ರೈತ ಪರ ಪಕ್ಷಕ್ಕೆ ಮತ ನೀಡಲು ರೈತಸಂಘ ಮನವಿ


Team Udayavani, Apr 9, 2019, 3:00 AM IST

raitapara

ಮೈಸೂರು: ಈ ಲೋಕಸಭಾ ಚುನಾವಣೆಯಲ್ಲಿ ರೈತರು, ಜನರ ಸಮಸ್ಯೆಗಳು ಚರ್ಚೆಯಾಗುತ್ತಿಲ್ಲ. ಎಲ್ಲಾ ರಾಜಕೀಯ ಪಕ್ಷಗಳೂ ಭಾವನಾತ್ಮಾಕ ವಿಷಯಗಳನ್ನೇ ದೊಡ್ಡದು ಮಾಡುತ್ತಿರುವ ಕಾರಣ, ರೈತರು ಹಾಗೂ ಗ್ರಾಮೀಣ ಜನರ ಸಂಕಷ್ಟಗಳನ್ನು ಪರಿಹರಿಸುವ ಭರವಸೆ ನೀಡುವವರಿಗೆ ಮತ ನೀಡಬೇಕೆಂದು ರಾಜ್ಯ ರೈತಸಂಘ, ಹಸಿರು ಸೇನೆ ಹಾಗೂ ದೇಶಕ್ಕಾಗಿ ನಾವು ಸಂಘಟನೆಗಳು ಮನವಿ ಮಾಡಿವೆ.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ರೈತಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ರಾಜ್ಯದ 156 ತಾಲೂಕುಗಳು ಬರ ಪೀಡಿತ ಎಂದು ಸರ್ಕಾರವೇ ಘೋಷಿಸಿದೆ. ಬರ ಪರಿಸ್ಥಿತಿಯಿಂದಾಗಿ ಜನ-ಜಾನುವಾರುಗಳಿಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ರೈತರ ಆತ್ಮಹತ್ಯೆ ನಿರಂತರವಾಗಿ ಆಗುತ್ತಿದೆ.

ರೈತರ ಸಾಲಮನ್ನಾ ಸಮರ್ಪಕವಾಗಿ ಆಗಿಲ್ಲ. ಕೇಂದ್ರ ಸರ್ಕಾರ ಸ್ವಾಮಿನಾಥನ್‌ ವರದಿ ಅನುಷ್ಠಾನಕ್ಕೆ ಮುಂದಾಗಿಲ್ಲ. ಈ ಯಾವ ಸಮಸ್ಯೆಗಳೂ ಈ ಚುನಾವಣೆಯಲ್ಲಿ ಚರ್ಚೆಯಾಗುತ್ತಿಲ್ಲ. ಬದಲಿಗೆ ವ್ಯಕ್ತಿಗತ ಚರ್ಚೆ ನಡೆಯುತ್ತಿದೆ.

ಮಂದಿರ-ಮಸೀದಿ, ಧರ್ಮದ ವಿಚಾರಗಳ ಚರ್ಚೆ ಸಾಕು, ಹೀಗಾಗಿ ದೇಶಕ್ಕಾಗಿ ನಾವು ಸಂಘಟನೆ ವಿವಿಧ ಕ್ಷೇತ್ರದ ತಜ್ಞರಿಂದ ಬರೆಸಿರುವ ಜನತಂತ್ರದ ಮರುದಾವೆ ಕಿರು ಹೊತ್ತಿಗೆಯನ್ನು ಎಲ್ಲಾ ರಾಜಕೀಯ ಪಕ್ಷಗಳವರಿಗೂ ಕಳುಹಿಸಿಕೊಟ್ಟು, ಪರಸ್ಪರ ವ್ಯಕ್ತಿಗತ ಆರೋಪಗಳು, ಭಾವನಾತ್ಮಕ ವಿಚಾರಗಳು ಹಾಗೂ ಅನಗತ್ಯ ಚರ್ಚೆಯನ್ನು ನಿಲ್ಲಿಸಿ, ನಾಡಿನ ರೈತರ ಮತ್ತು ಗ್ರಾಮೀಣ ಜನರ ಸಂಕಷ್ಟ ಪರಿಹಾರದ ಕುರಿತು ಚರ್ಚೆಯಾಗಬೇಕೆಂದು ಆಗ್ರಹಿಸುತ್ತೇವೆ ಎಂದರು.

ಹಕ್ಕೊತ್ತಾಯಗಳು: ಸಂಸತ್ತಿನಲ್ಲಿ ಈಗಾಗಲೇ ಮಂಡನೆಯಾಗಿರುವ ಸಾಲ ಮುಕ್ತಿ ಕಾಯ್ದೆಯನ್ನು ಸಂಪೂರ್ಣವಾಗಿ ಒಪ್ಪಿಕೊಂಡು ಜಾರಿಗೆ ತರುತ್ತೀರೋ ಇಲ್ಲವೋ ಎಂಬುದನ್ನು ಎಲ್ಲಾ ರಾಜಕೀಯ ಪಕ್ಷಗಳೂ ಸ್ಪಷ್ಟಪಡಿಸಬೇಕು.

ರಾಷ್ಟ್ರೀಯ ರೈತ ಆಯೋಗದ ಶಿಫಾರಸಿನಂತೆ ದೇಶದ ಕೃಷಿ ಉತ್ಪನ್ನಗಳಿಗೆ ಸಂಪೂರ್ಣ ಉತ್ಪಾದನಾ ವೆಚ್ಚದ ಮೇಲೆ ಶೇ.50 ಲಾಭ ಖಾತರಿಪಡಿಸಲು ಸಂಸತ್ತಿನಲ್ಲಿ ಮಂಡನೆಯಾಗಿರುವ ಖಾಸಗಿ ಮಸೂದೆಯನ್ನು ಸಂಪೂರ್ಣವಾಗಿ ಒಪ್ಪಿಕೊಂಡು ಜಾರಿಗೆ ತರುತ್ತೀರೋ ಇಲ್ಲವೋ ಎಂಬುದನ್ನು ಪಕ್ಷಗಳು ಘೋಷಿಸಬೇಕು.

ಕನಿಷ್ಠ ಆದಾಯ ಖಾತ್ರಿ: ಪ್ರತಿಯೊಂದು ಕುಟುಂಬಕ್ಕೆ ದುಡಿದು ಘನತೆಯಿಂದ ಬದುಕಲು ಬೇಕಾದ ಕನಿಷ್ಠ ಆದಾಯ ಖಾತರಿಗೆ ಬೇಕಾದ ಯೋಜನೆ ರೂಪಿಸಬೇಕು. ಈಗಾಗಲೇ ಭೂಹೀನರು ಉಳುಮೆ ಮಾಡುತ್ತಿರುವ ಸರ್ಕಾರಿ ಭೂಮಿಯನ್ನು ಅವರಿಗೇ ಮಂಜೂರು ಮಾಡಬೇಕು. ಭೂಮಿ ಲಭ್ಯವಿರುವ ಕಡೆ ಅದನ್ನು ಶೋಷಿತ ಸಮುದಾಯಗಳ ಕೃಷಿ ಕುಟುಂಬಗಳಿಗೆ ಆದ್ಯತೆ ಮೇಲೆ ಹಂಚಿಕೆ ಮಾಡಬೇಕು.

ವಿಶೇಷ ಪ್ಯಾಕೇಜ್‌: ಗ್ರಾಮೀಣ ಉದ್ಯೋಗ ಸೃಷ್ಟಿಯನ್ನು ಪ್ರೋತ್ಸಾಹಿಸಬೇಖು. ನರೇಗಾ ಯೋಜನೆಯನ್ನು ವಾರ್ಷಿಕ ಪ್ರತಿ ವ್ಯಕ್ತಿಗೆ 150 ದಿನಗಳಿಗೆ ವಿಸ್ತರಿಸಬೇಕು. ಕೃಷಿ ಕೂಲಿಗಳ ಹಾಗೂ ಸಣ್ಣ ರೈತರ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಬೇಕು. ಉಪ ಕೃಷಿ ಉದ್ದಿಮೆಗಳನ್ನು ಪ್ರೋತ್ಸಾಹಿಸಬೇಕು. ಸಹಕಾರಿ ಮತ್ತು ನೈಸರ್ಗಿಕ ಕೃಷಿಗೆ ಬೆಂಬಲವಾಗಿ ವಿಶೇಷ ಪ್ಯಾಕೇಜ್‌ ಘೊಷಿಸಬೇಕು.

ದೇಶದ ಕೃಷಿ ಹಾಗೂ ಗ್ರಾಮೀಣ ಭಾಗವನ್ನು ಮತ್ತುಷ್ಟು ದುಸ್ಥಿತಿ ತಳ್ಳುವ ಎಲ್ಲಾ ಅಂತಾರಾಷ್ಟ್ರೀಯ ಒಪ್ಪಂದಗಳನ್ನು ರದ್ದುಗೊಳಿಸಬೇಕು. ಭವಿಷ್ಯದಲ್ಲೂ ಅಂತಹ ಒಪ್ಪಂದಗಳನ್ನು ಮಾಡಿಕೊಳ್ಳಬಾರದು ಎಂದು ಆಗ್ರಹಿಸಿದರು.

ಸ್ವರಾಜ್‌ ಇಂಡಿಯಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ಶಬ್ಬೀರ್‌ ಮುಸ್ತಫ‌, ಅಭಿರುಚಿ ಗಣೇಶ್‌, ಸಂಚಾಲಕರಾದ ಎಚ್‌.ಎ.ನಂಜುಂಡಸ್ವಾಮಿ, ಉಗ್ರನರಸಿಂಹೇಗೌಡ, ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜ್‌ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಮಂಡ್ಯದಲ್ಲಿ ಮಾತ್ರ ಸುಮಲತಾಗೆ ಬೆಂಬಲ: ಕಾಂಗ್ರೆಸ್‌ ಸೇರಿದಂತೆ ಯಾವುದೇ ರಾಜಕೀಯ ಪಕ್ಷಗಳೂ ರೈತರ ಪರವಾಗಿಲ್ಲ. ಚುನಾವಣೆಯಲ್ಲಿ ಮತಪಡೆಯಲ್ಲಷ್ಟೇ ನಾವು ರೈತರ ಪರ ಎನ್ನುತ್ತಾರೆ. ಹೀಗಾಗಿ ಈ ಚುನಾವಣೆಯಲ್ಲಿ ರೈತಸಂಘ ಬಹಿರಂಗವಾಗಿ ಯಾವುದೇ ಪಕ್ಷವನ್ನೂ ಬೆಂಬಲಿಸುತ್ತಿಲ್ಲ.

ಸಂಘದ ಸದಸ್ಯರು ಸ್ಥಳೀಯವಾಗಿ ಯಾರು ಕಡಿಮೆ ಅಪಾಯಕಾರಿ ಅವರನ್ನು ಆರಿಸಿಕೊಳ್ಳಲಿದ್ದಾರೆ. ಮಂಡ್ಯದ ರಾಜಕೀಯ ಚಿತ್ರಣವೇ ಬೇರೆ. ಹೀಗಾಗಿ ಅಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಅವರಿಗೆ ಬೆಂಬಲ ನೀಡಿದ್ದೇವೆ ಎಂದು ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.