![1-assam](https://www.udayavani.com/wp-content/uploads/2024/07/1-assam-415x233.jpg)
ಭೂಸಂತ್ರಸ್ತರಿಗೆ ಕೆಲಸ ನೀಡದ್ದಕ್ಕೆ ಪ್ರತಿಭಟನೆ
Team Udayavani, Oct 4, 2020, 1:21 PM IST
![ಭೂಸಂತ್ರಸ್ತರಿಗೆ ಕೆಲಸ ನೀಡದ್ದಕ್ಕೆ ಪ್ರತಿಭಟನೆ](https://www.udayavani.com/wp-content/uploads/2020/10/mysuru-tdy-3-1-620x372.jpg)
ಮೈಸೂರು: ಕಡಿಮೆ ಬೆಲೆಗೆ ರೈತರ ಜಮೀನು ಪಡೆದು, ಸಂತ್ರಸ್ತರ ಮನೆಯವರಿಗೆ ಕಾಯಂ ಉದ್ಯೋಗ ನೀಡುವುದಾಗಿ ಹೇಳಿ ಸ್ಥಳೀಯವಾಗಿ ಕೆಲಸ ನೀಡದೆ, ಬೇರೆ ಕಡೆ ಉದ್ಯೋಗ ನೀಡಿರುವುದನ್ನು ವಿರೋಧಿಸಿ ರೈತ ಸಂಘಟನೆಯ ನೇತೃತ್ವದಲ್ಲಿ ರೈತರುಪ್ರತಿಭಟನೆ ನಡೆಸಲಾಯಿತು.
ಅತ್ಯಂತ ಕಡಿಮೆ ಬೆಲೆಗೆ ಹಿಮ್ಮಾವು ಗ್ರಾಮದ ವಿವಿಧ ಸರ್ವೆ ನಂಬರ್ಗಳಲ್ಲಿ ಏಷಿಯನ್ ಪೇಂಟ್ಸ್ ಕಾರ್ಖಾನೆಗಾಗಿ ಜಮೀನನ್ನು ಬಿಟ್ಟುಕೊಟ್ಟಿದ್ದು, ಇದಕ್ಕೆ ಪ್ರತಿಯಾಗಿ ಕಾರ್ಖಾನೆಯ ಆಡಳಿತ ಮಂಡಳಿಕಾಯಂ ಉದ್ಯೋಗವನ್ನು ಇಲ್ಲಿಯೇ ನೀಡುವುದಾಗಿ ಹೇಳಿತ್ತು. ಅದರಂತೆ 94 ಭೂಸಂತ್ರಸ್ತ ಕುಟುಂಬಗಳ ಪೈಕಿ ಮೊದಲ ಹಂತದಲ್ಲಿ 53 ಮಂದಿಗೆ ಕೆಲಸ ನೀಡಲಾಗಿದೆ. ಎರಡನೇ ಹಂತದಲ್ಲಿ 8 ಮಂದಿಗೆ ಕೆಲಸ ನೀಡಲಾಗುವುದು ಎಂದು ಹೇಳಲಾಗಿದೆ. ಆದರೆ, ಇದುವರೆಗೂ ಉದ್ಯೋಗ ನೀಡಿಲ್ಲ ಎಂದು ರೈತರು ಆರೋಪಿಸಿದರು.
ಮೊದಲ ಹಂತದಲ್ಲಿ ಕೆಲಸವನ್ನು ನೀಡಲಾಗಿರುವ 53 ಮಂದಿಗೆ ಮೈಸೂರಿನ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತರಬೇತಿ ನೀಡಲಾಗಿದೆ. ಪ್ರಸ್ತುತ ತರಬೇತಿ ಮುಗಿಸಿರುವವರಿಗೆ ಬೆಳಗೊಳದ ಘಟಕಕ್ಕೆ ನಿಯೋಜಿಸಲಾಗಿದೆ. ಕಂಪನಿಯ ಈ ನಡೆ ಸಹಜ ನ್ಯಾಯದ ಉಲ್ಲಂಘನೆಯಾಗಿದೆ ಎಂದು ರೈತ ಸಂಘಟನೆಯ ಮುಖಂಡರು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಹಿಮ್ಮಾವು ಸೇರಿದಂತೆ ತಾಂಡ್ಯ ನಂಜನಗೂಡು ಇತ್ಯಾದಿ ಸುತ್ತಮುತ್ತಲ ಕೈಗಾರಿಕಾ ಪ್ರದೇಶಗಳಲ್ಲಿ ಸ್ಥಾಪಿಸಲಾದ ಎಲ್ಲಾ ಕೈಗಾರಿಕೆಗಳು ಸಹ ಇಲ್ಲಿನ ಘಟಕಗಳಲ್ಲಿಯೇ ತಮ್ಮ ಕಾರ್ಖಾನೆಯ ಭೂ ಸಂತ್ರಸ್ತರಿಗೆ ಕಾಯಂ ಉದ್ಯೋಗಗಳನ್ನು ನೀಡಿದೆ. ಭೂಮಿ ಕಳೆದುಕೊಂಡ ಜಾಗದಲ್ಲಿ ಕಾಯಂ ಉದ್ಯೋಗವನ್ನು ನೀಡಿವೆ. ಕಂಪನಿ ನಡೆಸಿದ ವಿವಿಧ ಸಭೆಗಳಲ್ಲಿ ಕೆಲಸವನ್ನು ಇಲ್ಲಿಯೇ ನೀಡುವುದಾಗಿ ಹೇಳಿತ್ತು. ಆದರೆ, ಬೆಳಗೊಳದ ಘಟಕದಲ್ಲಿ ಕೊಡುತ್ತಿರುವುದು ಸಹಜ ನ್ಯಾಯಕ್ಕೆ ವಿರುದ್ಧವಾದದ್ದು. ಸ್ಥಳೀಯರಿಗೆ ಇಲ್ಲಿಯೇ ಉದ್ಯೋಗ ನೀಡಬೇಕು ಎಂದು ಮನವಿ ಮಾಡಿದರು.
ಯಾವುದೇ ಅಂಶಗಳನ್ನು ಪರಿಗಣಿಸದೇ ಕಂಪನಿಯು ಬೆಳಗೊಳದಲ್ಲಿ ಕೆಲಸ ಮಾಡಲು ಸೂಚಿಸಿರುವುದು ಉದ್ಯೋಗವನ್ನು ತಪ್ಪಿಸುವ ಪ್ರಯತ್ನವಾಗಿದೆ. ಕಂಪನಿಯು ಏಕಪಕ್ಷೀಯವಾಗಿ ತೆಗೆದುಕೊಂಡಿರುವ ನಿರ್ಧಾರವನ್ನುಕೈಬಿಡಬೇಕು. ಬೇರೆಕಡೆಕೆಲಸ ಮಾಡಲು ಸಿದ್ಧರಿಲ್ಲ. ನಮ್ಮಗೆ ಇಲ್ಲಿಯೇ ಕೆಲಸವನ್ನು ನೀಡಬೇಕು. ಇಲ್ಲದಿದ್ದಲ್ಲಿ ಹೋರಾಟ ಅನಿವಾರ್ಯ ಎಂದು ರೈತರು ಎಚ್ಚರಿಸಿದರು.
ರೈತ ಮುಖಂಡ ಹೊಸಕೋಟೆ ಬಸವರಾಜು ನೇತೃತ್ವದಲ್ಲಿ ಶ್ರೀಧರ್, ನಾಗರಾಜು, ಮಹದೇವಸ್ವಾಮಿ, ರಮೇಶ್ ಸೇರಿದಂತೆ ಹಲವರು ರೈತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
![1-assam](https://www.udayavani.com/wp-content/uploads/2024/07/1-assam-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ](https://www.udayavani.com/wp-content/uploads/2024/07/Suraj-Revanna-150x90.jpg)
Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ
![Untitled-1](https://www.udayavani.com/wp-content/uploads/2024/07/Untitled-1-21-150x90.jpg)
BJP-JDS 19 ಸಂಸದರಿದ್ರೂ ಬಜೆಟ್ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್
![Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ](https://www.udayavani.com/wp-content/uploads/2024/07/Mysore1-150x84.jpg)
Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ
![Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ](https://www.udayavani.com/wp-content/uploads/2024/07/DKS1-150x84.jpg)
Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ
![Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ](https://www.udayavani.com/wp-content/uploads/2024/07/mane-10-150x80.jpg)
Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ
MUST WATCH
ಹೊಸ ಸೇರ್ಪಡೆ
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.