ಮದ್ಯದಂಗಡಿ ಪರವಾನಗಿ ರದ್ದತಿಗೆ ರೈತ ಸಂಘ ಧರಣಿ


Team Udayavani, Feb 12, 2019, 7:26 AM IST

m2-madya.jpg

ಮೈಸೂರು: ನಂಜನಗೂಡು ತಾಲೂಕು ಹುಣಸನಾಳು ಗ್ರಾಮದಲ್ಲಿ ಮದ್ಯದ ಅಂಗಡಿಗೆ ಪರವಾನಗಿ ನೀಡಿರುವುದನ್ನು ರದ್ದುಪಡಿಸುವಂತೆ ಒತ್ತಾಯಿಸಿ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಹುಣಸನಾಳು ಗ್ರಾಮದಲ್ಲಿ ಮದ್ಯದ ಅಂಗಡಿ ತೆರೆಯಲು ನೀಡಿರುವ ಪರವಾನಗಿಯನ್ನು ರದ್ದುಪಡಿಸುವಂತೆ ಕಳೆೆದ ಮೂರು ತಿಂಗಳಿಂದಲೂ ಗ್ರಾಮಸ್ಥರು ಹಂತ ಹಂತವಾಗಿ ತಾಲೂಕು, ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಪರವಾನಗಿ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್‌, ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜ್‌, ನಂಜನಗೂಡು ತಾಲೂಕು ರೈತಸಂಘದ ಅಧ್ಯಕ್ಷ ಬಕ್ಕಳ್ಳಿ ನಂಜುಂಡಸ್ವಾಮಿ, ಪ್ರಧಾನ ಕಾರ್ಯದರ್ಶಿ ಶಿರಮಳ್ಳಿ ಸಿದ್ದಪ್ಪ,ಯಜಮಾನ್‌ ಸಿದ್ದರಾಜು, ಸಿದ್ದಪ್ಪಶೆಟ್ಟಿ ಇತರರು ಉಪಸ್ಥಿತರಿದ್ದರು.

ಪ್ರೊ.ಎಂಡಿಎನ್‌ ನೆನಪಿಗೆ ವೈಚಾರಿಕ ಸಮಾವೇಶ
ಮೈಸೂರು:
ರೈತ ಚಳವಳಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸಿದ ದೂರದೃಷ್ಟಿಯ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ 83ನೇ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿಗಳ ಆಶ್ರಯದಲ್ಲಿ ಫೆ.13ರಂದು ಬೆಂಗಳೂರಿನಲ್ಲಿ ಕೃಷಿ ಬಿಕ್ಕಟ್ಟು ಹಾಗೂ ಯುವಜನರ ತಲ್ಲಣಗಳು ಮತ್ತು 2019ರ ಚುನಾವಣೆಗೆ ಗ್ರಾಮೀಣ ಜನರ ಅಜೆಂಡಾ ಕುರಿತು ವೈಚಾರಿಕ ಸಮಾವೇಶ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ವಸಂತನಗರದಲ್ಲಿರುವ ಅಂಬೇಡ್ಕರ್‌ ಭವನದಲ್ಲಿ ನಡೆಯುವ ಕಾರ್ಯಕ್ರಮವನ್ನು ಉತ್ತರ ಪ್ರದೇಶದ ರೈತ ನಾಯಕ ಯದುವೀರ್‌ ಸಿಂಗ್‌ ಉದ್ಘಾಟಿಸಲಿದ್ದು, ರಾಜ್ಯ ರೈತಸಂಘದ ವರಿಷ್ಠರಾದ ಸುನೀತಾ ಪುಟ್ಟಣ್ಣಯ್ಯ ಅಧ್ಯಕ್ಷತೆವಹಿಸಲಿದ್ದಾರೆ.

ಬದಲಾಗುತ್ತಿರುವ ಕೃಷಿ ಬಿಕ್ಕಟ್ಟಿನ ಪರಿಸ್ಥಿತಿ ಹಾಗೂ ಪ್ರೊ.ಎಂಡಿಎನ್‌ ಚಿಂತನೆಗಳ ಪ್ರಸ್ತುತತೆ ಕುರಿತು ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಪ್ರೊ.ಪ್ರಕಾಶ್‌ ಕಮ್ಮರಡಿ ಮಾತನಾಡಲಿದ್ದಾರೆ. ಪ್ರೊ.ಕೆ.ಸಿ.ಬಸವರಾಜ್‌ ಬರೆದಿರುವ ವಿಶ್ವ ರೈತ ಸಂತ ಪ್ರೊ.ಎಂ.ಸಿ.ನಂಜುಂಡಸ್ವಾಮಿ ಪುಸ್ತಕವನ್ನು ಚುಕ್ಕಿ ನಂಜುಂಡಸ್ವಾಮಿ ಬಿಡುಗಡೆ ಮಾಡಲಿದ್ದಾರೆ.

ಸಾಹಿತಿ ದೇವನೂರ ಮಹಾದೇವ, ರೈತ ಮುಖಂಡರಾದ ಕೆ.ಟಿ.ಗಂಗಾಧರ್‌, ಪ್ರೊ.ಕೆ.ಸಿ.ಬಸವರಾಜ್‌, ಚಾಮರಸ ಮಾಲೀಪಾಟೀಲ, ಸಿದ್ದಲಿಂಗಯ್ಯ ಅವರು ಪ್ರೊ.ಎಂಡಿಎನ್‌ ಅವರಿಗೆ ನುಡಿ ನಮನ ಸಲ್ಲಿಸಲಿದ್ದಾರೆ. ಉದ್ಘಾಟನಾ ಸಮಾರಂಭದ ನಂತರ ಮೊದಲ ಗೋಷ್ಠಿಯಲ್ಲಿ 2019ರ ಚುನಾವಣೆಗೆ ಗ್ರಾಮೀಣ ಜನರ ಅಜೆಂಡಾ ಏನು? ಎಂಬ ಕುರಿತು ಸ್ವರಾಜ್‌ ಇಂಡಿಯಾದ ಪ್ರೊ.ಯೋಗೇಂದ್ರ ಯಾದವ್‌ ಮತ್ತು ದರ್ಶನ್‌ ಪುಟ್ಟಣ್ಣಯ್ಯ ವಿಷಯ ಮಂಡಿಸಲಿದ್ದು, ಸಾಮಾಜಿಕ ಹೋರಾಟಗಾರ ಎಸ್‌.ಆರ್‌.ಹಿರೇಮs್ ಅಧ್ಯಕ್ಷತೆವಹಿಸಲಿದ್ದಾರೆ.

ಎರಡನೇ ಗೋಷ್ಠಿಯಲ್ಲಿ ಕೃಷಿ ಬಿಕ್ಕಟ್ಟು-ಯುವ ಜನರ ತಲ್ಲಣಗಳು ಮತ್ತು ಪರಿಹಾರಗಳು ಕುರಿತು ಮಹೇಶ್‌ ದೇಶಪಾಂಡೆ, ಶ್ರೀನಿವಾಸ್‌, ನಳಿನಿ ಗೌಡ, ಹರೀಶ್‌,ಪ್ರಜ್ವಲಾ, ಗಾಯತ್ರಿ ವಿಷಯ ಮಂಡನೆ ಮಾಡಲಿದ್ದಾರೆ. ಪ್ರತಿಸ್ಪಂದನೆ ಮತ್ತು ಗ್ರಾಮೀಣ ಉದ್ಯೋಗ ಸೃಷ್ಟಿಯ ಕುರಿತು ಡಾ.ಎಚ್.ವಿ.ವಾಸು ವಿಷಯ ಮಂಡಿಸಲಿದ್ದು, ನಂದಿನಿ ಜಯರಾಂ ಅಧ್ಯಕ್ಷತೆವಹಿಸಲಿದ್ದಾರೆ.

ರಾಜಕಾರಣ ಮತ್ತು ರೈತ ಚಳವಳಿ ಕುರಿತು ಬಡಗಲಪುರ ನಾಗೇಂದ್ರ ವಿಷಯ ಮಂಡಿಸಲಿದ್ದು, ಜೆ.ಎಂ.ವೀರಸಂಗಯ್ಯ ಅಧ್ಯಕ್ಷತೆವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ನೂರು ತಾಲೂಕುಗಳಿಂದ ತಲಾ 5ಜನ ಆಯ್ದ ಯುವಕರು ಭಾಗವಹಿಸಲಿದ್ದಾರೆ. ಜೊತೆಗೆ ರೈತಸಂಘದ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.