ಅನಾಹುತಕ್ಕೆ ಆಹ್ವಾನ ನೀಡುವ ರಸ್ತೆ ಒಕ್ಕಣೆ


Team Udayavani, Dec 21, 2020, 3:21 PM IST

ಅನಾಹುತಕ್ಕೆ ಆಹ್ವಾನ ನೀಡುವ ರಸ್ತೆ ಒಕ್ಕಣೆ

ಎಚ್‌.ಡಿ.ಕೋಟೆ: ಇದೀಗ ಸುಗ್ಗಿ ಸಮಯ ವಾಗಿದ್ದು, ರಸ್ತೆಯಲ್ಲೇ ಒಕ್ಕಣೆ ಮಾಡುತ್ತಿರುವುದು ಕಂಡು ಬರುತ್ತಿದ್ದು, ವಾಹನಗಳಸಂಚಾರಕ್ಕೆ ವ್ಯತ್ಯಯವಾಗುತ್ತಿದೆ. ಆದರೂ ಯಾರೊಬ್ಬರೂ ಇದನ್ನು ತಡೆಯಲು ಗಮನ ಹರಿಸುತ್ತಿಲ್ಲ.

ತಾಲೂಕಿನ ಚೊಕ್ಕೋಡನಹಳ್ಳಿ ವ್ಯಾಪ್ತಿಗೆಒಳಪಡುವ ಮೇಟಿಕುಪ್ಪೆ ಮತ್ತು ಜಿ.ಎಂ.ಹಳ್ಳಿ ಮಾರ್ಗದ ಮುಖ್ಯರಸ್ತೆಯಲ್ಲೇ ಹುರಳಿ ಸೇರಿದಂತೆ ಇನ್ನಿತರ ಧಾನ್ಯಗಳನ್ನು ಒಕ್ಕಣೆ ಮಾಡಲಾಗುತ್ತಿದೆ. ಮುಖ್ಯರಸ್ತೆ ಮಾರ್ಗ ಮಧ್ಯದಲ್ಲೇ ರೈತರು ರಾಶಿ ರಾಶಿ ಉರಳಿ ಗಿಡಗಳನ್ನು ಚೆಲ್ಲಾಪಿಲ್ಲಿಯಾಗಿ ಸುರಿದು ಒಕ್ಕಣೆ ಮಾಡುತ್ತಿದ್ದಾರೆ. ಇದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೊಂದರೆ ಆಗುತ್ತಿದ್ದರೂ ಗ್ರಾಮ ಪಂಚಾಯ್ತಿ ಅಧಿಕಾರಿಗಳಾಗಲಿ, ಪೊಲೀಸರಾಗಿ ಕ್ರಮಕೈಗೊಂಡಿಲ್ಲ. ತಾಲೂಕಿನಲ್ಲಿ ಹಲವುಕಡೆ ರಸ್ತೆ ಮಧ್ಯದಲ್ಲೇ ಬೆಳೆಗಳನ್ನು ಒಕ್ಕಣೆ ಮಾಡಲಾಗುತ್ತಿದೆ. ಇದರಿಂದ ದ್ವಿಚಕ್ರ ವಾಹನ ಸವಾರರು ಜಾರಿ ಬಿದ್ದು ಗಾಯ ಮಾಡಿಕೊಂಡಿರುವ ನಿದರ್ಶನ ಕೂಡ ಇದೆ. ತೀವ್ರವಾಗಿ ಆಯತಪ್ಪಿದರೆ ಪ್ರಾಣ ಹಾನಿಯಾಗುವ ಸಂಭವ ಇದೆ.

ತಾಲೂಕಿನಲ್ಲಿ ಈ ರೀತಿ ರಸ್ತೆಯಲ್ಲಿ ಒಕ್ಕಣೆ ಮಾಡುತ್ತಿರುವುದರ ವಿರುದ್ಧ ತಾಲೂಕು ಆಡಳಿತ ಕ್ರಮ ಕೈಗೊಳ್ಳಬೇಕಿದೆ. ಸ್ಥಳೀಯ ಮಟ್ಟದಲ್ಲಿ ಅಧಿಕಾರಿಗಳು ರೈತನ್ನು ಮನವೊಲಿಸಿ,ಒಕ್ಕಣೆಗೆರಸ್ತೆಯನ್ನುಬಳಸಿಕೊಳ್ಳದಂತೆನೋಡಿಕೊಳ್ಳಬೇಕು. ಅವಘಡಕ್ಕೆ ಆಸ್ಪದ ನೀಡದಂತೆ ಸುಗಮ ಸಂಚಾರಕ್ಕೆ ಅವಕಾಶಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಒಕ್ಕಣೆ ಮಾಡಲಿಕ್ಕಾಗಿಯೇ ಗ್ರಾಮ ಪಂಚಾಯ್ತಿ ವತಿಯಲ್ಲಿ ಸ್ಥಳ ಕಲ್ಪಿಸಲುಅವಕಾಶವಿದೆ. ಸಾಮೂಹಿಕ ಒಕ್ಕಣೆನಿರ್ಮಾಣಕ್ಕಾಗಿ ಉದ್ಯೋಗಖಾತ್ರಿ ಸೇರಿದಂತೆಮತ್ತಿತರರ ಅನುದಾನ ಬಳಸಿಕೊಳ್ಳಬಹು ದಾಗಿದೆ.. ಇದನ್ನು ಸಮರ್ಪಕವಾಗಿ ಬಳಸಿ ಕೊಳ್ಳಲು ಅಧಿಕಾರಿಗಳು ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.

ರೈತರ ಕೂಡ ಹಿಂದಿನ ವಾಡಿಕೆಯಂತೆ ತಮ್ಮ ಜಮೀನು, ಹೊಲಗಳಲ್ಲಿ ಕಣ ನಿರ್ಮಿಸಿ ಕೊಂಡು ಸುಗ್ಗಿ ಕಾರ್ಯ ಕೈಗೊಳ್ಳಬೇಕು. ರಸ್ತೆಯಲ್ಲಿ ಒಕ್ಕಣೆ ಮಾಡಿದರೆ ಸುಲಭವಾಗುತ್ತದೆ ಎಂದು ಭಾವಿಸಿ ವಾಹನ ಸವಾರರಿಗೆ ತೊಂದರೆ ನೀಡಬಾರದು ಎಂದು ನಾಗರಿಕರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.