ವಿದ್ಯಾರ್ಥಿಗಳಲ್ಲಿ ಪರಿಸರ ಪ್ರೇಮ ಬಿತ್ತುವ ಪ್ರಾಧ್ಯಾಪಕ

ಕಾಲೇಜು ಕ್ಯಾಂಪಸ್‌ ತುಂಬಾ ವಿವಿಧ ಜಾತಿ ಗಿಡ ನೆಟ್ಟು ಪೋಷಣೆ

Team Udayavani, Jun 6, 2019, 11:59 AM IST

mysuru-tdy-2..

ಹುಣಸೂರು ಡಿ.ಡಿ. ಅರಸ್‌ ಕಾಲೇಜಿನಲ್ಲಿ ಪರಿಸರ ಪ್ರೇಮಿ ಅಧ್ಯಾಪಕ ರವಿಯಿಂದ ವಿದ್ಯಾರ್ಥಿಗಳಿಗೆ ಸಸಿ ವಿತರಣೆ.

ಹುಣಸೂರು: ಪ್ರಾಧ್ಯಾಪಕರೊಬ್ಬರ ಸತತ ಪ್ರಯತ್ನದಿಂದಾಗಿ ಕಾಲೇಜಿನ ಆವರಣದಲ್ಲಿಂದು ಕಾಲೇಜು ವನ ನಿರ್ಮಾಣವಾಗಿದೆ.

ಹುಣಸೂರು ಡಿ.ದೇವರಾಜರಸು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ, ಕಾಲೇಜಿನ ಎಕೋ ಕ್ಲಬ್‌ ಸಂಚಾಲಕ ಸಿ.ರವಿ ಅವರೇ ತಮ್ಮೊಂದಿಗೆ ವಿದ್ಯಾರ್ಥಿ, ಯುವ ಜನರಲ್ಲಿ ಪರಿಸರ ಪ್ರೀತಿ ಬಿತ್ತುತ್ತಿರುವ ನಿಸರ್ಗ ಪ್ರೇಮಿಯಿಂದಾಗಿ ಕ್ಯಾಂಪಸ್‌ ಹಸಿರಿನಿಂದ ನಳನಳಿಸುತ್ತಿದೆ.

ಆವರಣದಲ್ಲಿ ಏನೇನಿದೆ: ಕಳೆದ 6 ವರ್ಷಗಳಿಂದ ಕ್ಯಾಂಪಸ್‌ನಲ್ಲಿ ಹೊಂಗೆ, ಬೇವು, ಹಲಸು, ತೇಗ, ತೆಂಗು, ಸಪೋಟ, ದಾಳಿಂಬೆ ಸೇರಿದಂತೆ ತರಾವರಿ ಹೂವಿನ ಗಿಡಗಳನ್ನು ಬೆಳೆಸಿದ್ದು, ನೋಡುಗರ ಕಣ್ಮನ ಸೆಳೆಯುತ್ತಿದೆ.

ಮಕ್ಕಳಿಗೆ ಮನವರಿಕೆ: ಕಾಲೇಜಿನ ಎಕೋ ಕ್ಲಬ್‌ನ ಸಂಚಾಲಕರಾಗಿರುವ ರವಿ ಅವರು ಸದಾ ಪರಿಸರದ ಬಗ್ಗೆ ವಿದ್ಯಾರ್ಥಿಗಳನ್ನು ಸೆಳೆದಿಡುವ ಮಾತುಗಳನ್ನಾಡುತ್ತಾರೆ. ಪಾಠದ ನಡುವೆಯೂ ಪರಿಸರ, ಭೂಮಿಯ ತಾಪಮಾನದಿಂದಾಗುವ ಅವಾಂತರಗಳ ಬಗ್ಗೆ ಮಕ್ಕಳಿಗೆ ಮನವರಿಕೆ ಮಾಡಿಕೊಡುತ್ತಾರೆ.

ಸಸಿಗಳ ಹಾರೈಕೆ: ಇವರಿಗೆ ಸಸಿ ನೆಡುವುದೆಂದರೆ ಅದಮ್ಯ ಪ್ರೀತಿ, ನೆಟ್ಟ ಗಿಡಗಳಿಗೆ ನಿತ್ಯ ನೀರೆರೆಯು ವುದರಲ್ಲೂ ಮತ್ತಷ್ಟು ಪರಿಸರ ಪ್ರೀತಿ ಮೆರೆಯು ತ್ತಾರೆ. ಎಕೋ ಕ್ಲಬ್‌ನ ಮೂಲಕ ವಿದ್ಯಾರ್ಥಿಗಳಿಂದ ಗಿಡ ನೆಡಿಸಿದ್ದರೂ, ನಿತ್ಯ ಕಾಲೇಜಿಗೆ ಬಂದು ಮೊದಲು ತಾವೇ ಸಸಿಗಳಿಗೆ ನೀರುಣಿಸಿದ ನಂತರವೇ ಪಾಠ-ಪ್ರವಚನ ಇವರ ದಿನಚರಿ.

ಇವರ ಪರಿಸರದ ಮೇಲಿನ ಕಾಳಜಿ ಹಲವಾರು ವಿದ್ಯಾರ್ಥಿಗಳನ್ನು ಸೂಜಿಗಲ್ಲಿನಂತೆ ಸೆಳೆದು ಅವ ರಲ್ಲಿ ಗಿಡ, ಮರ-ಪ್ರಾಣಿ, ಪಕ್ಷಿಗಳ ಬಗ್ಗೆ ಅಪಾರ ಪ್ರೀತಿ ಬೆಳೆಯುವಂತೆ ಮಾಡುವಲ್ಲಿ ಸಫಲರಾಗಿ ದ್ದಾರೆ. ಅಲ್ಲದೆ ಸಹೋದ್ಯೋಗಿ ಪ್ರಾಧ್ಯಾಪಕರು ಸಹ ಇವರ ಪರಿಸರ ಕಾಳಜಿಗೆ ಕೈಜೋಡಿಸಿದ್ದಾರೆ.

● ಸಂಪತ್‌ ಕುಮಾರ್‌

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.