ಭಾವ ವ್ಯಕ್ತಪಡಿಸುವ ಭಾಷೆಗೆ ಭವಿಷ್ಯ ಇರುತ್ತೆ


Team Udayavani, Oct 4, 2022, 4:34 PM IST

tdy-14

ಮೈಸೂರು: ಯಾವ ಭಾಷೆಗೆ ಕಾವ್ಯಾಭಿವ್ಯಕ್ತತೆ ಇರುತ್ತದೋ ಆ ಭಾಷೆಗೆ ಭವಿಷ್ಯವಿರುತ್ತದೆ. ಇಂಗ್ಲಿಷ್‌ ಒತ್ತಡಕ್ಕೆ ಸಿಲುಕಿಯೂ ಕನ್ನಡದ ಕಾವ್ಯ ಪ್ರಭಾವ ದಟ್ಟವಾಗಿ ಬೆಳೆದಿದೆ ಎಂದು ನಾಟಕಕಾರ, ಕವಿ ಎಚ್‌.ಎಸ್‌.ಶಿವಪ್ರಕಾಶ್‌ ಅಭಿಪ್ರಾಯ ಪಟ್ಟರು.

ಮಾನಸಗಂಗೋತ್ರಿ ಸೆನೆಟ್‌ ಭವನದಲ್ಲಿ ದಸರಾ ಕವಿಗೋಷ್ಠಿ ಉಪ ಸಮಿತಿ ವತಿಯಿಂದ ನಡೆದ ಪ್ರಧಾನ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಕ್ಷಿ ಹಾರುವುದನ್ನು ನೋಡುವಂತೆಯೇ ಕಾವ್ಯದ ಪ್ರಭಾವವೂ ಇದೆ. ಕನ್ನಡ ಕಾವ್ಯ ಪರಂಪರೆಗೆ ಸುದೀರ್ಘ‌ ಇತಿಹಾಸವಿದೆ ಎಂದು ಹೇಳಿದರು.

ಹದಿನೈದು ವರ್ಷಗಳ ಹಿಂದೆ ವಿದೇಶಕ್ಕೆ ಹೋದಾಗ ಅಲ್ಲಿನವರು ನಮ್ಮ ಕವಿಗಳ ಬಗ್ಗೆ ವಿಚಾರಿಸಿದಾಗ ಸಂಕೋಚವಾಗುತ್ತಿತ್ತು. ಇವತ್ತು ಕವಿಗಳ ಸಂಖ್ಯೆ ಹೆಚ್ಚಾಗಿದೆ. ಕನ್ನಡದ ಜನ ವರ್ಗಗಳು ಸಶಕ್ತವಾಗಿ ಕಾವ್ಯ ಕಟ್ಟುತ್ತಿದ್ದಾರೆ ಎಂದರು.

ಶಾಲೆ, ವಿವಿ ಆಗಿ ಕೆಲಸ:ಕವಿಗಳು ಜನರ ಶಾಲೆಯಾಗಿ, ಜನರ ವಿಶ್ವವಿದ್ಯಾನಿಲಯವಾಗಿ ಕೆಲಸ ಮಾಡಿದ್ದಾರೆ. ಈ ಸಾಲಿನಲ್ಲಿ ಸರ್ವಜ್ಞ, ವಚನಕಾರರು, ದಾಸರು, ತತ್ವಪದಕಾರರು ಮನರಂಜನೆಗಾಗಿ ಕಾವ್ಯ ರಚಿಸಿದ ಸಂದಿಗ್ಧ ಸಂದರ್ಭದಲ್ಲಿ ತಿಳಿವು ಕೊಟ್ಟಿದ್ದಾರೆ. ಕನ್ನಡ ಕವಿ ಪರಂಪರೆ ಸಮೃದ್ಧಗೊಳಿಸಿದ್ದಾರೆ ಎಂದು ವಿವರಿಸಿದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ಅವರು ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿ, ಮೊಟ್ಟ ಮೊದಲು ಇತಿಹಾಸದ ಕಲ್ಪನೆ ಕೊಟ್ಟ ಬ್ರಿಟಿಷರ ಕಲ್ಪನೆಗೂ ಭಾರತೀಯರ ಕಲ್ಪನೆಗೂ ವ್ಯತ್ಯಾಸವಿದೆ. ಅವರು ಭೂತ, ವರ್ತಮಾನ, ಭವಿಷ್ಯ ಎಂದು ವರ್ಗೀಕರಿಸುತ್ತಾರೆ. ನಾವು ಕಾಲಚಕ್ರದಲ್ಲಿ ನಂಬಿಕೆ ಇಟ್ಟಿದ್ದೇವೆ ಎಂದು ತಿಳಿಸಿದರು.

ಕರ್ನಾಟಕದ ಕಾವ್ಯ ವಿಶಿಷ್ಟವಾಗಿ ಬೆಳೆದಿದೆ:ನಮ್ಮ ಪ್ರಕಾರ ಕಾಲ ಒಂದೇ. ಕೃಷ್ಣ ಈಗಲೂ ಇದ್ದಾನೆ. ರಾಮ ಈಗ ಹೋದನೆಂದರೆ ನಂಬುತ್ತೇವೆ. ಆದರೆ, ಬ್ರಿಟಿಷರು ಬಂದ ಬಳಿಕ ಇದನ್ನು ಬದಲಾಯಿಸಿ ಕೊಂಡೆವು. ಭಾರತ ಮತ್ತು ಕರ್ನಾಟಕದ ಕಾವ್ಯ ವಿಶಿಷ್ಟವಾಗಿ ಬೆಳೆದು ಬಂದಿದೆ ಎಂದು ಹೇಳಿದರು.

ಸಾಂಪ್ರದಾಯಿಕ ಶಿಕ್ಷಣ ಪದ್ಧತಿ ನಶಿಸಿತು: ಭಾರತೀಯರಿಗೆ ಯಾವ ಶಿಕ್ಷಣ ಕೊಡಬೇಕೆಂದು 1833ರಲ್ಲಿ ಮೆಕಾಲೆ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಯಿತು. ಅದರಲ್ಲಿ ನಾಲ್ವರು ವಿದೇಶಿಯರು, ನಾಲ್ವರು ಭಾರತೀಯರಿದ್ದರು. ಸಮಿತಿಯಲ್ಲಿದ್ದ ಭಾರತೀಯರು ವಿದೇಶಿಯರು ಹೇಳಿದ್ದಕ್ಕೆ ತಲೆ ಅಲ್ಲಾಡಿಸಿದರು. ಸಾಂಪ್ರದಾಯಿಕ ಶಿಕ್ಷಣ ಪದ್ಧತಿ ನಶಿಸಿತು ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌, ಮೇಯರ್‌ ಶಿವಕುಮಾರ್‌, ಶಾಸಕ ಸಿ.ಎಸ್‌.ನಿರಂಜನ್‌ ಕುಮಾರ್‌, ನಿಗಮ ಮಂಡಲಿ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸಗೌಡ, ಶಿವಕುಮಾರ್‌, ದಸರ ಉಪ ವಿಶೇಷಾಧಿಕಾರಿ ಡಾ.ಎಂ.ದಾಸೇಗೌಡ, ದಸರಾ ಕವಿಗೋಷ್ಠಿ ಕಾರ್ಯಾಧ್ಯಕ್ಷ ಡಾ.ಎಂ.ಜಿ. ಮಂಜುನಾಥ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.