ಮಂಡ್ಯದಲ್ಲಿ ಡ್ರಾಮಾ ಮಾಡ್ತಿದ್ದಾರೆ: ಸುಮಲತಾ


Team Udayavani, Mar 29, 2019, 1:08 PM IST

m2-mandya

ಮೈಸೂರು: ಆದಾಯ ತೆರಿಗೆ ಇಲಾಖೆ ದಾಳಿ ಮುಂದಿಟ್ಟುಕೊಂಡು ಅನುಕಂಪ ಗಿಟ್ಟಿಸಲು ಜೆಡಿಎಸ್‌ನವರು ಮಂಡ್ಯದಲ್ಲಿ ಡ್ರಾಮಾ ಮಾಡುತ್ತಿದ್ದಾರೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ತಿಳಿಸಿದರು.

ಮೈಸೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದವರು ಐಟಿ ದಾಳಿ ಮಾಡುತ್ತಾರೆ. ನಾನೊಬ್ಬ ಅಭ್ಯರ್ಥಿ, ನನಗೆ ಐಟಿ ದಾಳಿ ಬಗ್ಗೆ ಏನು ಗೊತ್ತಿರುತ್ತೆ ನೀವೇ ಹೇಳಿ ಎಂದು ಪ್ರಶ್ನಿಸಿದರು.

ಅವರ ಸಚಿವರೇ ಧಮಕಿ ಹಾಕಿದ್ದು, ಇಂತಹ ರಾಜಕಾರಣ ಅವರದ್ದು, ಅನುಮಾನವಿದ್ದವರ ಬಗ್ಗೆ ಮಾತನಾಡಲಿ, ಪುಟ್ಟರಾಜು ಅವರ ಬಗ್ಗೆ ನನಗೆ ಗೌರವವಿದೆ, ನಾನು ಅವರಂಥೆ ಮಾತನಾಡುವುದಿಲ್ಲ. ನಾನು ನನ್ನ ಚುನಾವಣಾ ಪ್ರಚಾರ ಮಾಡುತ್ತಿದ್ದೇನೆ. ಪುಟ್ಟರಾಜು ಅವರು ಏನಾದರೂ ನನ್ನ ಬಗ್ಗೆ ಮಾತನಾಡುವ ಮುನ್ನ ಅಂಬರೀಶ್‌ ಅವರನ್ನು ಕಣ್ಣುಮುಚ್ಚಿಕೊಂಡು ಒಮ್ಮೆ ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ನೀವು ನಿಮ್ಮ ಪಕ್ಷದ ಪರ ಪ್ರಚಾರ ಮಾಡಿಕೊಳ್ಳಿ, ಅದನ್ನು ಬಿಟ್ಟು ಅಂಬರೀಶ್‌ ಕುಟುಂಬದವರ ಬಗ್ಗೆ ಮಾತನಾಡುವುದನ್ನು ದೇವರು ಒಪ್ಪಲ್ಲ. ಪುಟ್ಟರಾಜು ಅವರಿಗೆ ಮನಃಸಾಕ್ಷಿ ಎಂಬುದು ಸ್ವಲ್ಪವಾದರೂ ಉಳಿದಿದ್ದರೆ, ನಮ್ಮ ಕುಟುಂಬದ ಬಗ್ಗೆ ಮಾತನಾಡುವ ಮುನ್ನ ಯೋಚನೆ ಮಾಡಲಿ ಎಂದರು.

ಅವರ ಅಭ್ಯರ್ಥಿ ಗೆಲ್ಲಿಸಿದರೆ ಮಾತ್ರ ಮಂಡ್ಯ ಅಭಿವೃದ್ಧಿ, ಇದುವರೆಗೂ ಏನು ಮಾಡಿಲ್ಲ, ಇಷ್ಟು ದಿನ ಏನು ಮಾಡಿದರು, ಅವರಿಗೆ ಅನುಕಂಪ ಇಲ್ಲ, ಇದರ ಮೂಲಕ ಅನುಕಂಪ ಗಿಟ್ಟಿಸಲು ಪ್ರಯತ್ನ, ಐಟಿ ದಾಳಿ ನಾನೇ ಮಾಡಿಸಿದ್ದೇನೆ ಎಂದು ಹೇಳುತ್ತಿದ್ದಾರೆ. ಆದರೆ, ಜನ ಇದನ್ನು ಒಪ್ಪಲ್ಲ.

ನಾನು ಅಂಬರೀಶ್‌ ಅವರ ಪತ್ನಿ, ಅವರೆಂದು ಇಂತಹ ಕುತಂತ್ರದ ರಾಜಕಾರಣ ಮಾಡಿದವರಲ್ಲ, ನಾನು 25 ವರ್ಷದಿಂದ ಅಂಬರೀಶ್‌ ಅವರ ರಾಜಕೀಯವನ್ನು ನೋಡಿದ್ದೇನೆ. ನನಗೂ ನಿಖಿಲ್‌ ಹೆಸರಿನವರಿಂದ ನಾಮಪತ್ರ ಸಲ್ಲಿಸಲು ಹೇಳಿದ್ದರು. ನಾನು ಬೇಕಿದ್ದರೆ 9 ಜನ ನಿಖಿಲ್‌ ಹೆಸರಿನವರನ್ನು ನಿಲ್ಲಿಸಬಹುದಿತ್ತು. ಆದರೆ, ನಾನೇ ಬೇಡ ನೇರ ಹೋರಾಟ ಮಾಡುತ್ತೇನೆ.

ಹಿಂಬಾಗಿಲ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದೇನೆ. ಅವರು ಮೂರು ಜನ ಸುಮಲತಾ ಹೆಸರಿನ ಅಭ್ಯರ್ಥಿಗಳನ್ನು ನಿಲ್ಲಿಸಿದ್ದರು. ನಾನು ಅಷ್ಟೊಂದು ಕೀಳುಮಟ್ಟಕ್ಕೆ ಇಳಿದು ರಾಜಕಾರಣ ಮಾಡಲ್ಲ ಎಂದು ಸಚಿವ ಸಿ.ಎಸ್‌.ಪುಟ್ಟರಾಜು ಹಾಗೂ ಜೆಡಿಎಸ್‌ ನಾಯಕರ ವಿರುದ್ಧ ಸುಮಲತಾ ಅಂಬರೀಶ್‌ ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.