ಜೆಡಿಎಸ್ ಶಾಸಕರನ್ನು ತಯಾರಿಸುವ ಕಾರ್ಖಾನೆ: ಹೆಚ್.ಡಿ.ರೇವಣ್ಣ

ಕುಮಾರಸ್ವಾಮಿಯೊಂದಿಗೆ ನಾನು ಕಚ್ಚಾಡುತ್ತೇನೆ ಎಂಬುದು ಭ್ರಮೆ

Team Udayavani, Jan 29, 2023, 8:41 PM IST

1-dsadasd

ಪಿರಿಯಾಪಟ್ಟಣ: ಜೆಡಿಎಸ್‌ ಪಕ್ಷ ಶಾಸಕರನ್ನು ತಯಾರು ಮಾಡುವ ಕಾರ್ಖಾನೆ ಮೊದಲು ನಮ್ಮ ಕಾರ್ಖಾನೆಯಲ್ಲಿ ತಯಾರಾದವರೆ ಈಗ ನಮ್ಮನ್ನು ಬೈದುಕೊಂಡು ಓಡಾಡುತ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ತಿಳಿಸಿದರು.

ತಾಲೂಕಿನ ಕಣಗಾಲು ಗ್ರಾಮದಲ್ಲಿ ಆಯೋಜಿಸಿದ ಜೆಡಿಎಸ್‌ ರೈತ ಚೈತನ್ಯ ಯಾತ್ರೆ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿ, ಮೀಸಲಾತಿ ಪರಿಕಲ್ಪನೆ ಬರುವ ಮೊದಲೇ ದೇವೇಗೌಡರು ಮುಸಲ್ಮಾನರು, ಉಪ್ಪಾರ, ನಾಯಕ ಸಮುದಾಯ ಸೇರಿದಂತೆ ಬಹುತೇಕ ಹಿಂದುಳಿದ ಸಮುದಾಯಗಳಿಗೆ ಮೊದಲು ಶೇ. 4 ಮೀಸಲಾತಿ ನೀಡಿದರು. ಈಗ ಇದೇ ಮೀಸಲಾತಿಯನ್ನು ಕಾಂಗ್ರೆಸ್ ಮತ್ತು ಬಿಜೆಪಿಯವರು ನಾವು ಕೊಟ್ಟಿದ್ದು ಎನ್ನುತ್ತಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಒಂದಾಗಿ ದೇವೇಗೌಡರನ್ನು ತುಮಕೂರಿನಲ್ಲಿ, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಿದರು ಇಂಥವರು ನಮ್ಮನ್ನು ಕೋಮುವಾದಿಗಳ ಜೊತೆ ಕೈಜೋಡಿಸುತ್ತಾರೆ ಇವರದು ಕುಟುಂಬ ರಾಜಕಾರಣ ಎನ್ನುತ್ತಾರೆ. ಕಾಂಗ್ರೆಸ್ ನವರು ರಾಷ್ಟ್ರೀಯ ನಾಯಕರನ್ನು ಕರೆಸಿಕೊಂಡು ಬಂದು ಮತ್ತು ಬಿಜೆಪಿಯವರು ಅಮಿತ್ ಶಾ ರನ್ನು ಕರೆಸಿ ಜೆಡಿಎಸ್ 25 ಕ್ಷೇತ್ರ ಮಾತ್ರ ಗೆಲ್ಲಲು ಸಾಧ್ಯ ಎಂದು ಭಾಷಣ ಮಾಡಿಸುತ್ತಾರೆ ನಮ್ಮ ಶಕ್ತಿ ಕೇವಲ 25 ಆದರೆ ನಮ್ಮ ಮೇಲೆ ಭಯ ಏಕೆ ಇವರಿಗೆ. ಜೆಡಿಎಸ್ ಯಾವಾಗಲೂ ರೈತರ ಪರ ನಿಲ್ಲುವ ಪಕ್ಷ ಈ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ ಎಂದರು.

ಪಿರಿಯಾಪಟ್ಟಣದಲ್ಲಿ ಕೆ.ಎಸ್. ಕಾಳಮರೀಗೌಡ, ಕೆ.ವೆಂಕಟೇಶ್ ರವರು ನಮ್ಮ ಕಾರ್ಖಾನೆಯಲ್ಲಿ ತಯರಾದ ಶಾಸಕರು. ನಾನು ನಮ್ಮ ಕುಟುಂಬ ಈ ಮಟ್ಟಕ್ಕೆ ಬೆಳೆಯಲು ದೇವರ ಕೃಪೆ. ರೈತರಿಗೆ ಹಾಗೂ ಜನರಿಗೆ ನೀಡಿದ ಮಾತನ್ನು ಉಳಿಸಿಕೊಂಡ ಏಕೈಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು. ಬಡವರಿಗೆ, ಅಶಕ್ತರಿಗೆ ಸೇರಿದಂತೆ ರೈತರಿಗೆ ಬದುಕು ಕಟ್ಟಿಕೊಳ್ಳುವುದಕ್ಕೆ ಹೋರಾಟ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ, ಈಗ 200 ಯೂನಿಟ್ ವಿದ್ಯುತ್ ಉಚಿತ ಕೊಡುತ್ತೇವೆ ಎನ್ನುತ್ತಾರೆ ಆದರೆ ಅವರೇ ಅಧಿಕಾರದಲ್ಲಿದ್ದಾಗ ಏನು ಮಾಡುತ್ತಿದ್ದರು. ನಾನು ಇಂಧನ ಸಚಿವನಾಗಿದ್ದಾಗ ನಾನು ಕೆಲಸ 48 ಸಾವಿರ ಕೋಟಿ ನಷ್ಟದಲ್ಲಿದೆ. ರೇವಣ್ಣ ಕುಮಾರಸ್ವಾಮಿ ಒಡೆದಾಡುತ್ತಾರೆ ಎಂದರು.

ಅಣ್ಣ ತಮ್ಮ ಕಚ್ಚಾಡುತ್ತಾರೆ ಎಂಬುದು ಭ್ರಮೆ
ನಾನಾಗಲಿ, ಕುಮಾರಸ್ವಾಮಿಯವರಾಗಲಿ ಕಚ್ಚಾಡುತ್ತಾರೆ ಜೆಡಿಎಸ್ ಒಡೆದೋಗುತ್ತದೆ ಎಂಬುದು ವಿರೋಧ ಪಕ್ಷದವರ ಭ್ರಮೆ ನಾನ್ಯಾವತ್ತೂ ಒಡೆದಾಡುವುದಿಲ್ಲ, ಹಾಸನದಲ್ಲಿ ಜೆಡಿಎಸ್ ಪಕ್ಷದ ಶಾಸಕರು ಗೆಲುವು ಸಾಧಿಸುತ್ತಾರೆ. ಯಾರೂ ಇದರ ಬಗ್ಗೆ ಗೊಂದಲ ಮಾಡಿಕೊಳ್ಳಬೇಡಿ.
ಮುಂದಿನ ಚುನಾವಣೆಯಲ್ಲಿ ಜನರು ಬಹುಮತದಿಂದ ಜೆಡಿಎಸ್‌ ಅಧಿಕಾರಕ್ಕೆ ತಂದರೆ ಕೊಟ್ಟ ಮಾತಿನಂತೆ ಕುಮಾರಸ್ವಾಮಿ ಯವರು ಪಂಚರತ್ನ ಯೋಜನೆಗಳ ಜಾರಿಗೆ ತರಲಿದ್ದಾರೆ ಎಂದರು.

ಪಿರಿಯಾಪಟ್ಟಣ ಕ್ಷೇತ್ರದ ಶಾಸಕರು ಜನರ ಪರ ಸೇವೆ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಶಾಸಕ ಕೆ.ಮಹದೇವ್‌ ಮಾತನಾಡಿ ಎಚ್‌.ಡಿ.ದೇವೇಗೌಡ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾನು ಬಂದಿದ್ದೇನೆ. ಬೇರೆ ಪಕ್ಷದವರು ಹಣದ ಆಮಿಷ ಒಡ್ಡಿದರೂ ನಿರಾಕರಣೆ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ನಾನು ಜೆಡಿಎಸ್‌ ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ. ತಾಲೂಕಿನಲ್ಲಿ ಕೆಲಸ ಮಾಡಿಲ್ಲ ಎಂದು ದೂರಬಾರದು ಎಂಬ ಭಾವನೆಯಿಂದ ಬಿಜೆಪಿ ಮಂತ್ರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಿದ್ದೇನೆ. ಜೆಡಿಎಸ್‌ ಭದ್ರಕೋಟೆಯನ್ನು ಒಡೆಯಲು ವಿರೋಧಿಗಳು ಹುನ್ನಾರ ಮಾಡುತ್ತಿದ್ದಾರೆ. ಮಾಜಿ ಶಾಸಕರು ನನ್ನ ಅನುದಾನದಲ್ಲಿ ಅಭಿವೃದ್ಧಿ ಮಾಡುತ್ತಿದ್ದಾರೆ ಎಂದು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಸತ್ಯ ಏನೆಂಬುದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಗೊತ್ತಿದೆ. ಮುಂದಿನ ಚುನಾವಣೆಯಲ್ಲಿ ನನ್ನನ್ನು ಕಳೆದುಕೊಂಡರೆ ನನಗೆ ನಷ್ಟವಿಲ್ಲ ನಮ್ಮ ಪಕ್ಷದ ಕಾರ್ಯಕರ್ತರಿಗೆ ನಷ್ಟ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಅದನ್ನು ಬಿಟ್ಟು ಅವರಿಂದ ಹಣ ಪಡೆದು ಮಾರಾಟವಾದರೆ ನಿಮ್ಮ ಮನೆಗಳು ಆಳಾಗುತ್ತವೆ ಆದ್ದರಿಂದ ಹಣದ ಆಮಿಷಕ್ಕೆ ಬಲಿಯಾಗದೆ ಜೆಡಿಎಸ್ ಪಕ್ಷವನ್ನು ಬೆಂಬಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಮೈಮುಲ್‌ ಅಧ್ಯಕ್ಷ ಪಿ.ಎಂ ಪ್ರಸನ್ನ, ಜೆಡಿಎಸ್‌ ತಾಲೂಕು ಘಟಕದ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಮುಖಂಡರಾದ ಐಲಾಪುರ ರಾಮು, ಹೇಮಂತ್‌, ರುದ್ರಮ್ಮ, ಗೀತಾ ಮಹದೇವ್, ಮೋಹನ್ ರಾಜ್, ಚಂದ್ರಮ್ಮ, ಗೋವಿಂದೇಗೌಡ, ಚಂದ್ರೇಗೌಡ, ಕೃಷ್ಣಪ್ಪ, ಆನಂದ, ಕುಮಾರ್ ಶೆಟ್ಟಿ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.