ಸುತ್ತೂರಲ್ಲಿ ಶಿವರಾತ್ರೀಶ್ವರ ಶಿವಯೋಗಿ ಜಾತ್ರೆ ಇಂದಿನಿಂದ
Team Udayavani, Feb 1, 2019, 7:05 AM IST
ನಂಜನಗೂಡು/ಮೈಸೂರು: ಸುತ್ತೂರು ಶ್ರೀಕ್ಷೇತ್ರದಲ್ಲಿ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ ಗಳ ದಿವ್ಯ ಸಾನ್ನಿಧ್ಯದಲ್ಲಿ ಫೆ.1ರಿಂದ 6ರವರೆಗೆ ಆದಿ ಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದೆ.
ಶುಕ್ರವಾರ ಬೆಳಗ್ಗೆ 10.30ಕ್ಕೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅಧ್ಯಕ್ಷತೆಯಲ್ಲಿ ನಡೆವ ಕಾರ್ಯಕ್ರಮದಲ್ಲಿ ವಸ್ತು ಪ್ರದರ್ಶನ, ಕೃಷಿ ಮೇಳ, ಸಾಂಸ್ಕೃತಿಕ ಮೇಳಗಳಿಗೆ ಚಾಲನೆ ದೊರೆಯಲಿದೆ. ಸಂಜೆ 4 ಗಂಟೆಗೆ ತೋಟಗಾರಿಕೆ ಸಚಿವ ಎಂ.ಸಿ.ಮನಗೂಳಿ ಅಧ್ಯಕ್ಷತೆಯಲ್ಲಿ ದೇಸಿ ಆಟಗಳು, ದೋಣಿ ವಿಹಾರ, ರಂಗೋಲಿ, ಸೋಬಾನೆ ಪದ ಸ್ಪರ್ಧೆಗಳ ಉದ್ಘಾಟನೆ ನಡೆಯಲಿದೆ.
ಶನಿವಾರ ಸಾಮೂಹಿಕ ವಿವಾಹ ಜರುಗಲಿದ್ದು, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಲಿದ್ದು, ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ ಮಾಂಗಲ್ಯ ವಿತರಣೆ ಮಾಡಲಿದ್ದಾರೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ನೂತನ ವಧು-ವರರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ರಥೋತ್ಸವ: ಫೆ.3ರಂದು ಬೆಳಗ್ಗೆ 10.55ಕ್ಕೆ ರಥೋತ್ಸವ ನಡೆಯಲಿದ್ದು, ಬೆಳಗ್ಗೆ 11ಗಂಟೆಗೆ ನಡೆಯುವ ಧಾರ್ಮಿಕ ಸಭೆಯನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಉದ್ಘಾಟಿಸಲಿದ್ದಾರೆ. ಫೆ.4ರಂದು ಸಂಜೆ 4 ಗಂಟೆಗೆ ಕೃಷಿ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮಾರೋಪ ಭಾಷಣ ಮಾಡಲಿದ್ದಾರೆ.
ಕೃಷಿ ಮೇಳ: ಫೆ.6ರಂದು ಬೆಳಗೆಗ 10.30ಕ್ಕೆ ಕೃಷಿ ಮೇಳ ಮತ್ತು ವಸ್ತು ಪ್ರದರ್ಶನದ ಸಮಾರೋಪ ಸಮಾರಂಭ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರೋಪ ಭಾಷಣ ಮಾಡಲಿ ದ್ದಾರೆ. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅಧ್ಯಕ್ಷತೆವಹಿಸಲಿದ್ದಾರೆ.
ವಾಟರ್ ಟ್ರೀಟ್ಮೆಂಟ್: ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಸೇರುವುದರಿಂದ ಸ್ವಚ್ಛತೆ ಮತ್ತು ಕುಡಿ ಯುವ ನೀರಿನ ಬಗ್ಗೆ ವಿಶೇಷ ಗಮನ ವಹಿಸ ಲಾಗಿದ್ದು, ನೀರು ಕುಡಿಯಲು ಯೋಗ್ಯ ವಾಗಿದೆಯೇ ಎಂದು ಪ್ರಯೋಗಾಲಯದಿಂದ ವರದಿಪಡೆದು ಅವಶ್ಯಬಿದ್ದರೆ ವಾಟರ್ ಟ್ರೀಟ್ಮೆಂಟ್ಗೂ ಕ್ರಮವಹಿಸಲಾಗಿದೆ.
10 ಲಕ್ಷ ಭಕ್ತರಿಗೆ ದಾಸೋಹ ವ್ಯವಸ್ಥೆ: ಆರು ದಿನಗಳ ಕಾಲ ನಡೆಯುವ ಈ ಜಾತ್ರಾ ಮಹೋ ತ್ಸವಕ್ಕೆ ನಾಡಿನ ಮೂಲೆ ಮೂಲೆಗಳಿಂದ ಸುಮಾರು 10 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದ್ದು, 10 ಲಕ್ಷ ಪೇಪರ್ ಪ್ಲೇಟ್ಗಳನ್ನು ತರಿಸಲಾಗಿದೆ. ಜಾತ್ರೆಗೆ ಬರುವ ಭಕ್ತರ ದಾಸೋಹಕ್ಕಾಗಿ ಮಹಾ ದಾಸೋಹ ಆವರಣ 30 ಒಲೆಗಳನ್ನು ಸ್ಥಾಪಿಸಲಾಗಿದ್ದು, 500 ಮಂದಿ ಬಾಣಸಿಗರು ಅಡುಗೆ ತಯಾರಿ ಮಾಡಲಿ ದ್ದಾರೆ.
ಮಂಗಳ ಮಂಟಪದಲ್ಲಿ ಸಿಹಿ ತಿಂಡಿಗಳನ್ನು ತಯಾರಿಸಲಾಗುತ್ತಿದೆ. ಮಾನ್ವಿಯಿಂದ 1200 ಕ್ವಿಂಟಲ್ ಅಕ್ಕಿ, ಕಲಬುರಗಿಯಿಂದ 250 ಕ್ವಿಂಟಲ್ ತೊಗರಿ ಬೇಳೆ ಸೇರಿದಂತೆ ಬೇರೆ ಬೇರೆ ಕಡೆಗಳಿಂದ ದಾಸೋಹಕ್ಕೆ ಬೇಕಾದ ವಸ್ತುಗಳನ್ನು ತರಿಸಲಾಗಿದೆ. ಭಕ್ತರು ತರಕಾರಿಯನ್ನು ಕಾಣಿಕೆ ಯಾಗಿ ನೀಡು ತ್ತಿದ್ದು, ತರಕಾರಿ ಹಚ್ಚಲು ಮತ್ತು ತೆಂಗಿನಕಾಯಿ ಸುಲಿಯಲು ಕೊಯಮತ್ತೂರಿನಿಂದ ಯಂತ್ರ ಗಳನ್ನು ತರಿಸಲಾಗಿದೆ.
ಪ್ರಸಾದಕ್ಕೆ ನೂಕು ನುಗ್ಗಲು ಉಂಟಾಗದಂತೆ ಸ್ವಾಮೀಜಿಗಳು, ಗಣ್ಯರನ್ನು ಹೊರತುಪಡಿಸಿ ಇತರರಿಗೆ ನಾಲ್ಕು ಕಡೆಗಳಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಸುಳ್ವಾಡಿ ಪ್ರಕರಣದ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಮಹಾ ದಾಸೋಹದ ಆವರಣದಲ್ಲಿ 20 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಜೊತೆಗೆ ಇದೇ ಮೊದಲ ಬಾರಿಗೆ ಜಾತ್ರೆಯಲ್ಲಿ ಸೇವೆ ಸಲ್ಲಿಸುವ ಸ್ವಯಂ ಸೇವಕರಿಗಾಗಿ 2500 ಸ್ಟೀಲ್ ಪ್ಲೇಟ್ಗಳನ್ನು ವಿತರಿಸಲಾಗಿದೆ. ಈ ಪ್ರಯೋಗ ಯಶಸ್ವಿಯಾದರೆ ಮುಂದಿನ ವರ್ಷದಿಂದ ಎಲ್ಲರಿಗೂ ಸ್ಟೀಲ್ ಪ್ಲೇಟ್ ನೀಡಲು ಚಿಂತನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ