ಫೆ.1ಕ್ಕೆ ಎಡತೊರೆ ಅರ್ಕೇಶ್ವರಸ್ವಾಮಿ ಬ್ರಹ್ಮ ರಥೋತ್ಸವ


Team Udayavani, Jan 29, 2020, 3:00 AM IST

feb1

ಕೆ.ಆರ್‌.ನಗರ: ಕಾವೇರಿ ನದಿಯ ಬಲದಂಡೆಯಲ್ಲಿರುವ ಹಳೆಎಡತೊರೆಯಲ್ಲಿ ಮೀನಾಕ್ಷಿ ಸಮೇತ ಶ್ರೀ ಅರ್ಕೇಶ್ವರಸ್ವಾಮಿಯ ಬ್ರಹ್ಮ ರಥೋತ್ಸವ ಫೆ.1ರಂದು ಶನಿವಾರ ನಡೆಯಲಿದ್ದು, ಭರದ ಸಿದ್ಧತೆ ನಡೆಯುತ್ತಿದೆ. ಕೃಷ್ಣರಾಜನಗರದಿಂದ 2 ಕಿ.ಮೀ. ದೂರದಲ್ಲಿ ಹಾಸನ-ಮೈಸೂರು ರಾಜ್ಯ ಹೆದ್ದಾರಿಯಲ್ಲಿರುವ ಎಡತೊರೆ ಕ್ಷೇತ್ರದಲ್ಲಿ ಕಾವೇರಿ ನದಿ ಎಡಕ್ಕೆ ತಿರುಗಿ ಹರಿಯುತ್ತಾಳೆ. ಇದರಿಂದಲೇ ಕ್ಷೇತ್ರಕ್ಕೆ ಎಡತೊರೆ ಎಂಬ ಹೆಸರು ಬಂದಿದೆ.

ತಾಲೂಕಿನ ಜನತೆಯ ಆರಾಧ್ಯ ದೈವವಾಗಿರುವ ಅರ್ಕೇಶ್ವರಸ್ವಾಮಿ ಸನ್ನಿಧಿ ಭಕ್ತಿ, ಶ್ರದ್ಧೆಯ ತಾಣವೆಂದು ಪ್ರಸಿದ್ಧಿ ಪಡೆದಿದೆ. ಪ್ರವೇಶ ದ್ವಾರ, ರಾಜಗೋಪುರ, ಗರುಡಗಂಭ, ಅದಕ್ಕೆ ಹೊಂದಿಕೊಂಡಂತೆ ನಂದಿಯ ಸಣ್ಣ ವಿಗ್ರಹ, ಹೊರಾಂಗಣ ಪ್ರಾಕಾರದಲ್ಲಿರುವ ಹತ್ತಾರು ಲಿಂಗಗಳು, ಅರ್ಕೇಶ್ವರನಿಗೆ ಶೈವಾಗಮನದ ರೀತ್ಯ ಪೂಜೆ ಸಲ್ಲಿಸುತ್ತಿರುವುದು, ಪ್ರವೇಶ ದ್ವಾರದ ಎಡಭಾಗದಲ್ಲಿ ಸೂರ್ಯ ದೇವರು, ಈಶಾನ್ಯ ಭಾಗದಲ್ಲಿ ಯಾಗಶಾಲೆ, ಅರ್ಕೇಶ್ವರನ ಹಿಂಭಾಗದಲ್ಲಿ ಮೀನಾಕ್ಷಿ, ಚಂಡಿಕೇಶ್ವರ, ಗಿರಿಜಾ ಕಲ್ಯಾಣ ಮಂಟಪಗಳಿಂದ ಈ ದೇವಾಲಯ ತನ್ನದೇ ವೈಶಿಷ್ಟತೆ ಹೊಂದಿದೆ.

ಕ್ಷೇತ್ರದ ಹಿನ್ನೆಲೆ: ಕ್ಷೇತ್ರದಲ್ಲಿ ಪುರಾಣ ಮತ್ತು ಐತಿಹಾಸಿಕ ಹಿನ್ನೆಲೆಯ ಶ್ರೀಅರ್ಕೇಶ್ವರಸ್ವಾಮಿಯ ದೇವಾಲಯವಿದೆ. ಸೂರ್ಯ ದೇವನು ತನ್ನ ಮಗಳು ಯಮುನೆಯನ್ನು ಪಾಪದೃಷ್ಟಿಯಿಂದ ನೋಡಿದ ತಪ್ಪಿನ ಪ್ರಾಯಶ್ಚಿತ್ತಕ್ಕಾಗಿ ಶಿವನನ್ನು ಕುರಿತು ತಪಸ್ಸು ಮಾಡಿದನು. ನಂತರ ಎಡತೊರೆಯಲ್ಲಿ ಶಿವಲಿಂಗ ಪ್ರತಿಷ್ಠಾಪಿಸಿ ಪುಷ್ಕರಣಿ ನಿರ್ಮಿಸಿದನೆಂಬುದು ಪೌರಾಣಿಕ ಪ್ರತೀತಿ ಇದೆ. ಸೂರ್ಯನು ಇಲ್ಲಿಯೇ ಇದ್ದು, ಕಾವೇರಿ ತೊರೆಯಲ್ಲಿ ಮಿಂದು ಮಡಿಯಾಗಿ ಶಿವನನ್ನು ಕುರಿತು ತಪಸ್ಸನ್ನಾಚರಿಸುತ್ತಿದ್ದ ಕಾರಣ ಇಲ್ಲಿಯ ಶಿವನಿಗೆ ಅರ್ಕೇಶ್ವರನೆಂಬ ಹೆಸರು ಬಂದಿದೆ ಎಂದು ಹೇಳಲಾಗುತ್ತದೆ.

ಮಹಾಶಿವರಾತ್ರಿಯಂದು ಸೂರ್ಯನ ತಪಸ್ಸಿಗೆ ಒಲಿದ ಪರಮೇಶ್ವರನು ಇಲ್ಲಿ ಸ್ವಯಂ ಭೂಲಿಂಗ ರೂಪದಿಂದ ಪ್ರತ್ಯಕ್ಷನಾಗಿ ಅನುಗ್ರಹಿಸಿದನಂತೆ. ಅದರ ಕುರುಹಾಗಿ ಇಂದಿಗೂ ಶಿವರಾತ್ರಿಯ ದಿನ ಸೂರ್ಯೋದಯದ ವೇಳೆ ಸೂರ್ಯನ ಕಿರಣಗಳು ಈ ಲಿಂಗವನ್ನು ಸ್ಪರ್ಶಿಸಿ ಪೂಜಿಸುವವು ಎಂದು ಹೇಳಲಾಗುತ್ತಿದೆ. 9ನೇ ಶತಮಾನದ ಗಂಗರ ಕಾಲಕ್ಕೆ ಸೇರಿದ ಶಾಸನ ಈ ದೇವಾಲಯದ ಬಳಿ ದೊರೆತಿದೆ. 11ನೇ ಶತಮಾನದಲ್ಲಿ ರಾಜೇಂದ್ರಚೋಳ ವಾಸವಾಗಿದ್ದ ಈ ಪ್ರದೇಶದಲ್ಲಿ ದೇವಾಲಯದ ನಿರ್ಮಾಣಕ್ಕೆ ಅಂಗೈಕಾರನ್‌ ಎಂಬುವವರು ಈಶ್ವರ ದೇವಾಲಯಕ್ಕೆ ಭೂಮಿಯನ್ನು ದಾನ ಮಾಡಿದನೆಂದು ತಮಿಳು ಶಾಸನದಿಂದ ತಿಳಿದು ಬಂದಿದೆ.

ಗಂಗರ ಕಾಲದಲ್ಲಿ ಅರ್ಕೇಶ್ವರ ದೇವಾಲಯ, ಚೋಳರ ಕಾಲದಲ್ಲಿ ಮೀನಾಕ್ಷಿ ದೇವಾಲಯ ನಿರ್ಮಾಣವಾಯಿತೆಂದು ಇತಿಹಾಸ ಹೇಳಿದರೂ, ಖಚಿತ ಆಧಾರಗಳು ಈ ದೇವಾಲಯ ನಿರ್ಮಾಣದ ನಿರ್ದಿಷ್ಟ ಕಾಲ ತಿಳಿಸಲು ವಿಫ‌ಲವಾಗಿವೆ. ಆದರೆ, ಮೈಸೂರಿನ ಮುಮ್ಮಡಿ ಕೃಷ್ಣರಾಜ ಒಡೆಯರ್‌ ಕಾಲದಲ್ಲಿ ಈ ದೇವಾಲಯ ಜೀರ್ಣೋದ್ಧಾರವಾಗಿ ಅಭಿವೃದ್ಧಿಗೊಂಡಿತೆಂದು ಮಾತ್ರ ಸ್ಪಷ್ಟವಾಗುತ್ತದೆ. ಅಮೃತಪುರಿ ಅಥವಾ ಭಾಸ್ಕರ ರಾಜ ಕ್ಷೇತ್ರದಲ್ಲಿ ನೆಲೆಸಿ ರಾರಾಜಿಸುತ್ತಿರುವ ಅರ್ಕೇಸ್ವರಸ್ವಾಮಿ ಬೃಹ್ಮ ರಥೋತ್ಸವ ಪ್ರತಿ ವರ್ಷ ರಥಸಪ್ತಮಿಯ ದಿನದಂದು ನಡೆಯುತ್ತದೆ.

* ಗೇರದಡ ನಾಗಣ್ಣ

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.