ಈದ್-ಮಿಲಾದ್‌: ಎಲ್ಲ ಧರ್ಮ, ಸಮುದಾಯಗಳ ಸಹಕಾರಕ್ಕೆ ಡಿವೈಎಸ್‌ಪಿ ಮನವಿ

ಮೆರವಣಿಗೆ ವೇಳೆ ಬಾವುಟ ತಿರುಗಿಸುವಂತಿಲ್ಲ, ಬೈಕ್‌ಗೆ ಕಟ್ಟುವಂತಿಲ್ಲ

Team Udayavani, Oct 8, 2022, 10:48 PM IST

1-asasdsad

ಹುಣಸೂರು: ಮುಸ್ಲಿಂ ಸಮುದಾಯದವರು ಭಾನುವಾರ ಆಚರಿಸುವ ಈದ್-ಮಿಲಾದ್‌ನ್ನು ಶಾಂತಿಯುತವಾಗಿ ನಡೆಸಬೇಕು. ಈ ಮಿಲಾದ್‌ಗೆ ಎಲ್ಲ ಧರ್ಮ, ಸಮುದಾಯದವರೂ ಸಹ ಪರಸ್ಪರ ಸಹಕಾರ ನೀಡುವಂತೆ ಡಿವೈಎಸ್‌ಪಿ ರವಿಪ್ರಸಾದ್ ಮನವಿ ಮಾಡಿದರು.

ಪಟ್ಟಣ ಠಾಣೆಯಲ್ಲಿ ಶನಿವಾರ ರಾತ್ರಿ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಅಭಿಪ್ರಾಯ ಸಂಗ್ರಹಿಸಿ ಮಾತನಾಡಿದ ಅವರು 2018ರ ನಂತರ ನಡೆಯುತ್ತಿರುವ ಮೊದಲ ಈದ್-ಮಿಲಾದ್ ಮೆರವಣಿಗೆಗೆ ಪ್ರಮುಖ ರಸ್ತೆಗಳು ಸೇರಿದಂತೆ ಬಜಾರ್ ರಸ್ತೆಯಲ್ಲೂ ಅವಕಾಶ ನೀಡಲಾಗಿದೆ. ಮೆರವಣಿಗೆ ಹೊರಡುವ ವೇಳೆ ಎಲ್ಲಧರ್ಮದ ಮುಖಂಡರು, ಹಿಂದೂಪರ ಸಂಘಟನೆಗಳವರು ಶುಭಕೋರುವ ಮೂಲಕ ಸೌಹಾರ್ದತೆ ಕಾಪಾಡುವಂತೆ ಕೋರಿದರು.

ಬಾವುಟ-ಬಂಟಿಕ್ಸ್ ಬಗ್ಗೆ ಎಚ್ಚರ
ಮೆರವಣಿಗೆಯು ಮಧ್ಯಾಹ್ನ 2 ರಿಂದ 5ಗಂಟೆಯೊಳಗೆ ಹಾಗೂ ಎಲ್ಲ ಧಾರ್ಮಿಕ ಕಾರ್ಯಕ್ರಮಗಳನ್ನು ರಾತ್ರಿ 9ರೊಳಗೆ ಮುಕ್ತಾಯಗೊಳಿಸಬೇಕು. ಬೇಕಾಬಿಟ್ಟಿಯಾಗಿ ಬಾವುಟ, ಫ್ಲೆಕ್ಸ್ ಕಟ್ಟುವಂತಿಲ್ಲ, ಬಾವುಟವನ್ನು ಬೈಕ್‌ಗಳಿಗೆ ಕಟ್ಟುವಂತಿಲ್ಲ. ಕೈಯಲ್ಲಿ ಹಿಡಿದು ತಿರುಗಿಸುವಂತಿಲ್ಲ. ತಾಲೂಕು ಹೊರತುಪಡಿಸಿ ಬೇರೆಡೆಯಿಂದ ಯಾರೂ ಬರುವಂತಿಲ್ಲ. ಯುವಕರನ್ನು ಮುಖಂಡರೇ ನಿಯಂತ್ರಿಸಬೇಕು. ಏನೇ ಸಮಸ್ಯೆ ಇದ್ದರೂ ಪೊಲೀಸರ ಗಮನಕ್ಕೆ ತರಬೇಕೆ ಹೊರತು ಅಶಾಂತಿಗೆ ಕಾರಣವಾಗಬಾರದು, ಮೊಬೈಲ್ ಮೂಲಕ ಗಾಳಿ ಸುದ್ದಿ ಹರಡದಂತೆ ಕಟ್ಟು ನಿಟ್ಟಿನ ಎಚ್ಚರಿಕೆ ನೀಡಿದ ಅವರು ತಾಲೂಕಿನ ಅಜಾದ್‌ನಗರದವರು ಮೆರವಣಿಗೆ ನಡೆಸಲು ಅನುಮತಿ ನೀಡಿಲ್ಲ, ಅವರೂ ಸಹ ಹುಣಸೂರಿನಲ್ಲೇ ಮೆರವಣಿಗೆಯಲ್ಲಿ ಭಾಗವಹಿಸಬಹುದೆಂದು ಸ್ಪಷ್ಟಪಡಿಸಿದರು.

ನಗರ ವೀಕ್ಷಣೆ
ನಗರದಲ್ಲಿ ಮೆರವಣಿಗೆ ಹಾದು ಹೋಗುವ ಮಾರ್ಗ, ಶಬ್ಬೀರ್‌ನಗರ ಮತ್ತಿತರ ಕಡೆಗಳಿಗೆ ಎಸ್.ಪಿ.ಚೇತನ್ ಭೇಟಿ ನೀಡಿ ಪರಿಶೀಲಿಸಿದರು. ಸಭೆಯಲ್ಲಿ ಮಿಲಾದ್ ಸಮಿತಿ ಅಧ್ಯಕ್ಷ ಸರದಾರ್, ನಗರಸಭಾ ಸದಸ್ಯ ಮಾಲಿಕ್‌ಪಾಷಾ, ಸೈಯದ್‌ಯೂನಸ್, ಹುಡಾ ಅಧ್ಯಕ್ಷ ಗಣೇಶಕುಮಾರಸ್ವಾಮಿ, ಶ್ರೀರಾಮಸೇನೆ ಅಧ್ಯಕ್ಷ ಅನಿಲ್, ಹನುಮಂತೋತ್ಸವ ಸಮಿತಿ ಅಧ್ಯಕ್ಷ ವಿ.ಎನ್.ದಾಸ್, ಮುಖಂಡರಾದ ರಾಘು, ಮಜಾಜ್‌ಅಹಮದ್, ನಿಂಗರಾಜಮಲ್ಲಾಡಿ, ಬಸವಲಿಂಗಯ್ಯ, ಡಿ.ಕುಮಾರ್ ಮತ್ತಿತರರು ಮಾತನಾಡಿ ಶಾಂತಿ ಸೌಹಾರ್ದತೆಗೆ ಕಾಪಾಡುವುದು ಎಲ್ಲರ ಹೊಣೆಯಾಗಿದ್ದು, ಇಲಾಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ಇತ್ತು. ಕಿಡಿಗೇಡಿಗಳು ಕಂಡುಬAದಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಇನ್ಸ್ಪೆಕ್ಟರ್ ಶ್ರೀನಿವಾಸ್, ಎಸ್.ಐ.ಪಂಚಾಕ್ಷರಿ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.