ಸಿಎಫ್ಟಿಆರ್‌ಐನಲ್ಲಿ ಉದ್ಯಮಿಗಳ ಸಮಾವೇಶ


Team Udayavani, Jun 12, 2019, 3:00 AM IST

cftri

ಮೈಸೂರು: ಆಹಾರೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರತರಾಗಿರುವ ಉದ್ಯಮಗಳು ಹಾಗೂ ಸಂಸ್ಥೆಗಳ ಜೊತೆಗೂಡಿ ತಾನು ಮುಂದೆ ಕೈಗೊಳ್ಳಬೇಕಾದ ಸಂಶೋಧನೆಗಳ ಕುರಿತು ಚಿಂತನ ನಡೆಸಲು ಮೈಸೂರಿನ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯವು (ಸಿಎಫ್ಟಿಆರ್‌ಐ) ಇದೇ ಮೊದಲ ಬಾರಿಗೆ ಒಂದು ದಿನದ ಉದ್ಯಮಿಗಳ ಸಮಾವೇಶ ಆಯೋಜಿಸಿತ್ತು.

ದೆಹಲಿಯ ವೈಜ್ಞಾನಿಕ ಹಾಗೂ ಔದ್ಯಮಿಕ ಸಂಶೋಧನಾ ಮಂಡಳಿಯ ಮಹಾ ನಿರ್ದೇಶಕ ಪ್ರೊ. ಶೇಖರ ಮಾಂಡೆ ಎಲೆಕ್ಟ್ರಾನಿಕ್‌ ಮಾಧ್ಯಮದ ಮೂಲಕ ಸಮಾವೇಶವನ್ನು ಉದ್ಘಾಟಿಸಿದರು. ಸಿಎಸ್‌ಐಆರ್‌-ಈಶಾನ್ಯ ಭಾರತದ ವಿಜ್ಞಾನ ಮತ್ತು ತಂತ್ರಜ್ಞಾನ ಸಂಶೋಧನಾಲಯದ ನಿರ್ದೇಶಕ ಡಾ.ಜಿ. ನರಹರಿ ಶಾಸ್ತ್ರಿಯವರು ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು.

ಸಮಾವೇಶದಲ್ಲಿ 30 ಆಹಾರ ಉದ್ಯಮ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡು ಉದ್ಯಮಕ್ಕೆ ನೆರವಾಗಬಲ್ಲ ಸಂಶೋಧನೆಗಳ ಬಗ್ಗೆ ತಮ್ಮ ದೃಷ್ಟಿಕೋನವನ್ನು ಮಂಡಿಸಿದರು. ಸಮಾವೇಶದಲ್ಲಿ ಬೃಹತ್‌ ಉದ್ಯಮಗಳಾದ ನೆಸ್ಲೆ ಇಂಡಿಯಾ, ಬ್ಯೂಲರ್‌ ಸಂಸ್ಥೆ, ಮ್ಯಾರಿಕೋ, ಟಾಟಾ ಗ್ಲೋಬಲ್‌ ಬೀವರೇಜಸ್‌ ಅಲ್ಲದೆ ಹೊಸ ಉದ್ಯಮಗಳಾದ ನ್ಯೂಟ್ರಿಪ್ಲಾನೆಟ್, ಸರೇಧ, ಎಕೊrವೇಟ್‌ ಹಾಗೂ ಇತರೆ ಪ್ರತಿನಿಧಿಗಳಿದ್ದರು. ತೈಲ, ಮಾಂಸ ಮತ್ತು ಕುಕ್ಕುಟ ಉದ್ಯಮ, ಪ್ರೋಟಿನ್‌ ಆಹಾರಗಳು, ಮಸಾಲೆ ಹಾಗೂ ಪೇಯಗಳು, ಪ್ಯಾಕೇಜಿಂಗ್‌ ಮತ್ತು ನವೋದ್ಯಮ ಕ್ಷೇತ್ರಗಳಲ್ಲಿನ ಉದ್ಯಮಗಳವರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಚಿಂತನ ಮಂಥನ ಉದ್ಘಾಟಿಸಿದ ಸಿಎಫ್ಟಿಆರ್‌ಐ ನಿರ್ದೇಶಕ ಡಾ.ಕೆಎಸ್‌ಎಂಎಸ್‌ ರಾಘವರಾವ್‌, ಸಂಸ್ಥೆಯ ಸಾಮರ್ಥ್ಯ, ಸಂಸ್ಥೆಯ ಮುಂದಿರುವ ಅವಕಾಶಗಳು, ಸಂಸ್ಥೆಯ ದೋಷಗಳನ್ನು ಕೈಗಾರಿಕಾ ಪ್ರತಿನಿಧಿಗಳ ಮುಂದೆ ವಿಶ್ಲೇಷಿಸಿದರು. ಹೊಸದೊಂದು ಆಹಾರ ಕೈಗಾರಿಕೋದ್ಯಮವನ್ನು ಕಟ್ಟಿ ಬೆಳೆಸುವ ದಿಕ್ಕಿನಲ್ಲಿ ಸಿಎಸ್‌ಐಆರ್‌ ಸಿಎಫ್ಟಿಆರ್‌ಐಯನ್ನು ಕೈಗಾರಿಕೆಯ ಜ್ಞಾನ ಸಹಯೋಗಿಯನ್ನಾಗಿ ಗುರುತಿಸಬೇಕೆಂದು ಉದ್ಯಮಿಗಳನ್ನು ವಿನಂತಿಸಿದರು.

ಸಮಾವೇಶದಲ್ಲಿ ಆಹಾರ ಸಂಸ್ಕರಣೆ ಮತ್ತು ಇಂಜಿನಿಯರಿಂಗ್‌, ಜೈವಿಕ ತಂತ್ರಜ್ಞಾನ, ಆಹಾರೌಷಧಗಳು ಮತ್ತು ಸ್ವಾಸ್ಥ್ಯ, ಸಂಸ್ಕರಿತ ಆಹಾರಗಳು ಹಾಗೂ ಪೇಯಗಳು, ಆಹಾರ ಸರಬರಾಜು ಮತ್ತು ಪ್ಯಾಕೇಜಿಂಗ್‌, ನವೋದ್ಯಮ ಮತ್ತು ಉದ್ಯಮಶೀಲತೆ ಎಂಬ ಐದು ಪ್ರಮುಖ ವಿಷಯಗಳನ್ನು ಕುರಿತು ಚಿಂತಿಸಲಾಯಿತು. ಪ್ರತಿ ಕ್ಷೇತ್ರದ ಬೆಳೆವಣಿಗೆಗೆ ಸಿಎಫ್ಟಿಆರ್‌ಐ ನೀಡಬಹುದಾದ ಜ್ಞಾನ ಹಾಗೂ ತಂತ್ರಜ್ಞಾನಗಳನ್ನು ಪ್ರದರ್ಶಿಸಲಾಯಿತಲ್ಲದೆ, ಉದ್ಯಮಗಳು ಹಾಗೂ ಸಂಸ್ಥೆಗಳು ಜೊತೆಯಾಗಿ ವ್ಯವಹರಿಸಬಹುದಾದ ವಿಷಯಗಳನ್ನು ಪಟ್ಟಿ ಮಾಡಲಾಯಿತು.

ಸಮಾವೇಶದ ಅಂಗವಾಗಿ ನಡೆದ ವಸ್ತು ಪ್ರದರ್ಶನದಲ್ಲಿ ಈ ಐದು ಕ್ಷೇತ್ರಗಳಲ್ಲಿ ಸಿಎಫ್ಟಿಆರ್‌ಐ ಸಿದ್ಧಪಡಿಸಿರುವ ಹೊಸ ಉತ್ಪನ್ನಗಳು ಹಾಗೂ ಯಂತ್ರೋಪಕರಣಗಳನ್ನು ಪ್ರದರ್ಶಿಸಲಾಯಿತು. ಇದಲ್ಲದೆ ವಿವಿಧ ಕೈಗಾರಿಕೆಗಳ ಜೊತೆಗೆ ಸಿಎಸ್‌ಐಆರ್‌-ಸಿಎಫ್ಟಿಆರ್‌ಐ ಮಾಡಿಕೊಂಡ ಹತ್ತು ಒಡಂಬಡಿಕೆಗಳಿಗೆ ಸಹಿ ಹಾಕಿ, ವಿನಿಮಯ ಮಾಡಿಕೊಳ್ಳಲಾಯಿತು.

ಕೈಗಾರಿಕೆಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸಂಸ್ಥೆಯ ಜೊತೆಗೆ ಯಾವ್ಯಾವ ಕ್ಷೇತ್ರದಲ್ಲಿ ಸಹಯೋಗ, ಸಹಕಾರ ಹಾಗೂ ಒಡನಾಟ ಮುಂದುವರಿಯಬೇಕೆನ್ನುವ ಬಗ್ಗೆ ಒಂದು ವರದಿಯ ಕರಡನ್ನು ಸಿದ್ಧಪಡಿಸುವುದರೊಂದಿಗೆ ಸಮಾವೇಶವು ಸಮಾರೋಪಗೊಂಡಿತು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.