ಸಾಂಸ್ಕೃತಿಕ ಅರಿವು ಕಾರ್ಯಕ್ರಮಕ್ಕೆ ಚಾಲನೆ
Team Udayavani, Jul 18, 2017, 12:26 PM IST
ಮೈಸೂರು: ಡಾ.ಬಿ.ಆರ್.ಅಂಬೇಡ್ಕರ್ ಅಂತಾರಾಷ್ಟ್ರೀಯ ಸಮ್ಮೇಳನದ ಪೂರ್ವಭಾವಿಯಾಗಿ ನೆಲೆ-ಹಿನ್ನೆಲೆ ಸಂಸ್ಥೆಯಿಂದ ರೂಪಿಸಿರುವ ಸಾಂಸ್ಕೃತಿಕ ಅರಿವಿನ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ದೊರೆಯಿತು.
ನಗರದ ಮಾನಸಗಂಗೋತ್ರಿಯ ರೌಂಡ್ ಕ್ಯಾಂಟಿನ್ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಮ್ಮೇಳನದ ಸಾಂಸ್ಕೃತಿಕ ರಾಜ್ಯ ಸಮಿತಿ ಸದಸ್ಯ ಎಚ್.ಜನಾರ್ಧನ್(ಜನ್ನಿ) ಚಾಲನೆ ನೀಡಿ ಮಾತನಾಡಿ, ಅಂಬೇಡ್ಕರ್ ಬಹುಜನರ ದಿವ್ಯದೀಪವಾಗಿದ್ದು, ಅಂಬೇಡ್ಕರ್ ಅವರ ನೆಪದಲ್ಲಿ ರಾಜ್ಯ ಸರ್ಕಾರ ಋಣಾತ್ಮಕವಾದ ಚಳವಳಿ ಸಂಘಟಿಸಿದೆ ಎಂದರು.
ಬೆಂಗಳೂರಿನಲ್ಲಿ ನಡೆಯಲಿರುವ ಸಮಾವೇಶದ ಬಗ್ಗೆ ಸಾಂಸ್ಕೃತಿಕ ಅರಿವಿನ ಕಾರ್ಯಕ್ರಮ ರೂಪಿಸಿದ್ದು, ಮೈಸೂರು, ಚಾಮರಾಜನಗರ, ಹಾಸನ ಜಿಲ್ಲೆಗಳ ಕಲಾವಿದರು ಪಾಲ್ಗೊಂಡು ಸಾರ್ವಜನಿಕ ಸ್ಥಳಗಳಲ್ಲಿ ಅಂಬೇಡ್ಕರ್ ತತ್ವಾದರ್ಶ, ಜನಪರ ಹಾಗೂ ದಲಿತಪರ ಹೋರಾಟದ ಹಾಡುಗಳನ್ನು ಪ್ರಸ್ತುತ ಪಡಿಸಲಿದ್ದಾರೆ ಎಂದು ತಿಳಿಸಿದರು.
ನೆಲೆ ಹಿನ್ನೆಲೆ ತಂಡದ ಕಲಾವಿದರು, ಶಿಕ್ಷಣದ ಮಹತ್ವ, ಮೂಢನಂಬಿಕೆಯಿಂದ ಜನರಿಗೆ ಆಗುತ್ತಿರುವ ಮೋಸ, ವಂಚನೆಯ ಕುರಿತು ಅರಿವು ಮೂಡಿಸುವ ಬೀದಿ ನಾಟಕದ ಮೂಲಕ ಪ್ರಸ್ತುತಪಡಿಸಿದರು. ಇದಕ್ಕೂ ಮುನ್ನ ಎಚ್.ಜನಾರ್ಧನ್ ಸಿದ್ದಲಿಂಗಯ್ಯರ ನಾಡ ನಡುವಿನಿಂದ ನೋವಿನಿಂದ ಕೂಗೆ ಗೀತೆಯನ್ನು ಹಾಡಿದರು. ಅಲ್ಲದೆ ನೆಲೆ ಹಿನ್ನೆಲೆ ಕಲಾವಿದರು ಯಾವ ಕುಲವಯ್ಯ ನಿಮ್ಮದು ಯಾವ ಮತವಯ್ಯ ಗೀತೆಗೆ ನೃತ್ಯ ರೂಪಕ ಪ್ರದರ್ಶಿಸಿದರು.
ಪಾಲಿಕೆ ಸದಸ್ಯ ಪುರುಷೋತ್ತಮಮ್, ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಡಾ.ಮಹೇಶ ಚಂದ್ರಗುರು, ಮೈಸೂರು ವಿವಿ ಡಾ.ಬಿ.ಆರ್. ಅಂಬೇಡ್ಕರ್ ಸಂಶೋಧನ ಮತ್ತು ಅಧ್ಯಯನ ಸಂಸ್ಥೆ ಸಂಯೋಜಕ ಡಾ.ಎಸ್.ನರೇಂದ್ರಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಕೆ ಸಹಾಯಕ ನಿರ್ದೇಶಕ ಎಚ್.ಚನ್ನಪ್ಪ, ನೆಲೆ ಹಿನ್ನೆಲೆ ಕೆ.ಆರ್.ಗೋಪಾಲಕೃಷ್ಣ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ
Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ
1 ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್ ಸಿಂಗ್
Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.