ಸಮಾಜಮುಖಿ ಕೆಲಸ ಮಾಡಿ


Team Udayavani, May 22, 2018, 2:05 PM IST

m2-samaja.jpg

ಬನ್ನೂರು: ಮನುಷ್ಯನಾಗಿ ಹುಟ್ಟಿದ ಮೇಲೆ ಉತ್ತಮ ಗುಣಗಳನ್ನು ರೂಢಿಸಿಕೊಳ್ಳುವ ಮೂಲಕ ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದು ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಬನ್ನೂರಿನ ಬಸ್‌ ನಿಲ್ದಾಣದ ಸಮೀಪದಲ್ಲಿರುವ ಈಶ್ವರ ದೇವಸ್ಥಾನದ ಆವರಣದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್‌ ಮತ್ತು ವೀರಶೈವ ಲಿಂಗಾಯಿತ ಸೇವಾ ಟ್ರಸ್ಟ್‌ ಹಾಗೂ ಬಸವ ಬಳಗದ ವತಿಯಿಂದ ಬಸವಣ್ಣನ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಸವಣ್ಣನವರು ಸಮಾಜಕ್ಕೆ ನೀಡಿರುವಂತ ಕೊಡುಗೆ ಆಪಾರವಾಗಿದೆ ಎಂದು ತಿಳಿಸಿದರು.

ಸರ್ವಕಾಲಕ್ಕೂ ಸಲ್ಲುವಂತ ವಿಚಾರಲಹರಿಯನ್ನು ಜನರಿಗೆ ತಿಳಿಸುವ ಮೂಲಕ ತಮ್ಮದೆ ಆದಂತಹ ಚಾಪನ್ನು ಮೂಡಿಸಿ ಅಜರಾಮರರಾಗಿದ್ದಾರೆ. ಪ್ರತಿಯೊಂದು ಘಟನೆಯ ಬಗ್ಗೆ ವಚನದ ಮೂಲಕ ಸರಳ ಪರಿಹಾರ ಕೊಡುವ ಮೂಲಕ ಉತ್ತಮ ಗುಣ ಪಡೆಯುವಂತೆ ಮನುಜರಿಗೆ ತಿಳಿಸಿದರು. ಅವರು ತಿಳಿಸಿದ ಮಾರ್ಗದಲ್ಲಿ ನಾವು ಸಾಗುವ ಮೂಲಕ ಉತ್ತಮ ಆಡಳಿತದ ಜೊತೆಗೆ ಉತ್ತಮ ಜೀವನ ನಿರ್ವಹಣೆ ಮಾಡಬಹುದು ಎಂದು ತಿಳಿಸಿದರು.

ಹಲವು ಶತಮಾನಗಳ ಹಿಂದೆ ಹೇಳಿದ ವಿಚಾರಗಳು ಇಂದಿಗೂ ಅನ್ವಯ ಆಗುತ್ತದೆ ಎಂದರೆ ಬಸವಣ್ಣನವರ ಬುದ್ಧಿ ಎಷ್ಟು ಮೊನಚಾಗಿತ್ತು ಎನ್ನುವುದನ್ನು ಅರಿಯಬೇಕು. ಆದ್ದರಿಂದಲೇ ವಿಶ್ವದಲ್ಲಿ ಇಂದಿಗೂ ಬಸವಣ್ಣನವರು ವಚನಗಳ ಮೂಲಕ ಜನರ ತಪ್ಪನ್ನು ತಿದ್ದುವಂತ ಕೆಲಸವನ್ನು ಮಾಡುತ್ತಿದ್ದಾರೆ ಎಂದರು.

ಸಮಾಜ ಸೇವಕ ಮಹೇಂದ್ರ ಸಿಂಗ್‌ಕಾಳಪ್ಪ ಮಾತನಾಡಿ, ಬಸವ ಜಯಂತಿಯಂತಹ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಬೇಕು. ಈ ಮೂಲಕ ಮುಂದಿನ ಪೀಳಿಗೆಯ ಮಕ್ಕಳಿಗೆ ಬಸವಣ್ಣನವರ ಬದುಕಿನ ಸಂಪೂರ್ಣ ಮಾಹಿತಿ ಅವರಿಗೆ ಸಿಗುವಂತಾಗಬೇಕು.

ದಾರ್ಶನಿಕರ ಜೀವನ ಚರಿತ್ರೆಯನ್ನು ಪಠ್ಯಕ್ರಮದಲ್ಲಿ ಬಳಸುವ ಮೂಲಕ ಮಕ್ಕಳಿಗೆ ಅವರ ಜೀವನ ಚರಿತ್ರೆಯ ಪರಿಚಯ ಮಾಡಿಸಬೇಕು ಎಂದು ತಿಳಿಸಿದರು. ಕಾಯಕವೇ ಕೈಲಾಸ ಎಂದು ವಚನ ಸಂದೇಶ ಸಾರಿದ ಮಾಹಾನ್‌ ಚೇತನರ ವಚನಗಳು ಪ್ರತಿಯೊಬ್ಬರೂ ಪಠಣ ಮಾಡುವ ರೀತಿಯಲ್ಲಿ ಸಂಪರ್ಕ ಕಲ್ಪಿಸಬೇಕು ಎಂದು ಹೇಳಿದರು.

ಬಸವಯೋಗಿ ಪ್ರಭು, ಶಿವಮಲ್ಲಪ್ಪ, ಎಂ.ಚಂದ್ರಶೇಖರ್‌, ಕುಮಾರಸ್ವಾಮಿ, ವಚನಕುಮಾರಸ್ವಾಮಿ, ಗೌರಿಶಂಕರ ಸ್ವಾಮೀಜಿ, ಗುರುಪಾದ ಶಿವಚಾರ್ಯ ಸ್ವಾಮೀಜಿ, ದೇಶೀಕೇಂದ್ರ ಸ್ವಾಮೀಜಿ, ಸಮಾಜಸೇವಕ ಮಹೇಂದ್ರ ಸಿಂಗ್‌ಕಾಳಪ್ಪ, ರೇಣುಕಾ ಶಿವಚಾರ್ಯ ಸ್ವಾಮೀಜಿ, ಮಹಾಲಿಂಗ ಸ್ವಾಮಿಜಿ, ಪೂಜ್ಯಶ್ರೀಗಳು, ಇಮ್ಮಡಿ ಷಡಕ್ಷರಿ ಸ್ವಾಮಿಜಿ, ಸಹಜನಂದ ಸ್ವಾಮೀಜಿ, ಮಹದೇವ ಸ್ವಾಮೀಜಿ, ದಯಾನಂದ್‌ ಮಠದ ಬಸವಣ್ಣ ಸೇರಿದಂತೆ ತಾಲೂಕು ಶರಣ ಸಾಹಿತ್ಯ ಪರಿಷತ್‌ ಮತ್ತು ವೀರಶೈವ ಲಿಂಗಾಯಿತ ಸೇವಾ ಟ್ರಸ್ಟ್‌ ಹಾಗೂ ಬಸವ ಬಳಗದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.