ಎನ್‌ಇಪಿಯಿಂದ ಶಿಕ್ಷಣದ ತಾರತಮ್ಯ ಕೊನೆಯಾಗಲಿದೆ


Team Udayavani, Oct 4, 2020, 1:00 PM IST

ಎನ್‌ಇಪಿಯಿಂದ ಶಿಕ್ಷಣದ ತಾರತಮ್ಯ ಕೊನೆಯಾಗಲಿದೆ

ಮೈಸೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ ಇಪಿ) ಕ್ರಾಂತಿಕಾರಕವಾಗಿದ್ದು, ಸರ್ಕಾರ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಇರುವ ತಾರತಮ್ಯವನ್ನುಇದು ಹೋಗಲಾಡಿಸಲಿದೆ ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್‌. ರಂಗಪ್ಪ ತಿಳಿಸಿದರು.

ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದಅವರು,ಸಂಶೋಧನೆಗೆ ಹೆಚ್ಚು ಒತ್ತು ನೀಡಲು ಈ ನೀತಿ ಸಹಕಾ ರಿಯಾಗಲಿದ್ದು , ಅಮೆರಿಕ, ಇಸ್ರೇಲ್‌, ಜರ್ಮನಿ ಹಾಗೂ ಜಪಾನ್‌ ದೇಶಗಳಲ್ಲಿ ಸಂಶೋಧನೆಗೆ ಹೆಚ್ಚು ಒತ್ತು ನೀಡಲಾಗಿದೆ. ಅದರಂತೆ ನಮ್ಮಲ್ಲಿಯೂ ಸಂಶೋಧನೆಗೆ ಒತ್ತು ನೀಡಿದರೆ ದೇಶದಲ್ಲಿ ಸಕಾರಾತ್ಮಕ ಪ್ರಗತಿ ಸಾಧ್ಯ ಎಂದರು.

ಸಿಎಸ್‌ಐಆರ್‌ಗೆ ನೇಮಕ: ಸಂಶೋಧನಾ ಕ್ಷೇತ್ರದ ಸಾಧನೆಗಳನ್ನು ಪರಿಗಣಿಸಿ ಕೇಂದ್ರ ಸರ್ಕಾರ ನನ್ನನ್ನು ನವದೆಹಲಿಯ ಸಿಎಸ್‌ಐಆರ್‌ಗೆ ನೇಮಿಸಿದೆ. ವಿಜ್ಞಾನ ಕ್ಷೇತ್ರಗಳಲ್ಲಿ ಸಾಕಷ್ಟು ಸಂಶೋಧನೆ ಹಾಗೂ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ನವದೆಹಲಿಯಲ್ಲಿರುವ ಸಿಎಸ್‌ಐಆರ್‌(ಎಮೆರಿಟಸ್‌ ಸೈಂಟಿಸ್ಟ್‌ ಫ್ರಮ್‌ ಕೌನ್ಸಿಲ್‌ ಆಫ್ ಸೈಂಟಿಫಿಕ್‌ ಅಂಡ್‌ ಇಂಡಸ್ಟ್ರಿಯಲ್‌ ರಿಸರ್ಚ್‌)ಗೆ ನೇಮಿಸಿದೆ. ಇದು ಮೈಸೂರು ವಿವಿಗೆ ಸಂದ ಗೌರವ. ಈ ನೇಮಕದಿಂದ ಮತ್ತಷ್ಟು ಗುಣಾತ್ಮಕ ಸಂಶೋಧನೆಯಲ್ಲಿ ನಡೆಸಲು ನನಗೆ ಅವಕಾಶ ಸಿಕ್ಕಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಪ್ರಾಜೆಕ್ಟ್ಅರ್ಧಕ್ಕೆ ನಿಂತಿದೆ: ಕ್ಯಾನ್ಸರ್‌ ಸಂಬಂಧಿತ ಸಂಶೋಧನೆಗೆಚೀನಾ ದೇಶದ ಜೊತೆ ನಾನು ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಸದ್ಯ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೇಂದ್ರ ಸರ್ಕಾರ ಹೇಳಿದರೆ ನಾನು ಮುಂದೆಯೂ ಅದನ್ನು ಯೋಜನೆಯನ್ನು ಮುಂದುವರಿಸುವುುದಿಲ್ಲ. ಆದರೆ ಕೇಂದ್ರ ಸರ್ಕಾರ ಯಾವ ಸಂದರ್ಭದಲ್ಲೂ ಈ ರೀತಿಮಾಡುವುದಿಲ್ಲ ಎಂಬ ನಂಬಿಕೆ ಇದೆ.  ಭಾರತ-ಚೀನಾ ಗಡಿವಿವಾದಹಿನ್ನೆಲೆಭಾರತ ಮತ್ತು ಚೀನಾದ ಬಾಂಧವ್ಯ ಹದಗೆಟ್ಟಿದ್ದು, ಸುಮಾರು500ಕೋಟಿ ರೂ. ಪ್ರಾಜೆಕ್ಟ್  ಅರ್ಧಕ್ಕೆ ನಿಂತಿದೆ ಎಂದು ಪ್ರೊ.ಕೆ.ಎಸ್‌.ರಂಗಪ್ಪ ತಿಳಿಸಿದರು.

ಎರಡು ತಿಂಗಳಲ್ಲಿ ಕೋವಿಡ್ ಲಸಿಕೆ ಲಭ್ಯ :  ಯುಕೆಯ ಆಕ್ಸ್‌ಫ‌ರ್ಡ್‌ ವಿವಿಯ ಎಡ್ವರ್ಡ್‌ ಜನರಲ್‌ ಸಂಶೋಧನಾ ಕೇಂದ್ರದಲ್ಲಿ ಸಂಶೋಧನೆ ನಡೆದಿದೆ. ಸಂಶೋಧನೆ ಮೂರನೇ ಹಂತ ತಲುಪಿದೆ. ಅಲ್ಲಿಯ ಸಂಶೋಧಕರ ಜೊತೆ ನಾನು ನಿರಂತರ ಸಂಪರ್ಕದಲ್ಲಿದ್ದೇನೆ. ಸಂಶೋಧನೆ ತುಂಬಾ ಚೆನ್ನಾಗಿ ನಡೆದಿದೆ. ಇನ್ನೂ ಎರಡು ತಿಂಗಳಲ್ಲಿ ಕೋವಿಡ್ ಲಸಿಕೆ ಬರುವುದು ಖಚಿತವಾಗಿದೆ ಎಂದು ಪ್ರೊ.ಕೆ.ಎಸ್‌. ರಂಗಪ್ಪ ವಿಶ್ವಾಸವ್ಯಕ್ತಪಡಿಸಿದರು. ಮೂರನೇ ಹಂತದಲ್ಲಿ 6 ಸಾವಿರ ಜನರಿಂದ ಸಂಶೋಧನೆ ನಡೆಯುತ್ತಿದೆ. ಪ್ರಯೋಗಾತ್ಮಕವಾಗಿ ಈಗಾಗಲೇ ಹಲವರಿಗೆ ವ್ಯಾಕ್ಸಿನ್‌ ನೀಡಲಾಗಿದೆ. ಕೋವಿಡ್ ವ್ಯಾಕ್ಸಿನ್‌ 2 ಸಾವಿರ ರೂ.ಗಿಂತ ಕಡಿಮೆಗೆ ಸಿಗಲಿದೆ. ಯಾವುದೇ ಕಾರಣಕ್ಕೂ ಹೆಚ್ಚು ಬೆಲೆ ಆಗುವುದಿಲ್ಲ. ಏಕೆಂದರೆ ದೇಶದಲ್ಲಿ ಈಗಾಗಲೇ ನೂರಕ್ಕೂ ಹೆಚ್ಚುಕಂಪನಿಗಳು ಲಸಿಕೆ ತಯಾರಿಸಲು ತುದಿಗಾಲಲ್ಲಿ ನಿಂತಿವೆ. ಅನುಮತಿ ಸಿಕ್ಕ ತಕ್ಷಣ ಪೂರೈಕೆ ಹೆಚ್ಚುತ್ತದೆ. ಕೋವಿಡ್ ಹಳೆಯ ವೈರಸ್‌ಆಗಿದ್ದು, ಇದುದುರ್ಬಲವಾದುದು. ಸದ್ಯಕ್ಕೆ ಪ್ರಾಣಿಗಳಿಂದಈ ಸೋಂಕು ಕಾಣಿಸಿಕೊಂಡಿದ್ದು, ಪ್ರಯೋಗಾಲಯದಿಂದ ಮನುಷ್ಯನಿಗೆ ಹರಡಿದೆ ಎಂದರು.

ಸಾರ್ಸ್‌, ಎಬೋಲಾದಷ್ಟು ಕೋವಿಡ್‌ ಮಾರಕವಲ್ಲ :  ಕೋವಿಡ್ ವೈರಾಣು ದುರ್ಬಲವಾಗಿದ್ದು, ಜನರು ಹೆಚ್ಚು ಭಯಭೀತರಾಗುವ ಅಗತ್ಯವಿಲ್ಲ. ಜೊತೆಗೆ ಗಾಳಿ ಹಾಗೂ ನೀರಿನ ಮೂಲಕ ಸೋಂಕು ಹರಡುವುದಿಲ್ಲ. ಒಂದು ವೇಳೆ ಸೋಂಕಿತ ವ್ಯಕ್ತಿ ಬಳಸಿದ ನೀರನ್ನು ಮತ್ತೂಬ್ಬ ಬಳಸಿದರೆ ಶೇ.1ರಷ್ಟು ಸೋಂಕು ಬರುವ ಸಾಧ್ಯತೆ ಇಲ್ಲ. ನಮ್ಮಲ್ಲಿ ಕೋವಿಡ್‌ ನಿಂದಲೇ ಜನರು ಸಾಯುತ್ತಿಲ್ಲ. ಬೇರೆ ಬೇರೆ ಆರೋಗ್ಯದ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ. ಈ ನಿಟ್ಟಿನಲ್ಲಿ ಮಧುಮೇಹ, ಹೃದಯ ಸಂಬಂಧಿ ಕಾಯಿಲೆ ಹಾಗೂ ಇತರೆಕಾಯಿಲೆ ಇರುವವರು ಆದಷ್ಟು ಎಚ್ಚರಿಕೆಯಿಂದ ಇರಬೇಕು ಎಂದು ಪ್ರೊ.ಕೆ.ಎಸ್‌. ರಂಗಪ್ಪ ಸಲಹೆ ನೀಡಿದರು.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.