ಅರಮನೆಯಲ್ಲಿ ನಾಳೆ ರಾವತ್‌, ಪುನೀತ್‌ಗೆ ಪುಷ್ಪ ನಮನ : ಫ‌ಲಪುಷ್ಪ ಪ್ರದರ್ಶನ


Team Udayavani, Dec 24, 2021, 12:31 PM IST

puneeth – rawath

ಮೈಸೂರು: ಕ್ರಿಸ್‌ಮಸ್‌ ಹಾಗೂ ಹೊಸವರ್ಷ ಆಚರಣೆ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಆವರಣ ದಲ್ಲಿ ಡಿ.25 ರಿಂದ ಜನವರಿ 2ರ ವರೆಗೆ ಫ‌ಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಈ ವೇಳೆ ಪ್ರತಿದಿನ ಸಂಜೆ 7 ರಿಂದ 8.30ರ ವರೆಗೆ ಅರಮನೆಗೆ ವಿದ್ಯುತ್‌ ದೀಪಾಲಂಕಾರ ಇರಲಿದೆ. ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್‌ ದುರಂತದಲ್ಲಿ ಹುತಾತ್ಮರಾದ ಭಾರತೀಯ ಸೇನಾ ಪಡೆಯ ಮುಖ್ಯಸ್ಥ ಬಿಪಿನ್‌ ರಾವತ್‌, ಹೃದಯಾ ಘಾತದಿಂದ ನಿಧನರಾದ ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಪುಷ್ಪ ನಮನ ಸಲ್ಲಿಸಲಾಗಿದೆ.

ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ನೀರಜ್‌ ಚೋಪ್ರಾ ಅವರ ಮೂರ್ತಿ ಪುಷ್ಪಗಳಿಂದ ಅರಳಿ ನಿಂತಿದೆ. ಅಯೋಧ್ಯೆ ಶ್ರೀರಾಮಮಂದಿರ ಮಾದರಿ ಈ ಬಾರಿ ಪ್ರಮುಖ ಆಕರ್ಷಣೆ ಎನಿಸಿದೆ. ಚಾಮುಂಡೇಶ್ವರಿ ದೇವತೆ, ನಂದಿ ಮತ್ತು ಮಹಿಷಾಸುರನ ಮಾದರಿ ಚಿತ್ರಗಳು, ಮಹಾತ್ಮ ಗಾಂಧೀಜಿ ಅವರು ನಡೆಸಿದ ಕ್ವಿಟ್‌ ಇಂಡಿಯಾ ಚಳವಳಿ ಮಾದರಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮಾದರಿ ಚಿತ್ರಗಳನ್ನು ಅಲಂಕರಿಸಲಾಗಿದೆ.

ಫ‌ಲಪುಷ್ಪ ಪ್ರದರ್ಶನದಲ್ಲಿ ಸುಮಾರು 15 ಸಾವಿರ ವಿಭಿನ್ನ ರೀತಿಯ ಅಲಂಕಾರಿಕ ಹೂವಿನ ಕುಂಡಗಳು (ಮೆರಿಗೋಲ್ಡ್‌, ಸಾಲ್ವಿಯ, ಡೇಲಿಯ, ಪಿಟೋ ನಿಯ, ಸೇವಂತಿಗೆ, ಕೋಲಿಯಸ್‌, ಸಿಲೋಷಿಯ, ನಸ್ಟರ್‌ಸಿಯಂ, ಆಂಟಿರೈನಂ, ಬೋನ್ಸಾಯ್‌ ಗಿಡಗಳು ಸೇರಿದಂತೆ 32 ಜಾತಿಯ ಹೂವಿನ ಗಿಡಗಳು) ಇವೆ. ಅಂದಾಜು ನಾಲ್ಕು ಲಕ್ಷ ವಿವಿಧ ಹೂವುಗಳಾದ ಗುಲಾಬಿ, ಕ್ರೈಸಾಂಥಿಮಮ್‌, ಪಿಂಗ್‌ಪಾಂಗ್‌, ಕಾರ್ನೆಷನ್‌, ಆಸ್ಟ್ರಮೇರಿಯ, ಜರ್ಬೆರಾ, ಆಂಥೋರಿ ಯಮ್‌, ಆರ್ಕಿಡ್ಸ್‌, ಬ್ಲೂ ಡೈಸಿ, ಡ್ರೆಸಿನಾ ಹಾಗೂ ಇತರೆ ಅಲಂಕಾರಿಕ ಹೂವುಗಳು ಹಾಗೂ ಊಟಿ ಕಟ್‌ ಫ್ಲವರ್‌ಗಳಿಂದ ಅಲಂಕರಿಸಲಾಗಿದೆ.

ಮೈಸೂರು ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಫ‌ಲಪುಷ್ಪ ಪ್ರದರ್ಶನವನ್ನು ಡಿ.25ರಂದು ಉದ್ಘಾಟಿಸುವರು. ಶಾಸಕ ಎಸ್‌.ಎ.ರಾಮದಾಸ್‌, ಸಂಸದ ಪ್ರತಾಪ ಸಿಂಹ, ಮೇಯರ್‌ ಸುನಂದಾ ಫಾಲನೇತ್ರ ಅವರು ಭಾಗವಹಿಸುವರು.

ಸೆಲ್ಫಿ ಪಾಯಿಂಟ್‌, ಫೋಟೋ ಫ್ರೇಮ್‌

ಫ‌ಲಪುಷ್ಪ ಪ್ರದರ್ಶನದಲ್ಲಿ ಜಯಚಾಮರಾಜ ಒಡೆಯರ್‌ ಅವರ ಮಾದರಿ ಚಿತ್ರವನ್ನು ಹೂವುಗಳಿಂದ ಅಲಂಕರಿಸಲಾಗಿದೆ. ಮೈಸೂರನ್ನು ಆಳಿದ ಯದುವಂಶದ ದೊರೆಗಳ ಇತಿಹಾಸವನ್ನು ಪರಿಚಯಿಸುವ ಫೋಟೋ ಗ್ಯಾಲರಿ ಇರಲಿದೆ. ಫೋಟೋ ಫ್ರೆàಮ್‌ ಹಾಗೂ ಸೆಲ್ಫಿ ಪಾಯಿಂಟ್‌ ಕೂಡ ಇದೆ. ಅರಮನೆ ಆವರಣದಲ್ಲಿ ಫ‌ಲಪುಷ್ಪ ಪ್ರದರ್ಶನವನ್ನು ಬೆಳಗ್ಗೆ 10 ರಿಂದ ರಾತ್ರಿ 8.30ರ ವರೆಗೆ ವೀಕ್ಷಿಸಬಹುದು. ಕೋವಿಡ್‌ ಎರಡು ಡೋಸ್‌ ಲಸಿಕೆ ಪಡೆದವರಿಗೆ ಮಾತ್ರ ಪ್ರವೇಶವಿದೆ.

ಫ‌ಲಪುಷ್ಪ ಪ್ರದರ್ಶನಕ್ಕೆ ಪ್ರವೇಶ ಉಚಿತವಾಗಿದೆ. ಫ‌ಲಪುಷ್ಪ ಪ್ರದರ್ಶನ ವೀಕ್ಷಿಸಲು ಪ್ರತಿ ದಿನ 500 ಮಂದಿಗೆ ಮಾತ್ರ ಪ್ರವೇಶ ನೀಡಲಾಗುವುದು ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಅರಮನೆ ಆವರಣದಲ್ಲಿ ಫ‌ಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆ ನಡೆಸಿರುವುದು. ಟಿ.ಎಸ್‌.ಸುಬ್ರಹ್ಮಣ್ಯ ತಿಳಿಸಿದ್ದಾರೆ

ತಾರತಮ್ಯಕ್ಕೆ  ಹೋಟೆಲ್‌ ಮಾಲಿಕರ ಸಂಘ ಆಕ್ಷೇಪ

ಮೈಸೂರು: ಕೋವಿಡ್‌ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ಹಾಗೂ ಸಂಭ್ರಮಾಚರಣೆ ನಿಷೇಧಿಸಿರುವಾಗ ಮೈಸೂರು ಅರಮನೆ ಮಂಡಳಿ ಅರಮನೆ ಆವರಣದಲ್ಲಿ ಫ‌ಲಪುಷ್ಪ ಪ್ರದರ್ಶನ ಏರ್ಪಡಿಸಿರುವ ಕುರಿತು ಮೈಸೂರು ಜಿಲ್ಲಾ ಹೋಟೆಲ್‌ ಮಾಲಿಕರ ಸಂಘ ಬಲವಾಗಿ ಆಕ್ಷೇಪಿಸಿದೆ.

ಮೈಸೂರು ಜಿಲ್ಲಾಧಿಕಾರಿಗಳಿಗೆ ಅವರು ಈ ಕುರಿತು ಗುರುವಾರ ಪತ್ರ ಬರೆದಿದ್ದಾರೆ. ಜಿಲ್ಲಾಡಳಿತಕ್ಕೆ ಒಂದು ಪ್ರತ್ಯೇಕ ಮಾರ್ಗಸೂಚಿಗಳು ಏನಾದರೂ ಬಂದಿದೆಯೇ? ಕ್ರಿಸ್‌ ಮಸ್‌ ಮತ್ತು ಹೊಸ ವರ್ಷ ಸಂಭ್ರಮಾಚರಣೆಗೆ ಹೋಟೆಲ್‌ ಉದ್ಯಮಕ್ಕೆ ಏಕೆ ಈ ರೀತಿಯ ತಾರತಮ್ಯ, ನಿರ್ಬಂಧ ವಿಧಿಸಲಾಗಿದೆ? ಇದು ಸರಿಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಮೈಸೂರು ಅರಮನೆ ಆವರಣದಲ್ಲಿ ಸಾವಿರಾರು ಜನರು ಭಾಗವಹಿಸಲು ಫ‌ಲಪುಷ್ಪ ಪ್ರದರ್ಶನ ಏರ್ಪಡಿಸಿರುವುದು ಎಷ್ಟು ಸಮಂಜಸವೆಂದು ತಿಳಿಯುತ್ತಿಲ್ಲ, ನೂತನ ವರ್ಷ ಸ್ವಾಗತಿಸಿ ಆಚರಿಸಲು ಅಪಾರ ಪ್ರಮಾಣದ ಪಟಾಕಿಗಳು ಸಿಡಿಸಲು ವ್ಯವಸ್ಥೆ ಮಾಡಿರುವುದು ತಿಳಿದು ಬಂದಿದೆ. ಇದು ಯಾವ ರೀತಿಯ ಮಾರ್ಗಸೂಚಿ ಎಂಬುದೇ ತಿಳಿಯುತ್ತಿಲ್ಲ ಎಂದು ನಾರಾಯಣಗೌಡ ಹೇಳಿದ್ದಾರೆ. ಹೋಟೆಲ್‌ ಉದ್ಯಮಕ್ಕೆ ವಿಧಿಸಿರುವ ನೂತನ ವರ್ಷದ ಮಾರ್ಗ ಸೂಚಿ ನಿರ್ಬಂಧವನ್ನು ರದ್ದುಪಡಿಸ ಬೇಕೆಂದು ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.