ರಂಗ ತರಬೇತಿ ಪಡೆದ ಮಕ್ಕಳಿಂದ ನಾಟಕ ಪ್ರದರ್ಶನ


Team Udayavani, Jul 22, 2019, 3:00 AM IST

ranga-tarabeti

ಹುಣಸೂರು: ಈ ಹಳ್ಳಿಯ ಶಾಲಾ ಮಕ್ಕಳು ಮೈಸೂರಿನ ರಂಗಾಯಣದಲ್ಲಿ ರಂಗ ತರಬೇತಿ ಪಡೆದಿರುವ ಅಗ್ರಹಾರ ಸುಭಾಷ್‌ ನಿರ್ದೇಶನದಲ್ಲಿ ತಿಂಗಳಲ್ಲೇ ನಾಟಕ ಕಲಿತು, ತಮ್ಮೂರಿನ ಜನ, ಪೋಷಕರ ಮುಂದೆ ಮನೋಜ್ಞವಾಗಿ ಅಭಿನಯಿಸಿ, ಶಹಬಾಷ್‌ ಎನಿಸಿಕೊಂಡರು.

ತಾಲೂಕಿನ ಗಾವಡಗೆರೆ ಹೋಬಳಿಯ ಅಗ್ರಹಾರ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳು ಬದಲಾವಣೆ ಜಗದ ನಿಯಮ ಎಂಬ ಮಕ್ಕಳ ನಾಟಕವನ್ನು ಅಭಿನಯದ ಮೂಲಕ ಪ್ರಸ್ತುತ ಸಮಾಜದ ಪರಿಸ್ಥಿತಿಯನ್ನು ಪ್ರತಿಬಿಂಬಿಸಿದರು.

ಮೈಸೂರಿನ ರಂಗಾಯಣದಲ್ಲಿ ರಂಗ ತರಬೇತಿ ಪಡೆದಿರುವ ಅಗ್ರಹಾರದ ಸುಭಾಷ್‌, ಹುಣಸೂರಿನ ಅರ್ಜುನ್‌ ಮತ್ತಿತರ ರಂಗ ಕಲಾವಿದರು ಹುಟ್ಟು ಹಾಕಿರುವ ರಂಗ ಗರಡಿ ಟ್ರಸ್ಟ್‌ನಿಂದ ಅಗ್ರಹಾರದಲ್ಲಿ ಅದೇ ಗ್ರಾಮದ ಶಾಲಾ ಮಕ್ಕಳಿಗೆ ತರಬೇತಿ ನೀಡಿ, ಪ್ರಥಮ ಪ್ರಯೋಗವನ್ನು ಅಲ್ಲಿಯೇ ಪ್ರದರ್ಶಿಸಿದ್ದು ವಿಶೇಷ.

ಗಮನ ಸೆಳೆದ ಮಕ್ಕಳು: ರಂಗ ಕಲಾವಿದ ಅರ್ಜುನ್‌ ರಚನೆಯ, ಅಗ್ರಹಾರ ಸುಭಾಷ್‌ ನಿರ್ದೇಶನದ ಬದಲಾವಣೆ ಜಗದ ನಿಯಮ ನಾಟಕವನ್ನು ಕಲಿಸಿ, ಅವರ ಪೋಷಕರು, ಸಾರ್ವಜನಿಕರ ಮುಂದೆ ಪ್ರದರ್ಶಿಸಿದರು. ನಾಟಕದಲ್ಲಿ ಹಿಂದಿನ ಕೂಡು ಕುಟುಂಬ, ಗುರು ಹಿರಿಯರಿಗೆ ಗೌರವ, ಅತ್ತೆ-ಸೊಸೆ ಬಾಂದವ್ಯ,

ಇಂದಿನ ಮೊಬೈಲ್‌ ಹಾವಳಿ, ಕುಟುಂಬದ ಒಡಕು ಹೀಗೆ ಅನೇಕ ಬದಲಾವಣೆಗಳ ಬಗ್ಗೆ ಮಕ್ಕಳು ಅಭಿನಯಿಸಿ, ಪ್ರಸ್ತುತ ಪರಿಸ್ಥಿತಿಯನ್ನು ಅನಾವರಣಗೊಳಿಸಿ ಗಮನ ಸೆಳೆದರು. ನಾಟಕದ ಕೆಲ ಸನ್ನಿವೇಶಗಳು ಹಲವರ ಮನೆಯಲ್ಲಿ ನಡೆಯುತ್ತಿರುವ ಕುರಿತು ಸಭಿಕರ ಮಧ್ಯೆ ಚರ್ಚಾಗ್ರಾಸವಾಗಿತ್ತು.

ನಾಟಕದೊಳಗೊಂದು ಕಂಸಾಳೆ ರಂಗು: ಇದೇ ಶಾಲೆ 30ಕ್ಕೂ ಹೆಚ್ಚು ಮಕ್ಕಳು ರಂಗಕಲಾವಿದ ಅರ್ಜುನ್‌ ಮಾರ್ಗದರ್ಶನದಲ್ಲಿ ಕಂಸಾಳೆ ಕಲಿತು, ವೇದಿಕೆಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ನೀಡಿದ ಬಗೆಬಗೆಯ ಕಂಸಾಳೆ ಪ್ರದರ್ಶನವಂತೂ ಎಲ್ಲರನ್ನು ಅಶ್ಚರ್ಯಚಕಿತರನ್ನಾಗಿಸಿತ್ತು.

ರಂಗಭೂಮಿ ಉಳಿಸಿ-ಬೆಳೆಸಿ: ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದ ರಂಗಾಯಣ ಕಲಾವಿದ ರಾಮನಾಥ್‌ ಮಾತನಾಡಿ, ಇಂದು ರಂಗಭೂಮಿಯನ್ನು ಉಳಿಸಿ ಬೆಳೆಸಬೇಕಿದೆ. ಈ ನಿಟ್ಟಿನಲ್ಲಿ ಮೈಸೂರಿನ ರಂಗಾಯಣ ಪ್ರತಿವರ್ಷ 20 ಮಕ್ಕಳಿಗೆ ರಂಗ ತರಬೇತಿ ನೀಡಲಾಗುವುದು. ರಂಗಾಯಣದಲ್ಲಿ ತರಬೇತಿ ಪಡೆದು ಹುಟ್ಟೂರಿನ ಶಾಲಾ ಮಕ್ಕಳಿಗೆ ನಾಟಕ ಕಲಿಸಿ, ಪ್ರದರ್ಶಿಸಿರುವ ಅಗ್ರಹಾರ ಸುಭಾಷ್‌ ಮತ್ತು ತಂಡಕ್ಕೆ ಪ್ರಶಂಸಿಸಿದರು.

ಡಿ.ಡಿ.ಅರಸ್‌ ಕಾಲೇಜಿನ ಪ್ರಾಧ್ಯಾಪಕಿ ಡಾ.ತ್ರಿವೇಣಿ, ಸಿಆರ್‌ಪಿ ಡಾ.ಮಾಧುಪ್ರಸಾದ್‌, ಶಾಲಾ ಮುಖ್ಯಶಿಕ್ಷಕ ಸುರೇಶ್‌ ಮಾತನಾಡಿದರು. ಕಾರ್ಯಕ್ರಮದಲ್ಲಿ ಯ. ಗರಡಿಶಿವಣ್ಣ, ಮುಖಂಡರಾದ ಮುತ್ತುರಾಜ್‌, ಗೋವಿಂದಯ್ಯ ಮತ್ತಿತರಿದ್ದರು. ಸಾಕಷ್ಟು ಸಂಖ್ಯೆಯಲ್ಲಿ ಗ್ರಾಮಸ್ಥರು ನಾಟಕ ವೀಕ್ಷಿಸಿದರು.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.