ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ರೈತ ಸಂಘಟನೆಗಳು


Team Udayavani, Dec 2, 2020, 12:33 PM IST

ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ರೈತ ಸಂಘಟನೆಗಳು

ಮೈಸೂರು: ಕೇಂದ್ರದ ರೈತ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ದೌರ್ಜನ್ಯ ಖಂಡಿಸಿ ರೈತ, ಕಾರ್ಮಿಕ, ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಜಿಲ್ಲಾಧಿಕಾರಿ ಕಚೇರಿ ಬಳಿ ಮಂಗಳವಾರ ಜಮಾಯಿಸಿದ ನೂರಾರು ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತರ ಹೋರಾಟಗಳನ್ನು ಕೇಂದ್ರ ಸರ್ಕಾರ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ಕಳೆದ ತಿಂಗಳು 26ರಂದು ದಿಲ್ಲಿ ಚಲೋಗೆ ತೆರಳಿದ್ದ ರೈತರ ಮೇಲೆ ಲಾಠಿ ಚಾರ್ಜ್‌ ಮಾಡಿಸಿದ್ದಾರೆ. ಅಮಾನುಷವಾಗಿ ರೈತರ ಮೇಲೆ ದಾಳಿ ನಡೆಸುವ ಮೂಲಕಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿಗಳಾಗಿವೆ. ಇದು ಕೇವಲ ರೈತ ವಿರೋದಿಯಲ್ಲ, ಪ್ರಜಾಪ್ರಭುತ್ವ ವಿರೋಧಿ ಸರ್ಕಾರವಾಗಿದೆ. ಈ ಕೂಡಲೇ ಪ್ರಧಾನಿ ರೈತರ ಕ್ಷೇಮ ಕೇಳಬೇಕು. ಕೃಷಿ ವಿರೋಧಿ ಕಾಯ್ದೆ ಗಳನ್ನು ಹಿಂಪಡೆಯಬೇಕು. ಸಾಲಮನ್ನಾ, ಬಡ್ಡಿ ಮನ್ನಾ ಸೇರಿದಂತೆಋಣಮುಕ್ತಕಾಯ್ದೆಯನ್ನುಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಪೊಲೀಸರೊಂದಿಗೆ ವಾಗ್ವಾದ: ಪ್ರತಿಭಟನೆ ವೇಳೆ ಪೊಲೀಸರು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ಜಿಲ್ಲಾಧಿಕಾರಿ ಕಚೇರಿಯ100 ಮೀಟರ್‌ ವ್ಯಾಪ್ತಿ ಹೊರಗಡೆ ಪ್ರತಿಭಟನೆ ನಡೆಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ 100 ಮೀಟರ್‌ ವ್ಯಾಪ್ತಿಯ ಹೊರಗೆ ಪ್ರತಿಭಟನೆ ನಡೆಸಬೇಕೆಂದು ಪೊಲೀ ಸರು ಸೂಚನೆ ನೀಡಿದರು. ಇದಕ್ಕೆ ಪ್ರತಿಭಟನಾಕಾರರು ವಿರೋಧ ವ್ಯಕ್ತಪಡಿಸಿದರು.

ಆದರೆ, ಪೊಲೀಸರು ಪ್ರತಿಭಟನೆ ನಡೆಸಲು ಅವಕಾಶ ನೀಡಲಿಲ್ಲ. ಈ ವೇಳೆ ಪೊಲೀಸ ರೊಂದಿಗೆ ವಾಗ್ವಾದಕ್ಕಿಳಿದ ರೈತಮುಖಂಡರು, ನಾವೇನು ಟೆರರಿಸ್ಟ್‌ಗಳಾ ಎಂದು ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಅಲ್ಲೇ ಧರಣಿ ನಡೆಸಿ ದರು.ಪ್ರತಿಭಟನೆಯಲ್ಲಿರೈತಮುಖಂಡರಾದ ಬಡಗಲಪುರ ನಾಗೇಂದ್ರ, ಹೊಸಕೋಟೆ ಬಸವರಾಜ್‌, ಮರಂಕಯ್ಯ, ಸ್ವರಾಜ್‌ ಇಂಡಿಯಾದ ಉಗ್ರ ನರಸಿಂಹೇಗೌಡ, ಕಾರ್ಮಿಕ ಮುಖಂಡ ಚಂದ್ರಶೇಖರ್‌ ಮೇಟಿ, ಹೋರಾ ಟಗಾರ ಪ.ಮಲ್ಲೇಶ್‌ ಇತರರಿದ್ದರು.

ಹುಣಸೂರು: ಹೆದ್ದಾರಿ ತಡೆದು ಪ್ರತಿಭಟನೆ :

ಹುಣಸೂರು: ದೆಹಲಿಯಲ್ಲಿ ರೈತರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತುದಲಿತ ಸಂಘರ್ಷ ಸಮಿತಿಯು ನಗರದಲ್ಲಿ ಕೆಲ ಹೊತ್ತು ಹೆದ್ದಾರಿ ತಡೆದು, ಪ್ರತಿಭಟನೆ ನಡೆಸಿತು.

ನಗರದ ಅರಸು ಪುತ್ಥಳಿ ಬಳಿಯ ಹೆದ್ದಾರಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್‌, ತಾಲೂಕು ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ, ದಸಂಸ ಜಿಲ್ಲಾ ಸಂಚಾಲಕ ರತ್ನಪುರಿ ಪುಟ್ಟಸ್ವಾಮಿ ನೇತೃತ್ವದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ರೈತಚಳವಳಿಯನ್ನುಹತ್ತಿಕ್ಕಲುಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ರೈತ ಸಂಘದ ಕಾರ್ಯದರ್ಶಿ ರಾಮೇಗೌಡ, ದಸಂಸ ಸಮಿತಿಯ ಡೇವಿಡ್‌, ಅತ್ತಿಕುಪ್ಪೆ ರಾಮಕೃಷ್ಣ, ಶಾಂತಮ್ಮ ಮತ್ತಿತರರಿದ್ದರು.

ಕೋಟೆ: ರೈತವಿರೋಧಿ ಕಾಯ್ದೆ ಹಿಂಪಡೆಯಿರಿ :

ಎಚ್‌.ಡಿ.ಕೋಟೆ: ರೈತ ಚಳವಳಿ ಹತ್ತಿಕ್ಕುವ ಉದ್ದೇಶದಿಂದ ದೆಹಲಿ ಚಲೋ ಹಮ್ಮಿ ಕೊಂಡಿದ್ದ ರೈತರ ಮೇಲೆ ಕೇಂದ್ರ ಸರ್ಕಾರವು ಲಾಠಿ ಚಾರ್ಜ್‌ ಮಾಡಿರುವ ಕ್ರಮವನ್ನು ವಿರೋಧಿಸಿ ರಾಜ್ಯ ರೈತ ಸಂಘದ ಹಾಗೂ ಹಸಿರು ಸೇನೆ ತಾಲೂಕುಘಟಕದ ರೈತರು ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.

ಪಟ್ಟಣದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ರೈತ ನಾಯಕರು, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಅಧಿಕಾರಕ್ಕೆ ಬಂದ ನಂತರ ರೈತ ವಿರೋಧ ನೀತಿ ಅನುಸರಿಸುತ್ತಾ, ರೈತರಿಗೆ ಮಾರಕವಾದ ಕಾಯ್ದೆ ಗಳನ್ನು ರೂಪಿಸುತ್ತಿದೆ. ಇದರಿಂದ ಸಣ್ಣ , ಅತಿಸಣ್ಣ ರೈತರ ತುಂಡುಭೂಮಿಗಳು ಉಳ್ಳವರ ಪಾಲಾಗಿ ಅನ್ನದಾತರಕುಟುಂಬಗಳು ಅತಂತ್ರ ಸ್ಥಿತಿ ತಲುಪಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದುಎಂದುಎಚ್ಚರಿಕೆನೀಡಿದರು.ಇದೇವೇಳೆ, ತಹಶೀಲ್ದಾರ್‌ಮೂಲಕರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ತಾಲೂಕು ರೈತ ಸಂಘದ ಅಧ್ಯಕ್ಷ

ಮಹದೇವನಾಯ್ಕ, ಸರಗೂರು ತಾಲೂಕು ರೈತ ಸಂಘದ ಅಧ್ಯಕ್ಷ ಸಿಂಗೇಗೌಡ, ಜೀವಿಕ ಬಸವರಾಜು, ದಸಂಸದ ಆನಗಟ್ಟಿ ದೇವರಾಜು, ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ನಟರಾಜು, ರೈತ ಮುಖಂಡರಾದ ದೇವಮ್ಮ, ಪುಟ್ಟಣ್ಣ, ನಾಗೇಗೌಡ, ನಾಗರಾಜು, ಚಂದ್ರಪ್ಪ, ಶಿವಲಿಂಗಪ್ಪ ಇತರರಿದ್ದರು.

ನಂಜನಗೂಡು: ಕೇಂದ್ರದ ವಿರುದ್ಧ ಕಿಡಿ :

 ನಂಜನಗೂಡು: ದೆಹಲಿಯಲ್ಲಿ ಪ್ರತಿಭಟನಾನಿರತರಾದ ರೈತರ ಮೇಲೆ ಕೇಂದ್ರ ಸರ್ಕಾರವು ದೌರ್ಜನ್ಯ ನಡೆಸಿದೆ ಎಂದು ಆಪಾದಿಸಿ ತಾಲೂಕು ರೈತ ಸಂಘಮಂಗಳವಾರ ಪ್ರತಿಭಟನೆ ನಡೆಸಿತು.

ನಗರದ ಅಂಬೇಡ್ಕರ್‌ ಪುತ್ಥಳಿ ಬಳಿ ಜಮಾಯಿಸಿದ ರೈತಮುಖಂಡರು,ಕೇಂದ್ರಹಾಗೂರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಮೊಳಗಿಸಿ ಆಕ್ರೋಶ ವ್ಯಕ್ತ ಪಡಿಸಿದರು. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಲು ನಡೆಸುತ್ತಿರುವ ರೈತರ ಹೋರಾಟವನ್ನು ಕೇಂದ್ರ ಸರ್ಕಾರ ಹತ್ತಿಕ್ಕುತ್ತಿದೆ ಎಂದು ಕಿಡಿಕಾರಿದರು. ಪ್ರತಿಭಟನೆಯಲ್ಲಿ ತಾಲೂಕುಅಧ್ಯಕ್ಷ ಶಿರಮಳ್ಳಿ ಸಿದ್ದಪ್ಪ,ಕಾರ್ಯದರ್ಶಿಹೆಜ್ಜಿಗೆ ಪ್ರಕಾಶ್‌, ಬೊಕ್ಕಳ್ಳಿ ನಂಜುಂಡಸ್ವಾಮಿ, ಮುಖಂಡರಾದ ತುಳಸಮ್ಮ, ಮಹದೇವಮ್ಮ, ಮಾದೇವು, ಸಿದ್ದರಾಜು, ಮಹದೇವಸ್ವಾಮಿ,ಕುಮಾರಸ್ವಾಮಿ ಮತ್ತಿತರರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.