ಹುಣಸೂರು : ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗ, ಹಸುವಿನ ಮೇಲೆ ದಾಳಿ, ಹಸು ಸ್ಥಳದಲ್ಲೇ ಸಾವು
Team Udayavani, May 2, 2021, 2:41 PM IST
ಹುಣಸೂರು : ತಾಲೂಕಿನ ನೇರಳ ಕುಪ್ಪೆ ಗ್ರಾಮದ ತಿಮ್ಮಶೆಟ್ಟಿ ಎಂಬುವವರ ಕೊಟ್ಟಿಗೆಗೆ ನುಗ್ಗಿದ ಒಂಟಿ ಸಲಗವೊಂದು ಅಲ್ಲಿದ್ದ ಹಸುವಿನ ಮೇಲೆ ದಾಳಿ ಮಾಡಿದೆ. ಈ ಹಿನ್ನೆಲೆಯಲ್ಲಿ ಹಸು ಸ್ಥಳದಲ್ಲೇ ಸಾವನ್ನಪ್ಪಿದೆ.
ಇನ್ನು ಅದೇ ಗ್ರಾಮದ ಲೋಕೇಶ್, ಗುರುರಾಜ್, ಸಹದೇವ, ಬಸವರಾಜ್ ತುಂಬಾ ಶೆಟ್ಟಿಗೆ ಸೇರಿದ ಬಾಳೆ ಮಾವು ಹಲಸು ಸೇರಿದಂತೆ ಇನ್ನಿತರ ಬೆಳೆಗಳನ್ನು ತಿಂದು ಹಾಳು ಮಾಡಿದೆ. ಆನೆಯ ದಾಳಿಯ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಗ್ರಹ : ಒಂದೆಡೆ ಹುಲಿ, ಚಿರತೆ ಮತ್ತೊಂದೆಡೆ ಕಾಡಾನೆಗಳ ದಾಳಿ ಯಿಂದ ಈ ಭಾಗದ ರೈತರು ಜೀವಭಯದಿಂದ ಬದುಕು ಸಾಗಿಸುವ ಸಂಕಷ್ಟದ ಪರಿಸ್ಥಿತಿ ಬಂದಿದೆ. ಈ ಕೂಡಲೇ ಅರಣ್ಯ ಇಲಾಖೆಯವರು ವನ್ಯಮೃಗಗಳು ಗ್ರಾಮದೊಳಗೆ ನುಗ್ಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಕಳೆದ ಸಾಲಿನಲ್ಲಿ ಇದೇ ಸಮಯದಲ್ಲಿ ಕಾಡಾನೆಗಳು ಸಾಕಷ್ಟು ಬೆಳೆಹಾನಿ ಮಾಡಿದ್ದು ಎಚ್.ಆರ್. ಗುರುರಾಜ್, ಶ್ರೀನಿವಾಸ್, ಸದಾಶಿವ, ಸಣ್ಣತಮ್ಮೇಗೌಡ, ಕಮಲಮ್ಮ ರವರಿಗೆ ಇನ್ನೂ ಸಹ ಪರಿಹಾರ ಸಿಕ್ಕಿಲ್ಲ. ಇದೀಗ ಮತ್ತೆ ವನ್ಯವ್ರಾಣಿಗಳು ಹೊರಬಂದು ಸಾಕುಪ್ರಾಣಿಗಳನ್ನು ಕೊಂದು ಹಾಕುತ್ತಿವೆ ಮತ್ತೊಂದೆಡೆ ಬೆಳೆ ನಾಶಪಡಿಸುತ್ತಿವೆ. ಇನ್ನಾದರೂ ಜನಪ್ರತಿನಿಧಿಗಳು, ಅರಣ್ಯಾಧಿಕಾರಿಗಳು ಶೀಘ್ರ ಪರಿಹಾರದ ಹಣವನ್ನು ಕೊಡಿಸಬೇಕೆಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವೈದ್ಯರ ದಿನಾಚರಣೆ: ವಿಶಿಷ್ಟವಾಗಿ ಆಚರಿಸಿದ ಶಾಸ್ತ್ರೀ ಪಬ್ಲಿಕ್ ಶಾಲೆ
ಪತ್ರಕರ್ತರಿಗೆ ಕ್ರೀಡೆ, ಮನರಂಜನೆ ಅವಶ್ಯಕ: ಡಿ.ವೈ.ಎಸ್.ಪಿ. ರವಿಪ್ರಸಾದ್
ಹೆದ್ದಾರಿ ಅತಿಕ್ರಮಣಕ್ಕಿಲ್ಲಿ ರಹದಾರಿ ನೀಡಿದವರ್ಯಾರು : ಹೆದ್ದಾರಿ ಸವಾರಿ ಆಯೋಮಯ..
ಕಾಂಗ್ರೆಸ್ ಸರ್ಕಾರ ಮಾಡಿದ್ದ ಸಾಧನೆ ಜನರಿಗೆ ತಿಳಿಸಿ, ಪಕ್ಷ ಸಂಘಟಿಸಿ
ಪಿರಿಯಾಪಟ್ಟಣ : ಶಾಲಾ ವಾಹನ ಢಿಕ್ಕಿ ಹೊಡೆದು ಒಂದುವರೆ ವರ್ಷದ ಮಗು ಸ್ಥಳದಲ್ಲೇ ಸಾವು
MUST WATCH
ಇಬ್ಬರು ಶಸ್ತ್ರ ಸಜ್ಜಿತ ಲಷ್ಕರ್ ಉಗ್ರರನ್ನು ಹಿಡಿದು ಕೊಟ್ಟ ಕಾಶ್ಮೀರದ ಗ್ರಾಮಸ್ಥರು
ಜಿಂಕೆಯನ್ನು ನುಂಗಿದ್ದ 80 ಕೆ.ಜಿ. ತೂಕದ 14 ಅಡಿ ಉದ್ದದ ಹೆಬ್ಬಾವು!
ವಿಟ್ಲದ ಈ ವಿದ್ಯಾರ್ಥಿನಿಯ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ…
ಕೊಪ್ಪಳ : ರೌಡಿಶೀಟರ್ ಗಳಿಗೆ ಖಡಕ್ ವಾರ್ನಿಂಗ್ ನೀಡಿದ ಎಸ್ಪಿ
ಮದ್ರಸಾದಿಂದ ಮನೆಗೆ ಬರುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…
ಹೊಸ ಸೇರ್ಪಡೆ
ವೈದ್ಯರ ದಿನಾಚರಣೆ: ವಿಶಿಷ್ಟವಾಗಿ ಆಚರಿಸಿದ ಶಾಸ್ತ್ರೀ ಪಬ್ಲಿಕ್ ಶಾಲೆ
ಚಾರ್ಮಾಡಿ ಘಾಟ್ನಲ್ಲಿ ಮುಂದುವರೆದ ಪ್ರವಾಸಿಗರ ಪುಂಡಾಟ: ರಸ್ತೆ ಮಧ್ಯೆಯೇ ಮೋಜು ಮಸ್ತಿ
ಭಾರತದಲ್ಲಿ 24 ಗಂಟೆಯಲ್ಲಿ 16, 135 ಕೋವಿಡ್ ಸೋಂಕು ಪ್ರಕರಣ ದೃಢ; ಸಕ್ರಿಯ ಪ್ರಕರಣ ಏರಿಕೆ
ಉದಯಪುರದ ಕನ್ನಯ್ಯಲಾಲ್ ಕೊಲೆ ಖಂಡಿಸಿ ಬಳ್ಳಾರಿ ಬಂದ್
ಪತ್ರಕರ್ತರಿಗೆ ಕ್ರೀಡೆ, ಮನರಂಜನೆ ಅವಶ್ಯಕ: ಡಿ.ವೈ.ಎಸ್.ಪಿ. ರವಿಪ್ರಸಾದ್