Kabini ಹಿನ್ನೀರಲ್ಲಿ 3.5 ಟನ್‌ ತ್ಯಾಜ್ಯ ಸಂಗ್ರಹಿಸಿದ ಅರಣ್ಯ ಸಿಬಂದಿ, ಸ್ವಯಂಸೇವಕರು

ನಾಗರಹೊಳೆ ಉದ್ಯಾನದಲ್ಲಿ 680 ಕೆ.ಜಿ. ವಿವಿಧ ಜಾತಿಯ ಬೀಜ ಬಿತ್ತನೆ

Team Udayavani, Jun 7, 2023, 7:43 PM IST

1-kabini

ಹುಣಸೂರು: ಪಶ್ಚಿಮ ಘಟ್ಟ ಸಾಲಿನಲ್ಲಿ ಅಭಿವೃದ್ದಿ ಮತ್ತಿತರ ಕಾರಣಗಳಿಂದ ದಿನೇದಿನೇ ಪರಿಸರ ನಾಶವಾಗುತ್ತಿದ್ದು, ಪರಿಸರ ನಾಶದಿಂದ ಹವಾಮಾನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವುದು ಆತಂಕಕಾರಿಯಾಗಿದೆ ಎಂದು ನಾಗರಹೊಳೆ ಉದ್ಯಾನವನದ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದ ಆತಂಕ ವ್ಯಕ್ತಪಡಿಸಿದರು.

ವಿಶ್ವಪರಿಸರ ದಿನ ಅಂಗವಾಗಿ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಕಬಿನಿ ಹಿನ್ನೀರಿನ ಪ್ರದೇಶದಲ್ಲಿ ನಡೆದ ಸ್ವಚ್ಛತಾ ಆಂದೋಲನ, ಬೀಜ ಬಿತ್ತನೆ, ಸಸಿನೆಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ನಗರೀಕರಣ, ರಸ್ತೆಗಳ ಅಭಿವೃದ್ದಿ ಅಭಿವೃದ್ದಿ ನೆಪದಲ್ಲಿ ಮರಗಿಡಗಳನ್ನು ಕಡಿದು ಹಾಕಿ ಯತೇಚ್ಚವಾಗಿ ಪರಿಸರ ನಾಶ ಮಾಡಿದ್ದೇವೆ. ಇಳುವರಿ ಪಡೆಯುವ ಸಲುವಾಗಿ ಭೂಮಿಗೆ ರಾಸಾಯನಿಕಗೊಬ್ಬರ, ಕ್ರಿಮಿನಾಶಕವೆಂಬ ವಿಷ ಉಣಿಸಿದ್ದೇವೆ ಇದರಿಂದಾಗಿ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದರೂ ಸಹ ಎಚ್ಚೆತ್ತುಕೊಳ್ಳದೆ ಮತ್ತೆಮತ್ತೆ ತಪ್ಪುಗಳನ್ನು ಮಾಡುತ್ತಲೇ ಜೀವನ ನಡೆಸುತ್ತಿದ್ದೇವೆ. ಇನ್ನಾದರೂ ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದೆ ರೋಗಗಳೊಡನೆ ಜೀವನ ನಡೆಸುವ ಕಾಲ ಸನ್ನಿಹಿತವಾಗಿದೆ ಎಂದು ಆತಂಕ ವ್ಯಕ್ತಪಡಿಸಿ. ಪರಿಸರ ಉಳಿಸುವುದೆಂದರೆ ಕೇವಲ ಅರಣ್ಯ ಇಲಾಖೆ, ರೈತರು, ವಿದ್ಯಾರ್ಥಿಗಳು ಮರನೆಟ್ಟರೆ ಸಾಲದು, ಪ್ರತಿಯೊಬ್ಬ ನಾಗರೀಕನೂ ಸಹ ಪರಿಸರ ಉಳುವಿಗಾಗಿ ಪಣತೊಡಬೇಕು. ಸಮಾಜದಲ್ಲಿ ಎಲ್ಲ ಸೌಲಭ್ಯ ಪಡೆದುಕೊಳ್ಳುವವರು ಕನಿಷ್ಟ ಮನೆ, ಶಾಲಾ-ಕಾಲೇಜು ಆವರಣ, ಸರಕಾರಿ ಕಚೇರಿ ಆವರಣ, ಜಮೀನು, ಹೀಗಾದಲ್ಲಿ ಮಾತ್ರ ಮುಂದೆ ಶುದ್ದಗಾಳಿ-ನೀರು ಪಡೆಯಲು ಸಾಧ್ಯವೆಂದರು.

680 ಕೆ.ಜಿ.ಬೀಜ ಬಿತ್ತನೆ:
ಈಗಾಗಲೇ ಅರಣ್ಯ ಉಳಿಸುವ, ಹೆಚ್ಚಿಸುವ ಸಲುವಾಗಿ ಅರಣ್ಯ ಇಲಾಖೆವತಿಯಿಂದ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ನಾಗರಹೊಳೆ ವನ್ಯಜೀವಿ ವಿಭಾಗದ ವತಿಯಿಂದ ಮರ-ಗಿಡಗಳನ್ನು ಬೆಳೆಸುವ ನಿಟ್ಟಿನಲ್ಲಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ 8 ವಿಭಾಗಗಳಲ್ಲೂ ಸಸಿಗಳನ್ನು ನೆಡುವ, 680 ಕೆಜಿ.ವಿವಿಧ ಜಾತಿಯ ಮರಗಳ ಬೀಜ ಬಿತ್ತುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಎಲ್ಲ ವಲಯಗಳಲ್ಲೂ ಏಕಕಾಲಕ್ಕೆ ನಡೆಯುತ್ತಿದೆ ಎಂದರು.

ಉದ್ಯಾನದಲ್ಲಿ ತ್ಯಾಜ್ಯ ಹಾಕದಂತೆ ಮನವಿ
ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ ನಾಗರಹೊಳೆಯು ವನ್ಯಜೀವಿಗಳ ಆವಾಸ ಸ್ಥಾನಕ್ಕೆ ಹೆಚ್ಚಿನ ಪ್ರಶಸ್ತ ಸ್ಥಳವಾಗಿದ್ದು, ವನ್ಯಪ್ರಾಣಿಗಳನ್ನು ಸಂರಕ್ಷಿಸುವ ಜವಾಬ್ದಾರಿ ನಾಗರಹೊಳೆ ವನ್ಯಜೀವಿ ವಿಭಾಗದ ಮೇಲಿದ್ದು, ಕಾಡಿನ ಪ್ರಾಣಿಗಳಾದ ಆನೆ,ಜಿಂಕೆ,ಕಾಡೆಮ್ಮೆ ಸಾಂಬರ್ ಸಸ್ಯಹಾರಿ ಪ್ರಾಣಿಗಳಾಗಿದ್ದು, ಕಬಿನಿ ಹಿನ್ನೀರಿನ ಬಳಿ ನೀರು ಕುಡಿಯಲು ಬರುವ ವೇಳೆ ಪ್ಲಾಸ್ಟಿಕ್ ತ್ಯಾಜ್ಯ ಸೇವನೆ ಮಾಡುವ ಆತಂಕವೂ ಹೆಚ್ಚಿದೆ. ಎಷ್ಟೇ ತಿಳುವಳಿಕೆ ನೀಡಿದರೂ ಸಹ ಕಬಿನಿ ಹಿನ್ನೀರಿನ ಬಳಿಯಲ್ಲಿ ಸ್ವಚ್ಚತಾ ಕಾರ್ಯ ನಡೆಸಿದ ವೇಳೆ ಸುಮಾರು 3.5 ಟನ್ ನಷ್ಟು ಪ್ಲಾಸ್ಟಿಕ್ ನೀರು ಮತ್ತು ಗಾಜಿನ ಬಾಟಲ್‌ಗಳು ಸಂಗ್ರಹವಾಗಿರುವುದು ಬೇಸರದ ಸಂಗತಿಯಾಗಿದೆ. ಕಬಿನಿ ನದಿ ಪಾತ್ರದ ಜನತೆ ನದಿಗೆ ತ್ಯಾಜ್ಯ ಎಸೆಯದಂತೆ ಹಾಗೂ ಉದ್ಯಾನದೊಳಗಿನಿಂದ ಹಾಯ್ದು ಹೋಗುವ ವಾಹನ ಸವಾರರು, ಪ್ರಯಾಣಿಕರು ಎಲ್ಲೆಂದರಲ್ಲಿ ತ್ಯಾಜ್ಯ ವಸ್ತುಗಳನ್ನು ಬಿಸಾಡದಂತೆ ಮನವಿ ಮಾಡಿದರು.

ಸ್ವಚ್ಚತಾ ಕಾರ್ಯದಲ್ಲಿ ಅಂತರಸಂತೆ ಮೇಟಿಕುಪ್ಪೆ ಮತ್ತು ಡಿ.ಜಿಕುಪ್ಪೆ ವನ್ಯ ಜೀವಿ ವಲಯದ ಅರಣ್ಯಾಧಿಕಾರಿಗಳು, ಸಿಬಂದಿ, ಕಬಿನಿ ಹಿನ್ನೀರಿನ ಬದಿಯಲ್ಲಿರುವ ಜಂಗಲ್ ಲಾಡ್ಜಸ್ ಹಾಗೂ ನಾಗರಹೊಳೆ ಉದ್ಯಾನದ ಸುತ್ತಮುತ್ತಲಿನ ಖಾಸಗಿ ರೆಸಾರ್ಟ್ ಸಿಬಂದಿ ಹಾಗೂ ಎಚ್.ಡಿ.ಕೋಟೆಯ ಪದವಿ ಕಾಲೇಜಿನ ಉಪನ್ಯಾಸಕ ರಾಮಚಂದ್ರರ ನೇತೃತ್ವದಲ್ಲಿ ೧೮೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದು, ತಮ್ಮದೇ ಆದ ಸೇವೆ ಸಲ್ಲಿಸಿದ್ದಾರೆಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಎ.ಸಿ.ಎಫ್. ರಂಗಸ್ವಾಮಿ, ಅರಣ್ಯಾಧಿಕಾರಿಗಳಾದ ಸಿದ್ದೇಗೌಡ (ಅಂತರಸಂತೆ), ಮಧು(ಡಿ.ಬಿ.ಕುಪ್ಪೆ), ಹರ್ಷಿತ್ (ಮೇಟಿಕುಪ್ಪೆ), ವೀರನಹೊಸಹಳ್ಳಿಯಲ್ಲಿ ಗಣರಾಜ್‌ಪಟಗಾರ್, ಹುಣಸೂರಲ್ಲಿ ರತನ್ ಕುಮಾರ್, ಡಿಆರ್‌ಎಫ್‌ಒ ನಾರಾಯಣ್, ಸತೀಶ್, ಉಪನ್ಯಾಸಕರಾದ ಸಿದ್ದೇಗೌಡ, ಚೆನ್ನಕೇಶವ ನಾಯಕ, ಕಲ್ಲೇಶ್‌ಗೌಡ, ಜಿ.ಸಿ. ಮಹೇಂದ್ರ, ಮಹೇಶ್, ಅಮೂಲ್ಯ, ಚೈತ್ರ, ಚಂದನ, ಆಯಾ ವಲಯಗಳ ಸಿಬಂದಿಗಳಿದ್ದರು.

ಟಾಪ್ ನ್ಯೂಸ್

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

TrainMangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

Mangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore: ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

Mysore: ಮಾವುತರು ಮತ್ತು ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

Mysuru ರಾಜಕಾರಣ ಧರ್ಮ ಜತೆಯಾದರೆ ಉತ್ತಮ ಆಡಳಿತ: ಶ್ರೀಧರನ್‌ ಪಿಳ್ಳೆ

Mysuru ರಾಜಕಾರಣ ಧರ್ಮ ಜತೆಯಾದರೆ ಉತ್ತಮ ಆಡಳಿತ: ಶ್ರೀಧರನ್‌ ಪಿಳ್ಳೆ

1-dasdasdasdsad

Mysuru ;ನಾಳೆ ಎಲ್ಲಾ ಶಾಲಾ- ಕಾಲೇಜು ಗಳಿಗೆ ರಜೆ ಘೋಷಣೆ

police crime

Hunsur: ಶುಕ್ರವಾರ ಬಹುತೇಕ ಬಂದ್; ಶಾಲಾ ಕಾಲೇಜುಗಳಿಗೆ ರಜೆ

3-hunsur1

Hunsur: ಮರ ಬಿದ್ದು ಮೂರು ಆಟೋಗಳು ಜಖಂ; ಅಪಾಯದಿಂದ ಪಾರಾದ ಚಾಲಕರು

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

rbi

RD ಬಡ್ಡಿ ದರ ಶೇ. 6.7ಕ್ಕೆ ಏರಿಕೆ

SIDDU IMP

Karnataka: ಏಳನೇ ವೇತನ ಆಯೋಗದ ಅಧ್ಯಕ್ಷ , ಸದಸ್ಯರ ಜತೆ ಸಿಎಂ ಸಭೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.