ಮನುಷ್ಯನಲ್ಲಿ ಪರಿಸರ ಪ್ರಜ್ಞೆ ಬಿತ್ತುವ ಅಗತ್ಯವಿದೆ


Team Udayavani, Jun 7, 2022, 3:27 PM IST

Untitled-1

ಪಿರಿಯಾಪಟ್ಟಣ: ಮನುಷ್ಯನಿಗೆ ಪರಿಸರದ ಪ್ರಜ್ಞೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸರ ದಿನ ಆಚರಣೆಗೆ ಹೆಚ್ಚು ಹೊತ್ತು ನೀಡಬೇಕಾಗಿದೆ ಎಂದು ಹಿರಿಯ ಸಿವಿಲ್‌ ನ್ಯಾಯಧೀಶ ಎ.ಸಮೀವುಲ್ಲಾ ಹೇಳಿದರು.

ಪಟ್ಟಣದ ಯಜಮಾನ್‌ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯರಾದವರು ನಮ್ಮ ಸುತ್ತಮುತ್ತಲ ಪರಿಸರವನ್ನು ಉತ್ತಮವಾಗಿಟ್ಟುಕೊಳ್ಳುವ ಜವಾಬ್ದಾರಿ ಇರಬೇಕು. ಸ್ವಾರ್ಥಕ್ಕಾಗಿ ಮನುಷ್ಯ ಇಂದು ಪರಿಸರವನ್ನು ನಾಶಮಾಡುತ್ತಿದ್ದಾನೆ. ಇಂಥ ಸಂದರ್ಭದಲ್ಲಿ ಪರಿಸರ ದಿನಾಚರಣೆಯ ಮೂಲಕ ಮರಗಿಡಗಳನ್ನು ನೆಟ್ಟು ಪರಿಸರದ ಅಭಿವೃದ್ಧಿಗೆ ಮುಂದಾಗಬೇಕು. ಈಗಾಗಲೇ ಯುವಕರಲ್ಲಿ ಇದರ ಬಗ್ಗೆ ಕಾಳಜಿ ಮೂಡುತ್ತಿದೆ ಆದಾಗಿಯೂ ಹೆಚ್ಚಿನ ಮಟ್ಟದಲ್ಲಿ ಇಂಥ ಕಾರ್ಯಕ್ರಮಗಳು ನಡೆದು ಪರಿಸರ ಅಭಿವೃದ್ಧಿಯಾಗಬೇಕು ಎಂದು ತಿಳಿಸಿದರು.

ನ್ಯಾಯಾಧೀಶರಾದ ಎಂ.ಆರ್‌.ಯೋಗೇಶ್‌ ಮಾತನಾಡಿ, ಇಂದಿನ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸಬೇಕು, ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಪರಿಸರದ ಪಾಠಗಳು ಮತ್ತು ಅದರ ಅವಶ್ಯಕತೆ ಅದರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದರು. ವಲಯ ಅರಣ್ಯಾಧಿಕಾರಿ ರತನ್‌ಕುಮಾರ್‌ ಮಾತನಾಡಿ, ಮನುಕುಲದ ಉಳಿವಿಗಾಗಿ ಪರಿಸರ ಅತ್ಯಗತ್ಯ, ಇಡೀ ಸೌರಮಂಡಲದಲ್ಲಿ ಮನುಷ್ಯ ವಾಸಿಸಲು ಯೋಗ್ಯವಾದ ಪರಿಸರ ಇರುವುದು ಭೂಮಿಯಲ್ಲಿ ಮಾತ್ರ ಆದ್ದರಿಂದ ಇದನ್ನು ಸಂರಕ್ಷಣೆ ಮಾಡಬೇಕು. ನೆಲ-ಜಲವನ್ನು ಉಳಿಸಿ ಮುಂದಿನ ಪೀಳಿಗೆಗೆ ಅನುಕೂಲಕರ ವಾತಾವರಣ ನಿರ್ಮಾಣ ಮಾಡಬೇಕು. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಬೀಜ ಬಿತ್ತೋಣ ಅಭಿಯಾನವನ್ನು ಆರಂಭಿಸಿದ್ದು ಇದೇ ಕಾರ್ಯಕ್ರಮದಲ್ಲಿ ತೇಗ ಸಸಿಗಳನ್ನು ಬಿತ್ತುವ ಮೂಲಕ ಚಾಲನೆ ನೀಡಲಾಗಿದೆ ಜೂ.5 ರಿಂದ 12ರ ವರೆಗೆ ಈ ಅಭಿಯಾನ ಕೈಗೊಳ್ಳಳಲಾಗಿದ್ದು ಇದಕ್ಕೆ ಎಲ್ಲಾ ಸಂಘಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.

ಪರಿಸರ ದಿನಾಚಾರಣೆ ಅಂಗವಾಗಿ ನಡೆದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿ ಗಳಿಗೆ ನ್ಯಾಯಾಧೀಶರು ಪ್ರಶಸ್ತಿ ಪತ್ರ ವಿತರಣೆ ಮಾಡಿದರು. ಶಾಲಾ ಆವರಣದಲ್ಲಿ ನ್ಯಾಯಾಧೀಶರು ಮಕ್ಕಳೊಂದಿಗೆ ಸೇರಿ ತೇಗದ ಮರದ ಬೀಜ ಗಳನ್ನು ಬಿತ್ತುವ ಮೂಲಕ ಅರಣ್ಯ ಇಲಾಖೆಯ ಅಭಿಯಾನಕ್ಕೆ ಚಾಲನೆ ನೀಡಿದರು.

ಯಜಮಾನ್‌ ಫೌಂಡೇಶನ್‌ ಅಧ್ಯಕ್ಷ ಪಿ.ಕೆ. ನಾಗಪ್ಪ, ವಕೀಲರಾದ ಬಿ.ಎನ್‌.ಹರೀಶ್‌, ಶ್ರೀನಿವಾಸ್‌, ಅಕ್ಷರ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಧನಂಜಯ, ಯಜಮಾನ್‌ ಪಬ್ಲಿಕ್‌ ಶಾಲೆಯ ಮುಖ್ಯ ಶಿಕ್ಷಕ ಜಗದೀಶ್‌, ಯಜಮಾನ್‌ ಫೌಂಡೇಶನ್‌ ಟ್ರಸ್ಟಿ ನಾಗಮಣಿ, ಡಿಆರ್‌ಎಫ್ ಒಗಳಾದ ಪಾರ್ವತಿ, ಮಧುಸೂಧನ್‌, ಮಹೇಶ್‌, ಅರಣ್ಯ ರಕ್ಷಕರಾದ ಪೃಥ್ವಿ, ಸತೀಶ್‌, ಯಲಗೂರೇಶ್‌, ರಾಜಪ್ಪ ಇತರರು ಇದ್ದರು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.