ಸಭೆಯಲ್ಲಿ ಪ್ರತಿಧ್ವನಿಸಿದ ಬೀದಿ ನಾಯಿ ದಾಳಿ ಪ್ರಕರಣ


Team Udayavani, Feb 12, 2020, 3:00 AM IST

sabheyalli

ಮೈಸೂರು: ನಂಜನಗೂಡಿನ ವಿದ್ಯಾನಗರದಲ್ಲಿ ಬೀದಿ ನಾಯಿ ಮಕ್ಕಳ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಪ್ರಕರಣ ಜಿಪಂ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿತು. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಾ.ರಾ.ನಂದೀಶ್‌ ವಿಷಯ ಪ್ರಸ್ತಾಪಿಸಿ ಕ್ರಮಕ್ಕೆ ಒತ್ತಾಯಿಸಿದರು.

ಈ ಬಗ್ಗೆ ಸಭೆಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್‌.ವೆಂಕಟೇಶ್‌, ನಂಜನಗೂಡಿನ ವಿದ್ಯಾನಗರದಲ್ಲಿ ಬೀದಿನಾಯಿಗಳು ದಾಳಿ ನಡೆಸಿ 5 ರಿಂದ 7 ವರ್ಷ ವಯಸ್ಸಿನ ಐವರು ಮಕ್ಕಳಿಗೆ ತೀವ್ರ ಗಾಯವಾಗಿದ್ದು, ರೇಬಿಸ್‌ ನಿರೋಧಕ ಚುಚ್ಚುಮದ್ದು ನೀಡಲಾಗಿದೆ ಎಂದು ವಿವರಿಸಿದರು.

ಈ ಬಗ್ಗೆ ಮಾತನಾಡಿದ ಸಾ.ರಾ.ನಂದೀಶ್‌, ಬೀದಿ ನಾಯಿಗಳ ದಾಳಿ, ಚಚ್ಚುಮದ್ದು ದೊರೆಯದಿರುವ ಬಗ್ಗೆ ಆಗಾಗ್ಗೆ ಸುದ್ದಿಯಾಗುತ್ತಲೇ ಇರುತ್ತದೆ. ಹೀಗಾಗಿ ಆನೆ ಗಣತಿ, ಹುಲಿ ಗಣತಿ ಮಾಡಿದಂತೆ ಬೀದಿ ನಾಯಿಗಳ ಗಣತಿ ಮಾಡಿ, ಚುಚ್ಚುಮದ್ದನ್ನೇಕೆ ಕೊಡಿಸಬಾರದು ಎಂದು ಪ್ರಶ್ನಿಸಿದರು.

ಪಶುಪಾಲನಾ ಇಲಾಖೆ ಉಪ ನಿರ್ದೇಶಕ, ಬೀದಿ ನಾಯಿ ಹಿಡಿದು ಚುಚ್ಚುಮದ್ದು ಕೊಡುವುದು ಕಷ್ಟದ ಕೆಲಸ, ಕೊಲ್ಲುವುದು ಕೂಡ ಕಷ್ಟದ ಕೆಲಸವೇ, ಪ್ರಾಣಿದಯಾ ಸಂಘಗಳು ಅಡ್ಡಬರುತ್ತವೆ ಎಂದರು.

ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಾ.ರಾ.ನಂದೀಶ್‌, ಕಾಡಲ್ಲಿರುವ ಹುಲಿ-ಸಿಂಹಗಳನ್ನೇ ಹಿಡಿದು ಚುಚ್ಚುಮದ್ದು ಕೊಡುತ್ತಾರೆ, ಬೀದಿನಾಯಿಗಳನ್ನೇಕೆ ಹಿಡಿದು ಚುಚ್ಚುಮದ್ದು ಕೊಡಿಸೋಕಾಗಲ್ಲ. ಪಂಚಾಯ್ತಿ ಮಟ್ಟದಲ್ಲಿ ಈ ಬಗ್ಗೆ ಕ್ರಮವಹಿಸಿ ಎಂದು ತಿಳಿಸಿದರು.

ಅರ್ಧಂಬರ್ಧ ಮಾಹಿತಿ ಕೊಟ್ರೆ ಸಭೆ ಮಾಡೋಕಾಗಲ್ಲ: ನೀವು ಕೊಡುವ ಶೇಕಡಾವಾರು ಅಂಕಿಅಂಶ ನೋಡೋಕೆ ಕೆಡಿಪಿ ಸಭೆ ಮಾಡುವ ಅವಶ್ಯಕತೆ ಕಾಣಿ¤ಲ್ಲ. ಕೆಡಿಪಿ ಸಭೆಗೆ ಅರ್ಧಂಬರ್ಧ ಮಾಹಿತಿ ಕೊಟ್ರೆ ಹೇಗೆ ಪ್ರಗತಿಪರಿಶೀಲನೆ ಮಾಡೋದು ಎಂದು ಜಿಪಂ ಸಿಇಒ ಕೆ.ಜ್ಯೋತಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಹಿಂದಿನಿಂದಲೂ ಹೀಗೆ ನಡೆದುಕೊಂಡು ಬರುತ್ತಿದೆ. ಇಲಾಖಾವಾರು ಪ್ರಗತಿ ವರದಿಯನ್ನು ಜಿಪಂಗೆ ಮುಂಚಿತವಾಗಿಯೂ ಕೊಡುವುದಿಲ್ಲ. ಕೊಟ್ಟರು ಅದು ಅರ್ಧಂಬರ್ಧ ಇರುತ್ತದೆ. ಸಭೆಯ ದಿನ ನಿಮ್ಮ ಬಳಿ ಒಂದು ಮಾಹಿತಿ ಇದ್ದರೆ, ನಮ್ಮ ಬಳಿ ಒಂದು ಮಾಹಿತಿ ಇರುತ್ತೆ. ಶೇ.53, ಶೇ.60 ಸಾಧನೆ ಎಂದರೆ ಏನು ಎಂಬ ವಿವರಬೇಕಲ್ಲ? ಹೀಗಾದರೆ ಹೇಗೆ ಎಂದು ಪ್ರಶ್ನಿಸಿದರು.

ಮುಂದಿನ ಸಭೆಗೆ ತಾಲೂಕುವಾರು ವಿವರವಾದ ಮಾಹಿತಿ ಕೊಡಿ. ಈ ಸಭೆಗೆ ಕೊಟ್ಟಿರುವ ಮಾಹಿತಿಯ ತಾಲೂಕುವಾರು ವಿವರವಾದ ಮಾಹಿತಿಯನ್ನೂ 15 ದಿನಗಳಲ್ಲಿ ಕೊಡಿ, ಮುಂದಿನ ಸಭೆಗೆ ಒಂದು ವಾರ ಮುಂಚಿತವಾಗಿ ಜಿಪಂಗೆ ಸಮಗ್ರವಾದ ಮಾಹಿತಿ ಸಲ್ಲಿಸಬೇಕು ಎಂದು ಜಿಲ್ಲಾಮಟ್ಟದ ಎಲ್ಲ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.