ನ್ಯಾಯಾಂಗ ಇಲಾಖೆ ಮಹಿಳಾ ಉದ್ಯೋಗಿ ಶವ ನಾಲೆಯಲ್ಲಿ ಪತ್ತೆ
Team Udayavani, Sep 26, 2022, 9:16 PM IST
ಹುಣಸೂರು:ನ್ಯಾಯಾಲಯದ ಮಹಿಳಾ ಉದ್ಯೋಗಿಯೊಬ್ಬರ ಶವ ನಾಲೆಯಲ್ಲಿ ಪತ್ತೆಯಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೂಲತಃ ಪಿರಿಯಾಪಟ್ಟಣ ತಾಲೂಕಿನ ಕುಡುಕೂರಿನ ಕೆ.ಕೆ.ರಾಮರಾಜೇ ಅರಸ್ ಅವರ ಪತ್ನಿ, ಹುಣಸೂರು ನ್ಯಾಯಾಲಯದ ದ್ವಿತೀಯ ದರ್ಜೆ ಸಹಾಯಕಿ ಭಾಗ್ಯಮಣ್ಣಿ(40) ಮೃತರು, ಇವರಿಗೆ ಇಬ್ಬರು ಮಕ್ಕಳಿದ್ದಾರೆ.
ಭಾಗ್ಯಮಣ್ಣಿಯವರು ಎಂದಿನಂತೆ ಪತಿಯೊಂದಿಗೆ ಪಿರಿಯಾಪಟ್ಟಣಕ್ಕೆ ಬಂದು ಹುಣಸೂರು ಬಸ್ ಹತ್ತಿದ್ದರೆನ್ನಲಾಗಿದ್ದು, ಆದರೆ ಇಂದು ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಮಧ್ಯಾಹ್ನದ ವೇಳೆಗೆ ತಾಲೂಕಿನ ಹನಗೋಡು ಹೋಬಳಿಯ ಆಡಿಗನಹಳ್ಳಿಯಿಂದ ತಟ್ಟೆಕೆರೆಗೆ ತೆರಳುವ ಮಾರ್ಗದ ಹಾರಂಗಿ ನಾಲೆಯಲ್ಲಿ ಶವ ಪತ್ತೆಯಾಗಿದ್ದು, ಅಕ್ಕಪಕ್ಕದ ಜಮೀನಿನವರು ಮಾಹಿತಿ ನೀಡಿದ ಮೇರೆಗೆ ಇನ್ಸ್ಪೆಕ್ಟರ್ ಸಿ.ವಿ.ರವಿ ಸ್ಥಳಪರಿಶೀಲನೆ ನಡೆಸಿದರು.
ಪೊಲೀಸರು ಶವವನ್ನು ಮೇಲೆತ್ತಿಸಿ ಶವಾಗಾರಕ್ಕೆ ಸಾಗಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್