ಫ್ರೀ ಕಾಶ್ಮೀರ್‌ ಪ್ಲೇ ಕಾರ್ಡ್‌ ಪ್ರದರ್ಶನ ಪ್ರಕರಣ


Team Udayavani, Jan 21, 2020, 3:00 AM IST

free-kashmir

ಮೈಸೂರು: ಫ್ರೀ ಕಾಶ್ಮೀರ್‌ ಪ್ಲೇ ಕಾರ್ಡ್‌ ಪ್ರದರ್ಶನ ಸಂಬಂಧ ಆರೋಪಿ ನಳಿನಿ ಹಾಗೂ ಪ್ರತಿಭಟನೆ ಆಯೋಜಕ ಮರಿದೇವಯ್ಯ ಮತ್ತು ಇತರರ ಪರ ಸೋಮವಾರ ನಿರೀಕ್ಷಣೆ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದು, 2ನೇ ಹೆಚ್ಚುವರಿ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ವಿಚಾರಣೆಯನ್ನು ಜ.24ಕ್ಕೆ ಮುಂದೂಡಿದೆ.

ಮೈಸೂರು ವಿವಿ ಮಾನಸಗಂಗೋತ್ರಿ ಆವರಣದಲ್ಲಿ ಜ.8ರಂದು ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ದಾಳಿ ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಫ್ರೀ ಕಾಶ್ಮೀರ್‌ ಪೋಸ್ಟರ್‌ ಪ್ರದರ್ಶಿಸಿದ್ದ ನಳಿನಿ ಮತ್ತು ಪ್ರತಿಭಟನೆಯನ್ನು ಸಂಘಟಿಸಿದ್ದ ಮರಿದೇವಯ್ಯ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘ ನಿರ್ಧರಿಸಿತ್ತು.

ವಿಚಾರಣೆ ಜ.24ಕ್ಕೆ ಮುಂದೂಡಿಕೆ: ಸೋಮವಾರ ನಿರೀಕ್ಷಣೆ ಜಾಮೀನು ಅರ್ಜಿ ಸಲ್ಲಿಸಲು ಆರೋಪಿಗಳ ಪರ ವಕಾಲತ್ತು ವಹಿಸಿ ಬೆಂಗಳೂರು, ಮಂಡ್ಯ, ದಾವಣಗೆರೆ, ಹಾಸನ ಹಾಗೂ ಮೈಸೂರಿನಿಂದ ಬಂದಿದ್ದ 165 ಮಂದಿ, ತಮ್ಮ ಸಹಿಯಿರುವ ವಕಾಲತ್ತು ಅರ್ಜಿಯನ್ನು ಕೋರ್ಟ್‌ಗೆ ನೀಡಿ, ಸೋಮವಾರ ಬೆಳಗ್ಗೆ 11.30ಕ್ಕೆ ಜಾಮೀನಿಗೆ ಅರ್ಜಿ ಸಲ್ಲಿಸಿದರು. ಅರ್ಜಿ ಸ್ವೀಕರಿಸಿದ 2ನೇ ಹೆಚ್ಚುವರಿ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ಮಧ್ಯಾಹ್ನ 3ಕ್ಕೆ ವಿಚಾರಣೆ ಮುಂದೂಡಿತು.

ಬಳಿಕ ಮಧ್ಯಾಹ್ನ 3ಕ್ಕೆ ಆರಂಭವಾದ ವಿಚಾರಣೆಯಲ್ಲಿ ನಳಿನಿ ಪರವಾಗಿ ಜಗದೀಶ್‌, ಅನಿಸ್‌ ಪಾಷ, ವಿಶ್ವನಾಥ್‌ ಮತ್ತು ಮರಿದೇವಯ್ಯ ರಘುನಾಥ್‌ ವಾದ ಮಂಡಿಸಿದರು. ಸರ್ಕಾರದ ಪರವಾಗಿ ವಾದ ಮಂಡಿಸಿದ ಸರ್ಕಾರಿ ಅಭಿಯೋಜಕ ಆನಂದ ಕುಮಾರ್‌, ಪ್ರಕರಣದ ಕುರಿತಂತೆ ಅಧ್ಯಯನ ಮಾಡಿ, ವಾದ ಮಂಡಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ 2ನೇ ಹೆಚ್ಚುವರಿ ಜಿಲ್ಲಾ ಮತ್ತ ಸತ್ರ ನ್ಯಾಯಾಲಯದ ನ್ಯಾಯಾಧೀಶರು ವಿಚಾರಣೆಯನ್ನು ಜ.24ಕ್ಕೆ ಮುಂದೂಡಿದರು.

ಹಿರಿಯ ವಕೀಲ ಸಿ.ಎಸ್‌.ದ್ವಾರಕನಾಥ್‌ ಟೀಮ್‌ನಲ್ಲಿ ಇರುವ ವಕೀಲ ಜಗದೀಶ್‌ ನೇತೃತ್ವದಲ್ಲಿ ವಕೀಲರಾದ ಹರಿರಾಮ್‌, ಮಹೇಶ್‌ದಾಸ್‌, ತ್ರಿಮೂರ್ತಿ, ಮಂಜುನಾಥ್‌, ಶಿವಶಂಕರಪ್ಪ, ಮನೋರಂಜನಿ ನ್ಯಾಯಾಲಯಕ್ಕೆ ಆಗಮಿಸಿದ್ದರು.

ಪರಿಶೀಲನೆ ಮಾಡಿ ತೀರ್ಮಾನ ಕೈಗೊಳ್ಳಲಿ: ಸುದ್ದಿಗಾರರೊಂದಿಗೆ ಮಾತನಾಡಿದ ವಕೀಲ ಜಗದೀಶ್‌, ಯಾವುದೇ ಪ್ರಕರಣವಾದರೂ ಪರಿಶೀಲನೆ ಮಾಡಿ ತೀರ್ಮಾನ ತೆಗೆದುಕೊಳ್ಳಬೇಕು. ನೋಡಿದ್ದು, ಕೇಳಿದ್ದು ಸುಳ್ಳಾಗಬಹುದು. ಪ್ರಕರಣವನ್ನು ಪರಿಶೀಲನೆ ಮಾಡಿದ ಬಳಿಕ ಸತ್ಯ ತಿಳಿಯಲಿದೆ. ಈ ಪ್ರಕರಣ ಸಂಬಂಧ ವಕಾಲತ್ತು ವಹಿಸದಿದ್ದರೇ, ಪ್ರಕರಣ ಇಲ್ಲಿಗೆ ನಿಲ್ಲುತ್ತದೆ. ಪ್ರಕರಣ ನ್ಯಾಯಾಲಯದಲ್ಲಿ ತೀರ್ಮಾನವಾಗಲಿ.

ನಂತರ ಸತ್ಯಾಸತ್ಯತೆ ತಿಳಿಯಲಿದೆ. ತಪ್ಪಿತಸ್ಥರಾದರೆ ಅವರಿಗೆ ಶಿಕ್ಷೆಯಾಗಲಿ. ತಪ್ಪಿತಸ್ಥರಲ್ಲದಿದ್ದರೆ ಅವರಿಗೆ ನ್ಯಾಯ ಸಿಗಲಿ. ಈ ವಿಚಾರದಲ್ಲಿ ಮೈಸೂರು ವಕೀಲರ ಸಂಘದ ನಿರ್ಧಾರ ಅವರಿಗೆ ಬಿಟ್ಟದ್ದು. ಮೈಸೂರು ವಕೀಲರು ಮತ್ತು ನಮ್ಮ ನಡುವೆ ಭಿನ್ನಾಭಿಪ್ರಾಯವಿಲ್ಲ. ನಮ್ಮ ಕರ್ತವ್ಯ ನಾವು ನಿರ್ವಹಿಸುತ್ತಿದ್ದೇವೆ ಎಂದರು.

ಪದದ ಅರ್ಥ, ಹಿನ್ನೆಲೆ ತಿಳಿದುಕೊಳ್ಳಲಿ: ನಳಿನಿ ಪರ ವಕೀಲ ದಾವಣಗೆರೆ ಪಾಷ ಮಾತನಾಡಿ, ನಳಿನಿಗೆ ಈಗಾಗಲೇ ಮಧ್ಯಂತರ ಜಾಮೀನು ಸಿಕ್ಕಿದೆ. ನಿರೀಕ್ಷಣೆ ಜಾಮೀನು ನೀಡುವಂತೆ ವಾದ ಮಂಡಿಸಿದ್ದೇವೆ. ಸರ್ಕಾರಿ ವಕೀಲರು ತಮ್ಮ ವಾದ ಮಂಡಿಸಲು ಕಾಲಾವಕಾಶ ಕೇಳಿದ ಹಿನ್ನೆಲೆ ಜ.24 ವಿಚಾರಣೆ ಮುಂದೂಡಲಾಗಿದೆ. ಕೇವಲ ಫ್ರೀ ಕಾಶ್ಮೀರ ಎಂದು ಫ‌ಲಕ ಹಿಡಿದರೆ ಅದು ದೇಶದ್ರೋಹವಾಗದು.

ಪದದ ಉದ್ದೇಶ, ಹಿನ್ನೆಲೆಯನ್ನು ಮೊದಲು ತಿಳಿದುಕೊಳ್ಳಬೇಕು ಎಂದು ವಾದ ಮಂಡಿಸಿದ್ದೇವೆ. ಅಲ್ಲದೇ, ಆ ಯುವತಿ ಈಗಾಗಲೇ ತನ್ನ ಉದ್ದೇಶ ಏನಾಗಿತ್ತು ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ. ಈ ಪ್ರಕರಣ ನಿಲ್ಲುವ ಸಾಧ್ಯತೆ ಕಡಿಮೆಯಿದೆ. ಎಫ್ಐಆರ್‌ ಮಾಡಿದ ಪೊಲೀಸರ ಮೇಲೂ ಕಾನೂನು ಕ್ರಮ ಆಗುವ ಸಾಧ್ಯತೆ ಇರಬಹುದು ಎಂದರು.

ವಕೀಲರ ಸಂಘದಿಂದ ವಕಾಲತ್ತಿಲ್ಲ: ಈ ನಡುವೆ ಮತ್ತೆ ಸಭೆ ನಡೆಸಿರುವ ಮೈಸೂರು ವಕೀಲರ ಸಂಘ ನಳಿನಿ ಪರ ವಕಾಲತ್ತು ವಹಿಸದಂತೆ ಕೈಗೊಂಡಿದ್ದ ನಿರ್ಧಾರಕ್ಕೆ ಬದ್ಧವಾಗಿದೆ. ಸೋಮವಾರ ಮತ್ತೆ ಸರ್ವ ಸದಸ್ಯರ ಸಭೆ ನಡೆಸಿದ ಸಂಘ ವಕಾಲತ್ತು ವಹಿಸದಿರುವ ಸಂಘದ ತೀರ್ಮಾನಕ್ಕೆ ಬದ್ಧವಾಗಿರುವುದಾಗಿ ತಿಳಿಸಿತು.

ಎಲ್ಲಾ ಹಿತಾಸಕ್ತಿಗಿಂತ ದೇಶದ ಭದ್ರತೆ ಮುಖ್ಯ. ದೇಶದ್ರೋಹದ ಆರೋಪದ ಪರ ವಕಾಲತ್ತು ವಹಿಸುವುದು ಸಂಘದ ಗೌರವಕ್ಕೆ ತರವಲ್ಲ. ಸಂಘದ ಗೌರವ, ಘನತೆಯ ದೃಷ್ಟಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಹೊರಗಿನಿಂದ ಬಂದ ವಕೀಲರಿಗೂ ಈ ಬಗ್ಗೆ ಮನವಿ ಮಾಡಲು ಮೈಸೂರು ಜಿಲ್ಲಾ ವಕೀಲರ ಸರ್ವ ಸದಸ್ಯರ ಸಭೆಯಲ್ಲಿ ತೀರ್ಮಾನಿಸಲಾಯಿತು.

ಮೈಸೂರು ವಕೀಲರಿಂದಲೂ ವಕಾಲತ್ತು: ಒಂದೆಡೆ ನಳಿನಿ ಪರ ಬೆಂಗಳೂರಿನ ವಕೀಲರು ವಕಾಲತ್ತು ವಹಿಸಿದ್ದರೆ ಮತ್ತೂಂದೆಡೆ ಮೈಸೂರಿನ ಕೆಲವು ವಕೀಲರು ವಕಾಲತ್ತು ವಹಿಸಿದ್ದಾರೆ. ಸಂಘದ ನಿರ್ಣಯದ ವಿರುದ್ಧವೇ ನಿಂತಿರುವ ಸುಮಾರು 150 ವಕೀಲರು ನಳಿನಿ ಪರ ವಕಾಲತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ನಿರ್ಣಯ ಮರುಪರಿಶೀಲನೆ ಮಾಡುವಂತೆ ಮೈಸೂರಿನ ವಕೀಲರು ಅರ್ಜಿ ಸಲ್ಲಿಸಿದ್ದಾರೆ.

ಈ ಕುರಿತು ವಕೀಲೆ ಮಂಜುಳಾ ಮಾನಸ ಮಾತನಾಡಿ, ಸಂಘದ ನಿರ್ಣಯ ಉಲ್ಲಂಘಿಸಿದರೆ ಏನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿಲ್ಲ. ವೃತ್ತಿ ಧರ್ಮದ ದೃಷ್ಟಿಯಿಂದ ವಕಾಲತ್ತು ವಹಿಸಲು ನಿರ್ಧರಿಸಿದ್ದೇವೆ. ನಮ್ಮ ವಿರುದ್ಧ ಕ್ರಮ ಕೈಗೊಂಡರೆ, ಅದು ಏಕಪಕ್ಷಿಯ ನಿರ್ಧಾರವಾಗುತ್ತದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.