ಕೆರೆಗಳ ಭರ್ತಿಗೆ ರೈತರ ಬೃಹತ್‌ ಪ್ರತಿಭಟನೆ


Team Udayavani, Jun 19, 2019, 3:00 AM IST

keregala

ಮೈಸೂರು: ಜಿಲ್ಲೆಯ ಒಡವಿನಕಟ್ಟೆ, ಕಾಟಸೂರು ಕಬ್ಬಗೆರೆ ಮತ್ತು ಕಲ್ಲಹಳ್ಳಿ ಕೆರೆಗಳಿಗೆ ನೀರು ತುಂಬಿಸುವಂತೆ ಒತ್ತಾಯಿಸಿ ರೈತ-ಕೃಷಿ ಕಾರ್ಮಿಕ ಸಂಘಟನೆ ವತಿಯಿಂದ ನಗರದಲ್ಲಿ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ನಂಜುಮಳಿಗೆ ವೃತ್ತದಿಂದ ಮೆರವಣಿಗೆ ಹೊರಟು ಜಿಲ್ಲಾ ಪಂಚಾಯತ್‌ ಕಚೇರಿ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು, ಕೆರೆ ತುಂಬಿಸದ ಅಧಿಕಾರಿಗಳ ಧೋರಣೆ ವಿರೋಧಿಸಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಕ್ಷೇತ್ರ ತೀವ್ರ ಬಿಕ್ಕಟ್ಟಿನಲ್ಲಿ ಸಿಲುಕಿದೆ. ಅನ್ನದಾತ ರೈತ ಸಾಲದ ವಿಷ ವರ್ತುಲದಿಂದ ಹೊರಬರಲಾಗದೇ ಬದುಕೇ ಬೇಡವಾಗಿ ಆತ್ಮಹತ್ಯೆಯ ಹಾದಿ ಹಿಡಿದಿದ್ದಾನೆ ಎಂದು ಪ್ರತಿಭಟನಾ ನಿರತ ರೈತರು ದೂರಿದರು.

ಕಬಿನಿ ನೀರು ಹರಿಸಿ: ಮೈಸೂರು ತಾಲೂಕಿನ ಹಾರೋಹಳ್ಳಿ ಕೆರೆ ಬತ್ತಿದ್ದು, ಇಲ್ಲಿನ ಜನ ಬರಗಾಲದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಕೆರೆಗೆ ನೀರು ತುಂಬಿಸಲೆಂದು ದೇವರಾಜ ಅರಸು ನಾಲೆಯಿಂದ ನೀರು ಸರಬರಾಜಿಗೆ ಕಾಲುವೆ ನಿರ್ಮಿಸಿದ್ದರೂ ಕೆರೆಗೆ ನೀರು ತಲುಪುತ್ತಿಲ್ಲ.

ಅಲ್ಲದೇ ಕೆರೆಯಿಂದ 7 ಕಿ.ಮೀ ದೂರದಲ್ಲಿ ಹರಿಯುತ್ತಿರುವ ಕಬಿನಿ ನದಿಯಿಂದ ಏತ ನೀರಾವರಿ ಯೋಜನೆ ಮೂಲಕ ಕೆರೆಗೆ ನೀರು ತುಂಬಿಸುವ ಯೋಜನೆಗೂ ಗ್ರಹಣ ಹಿಡಿದಿದೆ. ಇದರಿಂದ ಅಂತರ್ಜಲ ಮಟ್ಟ ಕುಸಿದು ಕೊಳವೆಬಾವಿಗಳು ಬತ್ತಿ ಹೋಗಿವೆ. ಹಳ್ಳಿಗಳಲ್ಲಿ ಕುಡಿಯುವ ನೀರು ಸಿಗದೇ ಜನ ಪರದಾಡುವಂತಾಗಿದೆ ಎಂದು ದೂರಿದರು.

ನೀರಾವರಿ ಯೋಜನೆ: ಮದ್ದೂರು, ಮದ್ದೂರಹುಂಡಿ, ಚುಂಚರಾಯನ ಹುಂಡಿ, ಕಲ್ಲಹಳ್ಳಿ, ಸೋಲಿಗರ ಕಾಲೋನಿ, ಕಾಡಸೂರು, ಹಂಪಾಪುರ, ಹೊಮ್ಮರಗಳ್ಳಿ, ಗುಜ್ಜೆಗೌಡನಪುರ, ಚಾಮಲಾಪುರ ಗ್ರಾಮಗಳು ತೀವ್ರವಾದ ನೀರಿನ ಸಮಸ್ಯೆ ಎದುರಿಸುತ್ತಿವೆ.

ಕೃಷಿ ಹಾಗೂ ರೈತ ಸಮುದಾಯ ಉಳಿಯಬೇಕಾದರೆ ನೀರಾವರಿ ಯೋಜನೆಗಳು ತ್ವರಿತವಾಗಿ ಜಾರಿಯಾಗಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಒಡವಿನಕಟ್ಟೆ, ಕಲ್ಲಹಳ್ಳಿ ಊರಕೆರೆ ಮತ್ತು ಕಾಡಸೂರು ಕಬ್ಬಕೆ ಈ ಕೂಡಲೇ ನೀರು ತುಂಬಿಸಬೇಕು.

ವರುಣಾ ನಾಲೆಯನ್ನು ಸರಿಪಡಿಸಿ ಕಬಿನಿ ನದಿಯಿಂದ ಏತ ನೀರಾವರಿ ಯೋಜನೆ ಜಾರಿಗೊಳಿಸಬೇಕು. ಈ ಭಾಗದ ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿಯಾಗಬೇಕೆಂದು ಒತ್ತಾಯಿಸಿದರು.

ಶಶಿಧರ್‌, ನಂಜುಂಡಪ್ಪ, ಮದ್ದೂರಿನ ನಂಜುಂಡಪ್ಪ, ಕಲ್ಲಹಳ್ಳಿ ನಂಜುಂಡಪ್ಪ, ಶಿವಣ್ಣ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.