ಗಾವಡಗೆರೆ ಶಾಲೆಯಲ್ಲಿ ಇಂಗ್ಲಿಷ್‌ ಮಾಧ್ಯಮ ಆರಂಭ

ಪ್ರಸಕ್ತ ಸಾಲಿನಿಂದ ಎಲ್ಕೆಜಿ, 1, 6, 8ನೇ ತರಗತಿ ಆರಂಭ

Team Udayavani, May 25, 2019, 4:58 PM IST

mysuru-tdy-2..

ಹುಣಸೂರು ತಾಲೂಕು ಗಾವಡಗೆರೆ ಪಬ್ಲಿಕ್‌ ಶಾಲೆಯ ನೋಟ.

ಹುಣಸೂರು: ತಾಲೂಕಿನ ಹೋಬಳಿ ಕೇಂದ್ರವಾದ ಗಾವಡಗೆರೆ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಪ್ರಸಕ್ತ ಸಾಲಿನಿಂದ ಇಂಗ್ಲಿಷ್‌ ಮಾಧ್ಯಮದಲ್ಲಿ ಎಲ್ಕೆಜಿ, 1, 6, 8ನೇ ತರಗತಿ ಆರಂಭಗೊಳ್ಳಲಿದೆ.

ವರದಾನ: ಈ ಶಾಲೆಯಲ್ಲಿ ಎಲ್ ಕೆಜಿಯಿಂದ 12ನೇ ತರಗತಿವರೆಗೆ ಇಂಗ್ಲಿಷ್‌ ಮಾಧ್ಯಮದಲ್ಲೇ ಪಾಠ ನಡೆಯಲಿದೆ. ಅಲ್ಲದೆ ಡಿಜಿಟಲ್ ಲೈಬ್ರರಿ ಸೇರಿ ಕೆರಿಯರ್‌ ಗೈಡೆನ್ಸ್‌, ವ್ಯಕ್ತಿತ್ವ ವಿಕಸನ ಶೈಕ್ಷಣಿಕ ಅಭಿವೃದ್ಧಿ ಚಟುವಟಿಕೆಗಳಿಗೆ, ವಿಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯವಿರು ವೃತ್ತಿಪರ ಕೋರ್ಸ್‌ಗಳಿಗೆ ತರಬೇತಿ ನೀಡಲು ಮುಂದಾಗಿರುವುದು ಗ್ರಾಮೀಣ ಮಕ್ಕಳಿಗೆ ವರದಾನವಾಗಿದೆ.

ಸಕಲ ಸೌಲಭ್ಯ: ಜವಾಹರ್‌ ನವೋದಯ ಮಾದರಿ (ವಸತಿ ರಹಿತ)ಯಲ್ಲಿ ತಾಲೂಕಿಗೊಂದರಂತೆ ಆರಂಭಗೊಂಡಿರುವ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಎಲ್ಕೆಜಿಯಿಂದ 12ನೇ ತರಗತಿ(ಪಿಯುಸಿ)ವರೆಗೆ ಇದ್ದು, ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಪ್ರಾಥಮಿಕ ಹಂತದಲ್ಲೇ ಇಂಗ್ಲಿಷ್‌ ಮಾಧ್ಯಮ ಶಿಕ್ಷಣ ನೀಡಲಾಗುತ್ತದೆ. ಅಲ್ಲದೇ, ಕಿರಿಯ, ಹಿರಿಯ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ಒಂದೇ ಆಡಳಿತಕ್ಕೆ ಒಳ±‌ಡಿಸಲಾಗಿದೆ. ಎಲ್ಕೆಜಿಯಿಂದ ಎಂಟನೇ ತರಗತಿವರೆಗೆ ಶೈಕ್ಷಣಿಕ ಮುಖ್ಯಸ್ಥರಾಗಿ ಉಪ ಪ್ರಾಚಾರ್ಯರು ಹಾಗೂ ಎಲ್ಕೆಜಿಯಿಂದ 12ನೇ ತರಗತಿವರೆಗೂ ಪ್ರಾಚಾರ್ಯರು ಸಂಪೂರ್ಣ ಆಡಳಿತ ಜವಾಬ್ದಾರಿ ನಿರ್ವಹಿಸುವರು.

1.98 ಕೋಟಿ ರೂ.ಬಿಡುಗಡೆ: ನವೋದಯ ಶಾಲೆಯಲ್ಲಿ ಸಿಗುವ ಸಕಲ ಸೌಲಭ್ಯ ಹಾಗೂ ಇಂಗ್ಲಿಷ್‌ ಶಿಕ್ಷಣ ದೊರಕಿಸಿಕೊಡುವ ಹಿನ್ನೆಲೆಯಲ್ಲಿ ಸುಸಜ್ಜಿತ ಕಟ್ಟಡ, ಮೂಲಭೂತ ಸೌಕರ್ಯ ಕಲ್ಪಿಸಲು ಈಗಾಗಲೇ 11 ಲಕ್ಷ ರೂ., ಅನುದಾನ ಬಂದಿದೆ. 6 ಲಕ್ಷರೂ., ಕಟ್ಟಡ ನಿರ್ವಹಣೆಗೆ, ಉಳಿದಂತೆ ಕಂಪ್ಯೂಟರ್‌ ಲ್ಯಾಬ್‌, ಸಿ.ಸಿ.ಕ್ಯಾಮರಾ, ಶುದ್ಧ ನೀರಿನ ಘಟಕ ಅಳವಡಿಸಲಾಗುತ್ತಿದೆ. 2 ಲ್ಯಾಬ್‌ ಸೇರಿ 10 ಕೊಠಡಿಗಳ ನಿರ್ಮಾಣಕ್ಕೆ ಪದವಿ ಪೂರ್ವ ಶಿಕ್ಷಣ ಮಂಡಳಿ ವತಿಯಿಂದ 1.98 ಕೋಟಿ ರೂ., ಬಿಡುಗಡೆಯಾಗಿದೆ. ಕೇಂದ್ರ ಸರ್ಕಾರದ ನೀತಿ ಆಯೋಗ ನೀಡುವ ಅಟಲ್ ಟ್ರೀಕಿಂಗ್‌ ಸುಸಜ್ಜಿತ ವಿಜ್ಞಾನ ಪ್ರಯೋಗಾಲಕ್ಕಾಗಿ 50 ಲಕ್ಷರೂ., ಅನುದಾನ ಮಂಜೂರು ಮಾಡಿದೆ. ಶಿಕ್ಷಣ ಇಲಾಖೆಯ ರಾಜ್ಯ ಯೋಜನಾ ನಿರ್ದೇಶನಾಲಯದಿಂದ ನಾಗರಿಕೇತರ ಕಾಮಗಾರಿಗೆ 45 ಲಕ್ಷರೂ., ಮಂಜೂರಾಗಿದೆ. 2 ಎಕರೆಯಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವುದು.

1500 ಮಕ್ಕಳ ಗುರಿ: ಇದೀಗ 1018 ಮಂದಿ ವ್ಯಾಸಂಗ ಮಾಡು ತ್ತಿದ್ದು 1500 ಮಕ್ಕಳಿಗೆ ವಿದ್ಯಾಭ್ಯಾಸ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಪ್ರಾಚಾರ್ಯ ರಾಮೇ ಗೌಡ ತಿಳಿಸಿದ್ದಾರೆ.

ನುರಿತ ಶಿಕ್ಷಕರ ನೇಮಕ:

ಈಗಾಗಲೇ ಪ್ರಥಮ ಪಿಯುಸಿಗೆ 175, ಎಲ್ಕೆಜಿಗೆ 15, ಒಂದನೇ ತರಗತಿಗೆ 10 ಮಕ್ಕಳು ದಾಖಲಾಗಿದ್ದಾರೆ. ಶಾಲೆಯ ಸಾಧನೆ ಗಮನಿಸಿ, ಇಲ್ಲಿಗೆ ಹುಣಸೂರು ತಾಲೂಕಲ್ಲದೆ ಇತರೆಡೆ ಗಳಿಂದಲೂ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಸ‌ರ್ಕಾರದ ಮಾರ್ಗಸೂಚಿಯಂತೆ ಎಲ್ಕೆಜಿ ಸೇರಿದಂತೆ ಎಲ್ಲಾ ವಿಭಾಗ ಗಳಿಗೂ ನುರಿತ ಇಂಗ್ಲಿಷ್‌ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗು ವುದು. ಹೀಗಾಗಿ ಗಾವಡಗೆರೆ ಸುತ್ತಮುತ್ತಲಿನ ಗ್ರಾಮಸ್ಥರು ತಮ್ಮ ಮಕ್ಕಳನ್ನು ದಾಖಲಿಸುವ ಮೂಲಕ ಕನ್ನಡ ಮಾಧ್ಯಮದ ಜೊತೆಗೆ ಇಂಗ್ಲಿಷ್‌ ಮಾಧ್ಯಮದಲ್ಲೂ ಶಿಕ್ಷಣ ಪಡೆದುಕೊಳ್ಳಬಹುದಾಗಿದೆ ಎಂದು ಪ್ರಾಚಾರ್ಯರಾದ ರಾಮೇಗೌಡ ತಿಳಿಸಿದ್ದಾರೆ.
● ಸಂಪತ್‌ಕುಮಾರ್‌

ಟಾಪ್ ನ್ಯೂಸ್

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.