ಕೋವಿಡ್ ಸಂಕಷ್ಟದ ಮಧ್ಯೆ ನಕಲಿ ವೈದ್ಯರ ಹಾವಳಿ
ಪಟ್ಟಣ, ಗ್ರಾಮೀಣ ಭಾಗದಲ್ಲಿ ನಕಲಿ ಕ್ಲಿನಿಕ್ಗಳ ದಂಧೆ ! ರೋಗಿಗಳಿಂದ ದುಪ್ಪಟ್ಟು ಹಣ ವಸೂಲಿ, ನಿಯಮ ಉಲ್ಲಂಘನೆ
Team Udayavani, May 13, 2021, 5:22 PM IST
ಸತೀಶ್ ದೇಪುರ
ಮೈಸೂರು: ಕೊರೊನಾ 2ನೇ ಅಲೆ ಎಲ್ಲೆಡೆ ವ್ಯಾಪಿಸಿರುವ ಬೆನ್ನಲ್ಲೆ ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಸೋಂಕಿಗೆ ಹೆದರಿ ಕ್ಲಿನಿಕ್ಗೆ ಬರುವ ರೋಗಿಗಳಿಂದ ದುಪ್ಪಟ್ಟು ಹಣ ವಸೂಲಿ ಮಾಡುವ ದಂಧೆ ವ್ಯಾಪಕವಾಗಿ ಹರಡಿದೆ.
ನಕಲಿ ಪದವಿ ಪಡೆದು, ಹಣ ಮಾಡುವಾಸೆಗೆ ಬಿದ್ದಿರುವ ನಕಲಿ ವೈದ್ಯರು ಗ್ರಾಮೀಣ ಭಾಗ ಗಳನ್ನು ಆಯ್ದುಕೊಂಡು ಸುಲಭ ಸಂಪಾದನೆಗೆ ಇಳಿದಿರುವ ಇವರ ಜಾಲ ಜಿಲ್ಲೆಯಲ್ಲಿ ಆಳವಾಗಿ ಬೇರೂರಿದೆ. ಗ್ರಾಮಾಂತರ ಭಾಗಗಳಲ್ಲಿ ಜನರ ಅಸಹಾಯಕತೆ ಹಾಗೂ ಅರಿವಿನ ಕೊರತೆಯನ್ನೇ ಬಂಡವಾಳ ಮಾಡಿಕೊಂಡ ನಕಲಿ ವೈದ್ಯರು ಹಾಗೂ ಕೆಲ ಆಯುರ್ವೇದ ವೈದ್ಯರು ಜ್ವರ, ಶೀತ ಸೇರಿದಂತೆ ಮತ್ತಿತರ ಕಾಯಿಲೆಗೆ ತುತ್ತಾಗಿ ಬರುವ ಜನರಿಗೆ ಕೆಲ ಔಷಧ, ಗ್ಲೂಕೋಸ್ ನೀಡಿ ದುಪ್ಪಟ್ಟು ಹಣ ವಸೂಲಿ ಮಾಡುವ ದಂಧೆ ಜಿಲ್ಲೆಯ ಗ್ರಾಮಾಂತರ ಭಾಗಗಳಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ. ಈ ನಡುವೆ ಜನರಲ್ಲಿರುವ ಕೊರೊನಾ ಆತಂಕವನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ನಕಲಿ ವೈದ್ಯರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ, ಹೋಬಳಿ ಕೇಂದ್ರಗಳಲ್ಲಿ ಸಣ್ಣದೊಂದು ಕ್ಲಿನಿಕ್ ತೆರೆದು, ರೋಗಿಗಳಿಗೆ ಚಿಕಿತ್ಸೆ ನೀಡುವುದು ಹೆಚ್ಚಾಗಿದೆ.
ತಾವು ನೀಡುವ ಇಂಜೆಕ್ಷನ್, ಮಾತ್ರೆ ಹಾಗೂ ಗ್ಲೋಕೋಸ್ಗೆ ರೋಗಿಗಳಿಂದ ದುಪ್ಪಟ್ಟು ಹಣ ಪಡೆದು ವಂಚಿಸಲಾಗುತ್ತಿದೆ. ಇತ್ತ ಚಿಕಿತ್ಸೆ ಪಡೆದ ಹಲವರು ಆರೋಗ್ಯದಲ್ಲಿ ಏರುಪೇರಾಗಿ ತಾಲೂಕು ಹಾಗೂ ನಗರದ ಆಸ್ಪತ್ರೆಗಳತ್ತ ಓಡುವಂತಾಗಿದೆ. ಎರಡು ಪ್ರಕರಣ ಬೆಳಕಿಗೆ: ಇತ್ತೀಚೆಗೆ ನಂಜನಗೂಡು ತಾಲೂಕು ಹುರಾ ಗ್ರಾಮದಲ್ಲಿ ಆಯುರ್ವೇದಿಕ್ ವೈದ್ಯನೆಂದು ಹೇಳಿಕೊಂಡು ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ಕೇರಳ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿ, ಕ್ಲಿನಿಕ್ ಮುಚ್ಚಿಸಿದ್ದರೆ, ಸರಗೂರು ತಾಲೂಕಿನಲ್ಲಿ ಆಯುರ್ವೇದಿಕ್ ವೈದ್ಯ ಅಲೋಪತಿ ಚಿಕಿತ್ಸೆ ನೀಡುತ್ತಿದ್ದು ಬೆಳಕಿಗೆ ಬಂದು ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಈ ಹಿಂದೆ ಪಿರಿಯಾಪಟ್ಟಣ, ಕೆ.ಆರ್.ನಗರ ಹಾಗೂ ಹುಣಸೂರು ತಾಲೂಕುಗಳಲ್ಲಿಯೂ ಈ ಪ್ರಕರಣಗಳು ಬೆಳಕಿಗೆ ಬಂದಿದ್ದವು.
ಆಯುರ್ವೇದ ವೈದ್ಯರಿಂದಲೂ ಚಿಕಿತ್ಸೆ: ಕೋವಿಡ್ ರೋಗಿಗಳಿಗೆ ತಜ್ಞ ಖಾಸಗಿ ಅಥವಾ ಸರ್ಕಾರಿ ವೈದ್ಯರೇ ಚಿಕಿತ್ಸೆ ನೀಡಬೇಕು ಎಂಬ ನಿಯಮವಿದ್ದರೂ, ಜಿಲ್ಲೆಯ ಎಲ್ಲ ಭಾಗಗಳಲ್ಲೂ ಆಯುರ್ವೇದ ವೈದ್ಯರೇ ಕೊರೊನಾ ಸೋಂಕಿತರು ಹಾಗೂ ಶಂಕಿತರಿಗೆ ಅಲೋಪತಿ ಚಿಕಿತ್ಸೆ ನೀಡುತ್ತಿರುವುದು ಸಾಮಾನ್ಯ ವಾಗಿದೆ. ಹೀಗಿದ್ದರೂ ಜಿಲ್ಲಾಡಳಿತವಾಗಲಿ, ಆರೋಗ್ಯ ಇಲಾಖೆಯಾಗಲಿ ಗಂಭೀರವಾಗಿ ಪರಿಗಣಿಸದೇ ಇರುವುದು ಜನರನ್ನು ಮತ್ತಷ್ಟು ಸಾವಿನ ದವಡೆಗೆ ದೂಡಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!
ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ ಲಕ್ಷ್ಮಿ ನಾರಾಯಣ್ಗೆ ಶೋಕಾಸ್ ನೋಟಿಸ್
ಇಂಗ್ಲೆಂಡ್ ವಿರುದ್ಧ ಟಿ20 ಏಕದಿನ ಸರಣಿಗೆ ತಂಡ ಪ್ರಕಟ; ಮರಳಿದ ಶಿಖರ್ ಧವನ್
ಬರ್ಮಿಂಗ್ಹ್ಯಾಮ್: ಭಾರತಕ್ಕೆ ಸವಾಲಿನ ಟೆಸ್ಟ್
ರಾಷ್ಟ್ರಪತಿ ಚುನಾವಣೆ: ಮುರ್ಮು, ಸಿನ್ಹಾ ನಾಮಪತ್ರ ಸ್ವೀಕೃತ