23ರಿಂದ ದಸರಾ ದೀಪಾಲಂಕಾರ: ಕೆಂಪುಕೋಟೆ ಪ್ರಮುಖ ಆಕರ್ಷಣೆ, ಬೆಳಕಲ್ಲಿ ಗಜಪಡೆ ತಾಲೀಮು

ಈ ವರ್ಷ 124 ಕಿ.ಮೀ. ರಸ್ತೆ ದೀಪಾಲಂಕಾರ ಮಾಡಲಾಗುತ್ತಿದೆ.

Team Udayavani, Sep 16, 2022, 5:25 PM IST

23ರಿಂದ ದಸರಾ ದೀಪಾಲಂಕಾರ: ಕೆಂಪುಕೋಟೆ ಪ್ರಮುಖ ಆಕರ್ಷಣೆ, ಬೆಳಕಲ್ಲಿ ಗಜಪಡೆ ತಾಲೀಮು

ಮೈಸೂರು: ನಾಡಹಬ್ಬ ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ದಸರಾ ದೀಪಾಲಂಕಾರಕ್ಕೆ ಭರದ ಸಿದ್ಧತೆ ನಡೆದಿದ್ದು, ಈ ಬಾರಿ ಹೊಸದಿಲ್ಲಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಸಂಸತ್‌ ಭವನ, ಸುಭಾಷ್‌ಚಂದ್ರ ಬೊಸ್‌ ಅವರ ಪ್ರತಿಕೃತಿ ವಿಶೇಷವಾಗಿದೆ.

ನಗರದಲ್ಲಿ ದೀಪಾಲಂಕಾರ ಸಿದ್ಧತೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ದೀಪಾಲಂಕಾರ ಸಮಿತಿ ಉಪ ವಿಶೇಷಾಧಿಕಾರಿ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ ಮಾಹಿತಿ ನೀಡಿ, ಈ ಬಾರಿಯ ದಸರಾ ಉತ್ಸವದಲ್ಲಿ ನೂತನ ಸಂಸತ್‌ ಭವನ, ಬೋಸ್‌ ಪ್ರತಿಕೃತಿ ಜತೆಗೆ ಚಿತ್ರನಟ ಡಾ. ಪುನೀತ್‌ ರಾಜಕುಮಾರ್‌ಗೆ ವಿಶೇಷ ಗೌರವ ಸಲ್ಲಿಸಲಾಗುತ್ತಿದ್ದು, ಪಿಒಪಿಯಲ್ಲಿ ನಿರ್ಮಿಸಿದ ಅವರ ಪ್ರತಿಮೆಗೆ ತ್ರಿಡಿ ವೀಡಿಯೋ ಸ್ಪರ್ಶ ನೀಡಲಾಗಿದೆ ಎಂದರು.

ನಗರದ ಎಲ್‌ಐಸಿ ವೃತ್ತದಲ್ಲಿ ರಾಷ್ಟ್ರ ಲಾಂಛನ, ರಾಷ್ಟ್ರಧ್ವಜ, ಪ್ರಾಣಿ, ಪಕ್ಷಿಗಳ ಮಾದರಿ ಇರಲಿದ್ದು, ಜ್ಞಾನಪೀಠ ಪುರಸ್ಕೃತರಾದ ಕನ್ನಡಿಗರ ಪ್ರತಿಕೃತಿಗಳು, ಮೈಸೂರು ಮಹಾರಾಜರು, ಕೆಂಪುಕೋಟೆ ಮಾದರಿ ದೀಪಾಲಂಕಾರದಲ್ಲಿ ಕಂಗೊಳಿಸಲಿವೆ. ಕಳೆದ ವರ್ಷ 100 ಕಿ.ಮೀ. ದೀಪಾಲಂಕಾರ ಮಾಡಲಾಗಿತ್ತು. ಈ ವರ್ಷ 124 ಕಿ.ಮೀ. ರಸ್ತೆ ದೀಪಾಲಂಕಾರ ಮಾಡಲಾಗುತ್ತಿದೆ. ಸೂರ್ಯಾಸ್ತದಿಂದ ರಾತ್ರಿ 10.30ರ ತನಕ ದೀಪಾಲಂಕಾರ ಇರಲಿದ್ದು,
ಈಗಾಗಲೇ ಸಿದ್ಧತೆ ಆರಂಭವಾಗಿದೆ ಎಂದು ವಿವರಿಸಿದರು.

ಸ್ವಾಗತ ಕಮಾನಿನೊಂದಿಗೆ ಆಕರ್ಷಕ ವಿದ್ಯುತ್‌ ದೀಪಾಲಂಕಾರ: ನಗರದ 96 ವೃತ್ತಗಳಲ್ಲಿ ದೀಪ ಅಲಂಕಾರ ಮಾಡಲಾಗುತ್ತಿದ್ದು, 35 ಪ್ರಾಯೋಜಕರು ಮುಂದೆ ಬಂದಿದ್ದಾರೆ. ಮೈಸೂರು ಹೆಬ್ಟಾಗಿಲುಗಳಾದ ನಂಜನಗೂಡು, ಹುಣಸೂರು, ಬೆಂಗಳೂರು ಮತ್ತು ತಿ.ನರಸೀಪುರದ ರಸ್ತೆಗಳಲ್ಲಿ ಸ್ವಾಗತ ಕಮಾನಿನೊಂದಿಗೆ ಆಕರ್ಷಕ ವಿದ್ಯುತ್‌ ದೀಪಾಲಂಕಾರ ಇರಲಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಪ್ರತಾಪ್‌ಸಿಂಹ ಬನ್ನೂರು ಮತ್ತು ಎಚ್‌.ಡಿ.ಕೋಟೆ ಮೂಲಕ ಮೈಸೂರಿಗೆ ಬರುವ ರಸ್ತೆಯಲ್ಲೂ ದೀಪಾಲಂಕಾರ ಮಾಡುವಂತೆ ಸಲಹೆ ನೀಡಿದರು.

ಬೆಳಕಲ್ಲಿ ಗಜಪಡೆ ತಾಲೀಮು
ಈ ಬಾರಿಯ ಜಂಬೂ ಸವಾರಿ ಮೆರವಣಿಗೆ ಸಾಯಂಕಾಲ ಜರುಗುವುದರಿಂದ ಗಜಪಡೆ ದೀಪದ ಬೆಳಕಿನಲ್ಲಿ ಬನ್ನಿಮಂಟಪಕ್ಕೆ ತೆರಳಬೇಕಿದೆ. ಹಾಗಾಗಿ ಆನೆಗಳಿಗೆ ವಿದ್ಯುತ್‌ ದೀಪದ ಬೆಳಕಿನಲ್ಲಿ ಮೆರವಣಿಗೆ ಸಾಗಲು ಅಭ್ಯಾಸವಾಗಲು ಮೂರು ದಿನ ಮುಂಚಿತವಾಗಿಯೇ ಅಂದರೆ ಸೆ.23 ರಿಂದ ರಾಜಮಾರ್ಗದಲ್ಲಿ ದೀಪಾಲಂಕಾರ ಆಯೋಜಿಸಲಾಗುತ್ತದೆ. ಈ ವೇಳೆ ದಸರಾ ಗಜಪಡೆ 23ರಿಂದ 25ರವರೆಗೆ ಪ್ರತಿನಿತ್ಯ ಸಂಜೆ ದೀಪದ ಬೆಳಕಿನಲ್ಲಿ ತಾಲೀಮು ನಡೆಸಲಿವೆ ಎಂದರು. ಆನೆ ಮತ್ತು ಅಂಬಾರಿ ಸೇರಿ 16 ಅಡಿ ಎತ್ತರ ಇರುವುದರಿಂದ ನಾವು 22 ಅಡಿ ಎತ್ತರದಲ್ಲಿ ದೀಪಾಲಂಕಾರ ಮಾಡಿಕೊಳ್ಳಲು ಸಿದ್ಧತೆ ನಡೆಸಿದ್ದೇವೆ ಎಂದರು.

ನಾಲ್ವಡಿ ಒಡೆಯರ್‌ ಪ್ರತಿಕೃತಿ
ಈ ಬಾರಿ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ದೀಪಾಲಂಕಾರ ಮಾಡಲಾಗುತ್ತಿದ್ದು, ವಿಮಾನ ನಿಲ್ದಾಣದ ದ್ವಾರದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಮಾದರಿ ನಿರ್ಮಿಸಿ, ನಾಲ್ವಡಿ ಕೃಷ್ಣರಾಜ ಒಡೆಯರ್‌ ವಿಮಾನ ನಿಲ್ದಾಣ ಎಂದು ಹೆಸರು ಬರೆಯಬೇಕೆಂದು ಸಂಸದ ಪ್ರತಾಪಸಿಂಹ ಸಲಹೆ ನೀಡಿದರು. ಈಗಾಗಲೇ ರಾಜ್ಯ ಸರ್ಕಾರ ಮಂಡಕಳ್ಳಿ ವಿಮಾನ ನಿಲ್ದಾ ಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರು ನಾಮಕರಣಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರದಿಂದಲೂ ಒಪ್ಪಿಗೆ ದೊರೆಯಲಿದೆ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌, ಸೆಸ್ಕ್ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.