ಮೈದುಂಬಿದ ಲಕ್ಷ್ಮಣತೀರ್ಥ: ಹನಗೋಡು ಡ್ಯಾಂ ಭರ್ತಿ


Team Udayavani, Jul 14, 2019, 3:00 AM IST

maidumbia

ಹುಣಸೂರು: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬ್ರಹ್ಮಗಿರಿ ತಪ್ಪಲಿನ ಇರ್ಪು ಬಳಿ ಸುರಿಯುತ್ತಿರುವ ಮಳೆಯಿಂದ ಲಕ್ಷ್ಮಣತೀರ್ಥ ಮೈದುಂಬಿ ತುಂಬಿ ಹರಿಯುತ್ತಿದೆ. ಇದರಿಂದ ಹನಗೋಡು ಅಣೆಕಟ್ಟೆ ಮೇಲೆ ಒಂದೂವರೆ ಅಡಿ ನೀರು ಹರಿಯುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿದೆ.

ಅಣೆಕಟ್ಟೆ ಮೇಲೆ 980ಕ್ಕೂ ಹೆಚ್ಚು ಕ್ಯೂಸೆಕ್‌ ನೀರು ಹರಿಯುತ್ತಿದೆ. ಅಣೆಕಟ್ಟೆಯನ್ನು ಆಧುನೀಕರಣಗೊಳಿಸಿರುವುದರಿಂದ ಕೋಡಿ ನೀರು ಅಂದ ಚೆಂದವಾಗಿ ಕಾಣುತ್ತಿದೆ. ನಿತ್ಯ ಸಹಸ್ರಾರು ಮಂದಿ ನೀರು ಹರಿಯುವ ಮನ ಮೋಹಕ ದೃಶ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

ಕೊಚ್ಚಿಹೋದ ಕೊಳಚೆ ನೀರು: ಕಳೆದ ಇಪ್ಪತ್ತು ದಿನಗಳಿಂದ ಅಣೆಕಟ್ಟೆ ಮೇಲೆ ನೀರು ಹರಿಯುತ್ತಿದ್ದು, ಹುಣಸೂರು ನಗರದ ಮಧ್ಯ ಭಾಗದಲ್ಲಿ ಹರಿಯುವ ನದಿಗೆ ಚರಂಡಿ ನೀರು ಸೇರಿ ಸಂಪೂರ್ಣ ಕಲುಷಿತಗೊಂಡಿತ್ತಲ್ಲದೇ ಇಡೀ ನದಿಯನ್ನೇ ಆವರಿಸಿಕೊಂಡಿದ್ದ ಅಂತರಗಂಗೆಯನ್ನು (ಹಸಿರೆಲೆ ಬಳ್ಳಿ )ಇದೀಗ ನದಿ ನೀರು ಕೊಚ್ಚಿಕೊಂಡು ಹೋಗಿದ್ದು, ಕಟ್ಟೆಮಳಲವಾಡಿ ಅಣೆಕಟ್ಟೆಯ ಬಳಿ ಸಂಗ್ರಹಗೊಂಡಿದೆ. ದೊಡ್ಡ ಪ್ರಮಾಣದಲ್ಲಿ ನೀರು ಬಂದರಷ್ಟೆ ಅಂತರಗಂಗೆ ಸಂಪೂರ್ಣ ಹೊತ್ತೂಯ್ಯಲಿದೆ. ನದಿಯಲ್ಲಿ ಪ್ರವಾಹದ ನೀರು ಹರಿಯುತ್ತಿದ್ದಂತೆ ದುರ್ವಾಸನೆ ಸಹ ಬೀರುತ್ತಿದೆ.

ನಾಲೆಗೆ ನೀರು ಹರಿಸಿ: ಅಣೆಕಟ್ಟೆ ಮೇಲೆ ಸಾಕಷ್ಟು ನೀರು ಹರಿಯುತ್ತಿದ್ದರೂ ಕಾವೇರಿ ನಿರ್ವಹಣಾ ಮಂಡಳಿ ಆದೇಶ ನೀಡಿಲ್ಲವೆಂಬ ನೆಪವನ್ನಿಟ್ಟುಕೊಂಡು ಹಾರಂಗಿ ಎಂಜಿನಿಯರುಗಳು ನಾಲೆಗೆ ನೀರು ಹರಿಸದ ಪರಿಣಾಮ ರೈತರು ಆಕ್ರೋಶಗೊಂಡಿದ್ದರೆ. ಮುಖ್ಯ ನಾಲೆ ಸೇರಿದಂತೆ ಬಹುತೇಕ ನಾಲೆಗಳು ಆಧುನಿಕರಣಗೊಂಡಿದ್ದು, ನೀರು ಬಿಟ್ಟರೆ ವೇಗವಾಗಿ ಕೊನೆ ಭಾಗದ ಅಚ್ಚುಕಟ್ಟು ಪ್ರದೇಶಕ್ಕೂ ತಲುಪಲಿದೆ. ನೀರಿಗಾಗಿ ರೈತರು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇನ್ನೂ ತಡವಾದರೆ ಅಣೆಕಟ್ಟೆ ನೀರಿನಿಂದಲೇ 40 ಕ್ಕೂ ಹೆಚ್ಚು ಕೆರೆ-ಕಟ್ಟೆಗಳು ತುಂಬ ಬೇಕಿದ್ದು, ಈ ಸಾರಿ ಈ ಬಯಲು ನೀರಾವರಿ ಆಗುವುದೇ ಎಂಬ ಅನುಮಾನ ಕಾಡುತ್ತಿದೆ.

ಡ್ಯಾಂ ನೀರು ಹರಿಸದಿದ್ದರೆ ಪ್ರತಿಭಟನೆ: ಹನಗೋಡು ಅಣೆಕಟ್ಟು ಭರ್ತಿಯಾಗಿದ್ದರೂ ಕಾಮಗಾರಿ ನೆಪದಲ್ಲಿ ನಾಲೆಗಳಿಗೆ ನೀರು ಹರಿಸದೆ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ತಕ್ಷಣವೇ ನೀರು ಹರಿಸದಿದ್ದಲ್ಲಿ ಜು.16 ರಂದು ಹಾರಂಗಿ ಕಚೇರಿ ಎದುರು ರಾಜ್ಯ ರೈತಸಂಘವು ಅಚ್ಚುಕಟ್ಟದಾರ ರೈತರೊಂದಿಗೆ ಪ್ರತಿಭಟನೆ ನಡೆಸುವುದಾಗಿ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

ಕೊಡಗಿನಲ್ಲಿ ಕಳೆದ 20 ದಿನಗಳಿಂದ ಬೀಳುತ್ತಿರುವ ಮಳೆಯಿಂದಾಗಿ ಲಕ್ಷ್ಮಣತೀರ್ಥ ನದಿಯ ಹನಗೋಡು ಅಣೆಕಟ್ಟೆ ಭರ್ತಿಯಾಗಿ ನದಿಯಲ್ಲಿ ಸಾಕಷ್ಟು ನೀರು ಹರಿದು ಹೋಗುತ್ತಿದ್ದರೂ ಕಾಮಗಾರಿ ನೆಪದಲ್ಲಿ ಹನುಮಂತಪುರ ನಾಲಾ ಹಾಗೂ ಉದ್ದೂರು ಕಾವಲು ನಾಲೆಗಳಿಗೆ ನೀರು ಹರಿಸದ ಪರಿಣಾಮ ಕೆರೆಗಳು ಬತ್ತಿ ಹೋಗಿವೆ. ನಾಲಾ ವ್ಯಾಪ್ತಿಯಲ್ಲಿ ತಾಲೂಕಿನ ಸುಮಾರು 28 ಸಾವಿರ ಎಕರೆ ಇದ್ದು, ಅದಕ್ಕಿಂತ ಮಿಗಿಲಾಗಿ 42 ಕೆರೆಗಳಿಗೆ ನೀರನ್ನು ತುಂಬಿಸದೆ ನಿರ್ಲಕ್ಷ್ಯವಹಿಸಲಾಗಿದೆ. ತಕ್ಷಣವೇ ನೀರು ಹರಿಸಬೇಕು ಎಂದು ಆಗ್ರಹಿಸಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ಮಂಜೂರಾದ 156 ಕೋಟಿ ವೆಚ್ಚದ ಹನಗೋಡು ಅಣೆಕಟ್ಟೆ ಹಾಗೂ ನಾಲಾ ಆಧುನೀಕರಣ ಕಾಮಗಾರಿ ನಡೆಯುತ್ತಿದ್ದು, ಹಲವೆಡೆ ಅಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕಾಮಗಾರಿ ನಡೆಸುವ ಸಲುವಾಗಿ ಎಂಜಿನಿಯರ್‌ಗಳು ನೀರು ಬಿಡಲು ಸಬೂಬು ಹೇಳುತ್ತಿದ್ದಾರೆ. ಕಾಮಗಾರಿ ನಡೆಯುವ ವೇಳೆ ಮುಚ್ಚಿ ಹೋಗಿರುವ ತೂಬು, ಉಪನಾಲೆಗಳನ್ನು ಸರಿಪಡಿಸಿ, ಬೇಗ ನೀರು ಹರಿಸಿ ಮೊದಲು ಕೆರೆ-ಕಟ್ಟೆಗಳನ್ನು ತುಂಬಿಸಬೇಕೆಂದು ಒತ್ತಾಯಿಸಿದರು.

ಈ ಹಿಂದೆಲ್ಲಾ ಅಣೆಕಟ್ಟೆ ತುಂಬಿದ ತಕ್ಷಣ ನೀರು ಬಿಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಕಾವೇರಿ ನಿರ್ವಹಣಾ ಪ್ರಾಧಿಕಾರದ ಅನುಮತಿ ಬೇಕಿದೆ. ಈಗಾಗಲೇ ನೀರು ಬಿಡಲು ಮುಖ್ಯ ಎಂಜಿನಿಯರ್‌ಗೆ ಅನುಮತಿ ಕೋರಲಾಗಿದ್ದು, ಆದೇಶ ಬಂದ ತಕ್ಷಣ ಕಾಲುವೆಗೆ ನೀರು ಹರಿಸಲಾಗುವುದು.
-ಶಶಿಕುಮಾರ್‌, ಹಾರಂಗಿ ಎಇಇ

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.