ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತೆ ಪರಿಶೀಲನೆ
Team Udayavani, Jan 12, 2019, 6:13 AM IST
ಮೈಸೂರು: ಎರಡನೇ ಹಂತದಲ್ಲಿ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ವಿಭಾಗದ ಎಂಟು ಜಿಲ್ಲೆಗಳ ಸಿದ್ಧತೆಗಳನ್ನು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಪಿ.ಎನ್. ಶ್ರೀನಿವಾಸಚಾರಿ ಅವರು ಪರಿಶೀಲಿಸಿದರು.
ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶೀಲನಾ ಸಭೆ ನಡೆಸಿದ ಅವರು, ಮುಖ್ಯವಾಗಿ ಇವಿಎಂಗಳ ದಾಸ್ತಾನು ಹಾಗೂ ಅಗತ್ಯಕ್ಕೆ ಅನುಗುಣವಾಗಿ ಲಭ್ಯತೆ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದರು. 2018ರಲ್ಲಿ ನಡೆದ ಮೊದಲ ಹಂತದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸೇರ್ಪಡೆಯಾಗದ ನಗರಗಳಲ್ಲಿ ಈ ವರ್ಷ ಚುನಾವಣೆ ನಡೆಸಲಾಗುತ್ತದೆ ಎಂದು ಅವರು ತಿಳಿಸಿದರು.
ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡುವುದು, ಚುನಾವಣೆಗೆ ಎಲ್ಲಾ ನಗರಗಳಲ್ಲಿ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿ ನೇಮಿಸುವುದು. ಅವರು ಪ್ರತಿ ಮತಗಟ್ಟೆಗೆ ಭೇಟಿ ನೀಡಿ, ಪರಿಶೀಲಿಸಿ ವರದಿ ನೀಡುವುದು ಮುಂತಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಅವರು ಎಲ್ಲಾ ಜಿಲ್ಲಾಧಿಕಾರಿಗಳು, ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರುಗಳಿಗೆ ತಿಳಿಸಿದರು.
ಮೈಸೂರು ಜಿಲ್ಲೆಯಲ್ಲಿ 2019ರಲ್ಲಿ ನಂಜನಗೂಡು ನಗರಸಭೆ, ಹುಣಸೂರು ನಗರಸಭೆ, ಕೆ.ಆರ್.ನಗರ ಪುರಸಭೆ ಹಾಗೂ ಬನ್ನೂರು ಪುರಸಭೆಗೆ ಚುನಾವಣೆ ನಡೆಯಲಿದೆ. ಈ ಸ್ಥಳೀಯ ಸಂಸ್ಥೆಗಳಲ್ಲಿ ನಡೆದಿರುವ ಸಿದ್ಧತೆಗಳ ಬಗ್ಗೆ ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ ಮಾಹಿತಿ ನೀಡಿದರು.
ಸಭೆಯಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಚಿಕ್ಕಮಗಳೂರು ಜಿಲ್ಲಾಧಿಕಾರಿ ಶ್ರೀರಂಗಯ್ಯ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಕೊಡಗು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ, ಹಾಸನ ಅಪರ ಜಿಲ್ಲಾಧಿಕಾರಿ ವೈಶಾಲಿ, ಮಂಗಳೂರು ನಗರ ಪೊಲೀಸ್ ಆಯುಕ್ತರು, ಈ ಎಲ್ಲಾ ಜಿಲ್ಲೆಗಳ ಪೊಲೀಸ್ ಅಧೀಕ್ಷಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್