ಭತ್ತ ಖರೀದಿ ಕೇಂದ್ರ ಶೀಘ ಆರಂಭಿಸಿ

ಪ್ರತಿ ವರ್ಷದಂತೆ ಈ ಬಾರಿ ತಡ ಮಾಡಬೇಡಿ

Team Udayavani, Nov 11, 2020, 4:23 PM IST

ಭತ್ತ ಖರೀದಿ ಕೇಂದ್ರ ಶೀಘ ಆರಂಭಿಸಿ

ಕೆ.ಆರ್‌.ನಗರ ತಾಲೂಕು ರೈತ ಸಂಘದ ವತಿಯಿಂದ ಭತ್ತಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸಿ ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ರೈತ ಸಂಘದ ತಾಲೂಕು ಅಧ್ಯಕ್ಷ ಎಂ.ಜೆ.ಮಲ್ಲೇಶ್‌ ಇತರರಿದ್ದರು.

ಕೆ.ಆರ್‌.ನಗರ: ಭತ್ತ ಖರೀದಿ ಕೇಂದ್ರತೆರೆಯುವಂತೆ ಸರ್ಕಾರವನ್ನು ಒತ್ತಾಯಿಸಿ ತಾಲೂಕು ರೈತ ಸಂಘ ಮತ್ತು ಹಸಿರು ಸೇನೆ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ರೈತ ಮುಖಂಡರು, ರಾಜ್ಯದಲ್ಲೇ ಹೆಚ್ಚು ಭತ್ತ ಬೆಳೆಯುವ ಮೂಲಕ ಭತ್ತದ ಕಣಜ ಎನಿಸಿದ ಕೃಷ್ಣರಾಜನಗರ ತಾಲೂಕಿನಲ್ಲಿ ಈಗಾಗಲೇ ರೈತರು ಬೆಳೆದ ಭತ್ತದ ಬೆಳೆ ಕಟಾವಿನ ಹಂತಕ್ಕೆ ಬಂದಿದ್ದರೂ ಸರ್ಕಾರ ಇನ್ನೂ ಭತ್ತ ಖರೀದಿ ಕೇಂದ್ರ ತೆರೆಯುವ ಬಗ್ಗೆ ಯಾವುದೇ ಆಲೋಚನೆ ಮಾಡಿಲ್ಲ. ಇದರಿಂದ ನಷ್ಟ ಎದುರಿಸುತ್ತಿರುವ ನಡುವೆ ರೈತರು ಮಧ್ಯವರ್ತಿಗಳ ಹಾವಳಿಯಿಂದ ನಷ್ಟ ಅನುಭವಿಸಬೇಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿ ವರ್ಷ ರೈತರ ಒತ್ತಾಯಕ್ಕೆ ಮಣಿದು ರೈತರು ಬೆಳೆದ ಭತ್ತ ಮಾರಾಟ ಮಾಡಿದ ನಂತರ ಖರೀದಿ ಕೇಂದ್ರ ತೆರೆಯಲು ಮುಂದಾಗುವ ಸರ್ಕಾರ ನಂತರ ನಿಯಮಗಳನ್ನು ರೂಪಿಸಿ ರೈತರು ನಷ್ಟ ಅನುಭವಿಸುವಂತೆ ಮಾಡುತ್ತಿದೆ. ಈ ಬಾರಿಯಾದರೂ ತ್ವರಿತವಾಗಿ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿದರು.

ಕಳಪೆ ಬೀಜ ಬಿತ್ತನೆ: ಕೃಷಿ ಇಲಾಖೆ ವತಿಯಿಂದ ವಿತರಣೆಯಾದ ಜ್ಯೋತಿ ಹಾಗೂ ಎನ್‌.ಆರ್‌.ಬೀಜದ ಭತ್ತವು ಕಳಪೆ ಬೀಜವಾಗಿರುವುದರಿಂದ ಜೊಳ್ಳು ಹೊಡೆ ಬಂದಿರುತ್ತದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು ಕೃಷಿ ಅಧಿಕಾರಿಗಳು ಹಾಗೂ ತಾಲೂಕು ಆಡಳಿತ ಪರಿಶೀಲಿಸಿ ನಷ್ಟಕ್ಕೊಳಗಾದ ರೈತರಿಗೆ ಸೂಕ್ತವಾದ ಪರಿಹಾರ ಕೊಡಿಸಿ ಕೊಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ದರ ಏರಿಸಿದರೆ ಹೋರಾಟ: ವಿದ್ಯುತ್‌ ದರವನ್ನು ಯೂನಿಟ್‌ಗೆ 40 ಪೈಸೆ ಏರಿಕೆ ಮಾಡಿರುವುದನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ ರೈತರು, ತಪ್ಪಿದಲ್ಲಿ ವಿದ್ಯುತ್‌ ಕಚೇರಿಯ ಮುಂದೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಇದೇ ವೇಳೆ ತಹಸೀಲ್ದಾರ್‌ ಮಂಜುಳಾ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಎಂ.ಜೆ.ಮಲ್ಲೇಶ್‌, ಜಿಲ್ಲಾಧ್ಯಕ್ಷ ಹೊಸೂರು ಕುಮಾರ್‌, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ನೇತ್ರಾವತಿ, ವಿಭಾಗೀಯ ಸಂಚಾಲಕ ಸರಗೂರು ನಟರಾಜ್‌, ಕಬ್ಬು ಬೆಳೆಗಾರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಯ್‌ಗೌಡ, ರೈತ ಮುಖಂಡರಾದ ಶ್ರೀನಿವಾಸ್‌, ಕುಬೇರ, ಎ.ಎಸ್‌.ನಟರಾಜ್‌, ಮಲ್ಲೇಶ್‌, ವಿಜೇಂದ್ರ, ಲೋಕೇಶ್‌, ಸುರೇಶ್‌, ಬಸಪ್ಪ, ಕಾಳೇಗೌಡ, ರಾಮೇಗೌಡ, ಮಂಜುನಾಥ್‌, ಚಂದ್ರು, ಮೂರ್ತಿ ಮತ್ತಿತರರು ಪಾಲ್ಗೊಂಡಿದ್ದರು.

ವಿಷಯಾಂತರ ಮಾಡಬೇಡಿ: ತಹಶೀಲ್ದಾರ್‌ :  ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗ ರೈತರು ಪ್ರತಿಭಟನೆ ನಡೆಸಿ ಮಾತನಾಡುವಾಗ ಮನವಿ ಸ್ವೀಕರಿಸಲು ಆಗಮಿಸಿದ ತಹಶೀಲ್ದಾರ್‌ ವಿರುದ್ಧ ಹರಿಹಾಯ್ದ ರೈತ ಮುಖಂಡರು, ನೀವು ರೈತರು ಮತ್ತು ರೈತ ಮುಖಂಡರು ಕಚೇರಿಗೆ ಆಗಮಿಸಿದಾಗ ಸ್ಪಂದಿಸಿ ಸಮರ್ಪಕ ಉತ್ತರ ನೀಡುವುದಿಲ್ಲ ಎಂಬ ಆರೋಪವಿದೆ. ಮುಂದೆಯಾದರೂ ರೈತರಿಗೆ ಗೌರವ ಕೊಟ್ಟು ನಡೆದುಕೊಳ್ಳಿ ಎಂದು ಕಿಡಿಕಾರಿದರು.

ಇದರಿಂದ ಸಿಡಿಮಿಡಿಗೊಂಡ ತಹಶೀಲ್ದಾರ್‌ ಎಂ.ಮಂಜುಳಾ, ನೀವು ಪ್ರತಿಭಟನೆ ವಿಚಾರ ಬಿಟ್ಟು ವಿಷಯಾಂತರ ಮಾಡಬೇಡಿ. ನಾನೆಂದೂ ಆ ರೀತಿ ರೈತರು ಹಾಗೂ ಜನ ಸಾಮಾನ್ಯರೊಂದಿಗೆ ನಡೆದುಕೊಂಡಿಲ್ಲ ಎಂದು ತಿರುಗೇಟು ನೀಡಿದರು.ಈ ವೇಳೆ ಪ್ರತಿಕ್ರಿಯಿಸಿದ ರೈತ ಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನೇತ್ರಾವತಿ “ನೀವು ನಮ್ಮ ಸಂಘದ ತಾಲೂಕು ಅಧ್ಯಕ್ಷರು ಹಾಗೂ ಮುಖಂಡರು ಕಚೇರಿಗೆ ಆಗಮಿಸಿದಾಗ ಸೌಜನ್ಯದಿಂದ ನಡೆದುಕೊಂಡಿಲ್ಲ. ನಮ್ಮ ನಾಯಕರು ಮಾಡುತ್ತಿರುವ ಆರೋಪ ಸರಿಯಾಗಿಯೇ ಇದೆ’ ಎಂದು ದೂರಿದರು. ಈ ಸಂದರ್ಭದಲ್ಲಿ ರೈತ ಮುಖಂಡರು ಹಾಗೂ ತಹಶೀಲ್ದಾರ್‌ ನಡುವೆ ಮಾತಿನ ಚಕಮಕಿ ನಡೆಯಿತು.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.