ಆತ್ಮಹತ್ಯೆಗೆ ಶರಣಾಗಬೇಡಿ: ರೈತರಿಗೆ ಮುಖ್ಯಮಂತ್ರಿ ಮನವಿ
Team Udayavani, Oct 11, 2018, 6:45 AM IST
ಮೈಸೂರು: “ಸಾಲಕ್ಕೆ ಹೆದರಿ ಯಾರೂ ಆತ್ಮಹತ್ಯೆಗೆ ಶರಣಾಗಬೇಡಿ’ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೈಜೋಡಿಸಿ ಮನವಿ ಮಾಡಿದರು.
ಚಾಮುಂಡಿಬೆಟ್ಟದಲ್ಲಿ ಏರ್ಪಡಿಸಿದ್ದ ನಾಡಹಬ್ಬ ದಸರಾ ಮಹೋತ್ಸವ-2018ರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಆತ್ಮಹತ್ಯೆ ಮಾಡಿಕೊಂಡು ನಿಮ್ಮ ಕುಟುಂಬವನ್ನು ಅನಾಥರನ್ನಾಗಿಸಬೇಡಿ. ಹಲವಾರು ಯೋಜನೆಗಳನ್ನು ಜಾರಿಗೆ ತರುವ ಚಿಂತನೆ ಮಾಡಿದ್ದೇನೆ. ಇದು ನಿಮ್ಮ ಸರ್ಕಾರ, ಈ ಸರ್ಕಾರವನ್ನು ನಂಬಿ ಎಂದು ಮನವಿ ಮಾಡಿದರು.
“ನೆಮ್ಮದಿ, ಸಂತೋಷದಿಂದ ನಾನು ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿಲ್ಲ. ನಾನು ಮೂಲತ:ರಾಜಕಾರಣಿಯೂ ಅಲ್ಲ. ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದೆ, ಆಕಸ್ಮಿಕವಾಗಿಯೇ ಮೊದಲ ಬಾರಿ ಮುಖ್ಯಮಂತ್ರಿಯಾದೆ.
ಎರಡನೇ ಬಾರಿ ಕೂಡ ಆಕಸ್ಮಿಕವಾಗಿಯೇ ಮುಖ್ಯಮಂತ್ರಿಯಾಗಿದ್ದೇನೆ. ಇದು ನಿಮ್ಮ ಸರ್ಕಾರ, ನಿಮ್ಮ ಕುಟುಂಬ ಉಳಿಸಲು ನಮ್ಮಲ್ಲಿ ಪ್ರಾಮಾಣಿಕತೆ ಇದೆ. ಈ ಸರ್ಕಾರವನ್ನು ನಂಬಿ ಎಂದು ಮನವಿ ಮಾಡಿದರು. ಕರ್ನಾಟಕ ಸಂಪದ್ಭರಿತ ರಾಜ್ಯ, ಇಲ್ಲಿ ಹಣದ ಕೊರತೆ ಇಲ್ಲ, ಆದರೆ, ಹಣದ ಸದ್ಬಳಕೆಯಾಗುವಲ್ಲಿ ಲೋಪವಾಗಿದೆ. ಆಗಿರುವ ಲೋಪವನ್ನು ಸರಿಪಡಿಸಿ ನಾಡು ಕಟ್ಟಲು ಜನರ ಸಹಕಾರ ಬೇಕು ಎಂದು ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ