ಮೇಲ್ಮನೆ ಪ್ರವೇಶಕ್ಕೆ ಇಂದು ಮತದಾನ


Team Udayavani, Dec 10, 2021, 12:16 PM IST

mysore election

ಮೈಸೂರು: ಭಾರತೀಯ ಜನತಾಪಕ್ಷ, ಕಾಂಗ್ರೆಸ್‌, ಜಾತ್ಯತೀತ ಜನತಾದಳ ಮಧ್ಯೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿರುವ ಮೈಸೂರು-ಚಾಮರಾಜನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಗೆ ಶುಕ್ರವಾರ ಮತದಾನ ನಡೆಯಲಿದೆ. ಮತದಾನ ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ನಡೆಯಲಿದೆ.

ಬಿಜೆಪಿಯ ಆರ್‌.ರಘು ಕೌಟಿಲ್ಯ, ಕಾಂಗ್ರೆಸ್ಸಿನ ಡಾ.ಡಿ.ತಿಮ್ಮಯ್ಯ, ಜೆಡಿಎಸ್‌ನ ಸಿ.ಎನ್‌. ಮಂಜೇಗೌಡ ಅವರ ಮಧ್ಯೆ ತ್ರಿಕೋನ ಸ್ಪರ್ಧೆ ನಡೆದಿದೆ. ಕನ್ನಡ ಚಳವಳಿ ನಾಯಕ, ಮಾಜಿ ಶಾಸಕ ವಾಟಾಳ್‌ ನಾಗರಾಜ್‌ ಅವರು ಸೇರಿದಂತೆ ಕಣದಲ್ಲಿ ಒಟ್ಟು ಏಳು ಮಂದಿ ಇದ್ದಾರೆ. ಈ ಚುನಾವಣೆಗಾಗಿ ಒಟ್ಟು 393 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಮೈಸೂರು ಜಿಲ್ಲೆ ಯಲ್ಲಿ 259, ಚಾಮರಾಜನಗರ ಜಿಲ್ಲೆಯಲ್ಲಿ 134 ಮತಗಟ್ಟೆ ಕೇಂದ್ರಗಳಿವೆ. ಮತಗಟ್ಟೆ ಅಧಿಕಾರಿಗಳು, ಸಿಬ್ಬಂದಿಗೆ ಕೋವಿಡ್‌ ನಿಯಮಾನುಸಾರ ಮಾಸ್ಕ್ ಹಾಗೂ ಹ್ಯಾಂಡ್‌ ಸ್ಯಾನಿಟೈಜರ್‌ಗಳನ್ನು ಒದಗಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಮತದಾನದ ದಿನದಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ.

ಡಿ.9ರಂದು ಮಧ್ಯರಾತ್ರಿ 12 ಗಂಟೆಯಿಂದ ಡಿ.10ರ ಮಧ್ಯರಾತ್ರಿ 12 ಗಂಟೆವರೆಗೆ ಮೈಸೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿ ದ್ದಾರೆ. ಮತದಾನದ ವೇಳೆ ಮುಗಿದ ನಂತರ ಮೊಹರಾದ ಮತಪೆಟ್ಟಿಗೆಗಳನ್ನು ಹಾಗೂ ಚುನಾವಣಾ ಕಾಗದ ಪತ್ರಗಳನ್ನು ಡಿ.ಮಸ್ಟರಿಂಗ್‌ ಸ್ಥಳದಿಂದ ಮೈಸೂರು ನಗರದ ಪಡುವಾರಹಳ್ಳಿ ಯಲ್ಲಿರುವ ಮಹಾರಾಣಿ ಕಾಲೇಜಿನಲ್ಲಿ ಸ್ಥಾಪಿಸಿರುವ ಭದ್ರತಾ ಕೊಠಡಿಗೆ ಪೊಲೀಸ್‌ ಬಂದೋಬಸ್ತ್ ನಲ್ಲಿ ತರಲಾಗುವುದು.

ಭದ್ರತಾ ಕೊಠಡಿಗೆ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ. ಸಿಸಿಟಿವಿ ಕ್ಯಾಮರಾವನ್ನು ಅಳವಡಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ 4,502, ಚಾಮರಾಜನಗರ ಜಿಲ್ಲೆಯಲ್ಲಿ 2,269 ಮತದಾರರಿ ದ್ದಾರೆ. ಮತದಾರರ ಒಟ್ಟು ಸಂಖ್ಯೆ 6,771. ಡಿಸೆಂಬರ್‌ 14 ರಂದು ಮತಗಳ ಎಣಿಕೆ ನಡೆಯಲಿದೆ.

ಇದನ್ನೂ ಓದಿ:- ಹಳೆಯ ಹಾಡಿಗೆ ಜೆಎನ್‌ಯು ಭದ್ರತಾ ಸಿಬ್ಬಂದಿ ಭರ್ಜರಿ ಡ್ಯಾನ್ಸ್ : ವೈರಲ್ ವಿಡಿಯೋ

ಸಾಮಗ್ರಿಯೊಂದಿಗೆ ಮತಗಟ್ಟೆಗೆ ಬಂದು ಸಿಬ್ಬಂದಿ

ಚಾಮರಾಜನಗರ: ವಿಧಾನಪರಿಷತ್‌ ಚುನಾವಣೆಯ ಮತದಾನ ಹಿನ್ನೆಲೆಯಲ್ಲಿ ಚುನಾವಣೆಗೆ ನೇಮಕಗೊಂಡಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಗತ್ಯ ಚುನಾವಣಾ ಸಾಮಗ್ರಿಗಳೊಂದಿಗೆ ಗುರುವಾರ ಮತಟ್ಟೆಗಳಿಗೆ ತೆರಳಿದರು.

ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ, ಯಳಂದೂರು, ಗುಂಡ್ಲುಪೇಟೆ ಹಾಗೂ ಹನೂರು ತಾಲೂಕು ಕೇಂದ್ರಗಳ ಮಸ್ಟರಿಂಗ್‌ ಕೇಂದ್ರಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಪರಿಶೀಲನಾ ಪಟ್ಟಿಯ ಪ್ರಕಾರ ಚುನಾವಣಾ ಸಾಮಗ್ರಿಗಳು ಸರಿಯಾಗಿರುವುದನ್ನು ಖಾತ್ರಿಪಡಿಸಿಕೊಂಡು ನಿಯೋಜನೆಗೊಂಡಿರುವ ಮತಟ್ಟೆಗಳಿಗೆ ಸಾರಿಗೆ ಬಸ್‌ಗಳ ಮೂಲಕ ತೆರಳಿದರು.

ಜಿಲ್ಲೆಯಲ್ಲಿ 134 ಮತಟ್ಟೆ ಸ್ಥಾಪಿಸಿದ್ದು ಎಲ್ಲ ಮತಗಟ್ಟೆಗಳಿಗೆ ಅಗತ್ಯ ಸಿಬ್ಬಂದಿಗಳನ್ನು ಸಹ ನೇಮಿಸಲಾಗಿದೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಜಿಲ್ಲೆಯಲ್ಲಿ ಈಗಾಗಲೇ 144 ಸೆಕ್ಷನ್‌ ಜಾರಿ ಮಾಡಲಾಗಿದ್ದು ಮದ್ಯ ಮಾರಾಟ, ಸಂತೆ ಜಾತ್ರೆಗೆ ನಿರ್ಬಂಧ ಹೇರಲಾಗಿದೆ.

ಜಿಲ್ಲಾಧಿಕಾರಿ ಪರಿಶೀಲನೆ: ಚಾಮರಾಜನಗರದ ತಾಲೂಕು ಕಚೇರಿಯಲ್ಲಿನ ಮಸ್ಟರಿಂಗ್‌ ಕೇಂದ್ರಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌ ಭೇಟಿ ನೀಡಿ ಪರಿಶೀಲಿಸಿದರು. ಮತಗಟ್ಟೆಗಳಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಹಾಗೂ ಚುನಾವಣಾ ಸಾಮಗ್ರಿಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಚುನಾವಣೆ ಆಯೋಗ ವಿರುದ್ಧ ವಾಟಾಳ್‌ ಪ್ರತಿಭಟನೆ

ಮೈಸೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ, ಚುನಾವಣೆ ಆಯೋಗ ಮಲಗಿದೆ ಎಂದು ತಾವು ರಸ್ತೆ ಬದಿಯಲ್ಲಿ ಮಲಗುವ ಮೂಲಕ ಅಣಕವಾಡಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು.

ನಗರದ ಜಯಚಾಮ ರಾಜೇಂದ್ರ ಒಡೆಯರ್‌ ವೃತ್ತದಲ್ಲಿ ಮಲಗಿ ಪ್ರತಿಟನೆ ನಡೆಸಿದ ಅವರು, 25 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಮೇಲ್ಮನೆ ಚುನಾವಣೆಗೆ ರಾಜಕೀಯ ಪಕ್ಷಗಳಿಂದ ಸುಮಾರು 3 ಸಾವಿರ ಕೋಟಿ ರೂ. ಹಣ ಹಂಚಿಕೆ ಮಾಡಲಾಗಿದೆ. ಆದರೂ ಚುನಾವಣಾ ಆಯೋಗ ಭ್ರಷ್ಟಾಚಾರ ತಡೆಯುವಲ್ಲಿ ಸಂಪೂರ್ಣ ವಿಫ‌ಲವಾಗಿದೆ ಎಂದು ಆರೋಪಿಸಿದರು.

ಪರಿಷತ್‌ ರದ್ದುಗೊಳಿಸಿ: ಹಣಕೊಟ್ಟು ಚುನಾವಣೆಗೆ ನಿಲ್ಲುವುದಾದರೆ, ಚುನಾವಣೆ ಏಕೆ ಬೇಕು? ಅದರ ಬದಲಾಗಿ ಪರಿಷತ್ತನ್ನೇ ರದ್ದು ಮಾಡಬೇಕು. ಇದರಲ್ಲಿ ಮತದಾರರನ್ನು ತೆಗಳುವಂತಿಲ್ಲ. ಆದರೆ, ಜನಪ್ರತಿನಿಗಳಾಗುವವರು ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದರು. ನಾನು ಯಾರಿಗೂ ಹಣ ಕೊಟ್ಟಿಲ್ಲ. ಆದರೂ ಮೈಸೂರಿನ ಯುವಜನತೆ ವಾಟಾಳ್‌ ನಾಗರಾಜ್‌ ಅವನ್ನೇ ಬೆಂಬಲಿಸಲಿದ್ದಾರೆ ಎಂದರು.

ಟಾಪ್ ನ್ಯೂಸ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.