ರಾಜಕೀಯ ಪ್ರಚಾರಕ್ಕೆ ಅರಸು ಹೆಸರು ಬಳಸಬೇಡಿ


Team Udayavani, Aug 21, 2019, 3:00 AM IST

rajakiya

ಮೈಸೂರು: ರಾಜಕೀಯ ಹಾಗೂ ಪ್ರಚಾರಕ್ಕಾಗಿ ಮಹಾನ್‌ ವ್ಯಕ್ತಿಗಳನ್ನು ಬಳಸಿಕೊಳ್ಳುವುದು ಸರಿಯಲ್ಲ. ಹಿಂದಿನ ಸರ್ಕಾರಗಳು ದೇವರಾಜ ಅರಸು ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದು, ಅವರ ಹೆಸರಿನ ಯಾವ ಕೆಲಸವನ್ನು ಪರಿಪೂರ್ಣಗೊಳಿಸಲಿಲ್ಲ ಎಂದು ಶಾಸಕ ತನ್ವೀರ್‌ ಸೇಠ್ ಬೇಸರ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಜಿಪಂ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಗರದ ಕಲಾಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು 104ನೇ ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡಿದರು.

10 ವರ್ಷಗಳ ಹಿಂದೆ ಸರ್ಕಾರ ದೇವರಾಜ ಅರಸು ಅವರ ಹುಟ್ಟುರು ಕಲ್ಲಹಳ್ಳಿಯಲ್ಲಿ ಸರ್ವತೋಮುಖ ಅಭಿವೃದ್ಧಿಗೊಳಿಸಬೇಕು. ಆದರ್ಶ ಗ್ರಾಮ ಮಾಡುತ್ತೇವೆ ಎಂದು ಘೋಷಿಸಿಲಾಗಿತ್ತು. ಆದರೆ, ಅಂದಿನಿಂದ ಸರಿಯಾದ ಕೆಲ ಆಗಿಲ್ಲ. ಈಗ ತುಸು ಕೆಲಸ ಆಗುತ್ತಿದೆ. ರಾಜಕೀಯಕ್ಕಾಗಿ ಅರಸು ಅವರ ಹೆಸರನ್ನು ಬಳಸಿಕೊಂಡರು. ಯಾವುದೇ ಮಹಾನ್‌ ವ್ಯಕ್ತಿಯನ್ನು ರಾಜಕೀಯಕ್ಕಾಗಿ ಹಾಗೂ ಪ್ರಚಾರಕ್ಕೆ ದುರ್ಬಳಕೆ ಮಾಡಬಾರದು. ಆದರೆ, ಹಿಂದಿನ ಸರ್ಕಾರವೊಂದು ದುರ್ಬಳಕೆ ಮಾಡಿಕೊಂಡಿತ್ತು. ಇದಕ್ಕೆ ನನ್ನ ತೀವ್ರ ಆಕ್ಷೇಪವಿದೆ. ಅವರ ಆದರ್ಶಗಳನ್ನು ಮುಂದುವರಿಸಿಕೊಂಡು ಹೋದರೆ ಸಾಕು. ಹಿಂದೆಯೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅರಸು ಭವನ ನಿರ್ಮಿಸುತ್ತೇವೆ ಎಂದಿದ್ದರು ಅದು ಕೈಗೂಡಲಿಲ್ಲ ಎಂದು ವಿಷಾದಿಸಿದರು.

ಅರಸು ಪ್ರತಿಮೆ: ದೇವರಾಜ ಅರಸು ರಸ್ತೆ ನಿರ್ಮಿಸುವ ಸಂದರ್ಭ ರಸ್ತೆ ಬಳಿ ಅರಸು ಅವರ ಪ್ರತಿಮೆ ನಿರ್ಮಿಸಬೇಕೆಂದು ಅರಸು ಸಂಘಟನೆಗಳು ಜಿಲ್ಲಾಡಳಿತಕ್ಕೆ ಮನವಿ ನೀಡಿದವು. ಆದರೆ ಟ್ರಾಫಿಕ್‌ ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ಇದುವರೆಗೆ ಈ ಕೋರಿಕೆ ಈಡೇರಲಿಲ್ಲ. ಅರಸು ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ದತ್ತಿಯ ಅಧ್ಯಕ್ಷನಾಗಿದ್ದೇನೆ. ನಾವೇ ಖಾಸಗಿಯಾಗಿ ಸರ್ಕಾರದ ನೆರವಿಲ್ಲದೆ ರೈಲು ನಿಲ್ದಾಣದ ಬಳಿ ಇರುವ ಇಂದಿರಾ ಭವನ(ಕಾಂಗ್ರೆಸ್‌ ಭವನ)ದ ಮುಂಭಾಗ ಪ್ರತಿಮೆ ನಿರ್ಮಿಸಲಾಗುವುದು ಎಂದರು.

ಸಮಾಜ ನಮಗೇನು ಕೊಟ್ಟಿದೆ ಎಂದು ಪ್ರಶ್ನಿಸುವ ಬದಲು ಸಮಾಜಕ್ಕೆ ನಾವೇನು ನೀಡಿದ್ದೇವೆ ಎಂಬುದನ್ನು ಪ್ರಶ್ನಿಸಿಕೊಳ್ಳಿ. ಜೀವನದುದ್ದಕ್ಕೂ ಅರಸು ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಿ ನಿಮ್ಮ ಭವಿಷ್ಯ ಉಜ್ವಲವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಮೇಯರ್‌ ಪುಷ್ಪಲತಾ, ಸಾಹಿತಿ ಡಾ.ಮಳಲಿ ವಸಂತ ಕುಮಾರ್‌, ಜಿಪಂ ಅಧ್ಯಕ್ಷೆ ಪರಿಮಳ ಶ್ಯಾಮ್‌, ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌, ಎಸ್ಪಿ ರಿಷ್ಯಂತ್‌, ತಾಪಂ ಅಧ್ಯಕ್ಷೆ ಕಾಳಮ್ಮ, ಜಿಪಂ ಉಪಾಧ್ಯಕ್ಷೆ ಗೌರಮ್ಮ , ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಸೋಮಶೇಖರ್‌, ಅನ್ವೇಷಣಾ ಟ್ರಸ್ಟ್‌ ಅಧ್ಯಕ್ಷ, ಚುಟುಕು ಸಾಹಿತಿ ಡಾ.ಎಂ.ಜಿ.ಆರ್‌ .ಅರಸ್‌ ಇತರರಿದ್ದರು.

ಎಲ್ಲಾ ಜಾತಿಯವರನ್ನೂ ರಾಜಕೀಯಕ್ಕೆ ತಂದ ಅರಸು: ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ದೇವರಾಜ ಅರಸು ಧ್ವನಿ ಇಲ್ಲದವರಿಗೆ ದನಿ ಕೊಟ್ಟರು. ಹಿಂದುವಳಿ ವರ್ಗಗಳ ಅಭಿವೃದ್ಧಿಗೆ ಕ್ರಮ ವಹಿಸಿದ್ದಾರೆ. ಉಳುವವನೇ ಭೂಮಿಯ ಒಡೆಯ ಯೋಜನೆಗಳಿಂದ ಜನರ ಹಿತ ಕಾದಿದ್ದಾರೆ. ಇಂದು ಎಲ್ಲಾ ವರ್ಗದವರು ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿ ಕೊಂಡಿರುವುದಕ್ಕೆ ಅರಸು ಅವರ ಪ್ರೋತ್ಸಾಹ ಹಾಗೂ ಆಡಳಿತವೇ ಕಾರಣ ತಿಳಿಸಿದರು.

ಮೈಸೂರು ರಾಜವಂಶಸ್ಥರ ಆಡಳಿತದ ಸಮಯದಲ್ಲಿ 1940ರ ಸಮಯದಲ್ಲೇ ಪ್ರಜಾಪ್ರತಿನಿಧಿಯ ಚುನಾವಣೆ ನಿಂತು ಅವರ ರಾಜಕೀಯ ಗುರು ಸಾಹುಕರ್‌ ಚೆನ್ನಯ್ಯ ಅವರ ಮಾರ್ಗದರ್ಶನದಲ್ಲಿ ಶಾಸಕರಾಗಿದ್ದರು. ಅವರು ಆಡಳಿತ ನೀಡಿದ ಹುಣಸೂರು ಭಾರತವನ್ನು ಪ್ರತಿನಿಧಿಸುತ್ತದೆ. ಭಾರತದಲ್ಲಿರುವ ಧರ್ಮ, ಜಾತಿ ಮತು ವರ್ಗ ಹೀಗೆ ಎಲ್ಲಾ ವಿಷಯದಲ್ಲಿ ವೈವಿಧ್ಯತೆ ಹುಣಸೂರಿನಲ್ಲೂ ಇದೆ ಎಂದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.