ನಕಲಿ ನಂದಿನಿ ತುಪ್ಪ ತಯಾರಿಕೆ: ನಾಲ್ವರ ಸೆರೆ


Team Udayavani, Dec 29, 2021, 3:19 PM IST

ನಕಲಿ ನಂದಿನಿ ತುಪ್ಪ ತಯಾರಿಕೆ: ನಾಲ್ವರ ಸೆರೆ

ಮೈಸೂರು: ಇತ್ತೀಚೆಗೆ ಬೆಳಕಿಗೆ ಬಂದ ನಕಲಿ ನಂದಿನಿ ತುಪ್ಪ ತಯಾರಿಕೆ ಮತ್ತು ಮಾರಾಟ ಜಾಲ ಪ್ರಕರಣ ಸಂಬಂಧ ಮೈಸೂರು ದಕ್ಷಿಣ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌. ಚೇತನ್‌ ತಿಳಿಸಿದರು.

ತಮ್ಮ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಕಲಿ ತುಪ್ಪ ತಯಾರಿಕೆ ಮತ್ತು ಮಾರಾಟ ಪ್ರಕರಣ ಬೆಳಕಿಗೆಬರುತ್ತಿದ್ದಂತೆ ಡಿವೈಎಸ್ಪಿ ಸುಮಿತ್‌ ನೇತೃತ್ವದಲ್ಲಿತನಿಖಾ ತಂಡ ರಚಿಸಿ ಕಾರ್ಯಾಚರಣೆ ಆರಂಭಿಸಲಾಗಿತ್ತು. ಮಂಗಳವಾರ ನಡೆದ ಕಾರ್ಯಚರಣೆಯಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ದೂರಿನಂತೆ ಎಫ್ಐಆರ್‌ನಲ್ಲಿ ದಾಖಲಾಗಿದ್ದ ಇಬ್ಬರು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಬಂಧಿತ ನಾಲ್ವರು ಹಲವು ವರ್ಷಗಳಿಂದ ಮೈಸೂರಿನಲ್ಲಿಯೇ ನೆಲೆಸಿರುವ ಬಗ್ಗೆ ತಿಳಿದು ಬಂದಿದ್ದು, ಇನ್ನೂ ಹಲವು ಮಂದಿ ಈ ಜಾಲದಲ್ಲಿಸಕ್ರಿಯವಾಗಿರುವ ಮಾಹಿತಿ ಲಭ್ಯವಾಗಿದೆ ಎಂದರು.

ತೋಟ ಬೋಗ್ಯಕ್ಕೆ ಪಡೆದಿದ್ದರು: ಹೊಸಹುಂಡಿ ಗ್ರಾಮ ಹೊರ ವಲಯದಲ್ಲಿನ ತೋಟವನ್ನು ಬೋಗ್ಯಕ್ಕೆ ಪಡೆದಿದ್ದ ಜಾಲದ ರೂವಾರಿಗಳು, ಕಟ್ಟಡವನ್ನು ನಿರ್ಮಿಸಿ ಘಟಕವನ್ನು ವಿಜಯದಶಮಿ ದಿನದಂದು ಆರಂಭಿಸಿದ್ದಾರೆ. ನಂದಿನಿ ತುಪ್ಪದಿಂದ ಬೇರೆ ಬ್ರ್ಯಾಂಡ್‌ ನ ತುಪ್ಪಗಳನ್ನು ಸಹ ನಕಲು ಮಾಡಿ ಮಾರಾಟ ಮಾಡಲಾಗುತ್ತಿತ್ತು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಜಾಲದಲ್ಲಿದ್ದ ತಯಾರಕ ರೊಂದಿಗೆ ಮಾರಾಟ ಗಾರನ್ನು ಸಹ ಪತ್ತೆ ಹಚ್ಚುವ ಕೆಲಸವಾಗುತ್ತಿದ್ದು, ಶೀಘ್ರದಲ್ಲಿಯೇ ಉಳಿದ ಆರೋಪಿ ಗಳನ್ನು ಬಂಧಿಸಲಾಗುವುದು ಎಂದು ಹೇಳಿದರು.

ಆರೋಪಿಗಳು ತೋಟದಲ್ಲಿ ಕಟ್ಟಡ ನಿರ್ಮಿಸಿರುವ ಬಗ್ಗೆ ಸ್ಥಳೀಯ ಪಟ್ಣಣ ಪಂಚಾಯಿತಿ ಅಧಿಕಾರಿಗಳಿಗೆಯಾವುದೇ ಮಾಹಿತಿ ಇಲ್ಲ. ಜತೆಗೆ ಸ್ಥಳೀಯಪೊಲೀಸ್‌ ಠಾಣೆಯ ಪೊಲೀಸ್‌ ಅಧಿಕಾರಿಗಳುಮತ್ತು ಸಿಬ್ಬಂದಿಯ ಗಮನಕ್ಕೆ ಬಂದಿಲ್ಲ. ಜಮೀನು ನೀಡಿರುವ ಮಾಲಿಕನಿಗೆ ನಕಲಿ ನಂದಿನಿ ತುಪ್ಪ ತಯಾರಿಕೆಯ ಬಗ್ಗೆ ಮಾಹಿತಿ ಇತ್ತೇ ಎಂಬುದರ ಬಗ್ಗೆತನಿಖೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ನಕಲಿ ನಂದಿನಿ ತುಪ್ಪ ತಯಾರಿಸುವ ಘಟಕದಲ್ಲಿ ನಕಲಿ ಲೇಬಲ್‌, ಯಂತ್ರೋಪಕರಣದೊಂದಿಗೆ 10 ಟನ್‌ ತುಪ್ಪ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಶಿವಕುಮಾರ್‌ ಆರ್‌.ದಂಡಿನ, ಡಿವೈಎಸ್ಪಿ ಸುಮಿತ್‌ ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.