಹಕರ ಸಂರಕ್ಷಣೆ ಕಾಯಿದೆ ಬಂತು. ಆದರೂ ಇಂದಿಗೂ ಸಾವಿರಾರು ಮಂದಿ ಗ್ರಾಹಕರು ವಂಚನೆ, ಶೋಷಣೆಗೆ ಒಳಗಾಗುತ್ತಿದ್ದಾರೆ. ಹಾಗಾಗಿ ಗ್ರಾಹಕರ ಹಕ್ಕುಗಳ ರಕ್ಷಣೆ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಬೇಕಿದೆ. ರಾಷ್ಟ್ರೀಯ ಗ್ರಾಹಕರ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

7 ವರ್ಷ ಶಿಕ್ಷೆ: ಗ್ರಾಹಕರನ್ನು ಯಾರಾದರೂ ವಂಚಿಸಿದರೆ ಅವರಿಗೆ ಗ್ರಾಹಕರ ಕೋರ್ಟ್‌ನಿಂದ 7 ವರ್ಷ ಶಿಕ್ಷೆ ವಿಧಿಸಲಾಗುತ್ತದೆ. ಅಲ್ಲದೆ, ಜಿಲ್ಲಾ ಗ್ರಾಹಕರ ಸಂರಕ್ಷಣಾ ಪರಿಷತ್ತು ಗ್ರಾಹಕರಿಗೆ ಸುಲಭ ಮತ್ತು ತ್ವರಿತವಾಗಿ ಪರಿಹಾರ ಒದಗಿಸುತ್ತದೆ. ವಂಚನೆಗೊಳಗಾದ ಯಾರುಬೇಕಾದರೂ ಇಲ್ಲಿ ದೂರು ನೀಡಬಹುದು. ಅಲ್ಲದೆ, ಶಾಲಾ, ಕಾಲೇಜು ಹಂತದಲ್ಲೇ ವಿದ್ಯಾರ್ಥಿಗಳಿಗೆ ಈ ಬಗ್ಗೆ ಅರಿವು ಮೂಡಿಸಲು ಗ್ರಾಹಕರ ಕ್ಲಬ್‌ ಸ್ಥಾಪನೆ ಮಾಡಲಾಗಿದೆ. ಅನ್ಯಾಯ, ಶೋಷಣೆ ವಿರುದ್ಧ ಶಾಲಾಹಂತದಲ್ಲೇ ತಿಳಿವಳಿಕೆ ನೀಡಿದರೆ ಭವಿಷ್ಯದಲ್ಲಿ ಮೋಸ ಹೋಗುವುದನ್ನು ತಡೆಯಬಹುದು ಎಂಬುದು ಇದರ ಉದ್ದೇಶ.

ಹಾಗಾಗಿ ಸಾಮಾನ್ಯ ಶಿಕ್ಷಣದ ಜತೆಗೆ ಗ್ರಾಹಕರ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದರು. ದಿ ಇನ್‌ಸ್ಟಿಟ್ಯೂಟ್‌ ಆಫ್ ಎಂಜಿನಿಯರ್ ಅಧ್ಯಕ್ಷ ಡಾ.ಸುರೇಶ್‌, ಜೆಎಸ್‌ಎಸ್‌ ಕಾನೂನು ಕಾಲೇಜು ಡಾ.ನಟರಾಜ್‌, ಮಾಹಿತಿ ಹಕ್ಕು ಕಾರ್ಯಕರ್ತ ಜಿ.ಆರ್‌.ವಿದ್ಯಾರಣ್ಯ, ಅಖೀಲ ಭಾರತೀಯ ಗ್ರಾಹಕ ಪಂಚಾಯಿತಿ ಅಧ್ಯಕ್ಷ ಎಚ್‌.ಆರ್‌. ಸುಂದರೇಶನ್‌ ಇದ್ದರು.

ಪ್ರತಿ ಶಾಲೆಯಲ್ಲೂ ಗ್ರಾಹಕರ ಕ್ಲಬ್‌: ಸರಕಾರ ಎಲ್ಲಾ ಶಾಲೆಗಳಲ್ಲಿ ಗ್ರಾಹಕರ ಕ್ಲಬ್‌ ಇರಬೇಕೆಂದು ಆದೇಶ ಮಾಡಿದೆ. ಇದಕ್ಕಾಗಿ ವರ್ಷದಲ್ಲಿ 20 ಶಾಲೆಗಳಿಗೆ 10 ಸಾವಿರ ಸಹಾಯಧನ ನೀಡುತ್ತಿದೆ. ಆದರೂ ಶೇ.50ರಷ್ಟು ಮಾತ್ರ ಯಶಸ್ಸು ಸಾಧಿಸಲಾಗಿದೆ. ನಗರ, ತಾಲೂಕು, ಹೋಬಳಿಯಂತೆ ಗ್ರಾಮೀಣ ಭಾಗಗಳಲ್ಲೂ ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಬೇಕಿದೆ. ಪ್ರಬಂಧ, ಚರ್ಚಾಸ್ಪರ್ಧೆ, ಗುಂಪು ಚರ್ಚೆ ಮಾಡಲಾಗುತ್ತಿದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಪಿ. ಶಿವಣ್ಣ ಹೇಳಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.