ಜೋಡಿ ರಸ್ತೆ ವಿಸ್ತರಣೆಯಲ್ಲಿ ಜನರಿಗೆ ಧೂಳಿನಿಂದ ಮುಕಿ


Team Udayavani, May 28, 2018, 4:15 PM IST

mys-1.jpg

ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿ ರಸ್ತೆಯನ್ನು 100 ಅಡಿಗೆ ವಿಸ್ತರಿಸುವ ಕಾಮಗಾರಿ ಭರದಿಂದ ಸಾಗಿದೆ. ಪ್ರಸ್ತುತ ರಸ್ತೆಯ ಒಂದು ಬದಿಗೆ ಕ್ವಾಲಿಟಿ ಸಿಮೆಂಟ್‌ ಕಾಂಕ್ರೀಟ್‌ ಹಾಕುವ ಕೆಲಸ ನಡೆದಿದೆ. ರಸ್ತೆ ಕಾಮಗಾರಿ ಈಗ ಒಂದು ಹಂತಕ್ಕೆ ಬಂದಿದ್ದು, ಜನರಿಗೆ ಧೂಳಿನಿಂದ ಮುಕ್ತಿ ದೊರೆಯುತ್ತಿದೆ.

ನಗರದ ಪಚ್ಚಪ್ಪ ವೃತ್ತದಿಂದ ರಾಮಸಮುದ್ರದ ವರೆಗೆ 3.10 ಕಿ.ಮೀ. ದೂರದವರೆಗೆ ಬಿ. ರಾಚಯ್ಯ ಜೋಡಿ ರಸ್ತೆಯನ್ನು ನಾಲ್ಕು ಪಥದ ರಸ್ತೆಯನ್ನಾಗಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಕೇಂದ್ರ ಭೂಸಾರಿಗೆ ಮಂತ್ರಾಲಯವು 2016- 17ನೇ ಸಾಲಿನ ಕೇಂದ್ರ ರಸ್ತೆ ನಿಧಿ ಯೋಜನೆಯಡಿ 35 ಕೋಟಿ ರೂ. ಅನುದಾನ ನೀಡಿದ್ದು, ಎಂಎಸ್‌ ಆರ್‌ ಕನ್ಸ್‌ಟ್ರಕ್ಷನ್‌ ಎಂಬ ಕಂಪೆನಿ ಕಾಮಗಾರಿ ನಡೆಸುತ್ತಿದೆ.
 
2017ರ ಆಗಸ್ಟ್‌ 8ರಂದು ಈ ರಸ್ತೆ ಕಾಮಗಾರಿಗೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದ್ದರು. ಕಾಮಗಾರಿಗಾಗಿ ರಸ್ತೆಯನ್ನು ಅಗೆದು ಧೂಳೆದ್ದು ಜನರು ಹಲವು ತಿಂಗಳು ಕಾಲ ಪರಿತಪಿಸ ಬೇಕಾ
ಯಿತು. ಮಾಸ್ಕ್ ಧರಿಸಿ ಸಂಚರಿಸು ವಂತಾಗಿತ್ತು. ಮೊದಲಿಗೆ 80 ಅಡಿ ಅಗಲೀ ಕರಣಗೊಳಿಸುವ ಕಾಮಗಾರಿಯನ್ನು ನಂತರ 100 ಅಡಿಗೆ ಬದಲಿಸಲಾಯಿತು. ಅಕ್ಕಪಕ್ಕದ ಕಟ್ಟಡಗಳಿಗೆ ಜಿಲ್ಲಾಡಳಿತ, ನಗರಸಭೆ ಯಾವುದೇ ಪರಿಹಾರ ನೀಡದಿದ್ದರಿಂದ ಕೆಲವು ಕಟ್ಟಡ ಮಾಲಿಕರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಹೀಗಾಗಿ ಕಾಮಗಾರಿ ಕುಂಟುತ್ತಾ ಸಾಗುತ್ತಿತ್ತು.

ಈಗ ಒಂದು ವಾರದಿಂದ, ರಸ್ತೆಯ ಒಂದು ಬದಿಗೆ ಅಂದರೆ 10.50 ಮೀ. ಅಗಲಕ್ಕೆ ಪಿಕ್ಯೂಸಿ – (ಪೇವ್‌ಮೆಂಟ್‌ ಕ್ವಾಲಿಟಿ
ಕಾಂಕ್ರೀಟ್‌) ಹಾಕಲಾಗುತ್ತಿದೆ. ಇದು ರಸ್ತೆಯ ನಿರ್ಮಾಣದಲ್ಲಿ ಅಂತಿಮ ಹಂತದ ಕಾಮಗಾರಿ. ಇದರ ಅಡಿಗೆ, ಜಿಎಸ್‌ಬಿ (ಗ್ರಾನುಲರ್‌ ಸಬ್‌ ಬೇಸ್‌) ಹಾಗೂ ಡಿಎಲ್‌ಸಿ (ಡ್ರೈಲೀನ್‌ ಕಾಂಕ್ರೀಟ್‌) ಹಾಕಲಾಗಿತ್ತು. ಒಟ್ಟಾರೆ ಈ ರಸ್ತೆಯ ಎತ್ತರ 250 ಮಿ.ಮೀ ಇರಲಿದೆ. 

ರಸ್ತೆಯ ಒಂದು ಬದಿಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಹಳೆಯ ಕಿತ್ತು ಹೋಗಿರುವ ಇನ್ನೊಂದು ಬದಿಯ ರಸ್ತೆಯಲ್ಲಿ ವಾಹನ ಸವಾರರು, ಪಾದಚಾರಿಗಳು ಬಹಳ ಸಂಕಷ್ಟದಲ್ಲಿ ಸಂಚರಿಸಬೇಕಾಗಿದೆ. ಇನ್ನೊಂದು ಬದಿಗೆ ಪೂರ್ತಿ 3.10 ಕಿ.ಮೀ.ಗೆ ಪಿಕ್ಯೂಸಿ ಹಾಕುವ ಕೆಲಸ ಪೂರ್ಣಗೊಳ್ಳಲು ಕನಿಷ್ಠ ಮೂರು ತಿಂಗಳಾಗಲಿದೆ! ಪಿಕ್ಯೂಸಿ ಕೆಲಸ ಮುಗಿದ ಮೇಲೆ ಒಂದು ತಿಂಗಳ ಕಾಲ ಕ್ಯೂರಿಂಗ್‌ಗೇ ರಸ್ತೆಯನ್ನು ಬಿಡಬೇಕಾಗಿದೆ. ಹಾಗಾಗಿ ಇನ್ನೂ ಮೂರು ತಿಂಗಳ ಕಾಲ ಸಾರ್ವಜನಿಕರು ತೊಂದರೆಯನ್ನು ಸಹಿಸಿಕೊಳ್ಳಬೇಕಾಗಿದೆ.

ಇನ್ನೊಂದು ಬದಿಯಲ್ಲಿ ಕಾಮಗಾರಿ ಪೂರ್ಣ ಗೊಂಡು ಸಂಚಾರಕ್ಕೆ ತೆರವುಗೊಳಿಸಿದರೆ ಶೇ.75 ರಷ್ಟು ಸಂಚಾರ ಸಮಸ್ಯೆ ನಿವಾರಣೆಯಾಗಲಿದೆ. 10.50 ಮೀ. ರಸ್ತೆ ದೊರಕುವುದರಿಂದ ವಾಹನ ಸಂಚಾರಕ್ಕೆ ಎಷ್ಟೋ ಅನುಕೂಲವಾಗಲಿದೆ. ಆಗ ಬಾಕಿ ಉಳಿಯುವ ಇನ್ನೊಂದು ಬದಿ ರಸ್ತೆ ಕಾಮಗಾರಿಗೆ ಹೆಚ್ಚಿನ ತೊಡಕುಂಟಾಗುವುದಿಲ್ಲ.
ಜನರಿಗೂ ಈಗಿನಷ್ಟು ಕಿರಿಕಿರಿ ಇರುವುದಿಲ್ಲ. ವಾಹನ ಪಾರ್ಕಿಂಗ್‌ಗೆಸ್ಲಾಬ್‌ ಸದ್ಯಕ್ಕಿಲ್ಲ!

ಈಗ 80 ಅಡಿ ರಸ್ತೆ ನಿರ್ಮಾಣಕ್ಕಷ್ಟೇ ಅನುದಾನ ಲಭ್ಯವಿದೆ. ಗುತ್ತಿಗೆದಾರರು 80 ಅಡಿ ರಸ್ತೆ ಮತ್ತು ಚರಂಡಿ ನಿರ್ಮಾಣ
ಮಾಡಲಿದ್ದಾರೆ. ವಾಹನಗಳ ಪಾರ್ಕಿಂಗ್‌ಗೆ ಬೇಕಾದ ಇನ್ನುಳಿದ ಜಾಗಕ್ಕೆ ಸ್ಲಾಬ್‌ ಹಾಕಲು ಹೊಸ ಅನುದಾನ ಮಂಜೂರಾಗಬೇಕು. 

ಅಲ್ಲಿಯವರೆಗೂ ಪಾರ್ಕಿಂಗ್‌ ಜಾಗಕ್ಕೆ ಇಂಟರ್‌ ಲಾಕಿಂಗ್‌ ಸ್ಲಾಬ್‌ ಹಾಕುವುದಿಲ್ಲ. ಅದಕ್ಕೆ ಮಣ್ಣು ಹಾಕಿ ಹಾಗೆ ಬಿಡಲಾಗುತ್ತದೆ. 80 ಅಡಿಗೆ ಯೋಜನೆಯಾಗಿದ್ದ ರಸ್ತೆಯನ್ನು ಜಿಲ್ಲಾಡಳಿತ 100 ಅಡಿಗೆ ಮಾಡಬೇಕೆಂದು ದಿಢೀರ್‌ ಎಂದು ಸೂಚನೆ ನೀಡಿದ್ದು ಇದಕ್ಕೆ ಕಾರಣ. ಗುತ್ತಿಗೆದಾರರು ಯೋಜನೆಯಲ್ಲಿ ದ್ದಂತೆ 80 ಅಡಿ ರಸ್ತೆ ಹಾಗೂ ಚರಂಡಿ
ನಿರ್ಮಿಸುತ್ತಿದ್ದಾರೆ. ಉಳಿದ ಜಾಗಕ್ಕೆ ಸ್ಲಾಬ್‌ ನಿರ್ಮಿಸಲು ಜಿಲ್ಲಾಡಳಿತ ಹೊಸ ಅನುದಾನ ತರಬೇಕಾಗಿದೆ. 

„ ಕೆ.ಎಸ್‌.ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.