ಬೆಳೆ ಕಟಾವಾದ್ರೂ ರೈತರಿಗೆ ಬೆಳೆ ಸಾಲವಿಲ್ಲ: ತರಾಟೆ


Team Udayavani, Oct 31, 2019, 3:00 AM IST

bele-katava

ಮೈಸೂರು: ಮುಂಗಾರು ಪೂರ್ಣಗೊಂಡು ಬೆಳೆಗಳ ಕಟಾವು ಮುಗಿದಿದ್ದರೂ ಬ್ಯಾಂಕ್‌ಗಳು ಬೆಳೆ ಸಾಲ ನೀಡುವಲ್ಲಿ ಶೇ.100ರಷ್ಟು ಗುರಿ ಏಕೆ ತಲುಪಿಲ್ಲ ಎಂದು ಪ್ರತಾಪ್‌ ಸಿಂಹ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ ವತಿಯಿಂದ ಬುಧವಾರ ನಡೆದ ಜಿಲ್ಲಾ ಯೋಜನೆಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮುಂಗಾರು ಪೂರ್ಣಗೊಂಡು ಹಿಂಗಾರು ಸಹ ಮುಗಿಯುತ್ತಾ ಬಂದಿದೆ.

ಈ ನಡುವೆ ಬೆಳೆಗಳು ಕಟಾವಿನ ಹಂತಕ್ಕೆ ಬಂದಿವೆ. ಹೀಗಿದ್ದರೂ, ಅರ್ಹ ರೈತರಿಗೆ ಬೆಳೆ ಸಾಲ ನೀಡುವಲ್ಲಿ ಶೇ.100 ಗುರಿ ತಲುಪಿಸಲಾಗಿಲ್ಲ. ಶೇ.59 ಬೆಳೆ ಸಾಲ ನೀಡಿವೆ ಎಂದಾದರೆ, ಶೇ.100 ಗುರಿ ಎಂದರೆ ಹೇಗೆ ಎಂದು ಪ್ರಶ್ನಿಸಿದರು. ಕೃಷಿ ಸಂಬಂಧಿತ ಸರ್ಕಾರಿ ಯೋಜನೆಗಳು ರೈತರಿಗೆ ತಲುಪಬೇಕು. ಶೀಘ್ರವೇ ಗುರಿ ತಲುಪಲು ಬ್ಯಾಂಕ್‌ ಅಧಿಕಾರಿಗಳು ಕ್ರಮವಹಿಸಿ, ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ತಾಕೀತು ಮಾಡಿದರು.

ಮುದ್ರಾ ಯೋಜನೆ ಸಾಲ: ಲೀಡ್‌ ಬ್ಯಾಂಕ್‌ನ ಜಿಲ್ಲಾ ಮುಖ್ಯ ವ್ಯವಸ್ಥಾಪಕ ವೆಂಕಟಾಚಲಪತಿ ಮಾತನಾಡಿ, ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಶಿಶು- 55 ಸಾವಿರ ರೂ. ಒಳಗೆ, ಕಿಶೋರ್‌-50,000 ರೂ.-5 ಲಕ್ಷ ರೂ.ವರೆಗೆ ಹಾಗೂ ತರುಣ್‌-5 ಲಕ್ಷ ರೂ.-10 ಲಕ್ಷ ರೂ.ವರೆಗೆ ಮೂರು ಹಂತದಲ್ಲಿ ಸಾಲ ನೀಡಲಾಗುವುದು.

ಶಿಶು ಯೋಜನೆಯಡಿ ಜಿಲ್ಲೆಯಲ್ಲಿ 12,740 ಖಾತೆ ತೆರೆಯಲಾಗಿದ್ದು, 61.76 ಕೋಟಿ ರೂ. ಸಾಲ ವಿತರಿಸಲಾಗಿದೆ. ಕಿಶೋರ್‌ ಯೋಜನೆಯಡಿ 11,673 ಖಾತೆಯಾಗಿದ್ದು, 241.11 ಕೋಟಿ ರೂ. ಸಾಲ ನೀಡಲಾಗಿದೆ. ತರುಣ್‌ ಯೋಜನೆಯಡಿ 2,927 ಖಾತೆಯಾಗಿದ್ದು, 255.87 ಕೋಟಿ ರೂ. ಸಾಲ ನೀಡಲಾಗಿದೆ. ಒಟ್ಟಾರೆ 558.74 ಕೋಟಿ ರೂ. ಸಾಲ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸ್ಟ್ಯಾಂಡಪ್‌ ಇಂಡಿಯಾ: “ಸ್ಟ್ಯಾಂಡಪ್‌ ಇಂಡಿಯಾ’ ಯೋಜನೆಯಡಿ ಮೈಸೂರು ಜಿಲ್ಲೆಯಲ್ಲಿ ಸಾಮಾನ್ಯ ವರ್ಗದಿಂದ 173 ಅರ್ಜಿಗಳು (ಮಹಿಳೆಯರು) ಬಂದಿದ್ದು, 42.44 ಕೋಟಿ ರೂ. ಹಣ ಬಿಡುಗಡೆಯಾಗಿದೆ. ಅಲ್ಪಸಂಖ್ಯಾತ ಸಮುದಾಯದಿಂದ 10 ಅರ್ಜಿಗಳು (ಮಹಿಳೆಯರು) ಸಲ್ಲಿಕೆಯಾಗಿದ್ದು 2.17 ಕೋಟಿ ರೂ. ಬಿಡುಗಡೆ.

ಒಬಿಸಿ- 14 ಅರ್ಜಿಗಳು (ಮಹಿಳೆಯರು) 2.69 ಕೋಟಿ ರೂ. ಬಿಡುಗಡೆ. ಎಸ್ಸಿ- ಮಹಿಳೆಯರಿಂದ 10 ಅರ್ಜಿ (2.01 ಕೋಟಿ ರೂ.) ಮತ್ತು ಪುರುಷರಿಂದ 26 ಅರ್ಜಿ (7.90 ಕೋಟಿ ರೂ.) ಬಿಡುಗಡೆಯಾಗಿದೆ. ಎಸ್ಟಿ- ಮಹಿಳೆಯರಿಂದ 10 ಅರ್ಜಿಗಳಿಗೆ 1.91 ಕೋಟಿ ರೂ. ಬಿಡುಗಡೆಯಾಗಿದೆ ಎಂದು ವಿವರಿಸಿದರು.

ಯೋಜನೆ ತಲುಪಿಸಿ: ಸ್ಟ್ಯಾಂಡಪ್‌ ಇಂಡಿಯಾ ಯೋಜನೆ ಪ್ರಗತಿಗೆ ಸಂಬಂಧ ಬೇಸರ ವ್ಯಕ್ತಪಡಿಸಿದ ಸಂಸದ ಪ್ರತಾಪ್‌ಸಿಂಹ, ಮೈಸೂರು ಜಿಲ್ಲೆಯಲ್ಲಿ ಎಸ್ಸಿ-ಎಸ್ಟಿ ಸಮುದಾಯದ ಜನ ಹೆಚ್ಚಿದ್ದಾರೆ. ಆದರೂ ಪ್ರಧಾನಿ ಮೋದಿ ಅವರ ಆಸಕ್ತಿ ಫ‌ಲವಾಗಿ ರೂಪುಗೊಂಡ ಈ ಯೋಜನೆಗೆ ಒಟ್ಟಾರೆ ಕೇವಲ 246 ಅರ್ಜಿಗಳು ಬಂದಿವೆ ಎಂದರೆ ಹೇಗೆ? ಕೇಂದ್ರದ ಯೋಜನೆಗಳನ್ನು ಜನತೆಗೆ ತಲುಪಿಸುವಲ್ಲಿ ಅಧಿಕಾರಿಗಳು ವಿಫ‌ಲರಾಗಿದ್ದಾರೆ ಎಂದು ಕಿಡಿಕಾರಿದರು.

ಸಾಲಮನ್ನಾ: ಜಿಲ್ಲೆಯಲ್ಲಿ ಈವರೆಗೆ ಶೇ. 84.49 ಸಾಲ ಮನ್ನಾ ಆಗಿದೆ. ಶೇ. 15 ಬಾಕಿ ಇದ್ದು, ಶೀಘ್ರವೇ ಶೇ. 100 ಗುರಿ ತಲುಪಲಾಗುವುದು. ಈಗಲೂ ಸಹಾಯವಾಣಿಗೆ ಸಾಲ ಮನ್ನಾ ವಿಚಾರವಾಗಿ ನಿತ್ಯ 20ಕ್ಕೂ ಹೆಚ್ಚು ಕರೆಗಳು ಬರುತ್ತಿವೆ. ಬ್ಯಾಂಕ್‌ ಅಧಿಕಾರಿಗಳು ಇದನ್ನು ಮನಗಾಣಬೇಕು ಎಂದು ವೆಂಕಟಾಚಲಪತಿ ಮನವಿ ಮಾಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಜ್ಯೋತಿ, ನಬಾರ್ಡ್‌ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಮಣಿಕಂಟನ್‌, ಎಸ್‌ಬಿಐನ ಪರಮೇಶ್ವರ್‌ ಇದ್ದರು.

ಪ್ರತಿಯೊಬ್ಬರಿಗೂ ಬ್ಯಾಂಕ್‌ ಖಾತೆ ಇರಲಿ: ಯೋಜನೆಗಳು ಸಮರ್ಪಕವಾಗಿ ತಲುಪಲು ಪ್ರತಿಯೊಬ್ಬರೂ ಖಾತೆ ತೆರೆಯುವಂತೆ ಬ್ಯಾಂಕ್‌ ಅಧಿಕಾರಿಗಳು ಅರಿವು ಮೂಡಿಸಬೇಕು. ಜನಧನ್‌ ಯೋಜನೆಯಡಿ ಜಿಲ್ಲೆಯಲ್ಲಿ ಸಂಪೂರ್ಣ ಬ್ಯಾಂಕ್‌ ಖಾತೆ ಹೊಂದಲು ಅವಕಾಶ ಮಾಡಿಕೊಡಬೇಕು. ಆದರೆ, ಹುಣಸೂರಿನ ಹಿರಿಕ್ಯಾತನಹಳ್ಳಿ ಹಾಗೂ ಬಿಳಿಕೆರೆಯಲ್ಲಿ ಝೀರೊ ಬ್ಯಾಲೆನ್ಸ್‌ ಖಾತೆ ತೆರೆಯಲು ಬ್ಯಾಂಕ್‌ಗಳು ಅವಕಾಶ ನೀಡುತ್ತಿಲ್ಲ ಎಂಬ ದೂರುಗಳಿವೆ ಎಂದು ಸಂಸದರು ಗರಂ ಆದರು.

ಅದಕ್ಕೆ ವೆಂಕಟಾಚಲಪತಿ ಪ್ರತಿಕ್ರಿಯಿಸಿ, ಜೀರೊ ಬ್ಯಾಲೆನ್ಸ್‌ ಖಾತೆಯಿಂದ ಖಾತೆದಾರರ ವಾರ್ಷಿಕ ವಿಮೆಯಲ್ಲಿ ತೊಂದರೆಯಾಗಬಹುದು. ಸಮಸ್ಯೆ ನಿವಾರಣೆಗೆ ಪರ್ಯಾಯ ಮಾರ್ಗ ಕಂಡುಕೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡಿದರು. ಜಿಲ್ಲೆಯಲ್ಲಿ ಪ್ರತಿ ಪಂಚಾಯಿತಿ ಒಂದೊಂದು ಬ್ಯಾಂಕ್‌ ಶಾಖೆ ಹೊಂದಿರಬೇಕು. ಈ ಮಾದರಿಯಲ್ಲಿ ಎಷ್ಟು ಶಾಖೆಗಳಿವೆ ಎಂದು ಸಂಸದರು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ವೆಂಕಟಾಚಲಪತಿ ಮುಂದಿನ ಸಭೆಯಲ್ಲಿ ಮಾಹಿತಿ ನೀಡಲಾಗುವುದು ಎಂದರು.

10 ರೂ. ನಾಣ್ಯ ಚಲಾವಣೆಗೆ ಅರಿವು ಮೂಡಿಸಿ: ಸಾರ್ವಜನಿಕರಲ್ಲಿ 10 ರೂ. ನಾಣ್ಯ ಚಲಾವಣೆ ವಿಚಾರದಲ್ಲಿ ಇನ್ನೂ ಗೊಂದಲವಿದೆ. ಈ ಬಗ್ಗೆ ಬ್ಯಾಂಕ್‌ಗಳು ಅರಿವು ಮೂಡಿಸುವ ಅಗತ್ಯವಿದೆ. ಎಲ್ಲೆಡೆ ನಾಣ್ಯ ಚಲಾವಣೆ ಮಾಡಬಹುದು ಎಂದು ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ ಸಹಾಯಕ ಪ್ರಧಾನ ವ್ಯವಸ್ಥಾಪಕ ಎನ್‌.ದತ್ತಾತ್ರೇಯ ಹೇಳಿದರು. ನಾಣ್ಯ ಚಲಾವಣೆ ವಿಚಾರದಲ್ಲಿ ಹಲವು ಬ್ಯಾಂಕ್‌ಗಳಲ್ಲೇ ಗೊಂದಲವಿದೆ ಎಂಬುದು ಸಮೀಕ್ಷೆಯಿಂದ ತಿಳಿದುಬಂದಿದೆ.

ಜಿಲ್ಲೆಯ 100 ಬ್ಯಾಂಕ್‌ಗಳನ್ನು ಸಮೀಕ್ಷೆಗೆ ಒಳಪಡಿಸಲಾಯಿತು. ಅದರಲ್ಲಿ ಶೇ. 40 ಬ್ಯಾಂಕ್‌ 10 ರೂ. ನಾಣ್ಯ ಸ್ವೀಕರಿಸುತ್ತಿಲ್ಲ. ಬ್ಯಾಂಕ್‌ಗಳಲ್ಲೇ ಹೀಗಾದರೆ ಇನ್ನು ಜನಸಾಮಾನ್ಯರನ್ನು ಗೊಂದಲದಿಂದ ಹೊರತರಲು ಸಾಧ್ಯವೇ ಎಂದು ಪ್ರಶ್ನಿಸಿದರು. ಈಗಾಗಲೇ ಕೆಎಸ್‌ಆರ್‌ಟಿಸಿ, ಸರ್ಕಾರಿ ಡಿಪೋಗಳಲ್ಲಿ ನಾಣ್ಯ ಸ್ವೀಕರಿಸಲಾಗುತ್ತಿದೆ. ಈ ಬಗ್ಗೆ ಜನರಿಗೆ ಮನವರಿಕೆ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಬ್ಯಾಂಕ್‌ ಅಧಿಕಾರಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.