ದಸರಾಗೆ ದೈವಿಭಕ್ತಿ ಹೊಂದಿರುವ ರಾಷ್ಟ್ರಪತಿಗಳು ಬರುತ್ತಿದ್ದಾರೆ: ಪ್ರಹ್ಲಾದ್ ಜೋಶಿ
ಮೈಸೂರು ಜನರಲ್ಲಿ ವಿಶೇಷ ನಿವೇದನೆ ಮಾಡಿದ ಕೇಂದ್ರ ಸಚಿವರು
Team Udayavani, Sep 19, 2022, 2:42 PM IST
ಮೈಸೂರು : ”ಇದೇ ಮೊದಲು ದೈವಿಭಕ್ತಿ ಹೊಂದಿರುವ ರಾಷ್ಟ್ರಪತಿಗಳು ದಸರಾಗೆ ಬರುತ್ತಿದ್ದಾರೆ.ಪೂರ್ವ ತಯಾರಿ ಬಗ್ಗೆ ಮಾತನಾಡಲು ನಾನು ಬಂದಿದ್ದೇನೆ”ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೋಮವಾರ ಹೇಳಿಕೆ ನೀಡಿದ್ದಾರೆ.
ಮೈಸೂರು ಜನರಲ್ಲಿ ವಿಶೇಷ ನಿವೇದನೆ ಮಾಡಿದ ಜೋಶಿ ಅವರು, ”ಮೈಸೂರಿಗರು ಬಹುದೊಡ್ಡ ಸಂಖ್ಯೆಯಲ್ಲಿ ರಾಷ್ಟ್ರಪತಿ ಕಾರ್ಯಕ್ರಮಕ್ಕೆ ಬನ್ನಿ. ರಾಷ್ಟ್ರಪತಿಗಳಿಗೆ ಹುಬ್ಬಳ್ಳಿಯಲ್ಲಿ ಪೌರ ಸನ್ಮಾನ ಮಾಡಲಾಗುವುದು” ಎಂದರು.
ಇದನ್ನೂ ಓದಿ: ಯಾತ್ರೆ ನಡೆಯುವುದು ವ್ಯಕ್ತಿಯಿಂದಲ್ಲ, ಪಕ್ಷದಿಂದ: ಸ್ವಪಕ್ಷೀಯರಿಗೆ ಟಾಂಗ್ ನೀಡಿದ ದೇಶಪಾಂಡೆ
ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಕಾಂಗ್ರೆಸ್ನವರು ಭ್ರಮೆಯಲ್ಲಿದ್ದಾರೆ ಅದಕ್ಕೆ ನಾವು ಏಕೆ ಬೇಡ ಅನ್ನೋಣ ?ಕಾಂಗ್ರೆಸ್ ಅನ್ನು ಭ್ರಮೆಯಲ್ಲಿ ಇರಲು ಮಾಧ್ಯಮದವರು ಬಿಡಿ. ಇಷ್ಟು ದಿನ ಜನರನ್ನು ಭ್ರಮೆಯಲ್ಲಿಟ್ಟಿದ್ದರು ಈಗ ಅವರು ಭ್ರಮೆಯಲ್ಲಿದ್ದಾರೆ. ಭಾರತ್ ಜೋಡೋ” ಯಾತ್ರೆ ರಾಜಕೀಯ ಲಾಭ ಕ್ಕಾಗಿ ಮಾಡಲಾಗುತ್ತಿದೆ.ಕಾಂಗ್ರೆಸ್ ಏನು ಮಾಡುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ.ಮುಂದಿನ ಚುನಾವಣೆಗಳಲ್ಲಿ ಎಲ್ಲವೂ ಗೊತ್ತಾಗಲಿದೆ. ಕಾಂಗ್ರೆಸ್ ಎಂದಿಗೂ ದೇಶಕ್ಕಾಗಿ ವಿಚಾರ ಮಾಡಿಲ್ಲ. ನಕಲಿ ಗಾಂಧಿ ಕುಟುಂಬದವರು ಅವರ ಕುಟುಂಬದ ಬಗ್ಗೆ ಯೋಚನೆ ಮಾಡುತ್ತಾರೆ. ದೇಶದ ಬಗ್ಗೆ ಅವರಿಗೆ ಏನು ಗೊತ್ತು” ಎಂದು ಪ್ರಶ್ನಿಸಿದರು.
ಜೈಲಿನ ಬಗ್ಗೆ ರಾಹುಲ್ ಗಾಂಧಿ ಅವರು ಡಿಕೆ ಶಿವಕುಮಾರ್ ಅವರು ಮಾಹಿತಿ ಪಡೆದ ವಿಚಾರಕ್ಕೆ ಸಮಬಂಧಿಸಿ ಪ್ರತಿಕ್ರಿಯಿಸಿ, ”ಯಾರು ತಪ್ಪು ಮಾಡಿರುತ್ತಾರೆ ಅವರಿಗೆ ಭಯವಿರುತ್ತದೆ.ಅಂತವರು ಜೈಲಿನ ಬಗ್ಗೆ ವಿಚಾರಿಸುತ್ತಾರೆ. ನಾನಾಗಲಿ, ಪ್ರತಾಪ್ ಸಿಂಹ ಆಗಲಿ ಈ ಬಗ್ಗೆ ವಿಚಾರಿಸುವುದಿಲ್ಲ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ