ಭೂಸಂತ್ರಸ್ತರಿಗೆ ಕೆಲಸ ನೀಡದ್ದಕ್ಕೆ ಪ್ರತಿಭಟನೆ


Team Udayavani, Oct 4, 2020, 1:21 PM IST

ಭೂಸಂತ್ರಸ್ತರಿಗೆ ಕೆಲಸ ನೀಡದ್ದಕ್ಕೆ ಪ್ರತಿಭಟನೆ

ಮೈಸೂರು: ಕಡಿಮೆ ಬೆಲೆಗೆ ರೈತರ ಜಮೀನು ಪಡೆದು, ಸಂತ್ರಸ್ತರ ಮನೆಯವರಿಗೆ ಕಾಯಂ ಉದ್ಯೋಗ ನೀಡುವುದಾಗಿ ಹೇಳಿ ಸ್ಥಳೀಯವಾಗಿ ಕೆಲಸ ನೀಡದೆ, ಬೇರೆ ಕಡೆ ಉದ್ಯೋಗ ನೀಡಿರುವುದನ್ನು ವಿರೋಧಿಸಿ ರೈತ ಸಂಘಟನೆಯ ನೇತೃತ್ವದಲ್ಲಿ ರೈತರುಪ್ರತಿಭಟನೆ ನಡೆಸಲಾಯಿತು.

ಅತ್ಯಂತ ಕಡಿಮೆ ಬೆಲೆಗೆ ಹಿಮ್ಮಾವು ಗ್ರಾಮದ ವಿವಿಧ ಸರ್ವೆ ನಂಬರ್‌ಗಳಲ್ಲಿ ಏಷಿಯನ್‌ ಪೇಂಟ್ಸ್‌ ಕಾರ್ಖಾನೆಗಾಗಿ ಜಮೀನನ್ನು ಬಿಟ್ಟುಕೊಟ್ಟಿದ್ದು, ಇದಕ್ಕೆ ಪ್ರತಿಯಾಗಿ ಕಾರ್ಖಾನೆಯ ಆಡಳಿತ ಮಂಡಳಿಕಾಯಂ ಉದ್ಯೋಗವನ್ನು ಇಲ್ಲಿಯೇ ನೀಡುವುದಾಗಿ ಹೇಳಿತ್ತು. ಅದರಂತೆ 94 ಭೂಸಂತ್ರಸ್ತ ಕುಟುಂಬಗಳ ಪೈಕಿ ಮೊದಲ ಹಂತದಲ್ಲಿ 53 ಮಂದಿಗೆ ಕೆಲಸ ನೀಡಲಾಗಿದೆ. ಎರಡನೇ ಹಂತದಲ್ಲಿ 8 ಮಂದಿಗೆ ಕೆಲಸ ನೀಡಲಾಗುವುದು ಎಂದು ಹೇಳಲಾಗಿದೆ. ಆದರೆ, ಇದುವರೆಗೂ ಉದ್ಯೋಗ ನೀಡಿಲ್ಲ ಎಂದು ರೈತರು ಆರೋಪಿಸಿದರು.

ಮೊದಲ ಹಂತದಲ್ಲಿ ಕೆಲಸವನ್ನು ನೀಡಲಾಗಿರುವ 53 ಮಂದಿಗೆ ಮೈಸೂರಿನ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತರಬೇತಿ ನೀಡಲಾಗಿದೆ. ಪ್ರಸ್ತುತ ತರಬೇತಿ ಮುಗಿಸಿರುವವರಿಗೆ ಬೆಳಗೊಳದ ಘಟಕಕ್ಕೆ ನಿಯೋಜಿಸಲಾಗಿದೆ. ಕಂಪನಿಯ ಈ ನಡೆ ಸಹಜ ನ್ಯಾಯದ ಉಲ್ಲಂಘನೆಯಾಗಿದೆ ಎಂದು ರೈತ ಸಂಘಟನೆಯ ಮುಖಂಡರು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಹಿಮ್ಮಾವು ಸೇರಿದಂತೆ ತಾಂಡ್ಯ ನಂಜನಗೂಡು ಇತ್ಯಾದಿ ಸುತ್ತಮುತ್ತಲ ಕೈಗಾರಿಕಾ ಪ್ರದೇಶಗಳಲ್ಲಿ ಸ್ಥಾಪಿಸಲಾದ ಎಲ್ಲಾ ಕೈಗಾರಿಕೆಗಳು ಸಹ ಇಲ್ಲಿನ ಘಟಕಗಳಲ್ಲಿಯೇ ತಮ್ಮ ಕಾರ್ಖಾನೆಯ ಭೂ ಸಂತ್ರಸ್ತರಿಗೆ ಕಾಯಂ ಉದ್ಯೋಗಗಳನ್ನು ನೀಡಿದೆ. ಭೂಮಿ ಕಳೆದುಕೊಂಡ ಜಾಗದಲ್ಲಿ ಕಾಯಂ ಉದ್ಯೋಗವನ್ನು ನೀಡಿವೆ. ಕಂಪನಿ ನಡೆಸಿದ ವಿವಿಧ ಸಭೆಗಳಲ್ಲಿ ಕೆಲಸವನ್ನು ಇಲ್ಲಿಯೇ ನೀಡುವುದಾಗಿ ಹೇಳಿತ್ತು. ಆದರೆ, ಬೆಳಗೊಳದ ಘಟಕದಲ್ಲಿ ಕೊಡುತ್ತಿರುವುದು ಸಹಜ ನ್ಯಾಯಕ್ಕೆ ವಿರುದ್ಧವಾದದ್ದು. ಸ್ಥಳೀಯರಿಗೆ ಇಲ್ಲಿಯೇ ಉದ್ಯೋಗ ನೀಡಬೇಕು ಎಂದು ಮನವಿ ಮಾಡಿದರು.

ಯಾವುದೇ ಅಂಶಗಳನ್ನು ಪರಿಗಣಿಸದೇ ಕಂಪನಿಯು ಬೆಳಗೊಳದಲ್ಲಿ ಕೆಲಸ ಮಾಡಲು ಸೂಚಿಸಿರುವುದು ಉದ್ಯೋಗವನ್ನು ತಪ್ಪಿಸುವ ಪ್ರಯತ್ನವಾಗಿದೆ. ಕಂಪನಿಯು ಏಕಪಕ್ಷೀಯವಾಗಿ ತೆಗೆದುಕೊಂಡಿರುವ ನಿರ್ಧಾರವನ್ನುಕೈಬಿಡಬೇಕು. ಬೇರೆಕಡೆಕೆಲಸ ಮಾಡಲು ಸಿದ್ಧರಿಲ್ಲ. ನಮ್ಮಗೆ ಇಲ್ಲಿಯೇ ಕೆಲಸವನ್ನು ನೀಡಬೇಕು. ಇಲ್ಲದಿದ್ದಲ್ಲಿ ಹೋರಾಟ ಅನಿವಾರ್ಯ ಎಂದು ರೈತರು ಎಚ್ಚರಿಸಿದರು.

ರೈತ ಮುಖಂಡ ಹೊಸಕೋಟೆ ಬಸವರಾಜು ನೇತೃತ್ವದಲ್ಲಿ ಶ್ರೀಧರ್‌, ನಾಗರಾಜು, ಮಹದೇವಸ್ವಾಮಿ, ರಮೇಶ್‌ ಸೇರಿದಂತೆ ಹಲವರು ರೈತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.