ಜಮೀನು ಕೊಡಲು ರೈತರ ವಿರೋಧ: ಸಭೆ ವಿಫ‌ಲ


Team Udayavani, Jun 23, 2019, 3:00 AM IST

jameenu

ಮೈಸೂರು: ನಂಜನಗೂಡು ತಾಲೂಕಿನ ತಾಂಡವಪುರ ಕೈಗಾರಿಕಾ ಪ್ರದೇಶದಲ್ಲಿ ಐಲ್ಯಾಂಡ್‌ ಕಂಟೇನರ್‌ ಡಿಪೋ ಸ್ಥಾಪನೆಗೆ ಜಮೀನು ನೀಡಿಲು ನಿರಾಕರಿಸಿದ್ದ ರೈತರೊಂದಿಗೆ ಸಂಸದ ಪ್ರತಾಪಸಿಂಹ ನೇತೃತ್ವದಲ್ಲಿ ಜಿಲ್ಲಾಡಳಿತ ನಡೆಸಿದ ಸಭೆ ವಿಫ‌ಲವಾಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಕೇಂದ್ರ ಸರ್ಕಾರದ ಕಂಟೇನರ್‌ ಕಾರ್ಪೋರೇಷನ್‌ ಆಫ್ ಇಂಡಿಯಾ ವತಿಯಿಂದ ಕಂಟೇನರ್‌ ಡಿಪೋ ಸ್ಥಾಪನೆ ಸಂಬಂಧ ಜಮೀನು ಕಳೆದುಕೊಳ್ಳಲಿರುವ ರೈತರೊಂದಿಗೆ ಜಿಲ್ಲಾಡಳಿತ ಏರ್ಪಡಿಸಿದ್ದ ಸಭೆಯಲ್ಲಿ ಯಾವುದೇ ಒಮ್ಮತಕ್ಕೆ ಬರಲು ಸಾಧ್ಯವಾಗಲಿಲ್ಲ.

ಉದ್ಯೋಗ ಬೇಡಿಕೆ: ಸಭೆಯಲ್ಲಿ ಭಾಗವಹಿಸಿದ್ದ ರೈತರು, ಸ್ವಾಧೀನಪಡಿಸಿಕೊಳ್ಳಲಿರುವ ಜಮೀನಿಗೆ ನಿಗದಿಪಡಿಸಿರುವ ಬೆಲೆಯಲ್ಲಿನ ತಾರತಮ್ಯ ಸರಿಪಡಿಸಿ, ಇಲ್ಲಿ ಸ್ಥಾಪನೆಯಾಗಲಿರುವ ಕಂಟೇನರ್‌ ಡಿಪೋದಲ್ಲಿ ಭೂಮಿ ನೀಡಿದ ರೈತ ಕುಟುಂಬದವರೊಬ್ಬರಿಗೆ ಉದ್ಯೋಗ ನೀಡಬೇಕು ಎಂದು ಬೇಡಿಕೆ ಮುಂದಿಟ್ಟರು.

ಸಭೆ ಬಹಿಷ್ಕಾರ: ಆದರೆ, ಭೂಮಿ ನೀಡುವ ಎಲ್ಲಾ ರೈತ ಕುಟುಂಬದವರಿಗೂ ಇಲ್ಲಿ ಉದ್ಯೋಗ ನೀಡಲು ಸಾಧ್ಯವಾಗುವುದಿಲ್ಲ ಎಂದು ಸಂಸದ ಪ್ರತಾಪಸಿಂಹ, ಕಾನೂನು ವಿಚಾರಗಳನ್ನು ಮನವರಿಕೆ ಮಾಡಿಕೊಡಲು ಮುಂದಾದಾಗ ಕಾನೂನು ಹೋರಾಟದ ಮೂಲಕವೇ ಸೂಕ್ತ ಪರಿಹಾರ ಕಂಡುಕೊಳ್ಳುವುದಾಗಿ ಹೇಳಿ ಕೆಲ ರೈತರು ಸಭೆ ಬಹಿಷ್ಕರಿಸಿ ಹೊರ ನಡೆದರೆ, ಇನ್ನೂ ಕೆಲ ರೈತರು ಮತ್ತೂಮ್ಮೆ ಸಭೆ ಕರೆದು ಮಾತುಕತೆ ಮೂಲಕ ಇತ್ಯರ್ಥ ಪಡಿಸುವಂತೆ ಮನವಿ ಮಾಡಿದರು.

ಕಳೆದ ಸಭೆಯಲ್ಲಿ ರೈತರು ಮಂಡಿಸಿದ್ದ ಬೇಡಿಕೆಗಳ ಬಗ್ಗೆ ಪ್ರಸ್ತಾಪ ಮಾಡಿದ ಸಂಸಪ ಪ್ರತಾಪ ಸಿಂಹ, ಕೇಂದ್ರ ಸರ್ಕಾರದ ಕಂಟೇನರ್‌ ಕಾರ್ಪೋರೇಷನ್‌ ಆಫ್ ಇಂಡಿಯಾಗೆ ಕಂಟೇನರ್‌ ಡಿಪೋ ಸ್ಥಾಪನೆಗಾಗಿ ತಾಂಡವಪುರ ಕೈಗಾರಿಕಾ ಪ್ರದೇಶದಲ್ಲಿ ಕೆಐಎಡಿಬಿ 54 ಮಂದಿ ರೈತರಿಂದ ಸ್ವಾಧೀನಪಡಿಸಿಕೊಂಡಿರುವ 55 ಎಕರೆ ಪ್ರದೇಶದಲ್ಲಿ 102 ಕೋಟಿ ರೂ. ವೆಚ್ಚದಲ್ಲಿ ಕಂಟೇನರ್‌ ಡಿಪೋ ನಿರ್ಮಿಸಲಾಗುತ್ತದೆ ಎಂದರು.

ರೈತರ ಬೇಡಿಕೆಯಂತೆ ಇಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಸಾಧ್ಯವಾಗುವುದಿಲ್ಲ. ಸ್ವಾಧೀನ ಪಡಿಸಿಕೊಂಡ ಭೂಮಿಯ ರೈತರಿಗೆ ಸಮಾನವಾಗಿ ಪರಿಹಾರ ನೀಡಲು ಈ ಹಂತದಲ್ಲಿ ಸಾಧ್ಯವಿಲ್ಲ. ಆದರೆ, ಜಿಲ್ಲಾಧಿಕಾರಿಗಳು, ನಂಜನಗೂಡು ಸುತ್ತಮುತ್ತಲಿನ ಬೇರೆ ಬೇರೆ ಕೈಗಾರಿಕೆಗಳಲ್ಲಿ 54 ರೈತ ಕುಟುಂಬದವರಿಗೂ ಉದ್ಯೋಗ ಕಲ್ಪಿಸಲು ವ್ಯವಸ್ಥೆ ಮಾಡಿದ್ದಾರೆ.

ನಾನು ಕೂಡ ಕೇಂದ್ರ ಸಚಿವರೊಂದಿಗೆ ಮಾತನಾಡಿ, ಡಿಪೋ ಆವರಣದಲ್ಲಿನ ವಾಣಿಜ್ಯ ಸಂಕೀರ್ಣಗಳಲ್ಲಿ ವ್ಯಾಪಾರ ವಹಿವಾಟಿಗೆ ಭೂಮಿ ಕಳೆದುಕೊಂಡ ರೈತರ ಕುಟುಂಬದರಿಗೆ ಆದ್ಯತೆ ನೀಡುವಂತೆ ಮನವಿ ಮಾಡಿದ್ದು, ಅವರು ಒಪ್ಪಿದ್ದಾರೆ. ಮೈಸೂರು ಸೇರಿದಂತೆ ಈ ಭಾಗದ ಅಭಿವೃದ್ಧಿಯ ದೃಷ್ಟಿಯಿಂದ ರೈತರು ಡಿಪೋ ಸ್ಥಾಪನೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಪ್ರಾಣ ಬಿಟ್ಟರೂ ಭೂಮಿ ಬಿಡಲ್ಲ: ಈ ಸಂದರ್ಭದಲ್ಲಿ ಮಾತನಾಡಿದ ರೈತ ಎಂ.ಮಹಾದೇವು, ನಮ್ಮ ಬೇಡಿಕೆಗೆ ಸ್ಪಂದಿಸಿದರೆ ಸರಿ. ಇಲ್ಲದಿದ್ದರೆ ಪ್ರಾಣ ಬಿಟ್ಟರೂ ಭೂಮಿ ಕೊಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಭೂ ಸ್ವಾಧೀನ ಕಾಯಿದೆಯಲ್ಲೇ ನಿಗದಿತ ಕಾಲಾವಧಿಯಲ್ಲಿ ಜಮೀನು ಬಳಕೆ ಮಾಡದೇ ಇದ್ದರೆ ವಶಕ್ಕೆ ಪಡೆಯುವ ಅವಕಾಶ ಇದೆ. ಆದ್ದರಿಂದ ನಮ್ಮ ಜಮೀನು ನಮಗೆ ಕೊಡಿ, ನಾವು ನಮಗೆ ಇಷ್ಟ ಬಂದವರಿಗೆ ಮಾರಾಟ ಮಾಡುತ್ತೇವೆ ಎಂದರು.

ಜಮೀನು ಕಳೆದುಕೊಂಡ ರೈತರ ಕುಟಂಬದವರಿಗೆ ಉದ್ಯೋಗ ನೀಡಲು ಕಾನೂನು ಅಡ್ಡಿಯಾಗಲಿದೆ ಎಂದರೆ, ಅಂತಹ ಕಾನೂನಿಗೆ ತಿದ್ದುಪಡಿ ತಂದು ರೈತರ ಹಿತ ಕಾಪಾಡಬೇಕು ಎಂದು ರೈತ ರಾಜು ಗೌಡ ಆಗ್ರಹಿಸಿದರು.

ಶಾಸಕ ಡಾ.ಯತೀಂದ್ರ, ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌, ಕಂಟೇನರ್‌ ಕಾರ್ಪೋರೇಷನ್‌ ಆಫ್ ಇಂಡಿಯಾದ ಪ್ರಧಾನ ವ್ಯವಸ್ಥಾಪಕ ಅನೂಪ್‌ ದಯಾನಂದ್‌ ಸಾಧು, ಕೆಐಎಡಿಬಿಯ ಜಂಟಿ ನಿರ್ದೇಶಕ ಸುರೇಶ್‌ ಸಭೆಯಲ್ಲಿ ಹಾಜರಿದ್ದರು.

ಕಂಟೇನರ್‌ ಕಾರ್ಪೋರೇಷನ್‌ ಆಫ್ ಇಂಡಿಯಾದ ಐಲ್ಯಾಂಡ್‌ ಕಂಟೇನರ್‌ ಡಿಪೋ ಸ್ಥಾಪನೆಗೆ ಜಮೀನು ನೀಡಲು ಬಹುತೇಕ ಮಂದಿ ಒಪ್ಪಿಗೆ ನೀಡಿದ್ದು, ಉಳಿದವರನ್ನೂ ಸಹ ಒಪ್ಪಿಸಿ, ಡಿಪೋ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು. ಇದರಿಂದ ಈ ಭಾಗದ ಅಭಿವೃದ್ಧಿಯಾಗಲಿದೆ.
-ಪ್ರತಾಪಸಿಂಹ, ಸಂಸದ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.