ಪ್ರತಿಭೆ ಮೊದಲು ಎಂಬ ತತ್ವ ಅನುಸರಿಸಿ


Team Udayavani, Dec 15, 2018, 11:36 AM IST

m3-pratibhe.jpg

ಮೈಸೂರು: ಪ್ರಸ್ತುತ ಸಂದರ್ಭದಲ್ಲಿ ಪ್ರತಿಯೊಂದು ಸಂಸ್ಥೆಗಳು ಪ್ರತಿಭೆ ಮೊದಲು ಎಂಬ ತತ್ವವನ್ನು ಅನುಸರಿಸಬೇಕಾಗ ಅಗತ್ಯವಿದೆ ಎಂದು ಚೆನ್ನೈನ ರಾಣಿ ಹೋಲ್ಡಿಂಗ್ಸ್‌ ಸಂಸ್ಥೆ ಅಧ್ಯಕ್ಷ ಎಲ್‌. ಗಣೇಶ್‌ ತಿಳಿಸಿದರು.

ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಧರ್ಮಸ್ಥಳ ಮಂಜುನಾಥೇಶ್ವರ ಇನ್ಸ್ಟಿಟ್ಯೂಟ್‌ ಫಾರ್‌ ಮ್ಯಾನೇಜ್ಮೆಂಟ್‌ ಡೆವಲೆಪ್ಮೆಂಟ್‌ ಸಂಸ್ಥೆಯಲ್ಲಿ ಆಯೋಜಿಸಿರುವ “ಕಾರ್ಯಕ್ಷೇತ್ರದಲ್ಲಿ ಮಾನವ ಸಂಪನ್ಮೂಲ ನಿರ್ವಹಣೆ’ ವಿಷಯ ಕುರಿತ 7ನೇ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಂದು ಸಂಸ್ಥೆಯ ಉದ್ದೇಶಗಳನ್ನು ಅಲ್ಲಿನ ನೌಕರರಿಗೆ ಮನದಟ್ಟು ಮಾಡಿಸುವ ಮೂಲಕ, ಸಂಸ್ಥೆಯ ಬೆಳವಣಿಗೆಗೆ ಬೇಕಾದ ಕಾರ್ಯತಂತ್ರಗಳನ್ನು ಅಳವಡಿಸಿಕೊಳ್ಳಬೇಕಿದೆ. ಹೀಗಾಗಿ ಇಂದಿನ ಬದಲಾದ ತಂತ್ರಜ್ಞಾನ ಹಾಗೂ ಗ್ರಾಹಕರ ನಿರೀಕ್ಷೆಯ ಯುಗದಲ್ಲಿ ಪ್ರತಿಭೆಗೆ ಮೊದಲ ಆದ್ಯತೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಎಲ್ಲಾ ಸಂಸ್ಥೆಗಳು ಎದುರಿಸುವ ಅವಶ್ಯಕತೆಗಳು ಮತ್ತು ಸವಾಲುಗಳನ್ನು ತಿಳಿದುಕೊಳ್ಳಬೇಕಾಗಿದೆ ಎಂದರು.

ಎಸ್‌ಡಿಎಂ-ಐಎಂಡಿ ಸಂಸ್ಥೆ ನಿರ್ದೇಶಕ ಡಾ.ಎನ್‌.ಆರ್‌.ಪರಶುರಾಮನ್‌, “ಯಶಸ್ವಿ ಮಾನವ ಸಂಪನ್ಮೂಲ ನಿರ್ವಹಣೆಗೆ ಅಗತ್ಯವಿರುವ ಸಂವಹನದ ಪ್ರಾಮುಖ್ಯತೆ, ಪ್ರತಿಫ‌ಲಗಳು, ವ್ಯಕ್ತಿಯ ಹಾಗೂ ಸಾಂಸ್ಥಿಕ ಉದ್ದೇಶಗಳ ಹೊಂದಾಣಿಕೆ, ಕಾರ್ಯಕ್ಷೇತ್ರದಲ್ಲಿ ನೈತಿಕತೆ ಕುರಿತು ಮಾತನಾಡಿದರು. ಸಮ್ಮೇಳನ ಮುಖ್ಯಸ್ಥ ಡಾ. ಮೌಸುಮಿ ಸೇನ್‌ ಗುಪ್ತ,  ಮಾನವ ಸಂಪನ್ಮೂಲ ನಿರ್ವಹಣೆಯ ಪಾತ್ರದ ಬಗ್ಗೆ ಉಪನ್ಯಾಸ ನೀಡಿದರು.

ಎರಡು ದಿನಗಳ ಸಮ್ಮೇಳನದಲ್ಲಿ ಭಾರತ, ಯುಎಸ್‌ಎ ಹಾಗೂ ನೈಜೀರಿಯಾ ದೇಶದಿಂದ 150ಕ್ಕೂ ಮಂದಿ ಭಾಗವಹಿಸಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಇಂಧೋರ್‌ನ ಐಐಎಂ ಮಾಜಿ ನಿರ್ದೇಶಕ ಪ್ರೊ. ರವಿಚಂದ್ರನ್‌,

ನೋಯ್ಡಾದ ಎಂಬಿಎ ಯೂನಿವರ್ಸ್‌.ಕಾಮ್‌ನ ಸಂಸ್ಥಾಪಕ ಸಿಇಒ ಅಮಿತ್‌ ಅಗ್ನಿಹೋತ್ರಿ, ಬೆಂಗಳೂರಿನ ಲೀಡ್‌ ಕನ್ಸಲ್ಟಿಂಗ್‌ ಸಂಸ್ಥೆಯ ನಿರ್ದೇಶಕ ಮಹಾಲಿಂಗಂ, ಮೈಸೂರಿನ ಅಗ್ರಿಬಿಸಿನೆಸ್‌ ವಿಭಾಗದ ವ್ಯವಸ್ಥಾಪಕ ರಾಜೇಂದ್ರಬಾಬು, ಸಮ್ಮೇಳನದ ಉಪ ಮುಖ್ಯಸ್ಥ ಡಾ.ನೀಲಾಂಜನ್‌ ಸೇನ್‌ ಗುಪ್ತ ಹಾಜರಿದ್ದರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.