ಪುರಾತನ ದೇವಾಲಯ ನವೀಕರಿಸಲು ಒತ್ತು


Team Udayavani, Feb 22, 2021, 1:39 PM IST

ಪುರಾತನ ದೇವಾಲಯ ನವೀಕರಿಸಲು ಒತ್ತು

ಕೆ.ಆರ್‌.ನಗರ: ನಗರ ಮತ್ತು ಗ್ರಾಮಗಳಲ್ಲಿ ಹೊಸ ದೇವಾಲಯ ನಿರ್ಮಿಸುವುದಕ್ಕಿಂತ ಪುರಾತನ ದೇವಾ ಲಯಗಳ ನವೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕ ಸಾ.ರಾ.ಮಹೇಶ್‌ ಹೇಳಿದರು.

ಪಟ್ಟಣದ ಆಂಜನೇಯ ಬಡಾವಣೆಯ ಉಪ್ಪಾರರ ಶ್ರೀರಾಮಮಂದಿರದಲ್ಲಿ ನೂತನವಾಗಿ ಸೂರ್ಯ ನಾರಾಯಣ ದೇವರ ರಾಜಗೋಪುರ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮನುಷ್ಯ ತನ್ನ ದಿನನಿತ್ಯದ ಕೆಲಸದ ಒತ್ತಡದಲ್ಲಿ ನೆಮ್ಮದಿ ಕಾಣಲು ದೇವಮಂದಿರ ಅವಶ್ಯಕವಾಗಿದ್ದು, ಹೊಸ ದೇವಾಲಯ ನಿರ್ಮಾಣಕ್ಕಿಂತ ಹಳೆಯ ದೇವಸ್ಥಾನ ಗಳನ್ನು ಜೀರ್ಣೋದ್ಧಾರಗೊಳಿಸ ಬೇಕೆಂದರು.

ನಾನು ಶಾಸಕನಾಗಿ ತಾಲೂಕಿನ 200ಕ್ಕೂ ಅಧಿಕ ಪುರಾತನ ದೇವಾಲಯಗಳನ್ನು ನವೀಕರಣಗೊಳಿಸಿರು ವುದರ ಜತೆಗೆ ಪ್ರವಾಸೋದ್ಯಮ ಸಚಿವನಾಗಿದ್ದಾಗತಾಲೂಕಿನ ಚುಂಚನಕಟ್ಟೆಯ ಕೋದಂಡರಾಮ ಮತ್ತು ಪಟ್ಟಣದ ಹೊರವಲಯದಲ್ಲಿರುವ ಅರ್ಕೇಶ್ವರ ಸ್ವಾಮಿ ದೇವಾಲಯಗಳನ್ನು ಅಭಿವೃದ್ಧಿಪಡಿಸಿ ಕಾವೇರಿ ನದಿಯ ಮಧ್ಯಭಾಗದಲ್ಲಿ ಶಿವನ ವಿಗ್ರಹ ನಿರ್ಮಿಸಲಾಗುತ್ತಿದೆ ಎಂದರು.

ನಾನು ಪ್ರಾಥಮಿಕ ಶಿಕ್ಷಣವನ್ನು ಉಪ್ಪಾರ ಸಮುದಾಯ ಹೆಚ್ಚು ವಾಸವಾಗಿರುವ ಹರದನಹಳ್ಳಿಯಲ್ಲಿ ಮಾಡಿದ್ದು, ಸಚಿವನಾಗಿದ್ದ ಸಂದರ್ಭದಲ್ಲಿ ಪ್ರಥಮ ಗ್ರಾಮ ವಾಸ್ತವ್ಯವನ್ನು ಹರದನಹಳ್ಳಿಯನ್ನು ಆಯ್ಕೆ ಮಾಡಿರುವುದಾಗಿ ಹೇಳಿದ ಶಾಸಕರು, ಈ ಸಮಾಜವನ್ನು ರಾಜಕೀಯವಾಗಿ ಮುಂದೆ ತರಲು ಆಗ್ರಾಮದ ಯುವಕನನ್ನು ಕ್ಯಾಬಿನೆಟ್‌ ದರ್ಜೆಯ ರಾಜಕೀಯ ಸ್ಥಾನ ಮಾನ, ಮೈಸೂರು ನಗರಾಭಿವೃದ್ಧಿ ಅಧ್ಯಕ್ಷನಾಗಿ ಮಾಡಿದ್ದನ್ನು ಸ್ಮರಿಸಿ, ಈ ಸಮಾಜದ ಜನರ ಸಂಬಂಧ ಕುಟುಂಬದಂತಿದೆ ಎಂದರು.

ಭಗೀರಥ ಮಹಾಸಂಸ್ಥಾನ ಮಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಮಾತನಾಡಿ, ಹಿಂದುಳಿದ ಸಮಾಜಗಳು ಸಂಘಟನೆಯಾದಲ್ಲಿ ನಮ್ಮ ಹಕ್ಕು ಪಡೆಯಬಹುದು. ಸಮಾಜ ಉತ್ತಮ ರೀತಿಯಲ್ಲಿ ಸಂಘಟನೆಯಾಗಬೇಕು ಎಂದು ಸಲಹೆ ನೀಡಿದರು.

ನಮ್ಮ ಸಮಾಜದ ವಂಶಸ್ಥರು ಸೂರ್ಯವಂಶದ ಕ್ಷತ್ರೀಯರು, ಪುರಾತನ ಕಾಲದಿಂದಲೂ ದೇವರ ಬಗ್ಗೆಅಪಾರ ನಂಬಿಕೆ ಇಟ್ಟಿಕೊಂಡಿದ್ದೇವೆ. ಶ್ರೀರಾಮ, ಭಗೀರಥ, ಸೂರ್ಯದೇವರ ಆರಾಧನೆಮಾಡಿಕೊಂಡು ಬರುತ್ತಿದ್ದು, ನಮ್ಮಂತಹ ಹಿಂದುಳಿದ ಸಮುದಾಯದವರು ರಾಜಕೀಯ, ಶೈಕ್ಷಣಿಕವಾಗಿ ಮುಂದೆ ಬರಲು ಮೊದಲು ಮಕ್ಕಳಿಗೆ ಶಿಕ್ಷಣ ನೀಡಬೇಕು. ಸಂಘಟನೆಗಳು ಒಗ್ಗೂಡಿದರೆ ಮೀಸಲಾತಿ ಹಕ್ಕು ಪಡೆಯಲು ಸಾಧ್ಯ ಎಂದರು.

ಈ ವೇಳೆ ಪುರಸಭೆ ಅಧ್ಯಕ್ಷ ಕೆ.ಜಿ.ಸುಬ್ರಹ್ಮಣ್ಯ, ಪುರಸಭಾ ಸದಸ್ಯರಾದ ಸಂತೋಷಗೌಡ, ಉಮೇಶ್‌, ಕೆ.ಬಿ.ವೀಣಾ, ಮಂಜುಳಾ ಅವರನ್ನು ಶಾಸಕರು ಸನ್ಮಾನಿಸಿದರು. ಸಮಾಜದ ಸ್ವಾತಂತ್ರ್ಯ ಹೋರಾಟಗಾರ ಟಿ.ಪುಟ್ಟಣ್ಣ, ನಿವೃತ್ತ ಎಂಜಿನಿಯರ್‌ ಸ್ವಾಮಿನಾಥ್‌, ಟಿ.ಎನ್‌. ಶ್ರೀಧರ್‌, ಸಮಾಜದ ಯಜಮಾನ ಸೋಮಣ್ಣ, ಅಧ್ಯಕ್ಷ ಎಸ್‌.ನಟರಾಜು, ಕಾರ್ಯದರ್ಶಿ ಅಶ್ವತ್‌ ನಾರಾಯಣ್‌, ಸದಸ್ಯರಾದ ಎನ್‌.ರಾಮು, ಶ್ರೀನಿವಾಸಮೂರ್ತಿ, ದಶರಥ, ಕೆ.ಆರ್‌.ಲೋಕೇಶ್‌, ರಾಜೀವ್‌, ಗುತ್ತಿಗೆದಾರ ನಾಗೇಶ್‌, ಮುಖಂಡರಾದ ಜಗದೀಶ್‌, ದಯಾನಂದ, ರಾಮಚಂದ್ರ, ಶಾರದಮ್ಮ, ಭಾಗ್ಯರಮೇಶ್‌, ಉಮಾ, ಕೆ.ಟಿ.ನಾರಾಯಣ್‌, ಜಯರಾಮ್‌, ರಾಘು, ನವನಗರ ಅರ್ಬನ್‌ ಬ್ಯಾಂಕ್‌ ನಿರ್ದೇಶಕ ಎಂ.ಕೆ.ಮಹದೇವ್‌ ಇತರರಿದ್ದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.